Homeಮುಖಪುಟ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

‘ಬಿಬಿಸಿ’ ನಡೆಸಿದ ಸಂದರ್ಶನದ ಮೇಳೆ ಸಿಟ್ಟಾದ ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಸಂದರ್ಶಕರನ್ನೇ ಒಂದು ಗುಂಪಿನ ಏಜೆಂಟ್‌ ಎಂದು ಮೂದಲಿಸಿದ್ದಾರೆ. (ವಿಡಿಯೊ ನೋಡಿ)

- Advertisement -
- Advertisement -

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಕೇಶವ್ ಪ್ರಸಾದ್ ಮೌರ್ಯ ಅವರು ಬಿಬಿಸಿ ಸಂದರ್ಶನವನ್ನು ಮೊಟುಕುಗೊಳಿಸಿ ಸಂದರ್ಶನದ ದೃಶ್ಯಗಳನ್ನು ಡಿಲೀಟ್‌ ಮಾಡುವಂತೆ ಸೂಚಿಸಿರುವ ಘಟನೆ ನಡೆದಿದೆ.

ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಂ ವಿರೋಧಿಯಾಗಿ ಮಾಡಲಾದ ದ್ವೇಷ ಭಾಷಣಗಳ ಕುರಿತ ಪ್ರಶ್ನೆಗಳಿಗೆ ಕೋಪಗೊಂಡ ಕೇಶವ್‌ ಪ್ರಸಾದ್‌, ಸಂದರ್ಶನವನ್ನು ಮಧ್ಯದಲ್ಲೇ ನಿಲ್ಲಿಸಿದ್ದಾರೆ. ಸಂದರ್ಶನದ ದೃಶ್ಯಗಳನ್ನು ಅಳಿಸಲು ಸೂಚಿಸಿದ್ದಾರೆ.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಮೌರ್ಯ ಅವರು ನಂತರದಲ್ಲಿ ಪ್ರತಿಕ್ರಿಯಿಸಿದ್ದು ಈ ಘಟನೆಯನ್ನು “ದುರದೃಷ್ಟಕರ ಘಟನೆ” ಎಂದು ಕರೆದ್ದಾರೆ.

ಧಾರ್ಮಿಕ ಸಮಾವೇಶದ ದ್ವೇಷ ಭಾಷಣಗಳ ಬಗ್ಗೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಪಕ್ಷದ ನಾಯಕರು ಮೌನ ತಾಳಿರುವುದನ್ನು ಮೌರ್ಯ ಅವರಲ್ಲಿ ಬಿಬಿಸಿ ಸಂದರ್ಶಕರು ಪ್ರಶ್ನಿಸುತ್ತಾರೆ.

ನಾಯಕರು ಇಂತಹ ಘೋಷಣೆಗಳ ವಿರುದ್ಧ ಮಾತನಾಡುವ ಮೂಲಕ ಜನರಿಗೆ ಧೈರ್ಯ ತುಂಬಬೇಕೇ ಎಂದು ಕೇಳಿದಾಗ ಮೌರ್ಯ ಅವರು ಪ್ರತಿಕ್ರಿಯಿಸಿ, “ನಾವು ನಮ್ಮನ್ನು ಸಾಬೀತುಪಡಿಸುವ ಅಗತ್ಯವಿಲ್ಲ. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಎಲ್ಲರ ಅಭಿವೃದ್ಧಿ ಮತ್ತು ಬೆಂಬಲ) ನಲ್ಲಿ ನಂಬಿಕೆ ಹೊಂದಿದ್ದೇವೆ. ತಮ್ಮ ವಿಚಾರಗಳನ್ನು ಹೇಳುವುದಕ್ಕೆ ಧಾರ್ಮಿಕ ಮುಖಂಡರಿಗೆ ಹಕ್ಕು ಇದೆ” ಎನ್ನುತ್ತಾರೆ.

ಮುಂದುವರಿದು, “ಹಿಂದೂ ಧಾರ್ಮಿಕ ಮುಖಂಡರನ್ನು ಮಾತ್ರ ಯಾಕೆ ಎತ್ತಿ ತೋರಿಸುತ್ತೀರಿ” ಎಂದು ಉಪಮುಖ್ಯಮಂತ್ರಿ ಸಂದರ್ಶಕರಲ್ಲಿ ಪ್ರಶ್ನಿಸುತ್ತಾರೆ.

“ಹಿಂದೂ ನಾಯಕರ ಬಗ್ಗೆ ಮಾತ್ರ ಏಕೆ ಕೇಳುತ್ತಿದ್ದೀರಿ? ಇತರ ಧಾರ್ಮಿಕ ಮುಖಂಡರು ಮಾಡಿದ ಕಮೆಂಟ್‌ಗಳ ಬಗ್ಗೆ ಯಾಕೆ ಮಾತನಾಡಲ್ಲ? 370ನೇ ವಿಧಿಯನ್ನು ರದ್ದುಗೊಳಿಸುವ ಮೊದಲು ಎಷ್ಟು ಮಂದಿ ಜಮ್ಮು ಮತ್ತು ಕಾಶ್ಮೀರವನ್ನು ತೊರೆಯಬೇಕಾಯಿತು, ನೀವು ಅದರ ಬಗ್ಗೆ ಏಕೆ ಮಾತನಾಡುವುದಿಲ್ಲ? ಧರ್ಮ ಸಂಸದ್ ಬಿಜೆಪಿ ಕಾರ್ಯಕ್ರಮವಲ್ಲ, ಧಾರ್ಮಿಕ ಮುಖಂಡರದ್ದು’’ ಎಂದು ತಿಳಿಸುತ್ತಾರೆ.

“ಸ್ವಾಮೀಜಿಗಳು ನಂಬಿದ್ದನ್ನು ಹೇಳಿದ್ದಾರೆ. ಇದು ರಾಜಕೀಯಕ್ಕೆ ಸಂಬಂಧಿಸಿಲ್ಲ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ನಾಯಕರೂ ಇದ್ದಾರೆ. ಅವರ ಬಗ್ಗೆಯೂ ಮಾತನಾಡಿ” ಎಂದು ಉಪಮುಖ್ಯಮಂತ್ರಿ ಒತ್ತಾಯಿಸುತ್ತಾರೆ.

ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ ಎಂಬ ಹೇಳಿಕೆಯನ್ನು ಕೇಂದ್ರೀಕರಿಸಿ, “ಇಂತಹ ಭಾಷಣಗಳು ಚುನಾವಣೆಗೆ ಮುನ್ನ ವಾತಾವರಣವನ್ನು ಹಾಳುಮಾಡುತ್ತವೆಯಲ್ಲ?” ಎಂದು ಸಂದರ್ಶಕರು ಎಂದು ಕೇಳುತ್ತಾರೆ. ಜೊತೆಗೆ ಭಾರತ-ಪಾಕಿಸ್ತಾನ ಪಂದ್ಯದ ವೇಳೆ ಕೂಗಲಾದ ಘೋಷಣೆಗಳ ಆಧಾರದಲ್ಲಿ ದೇಶದ್ರೋಹದ ಆರೋಪವನ್ನು ಹೊರಿಸಿರುವುದರ ಕುರಿತೂ ಅವರು ಕೇಳುತ್ತಾರೆ.

“ದೇಶದ್ರೋಹ ಬೇರೆ ವಿಷಯ. ಆದರೆ ಇದು ಧರ್ಮ ಸಂಸದ್. ಆಗ ನಾವು ಹೇಳಬಹುದು- ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಗೆ ಸೂರ್ಯ ನಮಸ್ಕಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಇಲ್ಲ” ಎಂದು ಮೌರ್ಯ ಉತ್ತರಿಸುತ್ತಾರೆ.

ವಿವಾದಾತ್ಮಕ ಧಾರ್ಮಿಕ ಸಮಾವೇಶದಲ್ಲಿ ಎದ್ದಿರುವ ನರಮೇಧದ ಕರೆಗಳ ಬಗ್ಗೆ ಕೇಳಿದಾಗ ಡಿಸಿಎಂ ಸಿಟ್ಟಿಗೆದ್ದರು. “ನೀವು ಯಾವ ವೀಡಿಯೊದ ಬಗ್ಗೆ ಮಾತನಾಡುತ್ತಿದ್ದೀರಿ ಎಂದು ನನಗೆ ತಿಳಿದಿಲ್ಲ, ನೀವು ಚುನಾವಣೆಯ ಬಗ್ಗೆ ಕೇಳುತ್ತೀರಾ? ನೀವು ಪತ್ರಕರ್ತರಂತೆ ಮಾತನಾಡುತ್ತಿಲ್ಲ. ನೀವು ನಿರ್ದಿಷ್ಟ ಗುಂಪಿನ ಏಜೆಂಟರಂತೆ ಮಾತನಾಡುತ್ತಿದ್ದೀರಿ. ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ” ಎಂದು ಮೈಕ್‌ ಕಿತ್ತೆಸೆಯುತ್ತಾರೆ.

ಉತ್ತರ ಪ್ರದೇಶ ಮತ್ತು ಇನ್ನೂ ನಾಲ್ಕು ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಮಾಡುವಾಗ, ಬಿಜೆಪಿಯು ಧರ್ಮ ಸಂಸದ್ ಬಗೆಗಿನ ಪ್ರಶ್ನೆಗಳನ್ನು ಎದುರಿಸುತ್ತಿದೆ. ಧರ್ಮ ಸಂಸತ್‌ನಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಧಾರ್ಮಿಕ ಮುಖಂಡರು, ಹಿಂಸಾಚಾರ ಮತ್ತು ನರಮೇಧಕ್ಕೆ ಕರೆಗಳನ್ನು ನೀಡುತ್ತಾರೆ. ಈ ಧಾರ್ಮಿಕ ಮುಖಂಡರು ಆಡಳಿತ ಪಕ್ಷದೊಂದಿಗೆ ಒಡನಾಟದಲ್ಲಿದ್ದಾರೆ.

ಪ್ರೀಮಿಯರ್ ಐಐಎಂ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್) ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, ದ್ವೇಷ ಭಾಷಣಗಳ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದ್ದಾರೆ.

“ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಿಮ್ಮ ಮೌನವು ದ್ವೇಷ ತುಂಬಿದ ಧ್ವನಿಗಳಿಗೆ ಧೈರ್ಯ ತುಂಬುತ್ತದೆ. ನಮ್ಮ ದೇಶದ ಏಕತೆ, ಸಮಗ್ರತೆಗೆ ಧಕ್ಕೆ ತರುತ್ತದೆ. ಗೌರವಾನ್ವಿತ ಪ್ರಧಾನ ಮಂತ್ರಿಗಳೇ, ನಮ್ಮನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ವಿರುದ್ಧ ದೃಢವಾಗಿ ನಿಲ್ಲುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ” ಎಂದು ಬಹಿರಂಗ ಪತ್ರದಲ್ಲಿ ಕೋರಲಾಗಿದೆ.


ಇದನ್ನೂ ಓದಿರಿ: ವಾರಣಾಸಿ: ಕೋಮುದ್ವೇಷ ಹರಡಲು ಯತ್ನ ಪ್ರಕರಣ; ಇಬ್ಬರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...