Homeಅಂಕಣಗಳುಧಾರವಾಡ: ನಕಲಿ ಗೋವಿಗೆ ಧಾಡಸಿ ‘ಬಸವ’ನ ಠಕ್ಕರ್!

ಧಾರವಾಡ: ನಕಲಿ ಗೋವಿಗೆ ಧಾಡಸಿ ‘ಬಸವ’ನ ಠಕ್ಕರ್!

- Advertisement -
- Advertisement -

ಪಿ.ಕೆ.ಮಲ್ಲನಗೌಡ |

ನೋಡಲು ಗೋವಿನಂತಿರುವ ಧಾರವಾಡ ಸಂಸದ ಪ್ರಹ್ಲಾದ್ ಜೋಷಿಯವರಿಗೆ ಎದುರಾಗಿ ಧಾಡಸಿ ‘ಬಸವ’ ವಿನಯ ಕುಲಕರ್ಣಿ ಠಕ್ಕರ್ ಕೊಡುತ್ತಿದ್ದಾರೆ. ‘ಹಿಂದುತ್ವ’ದ ಪ್ರತಿಪಾದಕ ಜೋಷಿ ಕೆಲಸ ಮಾಡಿದ್ದಕ್ಕಿಂತ ಪ್ರಚಾರಕ್ಕೆ ಹಾತೊರೆದದ್ದೇ ಹೆಚ್ಚು. ಮೂರು ಸಲ ಸಂಸದರಾದೂ ಈಗಲೂ ಅವರು ಮೋದಿ ಮುಖವಾಡದಲ್ಲಿ ಮತ ಬೇಡುತ್ತಿದ್ದಾರೆ. ಈಗ ಯಾವ ಅಧಿಕಾರವೂ ಇಲ್ಲದ ವಿನಯ ಕುಲಕರ್ಣಿ ಈ ಸಲ ಗೆಲ್ಲಲು ಎಲ್ಲ ಮಾರ್ಗಗಳಲ್ಲೂ ಪ್ರಯ್ನಿಸುತ್ತಿದ್ದಾರೆ.

joshi

ಮೂರು ಸಲ ಸಂಸದರಾಗಿರುವ ಜೋಷಿ ಬಗ್ಗೆ ಜನಕ್ಕೆ ಭ್ರಮನಿರಸವಾಗಿದೆ. ಬಿಜೆಪಿಯ ಸ್ಥಳಿಯ ನಾಯಕರನ್ನು ತುಳಿದ ಆರೋಪವನ್ನು ಎದುರಿಸುತ್ತಿರುವ ಜೋಷಿಗೆ ಈ ಸಲ ಪಕ್ಷದೊಳಗೇ ಸಾಕಷ್ಟು ವಿರೋಧವಿದೆ. ರಂಗಾ ಬದ್ದಿ, ದತ್ತಾ ಡೋರ್ಲೆ, ರಾಜೇಂದ್ರ ಗೋಖಲೆ, ಮಹೇಶ ತೆಂಗಿನಕಾಯಿ-ಇವರೆಲ್ಲ ಜೋಷಿಯ ಸ್ವಾರ್ಥಕ್ಕೆ ತಮ್ಮ ರಾಜಕೀಯ ಜೀವನದಲ್ಲಿ ಹಿನ್ನಡೆ ಅನುಭವಿಸಿದವರು.
ತಮ್ಮ ಸೋಲಿಗೆ ಜೋಷಿಯೇ ಕಾರಣವೆಂದು ಅತೃಪ್ತಿ ವ್ಯಕ್ತಪಡಿಸುತ್ತಲೇ ಬಂದಿರುವ ಬಿಜೆಪಿ ಮಾಜಿ ಶಾಸಕ ಚಿಕ್ಕನಗೌಡರ್ ಜೋಷಿ ಸೋಲಲೆಂದೇ ಬಯಸಿದ್ದಾರೆ. ಚಿಕ್ಕನಗೌಡರ್ ಮಗಳು ನಿನ್ನೆಯಷ್ಟೇ ಜೋಷಿ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿಗೆ ಈ ಸಲ ಲಿಂಗಾಯತ/ವೀರಶೈವ ಸಮುದಾಯ ದೊಡ್ಡ ಏಟು ನೀಡಲಿದೆ. ಬಿಜೆಪಿಗೆ ಇಲ್ಲ ಸಾಕಷ್ಟು ಕೇಡರ್ಸ್ ಇದ್ದರೂ ಜೋಷಿಗೆ ಜನರನ್ನು ಎದುರಿಸುವುದು ಕಷ್ಟವಾಗುತ್ತಿದೆ.
ಇನ್ನೊಂದು ಕಡೆ ಕಾಂಗ್ರೆಸ್‍ನ ವಿನಯ ಕುಲಕರ್ಣಿ ಬಿರುಸಾದ ಪ್ರಚಾರದಲ್ಲಿ ತೊಡಗಿ ಎಲ್ಲ ಸಮುದಾಯಗಳನ್ನು ತಲುಪುತ್ತಿದ್ದಾರೆ.

vinay

ವಿನಯಗೆ ಇಲ್ಲಿ ಅಭಿಮಾನಿ ಪಡೆಯೂ ಇದ್ದು, ಅದು ಅಗ್ರೆಸಿವ್ ಕೂಡ ಆಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈ ಸಲ ಕಾಂಗ್ರೆಸ್‍ನಲ್ಲಿ ಒಗ್ಗಟ್ಟು ಕಂಡು ಬಂದಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಐ.ಜಿ. ಸನದಿ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಕಲಘಟಗಿಯಿಂದ ಸೋತಿದ್ದ ಸಂತೋಷ ಲಾಡ್ ವಿನಯ್ ಪರವಾಗಿ ಬೃಹತ್ ರ್ಯಾಲಿ ಮಾಡಿದ್ದಾರೆ. ಇಲ್ಲಿ ಜೆಡಿಎಸ್‍ಗೂ ಒಂದು ಮಟ್ಟದ ನೆಲೆಯಿದೆ. ಜೆಡಿಎಸ್‍ನ ಬಸವರಾಜ ಹೊರಟ್ಟಿ, ಕೋನರಡ್ಡಿ ಮತ್ತು ಹಲವು ಕಾರ್ಪೋರೇಟರುಗಳು ವಿನಯ ಪರ ಕೆಲಸ ಮಾಡುತ್ತಿದ್ದಾರೆ.
ಈ ಸಲ ಇತರ ಸಮುದಾಯಗಳ ಜೊತೆಗೆ ಲಿಂಗಾಯತ ಸಮೂಹ ವಿನಯ ಕುಲಕರ್ಣಿ ಪರ ನಿಂತಂತೆ ಕಾಣುತ್ತಿದೆ. ಹೀಗಾಗಿ ಜೋಷಿಗೆ ಇದು ಅತಿ ಕಷ್ಟದ ಚುನಾವಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...