Homeಅಂಕಣಗಳುಧಾರವಾಡ: ನಕಲಿ ಗೋವಿಗೆ ಧಾಡಸಿ ‘ಬಸವ’ನ ಠಕ್ಕರ್!

ಧಾರವಾಡ: ನಕಲಿ ಗೋವಿಗೆ ಧಾಡಸಿ ‘ಬಸವ’ನ ಠಕ್ಕರ್!

- Advertisement -
- Advertisement -

ಪಿ.ಕೆ.ಮಲ್ಲನಗೌಡ |

ನೋಡಲು ಗೋವಿನಂತಿರುವ ಧಾರವಾಡ ಸಂಸದ ಪ್ರಹ್ಲಾದ್ ಜೋಷಿಯವರಿಗೆ ಎದುರಾಗಿ ಧಾಡಸಿ ‘ಬಸವ’ ವಿನಯ ಕುಲಕರ್ಣಿ ಠಕ್ಕರ್ ಕೊಡುತ್ತಿದ್ದಾರೆ. ‘ಹಿಂದುತ್ವ’ದ ಪ್ರತಿಪಾದಕ ಜೋಷಿ ಕೆಲಸ ಮಾಡಿದ್ದಕ್ಕಿಂತ ಪ್ರಚಾರಕ್ಕೆ ಹಾತೊರೆದದ್ದೇ ಹೆಚ್ಚು. ಮೂರು ಸಲ ಸಂಸದರಾದೂ ಈಗಲೂ ಅವರು ಮೋದಿ ಮುಖವಾಡದಲ್ಲಿ ಮತ ಬೇಡುತ್ತಿದ್ದಾರೆ. ಈಗ ಯಾವ ಅಧಿಕಾರವೂ ಇಲ್ಲದ ವಿನಯ ಕುಲಕರ್ಣಿ ಈ ಸಲ ಗೆಲ್ಲಲು ಎಲ್ಲ ಮಾರ್ಗಗಳಲ್ಲೂ ಪ್ರಯ್ನಿಸುತ್ತಿದ್ದಾರೆ.

joshi

ಮೂರು ಸಲ ಸಂಸದರಾಗಿರುವ ಜೋಷಿ ಬಗ್ಗೆ ಜನಕ್ಕೆ ಭ್ರಮನಿರಸವಾಗಿದೆ. ಬಿಜೆಪಿಯ ಸ್ಥಳಿಯ ನಾಯಕರನ್ನು ತುಳಿದ ಆರೋಪವನ್ನು ಎದುರಿಸುತ್ತಿರುವ ಜೋಷಿಗೆ ಈ ಸಲ ಪಕ್ಷದೊಳಗೇ ಸಾಕಷ್ಟು ವಿರೋಧವಿದೆ. ರಂಗಾ ಬದ್ದಿ, ದತ್ತಾ ಡೋರ್ಲೆ, ರಾಜೇಂದ್ರ ಗೋಖಲೆ, ಮಹೇಶ ತೆಂಗಿನಕಾಯಿ-ಇವರೆಲ್ಲ ಜೋಷಿಯ ಸ್ವಾರ್ಥಕ್ಕೆ ತಮ್ಮ ರಾಜಕೀಯ ಜೀವನದಲ್ಲಿ ಹಿನ್ನಡೆ ಅನುಭವಿಸಿದವರು.
ತಮ್ಮ ಸೋಲಿಗೆ ಜೋಷಿಯೇ ಕಾರಣವೆಂದು ಅತೃಪ್ತಿ ವ್ಯಕ್ತಪಡಿಸುತ್ತಲೇ ಬಂದಿರುವ ಬಿಜೆಪಿ ಮಾಜಿ ಶಾಸಕ ಚಿಕ್ಕನಗೌಡರ್ ಜೋಷಿ ಸೋಲಲೆಂದೇ ಬಯಸಿದ್ದಾರೆ. ಚಿಕ್ಕನಗೌಡರ್ ಮಗಳು ನಿನ್ನೆಯಷ್ಟೇ ಜೋಷಿ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ.
ಬಿಜೆಪಿಗೆ ಈ ಸಲ ಲಿಂಗಾಯತ/ವೀರಶೈವ ಸಮುದಾಯ ದೊಡ್ಡ ಏಟು ನೀಡಲಿದೆ. ಬಿಜೆಪಿಗೆ ಇಲ್ಲ ಸಾಕಷ್ಟು ಕೇಡರ್ಸ್ ಇದ್ದರೂ ಜೋಷಿಗೆ ಜನರನ್ನು ಎದುರಿಸುವುದು ಕಷ್ಟವಾಗುತ್ತಿದೆ.
ಇನ್ನೊಂದು ಕಡೆ ಕಾಂಗ್ರೆಸ್‍ನ ವಿನಯ ಕುಲಕರ್ಣಿ ಬಿರುಸಾದ ಪ್ರಚಾರದಲ್ಲಿ ತೊಡಗಿ ಎಲ್ಲ ಸಮುದಾಯಗಳನ್ನು ತಲುಪುತ್ತಿದ್ದಾರೆ.

vinay

ವಿನಯಗೆ ಇಲ್ಲಿ ಅಭಿಮಾನಿ ಪಡೆಯೂ ಇದ್ದು, ಅದು ಅಗ್ರೆಸಿವ್ ಕೂಡ ಆಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಈ ಸಲ ಕಾಂಗ್ರೆಸ್‍ನಲ್ಲಿ ಒಗ್ಗಟ್ಟು ಕಂಡು ಬಂದಿದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಐ.ಜಿ. ಸನದಿ ಕೂಡ ಪ್ರಚಾರದಲ್ಲಿ ತೊಡಗಿದ್ದಾರೆ. ಕಲಘಟಗಿಯಿಂದ ಸೋತಿದ್ದ ಸಂತೋಷ ಲಾಡ್ ವಿನಯ್ ಪರವಾಗಿ ಬೃಹತ್ ರ್ಯಾಲಿ ಮಾಡಿದ್ದಾರೆ. ಇಲ್ಲಿ ಜೆಡಿಎಸ್‍ಗೂ ಒಂದು ಮಟ್ಟದ ನೆಲೆಯಿದೆ. ಜೆಡಿಎಸ್‍ನ ಬಸವರಾಜ ಹೊರಟ್ಟಿ, ಕೋನರಡ್ಡಿ ಮತ್ತು ಹಲವು ಕಾರ್ಪೋರೇಟರುಗಳು ವಿನಯ ಪರ ಕೆಲಸ ಮಾಡುತ್ತಿದ್ದಾರೆ.
ಈ ಸಲ ಇತರ ಸಮುದಾಯಗಳ ಜೊತೆಗೆ ಲಿಂಗಾಯತ ಸಮೂಹ ವಿನಯ ಕುಲಕರ್ಣಿ ಪರ ನಿಂತಂತೆ ಕಾಣುತ್ತಿದೆ. ಹೀಗಾಗಿ ಜೋಷಿಗೆ ಇದು ಅತಿ ಕಷ್ಟದ ಚುನಾವಣೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...