Homeಅಂಕಣಗಳುನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ 'ಶರಣ'!

ನಕಲಿ ಲಿಂಗಾಯತ ನಾಯಕನನ್ನು ಬಲೆಗೆ ಕೆಡವಿದ ‘ಶರಣ’!

- Advertisement -
- Advertisement -

ವಿಶ್ವರಾಧ್ಯ ಸತ್ಯಂಪೇಟೆ |
ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಉಂಟು ಮಾಡಿದ ಧ್ವನಿ ಸುರುಳಿಯ ಕರ್ತೃ ಶರಣಗೌಡ ಕಂದಕೂರ ಗುರುಮಿಠಕಲ್ ಕ್ಷೇತ್ರದಿಂದ ಗೆದ್ದು ಬಂದ ನಾಗಣ್ಣಗೌಡ ಕಂದಕೂರ ಅವರ ಪುತ್ರ. ಕಂದಕೂರ ಕುಟುಂಬ ವರ್ಗದವರಿಗೆ ದೇವೇಗೌಡರು ಎಂದೆಂದೂ ಸನಿಹವೆ. ಶರಣಗೌಡರ ದೊಡ್ಡಪ್ಪ ಲಿಂ.ಸದಾಶಿವರೆಡ್ಡಿ ಕಂದಕೂರ ಅಂದರೆ ಪಂಚಪ್ರಾಣ. ಯಾದಗಿರಿಗೆ ಗೌಡರು ಆಗ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ. ಸದಾಶಿವರೆಡ್ಡಿ ಜನತಾ ಪಕ್ಷ ಪಾಳೆಯದಲ್ಲಿ ಹಿಂದಿನಿಂದಲೂ ಗುರುತಿಸಿಕೊಂಡಿದ್ದರು. ಯಾದಗಿರಿ ಮತ ಕ್ಷೇತ್ರದ ಶಾಸಕರಾಗಿದ್ದ ಕೆಲವು ಕಾಲ ಮಂತ್ರಿಯಾಗಿದ್ದ ವಿಶ್ವನಾಥರೆಡ್ಡಿ ಮುದ್ನಾಳರ ಒಡನಾಟವಿದ್ದರೂ ತಮ್ಮದೆ ಅಸ್ತಿತ್ವ ಹೊಂದಿದವರು. ಸಣ್ಣ ಪುಟ್ಟ ಗಿಮಿಕ್ ಮಾಡದೆ ನೇರ ನಿಷ್ಠುರ ಗುಣಗಳನ್ನು ಬೆಳೆಸಿಕೊಂಡು ಜನ ಮನ್ನಣೆ ಗಳಿಸಿಕೊಂಡಿದ್ದವರು. ಬಹುಶಃ ಇದನ್ನು ಗುರುತಿಸಿದ್ದ ದೇವೇಗೌಡರು ಯಾದಗಿರಿಗೆ ಯಾವಾಗ ಬಂದರೂ ಸದಾಶಿವರೆಡ್ಡಿಯವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ.

ಈ ಸದಾಶಿವರೆಡ್ಡಿಯವರ ತಮ್ಮ ನಾಗಣ್ಣಗೌಡ ಕಂದಕೂರ ಅವರ ಮಗನೆ ಶರಣಗೌಡ ಕಂದಕೂರ. ಗುರುಮಿಠಕಲ್ ಮತಕ್ಷೇತ್ರದಿಂದ ಎರಡು ಬಾರಿ ಸ್ಪರ್ಧಿಸಿ ಸೋತು ಹೋಗಿದ್ದ ನಾಗಣ್ಣಗೌಡರ ಗೆಲುವಿಗೆ ಮುಖ್ಯ ಕಾರಣವೆ ಶರಣಗೌಡ ಕಂದಕೂರ. ಕೇವಲ 37 ವರ್ಷ ವಯಸ್ಸಿನವನಿದ್ರೂ ಮತಕ್ಷೇತ್ರದ ಉದ್ದಕ್ಕೂ ಪಾದರಸದಂತೆ ಓಡಾಡಿ ತಮ್ಮ ಕುಟುಂಬದ ಪ್ರಭಾವ ಉಂಟು ಮಾಡಿದ್ದಾನೆ.

ಕಳೆದ ಎರಡು ವಿಧಾನಸಭೆಯ ಚುನಾವಣೆಯಲ್ಲಿ ಅಲ್ಲಿನ ಬಾಬುರಾವ್ ಚಿಂಚನಸೂರ ಎಂಬ ವ್ಯಕ್ತಿಯಿಂದ ಸೋತು ಸುಣ್ಣವಾಗಿದ್ದ ನಾಗಣ್ಣಗೌಡ ಕಂದಕೂರ ಮತ್ತೆ ಚಿಗುರುವಂತೆ ಮಾಡಿದ್ದೇ ಈ ಶರಣಗೌಡನ ಸಂಘಟನಾ ಚತುರತೆ. ನಾಗಣ್ಣಗೌಡರ ತೂಕದ ಮಾತು ಹಾಗೂ ಗಟ್ಸ್ ಒಂದೆಡೆ ಕೆಲಸ ಮಾಡಿದ್ದರೆ ಇನ್ನೊಂದೆಡೆ ಶರಣಗೌಡನ ಕ್ಷೇತ್ರದ ಪಾದಯಾತ್ರೆಗಳೂ ಪ್ಲಸ್ ಪಾಯಿಂಟ್ ಆದವು. ಎರಡು ಬಾರಿ ನೆಲ ಕಚ್ಚಿ ಇನ್ನೇನು ಮೂರನೆ ಬಾರಿ ಕಂದಕೂರ ಕುಟುಂಬ ನೆಲ ಕಚ್ಚಿಯೇ ಹೋಗುತ್ತದೆ ಎಂದು ರಾಜಕೀಯ ನಾಯಕರು ಎಣಿಕೆ ಹಾಕಿದಾಗ ಮತದಾರನ ಕರುಣಾ ದೃಷ್ಟಿ ಇವರ ಮೇಲೆ ಬಿತ್ತು. ಸಾಡೆ ಸಾತಿಯಂತೆ ಗುರುಮಿಠಕಲ್ ಮತಕ್ಷೇತ್ರಕ್ಕೆ ಗಂಟು ಬಿದ್ದಿದ್ದ ಚಿಂಚನಸೂರ ಬಾಬುರಾವ್ ನೇಪಥ್ಯಕ್ಕೆ ಸರಿಯಬೇಕಾಯಿತು.

ಮೂರನೆ ಸಲ ಗುರುಮಿಠಕಲ್ ಕ್ಷೇತ್ರದಲ್ಲಿ ನಿಲ್ಲಲು ದೇವೇಗೌಡರ ಜನತಾದಳ ನಾಗಣ್ಣಗೌಡ ಕಂದಕೂರರಿಗೆ ಎಲ್ಲಾ ರೀತಿಯಿಂದಲೂ ಸಹಕಾರ ನೀಡಿದೆ. ಈ ಸಹಕಾರ ಇಂದು ನಿನ್ನೆಯದಲ್ಲ. ಹೀಗಾಗಿ ನಾಗಣ್ಣಗೌಡ ಕಂದಕೂರ ಆತನ ಮಗ ಶರಣಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿಗಳು ಬೀಸಿದ ಬಲೆಯಲ್ಲಿ ಯಡಿಯೂರಪ್ಪ ಸಿಕ್ಕು ಹಾಕಿಕೊಂಡಿದ್ದಾನೆ. ಯಡಿಯೂರಪ್ಪನ ಮುಖ್ಯಮಂತ್ರಿಯ ಕನಸಿಗೆ ಬ್ರೇಕ್ ಹಾಕದೆ ಹೋದರೆ ಕುಮಾರಣ್ಣನ ಸರಕಾರ ಉರುಳಿ ಹೋಗುತ್ತದೆಂಬುದು ಯಾರಾದರೂ ಊಹಿಸಬಹುದಾಗಿತ್ತು. ಕುದುರೆಗಳು ಹೇಗೂ ಖರೀದಿಗೆ ಸಿಗುತ್ತವೆ ಎಂಬ ಖಾತ್ರಿಯಲ್ಲಿದ್ದ ಯಡಿಯೂರಪ್ಪ ಹೈಕಮಾಂಡ್‌ನಿಂದ ಗ್ರಿನ್ ಸಿಗ್ನಲ್ ಪಡೆದು ತನ್ನ ಕೈಚಳ ಆರಂಭಿಸಿದ್ದರು. ಇದರಿಂದ ಕಾಂಗ್ರೆಸ್ ಹಾಗೂ ದಳದ ಮೈತ್ರಿ ಸರಕಾರ ತನ್ನ ಅಸ್ತಿತ್ವಕ್ಕಾಗಿ ಯಡ್ಡಿಯನ್ನು ಖೆಡ್ಡಾದಲ್ಲಿ ಕೆಡವಲು ಸಖತ್ ಗೇಮ್ ಆಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...