Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...