Homeನಿಜವೋ ಸುಳ್ಳೋನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಮೀಟ್ ದಿ ಪ್ರೆಸ್ಸೂ, ಕಾರ್ಟೂನ್‍ಗಳೂ

ನರೇಂದ್ರ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಕುರಿತು ಸೃಜನಶೀಲ ಲೋಕದ ಪ್ರತಿಕ್ರಿಯೆ

- Advertisement -
- Advertisement -

|| ನಾನು ಗೌರಿ ಡೆಸ್ಕ್ ||
ಮೋದಿಯವರು ಪ್ರಧಾನಿಯಾದ ನಂತರ ದೇಶದಲ್ಲಿ ಸೃಜನಶೀಲತೆಯೂ ಉಕ್ಕೇರಿ ಹರಿಯುತ್ತಿದೆ. ಈ ಹೊತ್ತಿನಲ್ಲೇ ಇ-ಹೊತ್ತೂ ಹೆಚ್ಚಾಗಿದ್ದೂ ಇದಕ್ಕೆ ಇಂಬುಕೊಟ್ಟಿರಬಹುದು. ತೀರಾ ಇತ್ತೀಚೆಗಿನ ಉದಾಹರಣೆ ಎಂದರೆ, ಮೋದಿಯವರ ಮೋಡ ಮತ್ತು ರಾಡಾರ್ ಹೇಳಿಕೆಯ ಸಂದರ್ಭ. ಆಗ ನೂರಾರು ಬಗೆಯ ಟ್ವೀಟ್‍ಗಳು ಮತ್ತು ಕಾರ್ಟೂನ್‍ಗಳು ಕೆಲವೇ ಗಂಟೆಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದವು. ಈಗ ಮೋದಿಯವರ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿಯ ಬಗ್ಗೆ ಕಾರ್ಟೂನುಗಳು ಯಥೇಚ್ಚ ಜಿಗಿದಾಡುತ್ತಿವೆ.

5 ವರ್ಷಗಳ ಹಿಂದೆ ಇಂತಹ ಹಲವು ಚಿತ್ರಗಳು, ಮೆಮೆಗಳು, ಜೋಕುಗಳು ರಾಹುಲ್‍ಗಾಂಧಿಯವರನ್ನು ಪಪ್ಪುವಾಗಿಸುವಲ್ಲಿ ಯಶಸ್ವಿಯಾಗಿದ್ದವು. ಈಗ ಮೋದಿಯವರನ್ನು ಪತ್ರಿಕಾಗೋಷ್ಠಿಯನ್ನು ಎದುರಿಸುವ ಧೈರ್ಯವಿಲ್ಲದ ಪ್ರಧಾನಿಯಾಗಿ ಬಿಂಬಿಸುತ್ತಿವೆ. ಸ್ವತಃ ರಾಹುಲ್‍ಗಾಂಧಿ ಮೋದಿಯವರನ್ನು ಟ್ರೋಲ್ ಮಾಡಲು ಆರಂಭಿಸಿದ್ದಾರೆ. ಅದು ಹೋಗಲಿ ಎಂದರೆ, ಪತ್ರಕರ್ತರನ್ನೂ ರಾಹುಲ್ ಗೋಳು ಹುಯ್ದುಕೊಳ್ಳಲು ಶುರು ಮಾಡಿದ್ದಾರೆ.

ನಿನ್ನೆ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ‘ಹಾಜರಿದ್ದು’ ಒಂದೂ ಪ್ರಶ್ನೆ ಎದುರಿಸದ ಪ್ರಧಾನಿಯವರ ನಡವಳಿಕೆಯ ಕುರಿತು ಬಂದಿರುವ ಕೆಲವು ಕಾರ್ಟೂನುಗಳು, ಚಿತ್ರಗಳು ಏನು ಹೇಳುತ್ತವೆ ನೋಡೋಣ.


ರಾಹುಲ್‍ಗಾಂಧಿಯವರ ಟ್ವೀಟ್‍ನ ಸ್ಕ್ರೀನ್‍ಶಾಟ್ ಎಲ್ಲಕ್ಕಿಂತ ಹೆಚ್ಚು ಷೇರ್ ಆಗಿತ್ತು.  ಮೋದಿಯವರನ್ನು ವ್ಯಂಗ್ಯವಾಗಿ ಅಭಿನಂದಿಸಿದ ಆ ಟ್ವೀಟ್, ‘ಮುಂದಿನ ಬಾರಿ ಅಮಿತ್‍ಷಾ ನಿಮಗೆ ಒಂದೆರಡು ಪ್ರಶ್ನೆಗಳಿಗೆ ಉತ್ತರಿಸಲು ಬಿಡಬಹುದು’ ಎಂದಿತ್ತು.

ಅದರ ನಂತರದ್ದು ಸತೀಶ್ ಆಚಾರ್ಯ ಅವರ ಕಾರ್ಟೂನ್. ಇವರೊಬ್ಬರದ್ದು ಮಾತ್ರವಲ್ಲದೇ, ಇನ್ನೂ ಹಲವು ಕಾರ್ಟೂನ್‍ಗಳು ಬಂದವು.  ಅವು ಮೋದಿಯವರ ಇತ್ತೀಚೆಗಿನ ಮೋಡದ ಮರೆಯಲ್ಲಿ ರಾಡಾರ್ ಕೆಲಸ ಮಾಡುವುದಿಲ್ಲವೆಂಬುದನ್ನು ಇದಕ್ಕೆ ಲಿಂಕ್ ಮಾಡಿಕೊಂಡಿದ್ದವು.


ಇದನ್ನೂ ಓದಿ: ಮೋದಿ ಪ್ರೆಸ್‍ಮೀಟ್ – ಹೇಳಿಕೊಟ್ಟ ಮಾತು, ಕಟ್ಟಿಕೊಟ್ಟ ಬುತ್ತಿ

ಮೋದಿಯವರ ಮೌನವನ್ನು ಅಣಕಿಸುವ ಕೆಲವು ಪೋಸ್ಟರ್‍ಗಳು ಬಂದವು.

 

ಸಾಮಾನ್ಯವಾಗಿ ವಾಚಾಳಿಯಾದ ಮೋದಿಯವರು ದೀರ್ಘಕಾಲ ಮೌನವಾಗಿದ್ದದ್ದು ಇಲ್ಲೇ ಎಂದು ಹೇಳುವ ಟ್ವೀಟ್‍ಗಳೂ ಇದ್ದವು.


ಪತ್ರಿಕಾಗೋಷ್ಠಿ ಮುಗಿದ ಕೆಲವೇ ಸಮಯದಲ್ಲಿ, ಮೋದಿಯವರು ದೀರ್ಘಕಾಲ ಸುಮ್ಮನೇ ಕೇಳಿಸಿಕೊಂಡಿದ್ದನ್ನು ವಿಡಿಯೋ ಮಾಡಿ ಹರಿಬಿಡಲಾಯಿತು.

ಇದನ್ನೂ ಓದಿ: ಒಬ್ಬನೇ ಸಂದರ್ಶಕ, ಮೋದಿ-ರಾಹುಲ್ ಇಬ್ಬರನ್ನೂ ಸಂದರ್ಶಿಸಿದ ಪರಿ

ಮೋದಿಯವರು ಆಯ್ದ ಮಾಧ್ಯಮ ಸಂಸ್ಥೆಗಳಿಗೆ ನೀಡಿದ ಸಂದರ್ಶನದಲ್ಲೂ ಪ್ರಶ್ನೆ ಮತ್ತು ಉತ್ತರಗಳನ್ನು ಮೊದಲೇ ಬರೆದಿಟ್ಟುಕೊಳ್ಳುವುದನ್ನು ಆಕಾಶ್ ಬ್ಯಾನರ್ಜಿ ಟ್ರೋಲ್ ಮಾಡಿದ್ದರು.

 

ಇಂತಹ ಹಲವಾರು ಕಾರ್ಟೂನುಗಳು ಹರಿದಾಡಿದವು.

ಪತ್ರಿಕಾಗೋಷ್ಠಿಯನ್ನು ಎದುರಿಸಲು ಧೈರ್ಯವಿಲ್ಲದ ಮೋದಿಯವರನ್ನು ಅಮಿತ್ ಷಾ ಬಲವಂತದಿಂದ ಕರೆದುಕೊಂಡು ಬಂದಂತೆ ಬರೆಯಲಾಗಿದ್ದ ಕಾರ್ಟೂನ್ ಸಹಾ ಸದ್ದು ಮಾಡಿತು.

ಈ ದಿನ ಬೆಳಿಗ್ಗೆ ಬಂದ ಟೆಲಿಗ್ರಾಫ್ ಪತ್ರಿಕೆಯ ಮುಖಪುಟವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿತ್ತು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...