Homeಕರ್ನಾಟಕನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

ನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕನ್ನಡದ ಮೇರು ಲೇಖಕ, ನಾಟಕಕಾರ, ಜೀವಪರ ಹೋರಾಟಗಾರ ಗಿರೀಶ್ ಕಾರ್ನಾಡ್‍ರವರ ನಿಧನದ ನಂತರ ಲಕ್ಷಾಂತರ ಜನ ಕಂಬನಿ ಮಿಡಿದಿದ್ದರು. ಚಳವಳಿ ಮತ್ತು ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದ್ದರು. ನೋವಿನ ಭಾವಪೂರ್ಣ ವಿದಾಯವನ್ನು ಸಲ್ಲಿಸಿದ್ದರು. ಜೊತೆಗೇನೆ ಹಲವು ವಿಕೃತ ಮನಸ್ಸಿನವರು, ಒಂದು ಪಕ್ಷಕ್ಕೆ ಸೇರಿದವರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಾವನ್ನು ಸಂಭ್ರಮಿಸಿ ಪೋಸ್ಟ್ ಸಹ ಹಾಕಿದ್ದರು. ಇದರ ಕುರಿತಾಗಿ ಸಾಕಷ್ಟು ಸುದ್ದಿಯಾಗಿತ್ತು.

ಇದರಿಂದ ನಾನುಗೌರಿ.ಕಾಂ ವತಿಯಿಂದ ಜನರ ಮನಸ್ಥಿತಿ ಅರ್ಥ ಮಾಡಿಕೊಳ್ಳು ನಾನುಗೌರಿ ಫೇಸ್‍ಬುಕ್ ಪುಟದಲ್ಲಿ ಒಂದು ಪೋಲ್ ಕ್ರಿಯೇಟ್ ಮಾಡಲಾಗಿತ್ತು. “ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕøತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹ ಮಾಡಬಹುದು” ಎಂದು ಪೋಲ್ ನಲ್ಲಿ ಬರೆದು 1. ಹೌದು 2. ಖಂಡಿತಾ ಅಲ್ಲ ಎಂಬ ಎರಡು ಆಯ್ಕೆಗಳನ್ನು ನೀಡಲಾಗಿತ್ತು.

ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕೃತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹಾ ಮಾಡಬಹುದು.

Naanu Gauri यांनी वर पोस्ट केले सोमवार, १० जून, २०१९

ಪೋಲ್ ಆರಂಭವಾದ ಕೆಲವೇ ಕ್ಷಣಗಳಲ್ಲಿ ನೂರಾರು ಜನ ಓಟ್ ಮಾಡಿ ಖಂಡಿತಾ ಅಲ್ಲ ಎಂಬುದಕ್ಕೆ ಮತ ಹಾಕಿದ್ದರು. ಅಷ್ಟರಲ್ಲಿ ಕ್ರಿಸ್ಟೋಫರ್ ಚಕ್ರವರ್ತಿ ಹೆಸರಿನ ಮೋದಿಯವರು ಫ್ರೊಫೈಲ್ ಹಾಕಿದ್ದ ಫೇಕ್ ಅಕೌಂಟ್‍ನಿಂದ ಒಬ್ಬರು “ನೀವ್ಯಾರು ಈ ಜನ್ಮದಲ್ಲಿ ಪೋಲ್ ಗೆಲ್ಲೋಕೆ ಆಗೋದಿಲ್ಲ.. ಕಿಲ ಕಿಲ,,, ನಾವ್ ಬಿಡಕಿಲ್ಲ ಎಂದು ಕಮೆಂಟ್” ಮಾಡಿದರು. ಅಷ್ಟು ಮಾತ್ರವಲ್ಲದೇ ಪೋಲ್‍ನ ಲಿಂಕ್ ಕಾಪಿ ಮಾಡಿ ಬಲಪಂಥೀಯ ಗ್ರೂಪುಗಳಲ್ಲಿ ಷೇರ್ ಮಾಡಿ ಬಂದು ಇಲ್ಲಿ ವೋಟ್ ಮತ್ತು ಕಮೆಂಟ್ ಮಾಡುವಂತೆ ಮಾಡಿದರು. ಆಗ ಪೋಲ್ ನಲ್ಲಿ 76%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 24% ಜನ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಪೋಲ್ ಡಿಲೀಟ್ ಮಾಡಿದ್ರೆ ಕಾರ್ನಾಡ್ ಪ್ರೇತಾತ್ಮನಾಗಿ ನಿನ್ನ ಮನೇಲಿ ಅಲಿತಾನೇ ಹುಷಾರ್ ಎಂದು ಕಮೆಂಟ್ ಮಾಡಿದರು. ಬೆಳಿಗ್ಗೆ ಒಳಗೆ ಈ ಪೋಲ್ ಉಡೀಸ್ ಮಾಡ್ತೀವಿ ನೋಡಿ ಎಂದು ಚಾಲೆಂಜ್ ಸಹ ಹಾಕಿದರು. ಅಂದರೆ ಅವರ ಕಡೆಯವರೆಲ್ಲಾ ಬಂದು ಸಾವನ್ನು ಸಂಭ್ರಮಿಸುವುದು ಸರಿ ಎಂದು ಕಮೆಂಟ್ ಮತ್ತು ವೋಟ್ ಮಾಡುತ್ತಾರೆ ಎಂಬ ಅತೀ ಆತ್ಮವಿಶ್ವಾಸ ಅವರದು. ಅದಾದ ಸ್ವಲ್ಪ ಹೊತ್ತಿನಲ್ಲೇ ನೂರಾರು ಜನ ಬಲಪಂಥೀಯರು ಪೋಲ್‍ಗೆ ಲಗ್ಗೆ ಇಟ್ಟರು. ವೋಟ್ ಮಾಡಿ ಕೆಟ್ಟ ಕೊಳಕಾಗಿ, ಅಶ್ಲೀಲವಾಗಿ ಬೈಗುಳಗಳ ಮಳೆ ಸುರಿಸಿದರು.

ಅಷ್ಟು ಮಾತ್ರವಲ್ಲದೇ ತಮ್ಮ ಯಾವು ಯಾವುದೋ ಫೇಸ್‍ಬುಕ್ ಪೇಜ್‍ನಲ್ಲಿ, ಗ್ರೂಪ್‍ನಲ್ಲಿ ಮತ್ತು ವಾಟ್ಸಾಪ್ ಗುಂಪುಗಳಿಗೆ ಪೋಲ್‍ನ ಲಿಂಕ್ ಹಾಕಿ ಬಂದು ವೋಟ್ ಮಾಡಲು ಮತ್ತು ಕೆಟ್ಟದಾಗಿ ಕಮೆಂಟ್ ಮಾಡಲು ಕರೆ ನೀಡಿದ್ದರು. ಆದರೆ ಒಂದು ದಿನದ ಪೋಲ್ ಮುಗಿದಾಗ ಅವರ ಬಯಕೆ ಸ್ವಲ್ಪ ಮಾತ್ರವೇ ಈಡೇರಿತ್ತು. ಅಂಕಿ ಸಂಖ್ಯೆಗಳ ಆಧಾರದಲ್ಲಿ ಅವರಿಗೆ ನಿಚ್ಚಳ ಸೋಲಾಗಿತ್ತು. ಪೋಲ್ ನಲ್ಲಿ 14810ಜನ ಒಟ್ಟು ವೋಟ್ ಮಾಡಿದ್ದು 70%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 30% ಜನ ಮಾತ್ರ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಅಂದರೆ ಇಂದಿಗೂ 70% ಅಂದರೆ ಪೋಲ್ ಪ್ರಕಾರ 10367 ಜನ ಸಾವಿನ ಸಂಭ್ರಮವನ್ನು ವಿರೋಧಿಸಿ ಜೀವಪರತೆ ಮೆರೆದಿದ್ದಾರೆ. ಇದು ಭರವಸೆಯ ಸಂಗತಿ. ಈ ಸಮಾಜವನ್ನು ಒಂದಷ್ಟು ಸಹನೀಯಗೊಳಿಸಬಹುದೆಂಬ ಆಶಯಕ್ಕೆ ಇದು ವಿಶ್ವಾಸ ಕೊಡುವ ಸಂಗತಿಯಾಗುತ್ತದೆ. ಅಂದರೆ ಸಜ್ಜನರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿಯೇ ಇದ್ದಾರೆ ಎಂಬುದನ್ನು ಇದು ಎತ್ತಿ ತೋರಿಸುತ್ತದೆ. ಹೊಸದೊಂದನ್ನು ಕಟ್ಟುವ, ಮಾನವೀಯತೆಯನ್ನು, ಬಹುತ್ವವನ್ನು ಕಾಪಾಡಬೇಕೆಂದು ಶ್ರಮಿಸುವವರಿಗೆ ಇದು ಆಶಾದಾಯಕ ಸಂಗತಿ.

ಆದರೆ ಎಚ್ಚರಿಕೆಯ ಸಂಗತಿಯೆಂದರೆ 30%ಜನ ವೋಟ್ ಮಾಡಿರುವ 4443 ಜನ ಸಾವನ್ನು ಸಂಭ್ರಮಿಸಿದ್ದಾರೆ, ವಿಕೃತತೆ ಮೆರೆದಿದ್ದಾರೆ. ಕೆಟ್ಟದಾಗಿ ಬೈಯ್ಯುವ ಮನಸ್ಥಿತಿ ರೂಢಿಸಿಕೊಂಡಿದ್ದಾರೆ. ಇದು ಸಹ ಕಡಿಮೆ ಸಂಖ್ಯೆಯೇನಲ್ಲ. ಇವರು ಹೀಗೇಕಾದರೂ ಎಂಬುದರ ಕುರಿತು ಯೋಚಿಸಬೇಕಿದೆ. ಏಕೆಂದರೆ ಯಾವ ಧರ್ಮವೂ ಸಹ ಸಾವನ್ನು ಸಂಭ್ರಮಿಸು ಎಂದು ಹೇಳಿಕೊಡುವುದಿಲ್ಲವಲ್ಲ?

ಈ ಪೋಲ್ ನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಒಟ್ಟು 259 ಜನ ಕಮೆಂಟ್ ಮಾಡಿದ್ದಾರೆ. ಅದರಲ್ಲಿ ಬೆರಳೆಣಿಕೆಯ ಮಂದಿ ಮಾತ್ರ ಸಾವನ್ನು ಸಂಭ್ರಮಿಸುವುದು ಸರಿಯಲ್ಲ ಎಂಬ ಕಾಳಜಿ ತೋರಿಸಿದ್ದಾರೆ. ಇನ್ನುಳಿದಂತೆ ಎಲ್ಲವೂ ಬಲಪಂಥೀಯರ ಕಮೆಂಟ್ ಗಳೇ ಆಗಿದ್ದು ತೀರಾ ಕೊಳಕು ಭಾಷೆಯನ್ನು ಪ್ರಯೋಗಿಸಿ ಹೀಗಳೆದಿದ್ದಾರೆ. ಇದು ಹೇಗೆ ಸಾಧ್ಯ? ವೋಟ್ ಮಾಡಿರುವವರು 70%ಜನ ಸಾವಿನ ಸಂಭ್ರಮ ಸರಿಯಲ್ಲ ಎಂದರೆ ಕಮೆಂಟ್ ಮಾಡಿರುವ 90%ಗೂ ಹೆಚ್ಚು ಜನ ಸರಿ ಎಂದು ವಿಕೃತತೆ ಅನುಭವಿಸಿದ್ದಾರೆ.

ಅಂದರೆ ಸಜ್ಜನರು ಮೌನವಾಗಿದ್ದರೆ ದುರ್ಜನರು ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಥಿತಿಯವರು ವೋಟ್ ಮಾಡಿ ಮುಂದೆ ಹೋಗಿದ್ದಾರೆ. ಅಲ್ಲಿ ಬಲಪಂಥೀಯರೊಡನೆ ಕಮೆಂಟ್ ಮಾಡುವುದಕ್ಕೆ ಇಳಿದಿಲ್ಲ. ಇದರಿಂದ ಪ್ರಯೋಜನ ಸಹ ಇಲ್ಲ ಅನ್ನಿಸಿರಬೇಕು. ಇನ್ನು ಕೆಲವರಿಗೆ ಅಷ್ಟು ಸಮಯವಿರಲ್ಲಿಕ್ಕಿಲ್ಲ. ಆದರೆ ಅಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿರುವ ಅರ್ಧಕ್ಕಿಂತ ಹೆಚ್ಚು ಫೇಕ್ ಅಕೌಂಟ್‍ಗಳೆ ಆಗಿವೆ. ಉಳಿದವರ ಕೆಲಸ ಸಹ ಸದಾ ಫೇಸ್ ಬುಕ್ ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು, ಈ ರೀತಿ ಕೆಟ್ಟದಾಗಿ ಕಮೆಂಟ್ ಮಾಡುವುದೇ ಆಗಿದೆ.

ಒಟ್ಟಿನಲ್ಲಿ ಸಾಮಾಜಿಕ ಬದಲಾವಣೆ ಬಯಸುವವರಿಗೆ ಈ ಪೋಲ್ ಹೊಸದಾಗಿ ಜನಪರವಾಗಿ, ಜೀವಪರವಾಗಿ ಏನನ್ನಾದರೂ ಮಾಡುವುದಾದರೆ ಇನ್ನು ಇರುವ ಅವಕಾಶವನ್ನು ತೋರಿಸುತ್ತದೆ. ಜೊತೆಗೇನೆ ಜನರ ಮನಸ್ಥಿತಿ ನಿಧಾನವಾಗಿ ವಿಷಮಯವಾಗುತ್ತಿರುವುದನ್ನು, ಕೆಲವರು ಈಗಾಗಲೇ ವಿಕೃತರಾಗಿರುವುದನ್ನು ತೋರಿಸುತ್ತಲೇ ಎಚ್ಚರಿಕೆ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...