Homeಕರ್ನಾಟಕನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

ನಾನು ಗೌರಿ ಪೋಲ್, ವಿಕೃತರಿಗೆ ಸೋಲು : ಸಾವನ್ನು ಸಂಭ್ರಮಿಸುವುದು ತಪ್ಪೆಂದವರು 70%, ಸರಿಯೆಂದವರು 30%

- Advertisement -
- Advertisement -

| ನಾನುಗೌರಿ ಡೆಸ್ಕ್ |

ಕನ್ನಡದ ಮೇರು ಲೇಖಕ, ನಾಟಕಕಾರ, ಜೀವಪರ ಹೋರಾಟಗಾರ ಗಿರೀಶ್ ಕಾರ್ನಾಡ್‍ರವರ ನಿಧನದ ನಂತರ ಲಕ್ಷಾಂತರ ಜನ ಕಂಬನಿ ಮಿಡಿದಿದ್ದರು. ಚಳವಳಿ ಮತ್ತು ಕನ್ನಡ ಸಾಹಿತ್ಯ ಲೋಕಕ್ಕೆ ಅವರ ಕೊಡುಗೆಯನ್ನು ಸ್ಮರಿಸಿದ್ದರು. ನೋವಿನ ಭಾವಪೂರ್ಣ ವಿದಾಯವನ್ನು ಸಲ್ಲಿಸಿದ್ದರು. ಜೊತೆಗೇನೆ ಹಲವು ವಿಕೃತ ಮನಸ್ಸಿನವರು, ಒಂದು ಪಕ್ಷಕ್ಕೆ ಸೇರಿದವರು ಸಾಮಾಜಿಕ ಜಾಲತಾಣಗಳಲ್ಲಿ ಅವರ ಸಾವನ್ನು ಸಂಭ್ರಮಿಸಿ ಪೋಸ್ಟ್ ಸಹ ಹಾಕಿದ್ದರು. ಇದರ ಕುರಿತಾಗಿ ಸಾಕಷ್ಟು ಸುದ್ದಿಯಾಗಿತ್ತು.

ಇದರಿಂದ ನಾನುಗೌರಿ.ಕಾಂ ವತಿಯಿಂದ ಜನರ ಮನಸ್ಥಿತಿ ಅರ್ಥ ಮಾಡಿಕೊಳ್ಳು ನಾನುಗೌರಿ ಫೇಸ್‍ಬುಕ್ ಪುಟದಲ್ಲಿ ಒಂದು ಪೋಲ್ ಕ್ರಿಯೇಟ್ ಮಾಡಲಾಗಿತ್ತು. “ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕøತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹ ಮಾಡಬಹುದು” ಎಂದು ಪೋಲ್ ನಲ್ಲಿ ಬರೆದು 1. ಹೌದು 2. ಖಂಡಿತಾ ಅಲ್ಲ ಎಂಬ ಎರಡು ಆಯ್ಕೆಗಳನ್ನು ನೀಡಲಾಗಿತ್ತು.

ಸಾವನ್ನು ಸಂಭ್ರಮಿಸುವುದು ಭಾರತೀಯ ಸಂಸ್ಕೃತಿಯೇ? ವೋಟ್ ಮಾಡಿ, ಕಾಮೆಂಟ್ ಮಾಡಿ. ಷೇರ್ ಸಹಾ ಮಾಡಬಹುದು.

Naanu Gauri यांनी वर पोस्ट केले सोमवार, १० जून, २०१९

ಪೋಲ್ ಆರಂಭವಾದ ಕೆಲವೇ ಕ್ಷಣಗಳಲ್ಲಿ ನೂರಾರು ಜನ ಓಟ್ ಮಾಡಿ ಖಂಡಿತಾ ಅಲ್ಲ ಎಂಬುದಕ್ಕೆ ಮತ ಹಾಕಿದ್ದರು. ಅಷ್ಟರಲ್ಲಿ ಕ್ರಿಸ್ಟೋಫರ್ ಚಕ್ರವರ್ತಿ ಹೆಸರಿನ ಮೋದಿಯವರು ಫ್ರೊಫೈಲ್ ಹಾಕಿದ್ದ ಫೇಕ್ ಅಕೌಂಟ್‍ನಿಂದ ಒಬ್ಬರು “ನೀವ್ಯಾರು ಈ ಜನ್ಮದಲ್ಲಿ ಪೋಲ್ ಗೆಲ್ಲೋಕೆ ಆಗೋದಿಲ್ಲ.. ಕಿಲ ಕಿಲ,,, ನಾವ್ ಬಿಡಕಿಲ್ಲ ಎಂದು ಕಮೆಂಟ್” ಮಾಡಿದರು. ಅಷ್ಟು ಮಾತ್ರವಲ್ಲದೇ ಪೋಲ್‍ನ ಲಿಂಕ್ ಕಾಪಿ ಮಾಡಿ ಬಲಪಂಥೀಯ ಗ್ರೂಪುಗಳಲ್ಲಿ ಷೇರ್ ಮಾಡಿ ಬಂದು ಇಲ್ಲಿ ವೋಟ್ ಮತ್ತು ಕಮೆಂಟ್ ಮಾಡುವಂತೆ ಮಾಡಿದರು. ಆಗ ಪೋಲ್ ನಲ್ಲಿ 76%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 24% ಜನ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಪೋಲ್ ಡಿಲೀಟ್ ಮಾಡಿದ್ರೆ ಕಾರ್ನಾಡ್ ಪ್ರೇತಾತ್ಮನಾಗಿ ನಿನ್ನ ಮನೇಲಿ ಅಲಿತಾನೇ ಹುಷಾರ್ ಎಂದು ಕಮೆಂಟ್ ಮಾಡಿದರು. ಬೆಳಿಗ್ಗೆ ಒಳಗೆ ಈ ಪೋಲ್ ಉಡೀಸ್ ಮಾಡ್ತೀವಿ ನೋಡಿ ಎಂದು ಚಾಲೆಂಜ್ ಸಹ ಹಾಕಿದರು. ಅಂದರೆ ಅವರ ಕಡೆಯವರೆಲ್ಲಾ ಬಂದು ಸಾವನ್ನು ಸಂಭ್ರಮಿಸುವುದು ಸರಿ ಎಂದು ಕಮೆಂಟ್ ಮತ್ತು ವೋಟ್ ಮಾಡುತ್ತಾರೆ ಎಂಬ ಅತೀ ಆತ್ಮವಿಶ್ವಾಸ ಅವರದು. ಅದಾದ ಸ್ವಲ್ಪ ಹೊತ್ತಿನಲ್ಲೇ ನೂರಾರು ಜನ ಬಲಪಂಥೀಯರು ಪೋಲ್‍ಗೆ ಲಗ್ಗೆ ಇಟ್ಟರು. ವೋಟ್ ಮಾಡಿ ಕೆಟ್ಟ ಕೊಳಕಾಗಿ, ಅಶ್ಲೀಲವಾಗಿ ಬೈಗುಳಗಳ ಮಳೆ ಸುರಿಸಿದರು.

ಅಷ್ಟು ಮಾತ್ರವಲ್ಲದೇ ತಮ್ಮ ಯಾವು ಯಾವುದೋ ಫೇಸ್‍ಬುಕ್ ಪೇಜ್‍ನಲ್ಲಿ, ಗ್ರೂಪ್‍ನಲ್ಲಿ ಮತ್ತು ವಾಟ್ಸಾಪ್ ಗುಂಪುಗಳಿಗೆ ಪೋಲ್‍ನ ಲಿಂಕ್ ಹಾಕಿ ಬಂದು ವೋಟ್ ಮಾಡಲು ಮತ್ತು ಕೆಟ್ಟದಾಗಿ ಕಮೆಂಟ್ ಮಾಡಲು ಕರೆ ನೀಡಿದ್ದರು. ಆದರೆ ಒಂದು ದಿನದ ಪೋಲ್ ಮುಗಿದಾಗ ಅವರ ಬಯಕೆ ಸ್ವಲ್ಪ ಮಾತ್ರವೇ ಈಡೇರಿತ್ತು. ಅಂಕಿ ಸಂಖ್ಯೆಗಳ ಆಧಾರದಲ್ಲಿ ಅವರಿಗೆ ನಿಚ್ಚಳ ಸೋಲಾಗಿತ್ತು. ಪೋಲ್ ನಲ್ಲಿ 14810ಜನ ಒಟ್ಟು ವೋಟ್ ಮಾಡಿದ್ದು 70%ಜನ ಸಾವಿನ ಸಂಭ್ರಮ ಖಂಡಿತ ತಪ್ಪೆಂದರೆ 30% ಜನ ಮಾತ್ರ ಸರಿ ಎಂದು ಸಮರ್ಥಿಸಿಕೊಂಡಿದ್ದರು.

ಅಂದರೆ ಇಂದಿಗೂ 70% ಅಂದರೆ ಪೋಲ್ ಪ್ರಕಾರ 10367 ಜನ ಸಾವಿನ ಸಂಭ್ರಮವನ್ನು ವಿರೋಧಿಸಿ ಜೀವಪರತೆ ಮೆರೆದಿದ್ದಾರೆ. ಇದು ಭರವಸೆಯ ಸಂಗತಿ. ಈ ಸಮಾಜವನ್ನು ಒಂದಷ್ಟು ಸಹನೀಯಗೊಳಿಸಬಹುದೆಂಬ ಆಶಯಕ್ಕೆ ಇದು ವಿಶ್ವಾಸ ಕೊಡುವ ಸಂಗತಿಯಾಗುತ್ತದೆ. ಅಂದರೆ ಸಜ್ಜನರು ಇನ್ನು ಹೆಚ್ಚಿನ ಸಂಖ್ಯೆಯಲ್ಲಿಯೇ ಇದ್ದಾರೆ ಎಂಬುದನ್ನು ಇದು ಎತ್ತಿ ತೋರಿಸುತ್ತದೆ. ಹೊಸದೊಂದನ್ನು ಕಟ್ಟುವ, ಮಾನವೀಯತೆಯನ್ನು, ಬಹುತ್ವವನ್ನು ಕಾಪಾಡಬೇಕೆಂದು ಶ್ರಮಿಸುವವರಿಗೆ ಇದು ಆಶಾದಾಯಕ ಸಂಗತಿ.

ಆದರೆ ಎಚ್ಚರಿಕೆಯ ಸಂಗತಿಯೆಂದರೆ 30%ಜನ ವೋಟ್ ಮಾಡಿರುವ 4443 ಜನ ಸಾವನ್ನು ಸಂಭ್ರಮಿಸಿದ್ದಾರೆ, ವಿಕೃತತೆ ಮೆರೆದಿದ್ದಾರೆ. ಕೆಟ್ಟದಾಗಿ ಬೈಯ್ಯುವ ಮನಸ್ಥಿತಿ ರೂಢಿಸಿಕೊಂಡಿದ್ದಾರೆ. ಇದು ಸಹ ಕಡಿಮೆ ಸಂಖ್ಯೆಯೇನಲ್ಲ. ಇವರು ಹೀಗೇಕಾದರೂ ಎಂಬುದರ ಕುರಿತು ಯೋಚಿಸಬೇಕಿದೆ. ಏಕೆಂದರೆ ಯಾವ ಧರ್ಮವೂ ಸಹ ಸಾವನ್ನು ಸಂಭ್ರಮಿಸು ಎಂದು ಹೇಳಿಕೊಡುವುದಿಲ್ಲವಲ್ಲ?

ಈ ಪೋಲ್ ನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಒಟ್ಟು 259 ಜನ ಕಮೆಂಟ್ ಮಾಡಿದ್ದಾರೆ. ಅದರಲ್ಲಿ ಬೆರಳೆಣಿಕೆಯ ಮಂದಿ ಮಾತ್ರ ಸಾವನ್ನು ಸಂಭ್ರಮಿಸುವುದು ಸರಿಯಲ್ಲ ಎಂಬ ಕಾಳಜಿ ತೋರಿಸಿದ್ದಾರೆ. ಇನ್ನುಳಿದಂತೆ ಎಲ್ಲವೂ ಬಲಪಂಥೀಯರ ಕಮೆಂಟ್ ಗಳೇ ಆಗಿದ್ದು ತೀರಾ ಕೊಳಕು ಭಾಷೆಯನ್ನು ಪ್ರಯೋಗಿಸಿ ಹೀಗಳೆದಿದ್ದಾರೆ. ಇದು ಹೇಗೆ ಸಾಧ್ಯ? ವೋಟ್ ಮಾಡಿರುವವರು 70%ಜನ ಸಾವಿನ ಸಂಭ್ರಮ ಸರಿಯಲ್ಲ ಎಂದರೆ ಕಮೆಂಟ್ ಮಾಡಿರುವ 90%ಗೂ ಹೆಚ್ಚು ಜನ ಸರಿ ಎಂದು ವಿಕೃತತೆ ಅನುಭವಿಸಿದ್ದಾರೆ.

ಅಂದರೆ ಸಜ್ಜನರು ಮೌನವಾಗಿದ್ದರೆ ದುರ್ಜನರು ಜೋರಾಗಿಯೇ ಸದ್ದು ಮಾಡುತ್ತಿದ್ದಾರೆ. ಒಳ್ಳೆಯ ಮನಸ್ಥಿತಿಯವರು ವೋಟ್ ಮಾಡಿ ಮುಂದೆ ಹೋಗಿದ್ದಾರೆ. ಅಲ್ಲಿ ಬಲಪಂಥೀಯರೊಡನೆ ಕಮೆಂಟ್ ಮಾಡುವುದಕ್ಕೆ ಇಳಿದಿಲ್ಲ. ಇದರಿಂದ ಪ್ರಯೋಜನ ಸಹ ಇಲ್ಲ ಅನ್ನಿಸಿರಬೇಕು. ಇನ್ನು ಕೆಲವರಿಗೆ ಅಷ್ಟು ಸಮಯವಿರಲ್ಲಿಕ್ಕಿಲ್ಲ. ಆದರೆ ಅಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿರುವ ಅರ್ಧಕ್ಕಿಂತ ಹೆಚ್ಚು ಫೇಕ್ ಅಕೌಂಟ್‍ಗಳೆ ಆಗಿವೆ. ಉಳಿದವರ ಕೆಲಸ ಸಹ ಸದಾ ಫೇಸ್ ಬುಕ್ ವಾಟ್ಸಾಪ್ ನಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು, ಈ ರೀತಿ ಕೆಟ್ಟದಾಗಿ ಕಮೆಂಟ್ ಮಾಡುವುದೇ ಆಗಿದೆ.

ಒಟ್ಟಿನಲ್ಲಿ ಸಾಮಾಜಿಕ ಬದಲಾವಣೆ ಬಯಸುವವರಿಗೆ ಈ ಪೋಲ್ ಹೊಸದಾಗಿ ಜನಪರವಾಗಿ, ಜೀವಪರವಾಗಿ ಏನನ್ನಾದರೂ ಮಾಡುವುದಾದರೆ ಇನ್ನು ಇರುವ ಅವಕಾಶವನ್ನು ತೋರಿಸುತ್ತದೆ. ಜೊತೆಗೇನೆ ಜನರ ಮನಸ್ಥಿತಿ ನಿಧಾನವಾಗಿ ವಿಷಮಯವಾಗುತ್ತಿರುವುದನ್ನು, ಕೆಲವರು ಈಗಾಗಲೇ ವಿಕೃತರಾಗಿರುವುದನ್ನು ತೋರಿಸುತ್ತಲೇ ಎಚ್ಚರಿಕೆ ನೀಡುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....