Homeಕರ್ನಾಟಕನೆರೆಪರಿಹಾರ ವಿಳಂಬಕ್ಕೆ ಮೋದಿ ಎದುರೆ ಸಿಎಂ ಯಡಿಯೂರಪ್ಪ ಅಸಮಾಧಾನ

ನೆರೆಪರಿಹಾರ ವಿಳಂಬಕ್ಕೆ ಮೋದಿ ಎದುರೆ ಸಿಎಂ ಯಡಿಯೂರಪ್ಪ ಅಸಮಾಧಾನ

- Advertisement -
- Advertisement -

ಪ್ರವಾಹದಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು ನಾಲ್ಕು ಬಾರಿ ಹೋಗಿ ಪ್ರಧಾನಿಯನ್ನು ಬೇಟಿ ಮಾಡಿದರೂ ಪರಿಹಾರ ಹಣ ಬಿಡುಗಡೆ ಮಾಡಿಲ್ಲ. ಗ್ರಾಮಗಳೇ ಮುಳುಗಡೆಯಾಗಿವೆ. ಮನೆಗಳು ಬಿದ್ದುಹೋಗಿವೆ ಎಂದು ಮನವಿ ಮಾಡಿದರೂ ಹಣ ಬಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಎದುರೇ ಅಸಮಾಧಾನ ಹೊರಹಾಕಿದರು.

ತುಮಕೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ಬೃಹತ್ ರೈತ ಸಮಾವೇಶದಲ್ಲಿ ಮೊದಲಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ 3 ಲಕ್ಷ ಮನೆಗಳು ಬಿದ್ದುಹೋಗಿವೆ. ರಸ್ತೆಗಳು, ಸೇತುವೆಗಳು ನಾಶವಾಗಿವೆ. ನೆರೆ ಹಾವಳಿಯಿಂದ 30 ಸಾವಿರ ಕೋಟಿ ನಷ್ಟವಾಗಿದೆ. ಮೊದಲ ಕಂತಿನ 1200 ಕೋಟಿ ಹಣವನ್ನು ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ಅಳಲು ತೋಡಿಕೊಂಡರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಬಂದು ಲಕ್ಷಾಂತರ ಹೆಕ್ಟೇರ್ ನಲ್ಲಿ ಬೆಳೆದಿದ್ದ ಬೆಳೆ ನೀರಿನಲ್ಲಿ ಕೊಚ್ಚಿ ಹೋಯಿತು. ಮನೆಗಳು ಕಳೆದುಕೊಂಡಿದ್ದರು. ರೈತರು ತೊಂದರೆಗೊಳಗಾಗಿದ್ದರು. ಇದನ್ನು ಪ್ರಧಾನಿಗಳ ಗಮನಕ್ಕೆ ತರಲು ನಾಲ್ಕು ಬಾರಿ ದೆಹಲಿಗೆ ಹೋದೆವು. ಪ್ರಧಾನಿಗಳಿಗೆ ಮನವಿ ಮಾಡಿದೆವು. ಆದರೂ ಪರಿಹಾರದ ಹಣ ಬಿಡುಗಡೆ ಮಾಡಿಲ್ಲ ಎಂದು ನಯವಾಗಿಯೇ ಅಸಮಾಧಾನ ಹೊರಹಾಕಿದರು.

ನೀರಾವರಿ ಯೋಜನೆಗಳ ಕಾಮಗಾರಿ ಸ್ಥಗಿತಗೊಂಡಿದೆ. ಸುಮಾರು 6 ಸಾವಿರ ನೀರಾವರಿ ಕಾಮಗಾರಿಗಳು ಪೂರ್ಣಗೊಳ್ಳಬೇಕಿದೆ. ಇದಕ್ಕೆ ಸಾಕಷ್ಟು ಹಣ ಬೇಕು. ಹಾಗಾಗಿ ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಪೂರ್ವಕ ಮನವಿ ಮಾಡಿದರು.

ಬೆಂಗಳೂರಿನ ರಾಜಭವನದಲ್ಲಿ ಮತ್ತೊಮ್ಮೆ ಲಿಖಿತ ಮನವಿ ನೀಡಿ ಪ್ರಧಾನಿಗಳನ್ನು ಮನವಿ ಮಾಡುತ್ತೇವೆ. ಹಣದ ಅಗತ್ಯವಿದೆ ಎಂಬುದನ್ನು ಪ್ರಧಾನಿಗಳಿಗೆ ಮನವರಿಕೆ ಮಾಡುತ್ತೇವೆ. ಎಂದು ಹೇಳಿದರು.

ಪ್ರಧಾನಿ ಮೋದಿ ಮಠದಲ್ಲಿ ಧ್ಯಾನ ಮಾಡುತ್ತಾರೆ ಎಂದಿದ್ದರು. ಆದರೆ ಪ್ರಧಾನಿ ಧ್ಯಾನವನ್ನೇ ಮಾಡಲಿಲ್ಲ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಾರೆ ಎಂದಿದ್ದರು. ಬೆಂಗಳೂರಿನಿಂದ ಪ್ರಧಾನಿಗಳನ್ನು ಪ್ರಶ್ನೆ ಕೇಳಲೆಂದು ವಿದ್ಯಾರ್ಥಿನಿಯರು ಬಂದಿದ್ದರು. ಆದರೆ ಪ್ರಧಾನಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ಗೋಜಿಗೆ ಹೋಗಲಿಲ್ಲ. ರಾಜಕೀಯ ಭಾಷಣ ಮಾಡಿದರು.

ಪ್ರಧಾನಿಗಳು ರೈತ ಸಮಾವೇಶದಲ್ಲಿ ಕನಿಷ್ಟ ಬೆಂಬಲ ಬೆಲೆಯ ಜೊತೆಗೆ ಒಂದೂವರೆ ಪಟ್ಟು ಆದಾಯವನ್ನು ರೈತರಿಗೆ ಸಿಗಬೇಕೆಂಬ ಯೋಜನೆಯನ್ನು ಜಾರಿಗೆ ತಂದಿದ್ದೇವೆ ಎಂದರು.

ಕರ್ನಾಟಕ, ಕೇರಳ, ತಮಿಳುನಾಡು, ಆಂದ್ರಪ್ರದೇಶ, ತೆಲಂಗಾಣ ಸೇರಿದಂತೆ ದಕ್ಷಿಣ ಭಾರತದ ಶಕ್ತಿಯನ್ನು ಹೊಂದಿದೆ. ಕಾಫಿ, ಚಹ, ರಬ್ಬರ್, ಅರಿಶಿಣ ಬೆಳೆಗೆ ಪ್ರಸಿದ್ದಿಯಾಗಿದೆ. ದೊಡ್ಡ ಪ್ರಮಾಣದಲ್ಲಿ ಉತ್ಪಾದನೆ ಆಗುತ್ತಿದೆ. ಇದನ್ನು ರಫ್ತು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮೋದಿ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

    • ಯಡಿಯೂರಪ್ಪ ನವರೆ ರಾಜ್ಯದ ಅಭಿವೃದ್ಧಿ ಪರ ಕೆಲಸ ಮಾಡಿದರೆ ರಾಜ್ಯದ ಜನ ನಿಮ್ಮನ್ನು ಬೆಂಬಲಿಸುತ್ತಾರೆ .ಇಲ್ಲವಾದರೆ ದಿಕ್ಕರಿಸುತ್ತಾರೆ ಇದು ನಿಮಗೆ ಕೊನೆಯ ಅವಕಾಶ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...