Homeಅಂಕಣಗಳುನಾವು ದಕ್ಷಿಣ ಭಾರತೀಯರು ಕಪಿಗಳಾ?

ನಾವು ದಕ್ಷಿಣ ಭಾರತೀಯರು ಕಪಿಗಳಾ?

- Advertisement -
- Advertisement -

ಗೌರಿ ಲಂಕೇಶ್ |

ರಾಮಸೇತುವಿನ ಸುತ್ತ ನಡೆಯುವ ವಾದವಿವಾದಗಳಲ್ಲಿ ನನ್ನದೊಂದು ಪ್ರಶ್ನೆಗೆ ಯಾರಾದರೂ ಉತ್ತರ ನೀಡುತ್ತಾರಾ? ಪ್ರಶ್ನೆ ಏನೆಂದರೆ ರಾಮ ಸೇತುವನ್ನು ರಾಮನೇ ಕಟ್ಟಿದ್ದು-ನಂಬಿಕೆ/ಪುರಾಣ/ಚರಿತ್ರೆ ಅಥವಾ ಇನ್ನಾವುದೋ ಕಾಗಕ್ಕ-ಗುಬ್ಬಕ್ಕ ಕತೆಯ ಪ್ರಕಾರ ಎಂಬುದನ್ನು ಸತ್ಯ ಎಂದು ಒಪ್ಪಿಕೊಳ್ಳುವುದಾದರೆ, ಅದೇ ಪ್ರಕರಣ ಕುರಿತಂತೆ ನಾವು ದಕ್ಷಿಣ ಭಾರತದ ಜನ ವಾನರರು-ಅಂದರೆ ಕಪಿಗಳು, ಮಂಗಗಳು ಎಂಬುದನ್ನು ಒಪ್ಪಿಕೊಳ್ಳಬೇಕಲ್ಲವೇ?

ಈ ಪ್ರಶ್ನೆ ಯಾಕೆಂದರೆ ರಾಮಾಯಣದ ಪ್ರಕಾರ ರಾಮನ ಸೈನ್ಯದಲ್ಲಿ ಇದ್ದದ್ದು ಕಪಿಗಳು. ಆ ಕಾಲದಲ್ಲೇ ರಾಮ ಆದರ್ಶ ಪುರುಷನಾಗಿದ್ದರೂ, ಏಕಪತ್ನಿವ್ರತಸ್ಥನಾಗಿದ್ದರೂ ದಕ್ಷಿಣ ಭಾರತದ ‘ಜನ’ ಇನ್ನೂ ಮಂಗಗಳಾಗಿಯೇ ಉಳಿದಿದ್ದರಲ್ಲದೆ, ಪಕ್ಕಾ ಕಾಡುಪ್ರಾಣಿಗಳಂತೆ ಜೀವಿಸುತ್ತಿದ್ದರು. ಒಬ್ಬರ ಹೆಂಡಂದಿರನ್ನು ಇನ್ನೊಬ್ಬರು ಲಪಟಾಯಿಸುತ್ತಿದ್ದರು, ವಿವೇಚನಾ ಶಕ್ತಿ ಇಲ್ಲದವರಾಗಿದ್ದರು!

ಕತೆ, ಪುರಾಣ, ಚರಿತ್ರೆ, ಇತಿಹಾಸ, ವಿಜ್ಞಾನ ಇವುಗಳ ನಡುವಿನ ವ್ಯತ್ಯಾಸವನ್ನು ಅರಿಯದ ಜನ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮನ ವಾನರ ಸೈನ್ಯ ಈ ಸೇತುವೆಯನ್ನು ನಿರ್ಮಿಸಿತ್ತು’ ಎಂದು ವಾದಿಸುತ್ತಾರಲ್ಲವೆ, ಬೀದಿಗಿಳಿದು ಮಂಗಗಳಂತೆ ವರ್ತಿಸುತ್ತಾರೆ.
ಎಲ್ಲಾ ಧರ್ಮಗಳಲ್ಲೂ ಅತಿಶಯೋಕ್ತಿ ಎನಿಸುವ ಮೆಟಫರ್‌ಗಳಿರುತ್ತವೆ. ಅಥವಾ ಆ ಧರ್ಮ ಜನಿಸಿದ್ದ ಕಾಲದ ಮರ್ತಮಾನದಲ್ಲಿ ಮನುಷ್ಯನ ಅರಿವಿಗೆ ಬಂದಿರುವ ಮಾಹಿತಿಯನ್ನು ಆಧರಿಸಿ ಹಲವು ಕತೆಗಳನ್ನು, ನೀತಿಪಾಠಗಳನ್ನು ಕಟ್ಟಿ ಕೊಡುತ್ತವಲ್ಲದೆ ಮನುಷ್ಯನ ಕಲ್ಪನೆಗೆ ಅರೋಪಿಸಿ ದೈವಶಕ್ತಿಯ ಬಗ್ಗೆ ನಂಬಿಕೆ ಜನಿಸುವಂತೆ ಮಾಡಿರಲಾಗುತ್ತದೆ.

ಉದಾಹರಣೆಗೆ ಕ್ರೈಸ್ತ ಧರ್ಮ ಎರಡು ಸಾವಿರ ವರ್ಷಗಳ ಹಿಂದೆ ಜನಿಸಿದಾಗ ಮಾನವನ ವಿಕಸನದ ಬಗ್ಗೆ ಗೊತ್ತಿರಲಿಲ್ಲ. ಆದ್ದರಿಂದ ಆ ಧರ್ಮದಲ್ಲಿ ಈಡನ್ ಗಾರ್ಡನ್‌ನ ಕಲ್ಪನೆ ಇದೆಯಲ್ಲದೆ, ಭೂಮಿ ಚಪ್ಪಟೆ ಆಗಿದೆ ಎಂದೂ, ಅದರ ಸುತ್ತ ಸೂರ್ಯನೆ ಚಲಿಸುತ್ತಾನೆಂದೂ ಅದರ ಧರ್ಮಗ್ರಂಥ ಬೈಬಲ್‌ನಲ್ಲಿ ದಾಖಲಿಸಲಾಗಿದೆ. ಅಂದಮಾತ್ರಕ್ಕೆ ಇವತ್ತು ಸತ್ಯ ಎಂದು ಸಾಬೀತುಪಡಿಸಲಾಗಿರುವ ಚಾರ್ಲ್ಸ್ ಡಾರ್ವಿನ್‌ನ ವಿಕಾಸವಾದವನ್ನು, ಕೊಪರ್ ನಿಕಸ್‌ನ ಸೌರ ಮಂಡಲದ ರೂಪವನ್ನು ನಿರಾಕರಿಸಲಾಗುತ್ತದೆಯೇ?

ಅಂದಹಾಗೆ ಹದಿನಾರನೇ ಶತಮಾನದಲ್ಲಿ ಕೊಪರ್‌ನಿಕಸ್ ಮತ್ತು 19ನೇ ಶತಮಾನದಲ್ಲಿ ಚಾರ್ಲ್ಸ್ ಡಾರ್ವಿನ್ ಇಬ್ಬರೂ ಅಂದಿನ ಮೂಲಭೂತವಾದಿ ಕ್ರೈಸ್ತರ ನಿಂದನೆಗೆ ಗುರಿಯಾಗಿದ್ದರು. ನಮ್ಮ ವಿಪರ್ಯಾಸ ಎಂತಹದ್ದೆಂದರೆ ಇವತ್ತು 21ನೇ ಶತಮಾನದಲ್ಲಿ ವೈಜ್ಞಾನಿಕವಾಗಿ ಲಭ್ಯವಿರುವ ಸಾಕ್ಷ್ಯಯಗಳನ್ನು ಆಧರಿಸಿ ರಾಮಸೇತುವನ್ನು ರಾಮನಾಗಲಿ, ಕಪಿಸೈನ್ಯವಾಗಲಿ ನಿರ್ಮಿಸಿದ್ದಲ್ಲ ಎಂದು ಹೇಳಿದರೆ ‘ಹಿಂದೂ ನಂಬಿಕೆಗಳಿಗೆ ಅವಮಾನ’ ಎಂದು ಕೂಗಾಡುವವರು, ಪ್ರತಿಭಟನೆಗೆ ಇಳಿಯುವವರು ನಮ್ಮ ಸುತ್ತಲೂ ಇದ್ದಾರೆ.
ಹೋಗಲಿ, ಇಲ್ಲಿಯವರೆಗೂ ಲಭ್ಯವಾಗಿರುವ ಮಾಹಿತಿ ಏನನ್ನು ಹೇಳುತ್ತದೆ ಎಂಬುದಕ್ಕೆ ಹಲವು ಅಂಕಿಅಂಶಗಳನ್ನು ಗಮನಿಸೋಣ. ಭೂಖಂಡ ಚದುರುವಿಕೆ ಸಂಭವಿಸಿ ಇಂದಿನ ವಿವಿಧ ಖಂಡಗಳು ನಿರ್ಮಿತವಾಗಿದ್ದು ಸುಮಾರು 2,00,000,000 ವರ್ಷಗಳ ಹಿಂದೆ. ಅಷ್ಟೇ ಅಲ್ಲ, ಆಧುನಿಕ ಮಾನವ ರೂಪಗೊಂಡಿದ್ದೂ 1,00,000 ವರ್ಷಗಳ ಹಿಂದೆ. ಅದರಲ್ಲೂ ತೀರಾ ಇತ್ತೀಚೆಗೆ ಎನಿಸುವ 10,000 ವರ್ಷಗಳ ಹಿಂದಷ್ಟೇ ಆತ ಕಾಡುಪ್ರಾಣಿಯಂತೆ ಜೀವಿಸುವುದನ್ನು ನಿಲ್ಲಿಸಿ ಕೃಷಿಕನಾಗಿದ್ದು. ಅಂದರೆ ಹತ್ತು ಸಾವಿರ ವರ್ಷಗಳಷ್ಟು ಹಿಂದೆ ಭೂಮಿಯ ಮೇಲೆ ರಾಜರು, ರಾಜವಂಶಗಳು, ಇಂಥದ್ದು ಯಾವುದೂ ಇರಲಿಲ್ಲ.

ಭಾರತದ ಬಗ್ಗೆ ಇನ್ನೂ ಸ್ಪಷ್ಟವಾಗಿ ಹೇಳುವುದಾದರೆ ಮಧ್ಯೆಪ್ರದೇಶದ ಭೀಮ್‌ಬೆಟ್ಟ ಎಂಬಲ್ಲಿ ಲಭ್ಯವಾಗಿರುವ ಮಾಹಿತಿಯ ಪ್ರಕರ 9,000 ವರ್ಷಗಳ ಹಿಂದೆ ಇಲ್ಲಿ ಕಾಡುಮಾನವ ವಾಸಿಸುತ್ತಿದ್ದ, ಅದಕ್ಕಿಂತ ಪುರಾತನ ಕಾಲದಲ್ಲಿ ಇಲ್ಲಿ ಮಾನವ ಇದ್ದನೆಂಬುದಕ್ಕೆ ಯಾವುದೇ ಪುರಾವೆಗಳೂ ಸಿಕ್ಕಿಲ್ಲ. ಅಷ್ಟು ಮಾತ್ರವಲ್ಲ, ಹರಪ್ಪ ನಾಗರಿಕತೆ ಇದ್ದದ್ದು ಸುಮಾರು 4,000 ವರ್ಷಗಳ ಹಿಂದೆ; ಋಗ್ವೇದ ರಷಿತವಾಗಿದ್ದು 3.000 ವರ್ಷಗಳ ಹಿಂದೆ, ರಾಮಾರಣವನ್ನು ವಾಲ್ಮೀಕಿ ರಚಿಸಿದ್ದು 2,300 ವರ್ಚಗಳ ಕೆಳಗೆ. ತುಳಸಿದಾಸ ತನ್ನ ರಾಮಚರಿತ ಮಾನಸ ಸೃಷ್ಟಿಸಿದ್ದು 400 ವರ್ಷಗಳ ಹಿಂದೆ.

ಈ ಎಲ್ಲಾ ಅಂಕಿ, ಅಂಶಗಳನ್ನು ಗಣನೆಗೆ ತೆಗೆದುಕೊಂಡು ನೋಡಿದಾಗ ‘ಹದಿನೇಳು ಲಕ್ಷ ಐವತ್ತು ಸಾವಿರ ವರ್ಷಗಳ ಹಿಂದೆಯೇ ರಾಮ ಈ ಸೇತುವೆಯನ್ನು ನಿರ್ಮಿಸಿದ್ದ’ ಎಂದು ಚೆಡ್ಡಿಗಳು ಅರಚುತ್ತಿರುವುದು ಎಷ್ಟು ಹಾಸ್ಯಾಸ್ಪದವಾಗಿ ಕಾಣಿಸುತ್ತದಲ್ಲವೇ?!

26 ಸೆಪ್ಟೆಂಬರ್, 2007 (‘ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...