Homeಸಾಹಿತ್ಯ-ಸಂಸ್ಕೃತಿಕವನನಿನ್ನ ಕೊನೆ ಹತ್ತು ಸೆಕೆಂಡುಗಳು

ನಿನ್ನ ಕೊನೆ ಹತ್ತು ಸೆಕೆಂಡುಗಳು

- Advertisement -
- Advertisement -

ಕೆಲವೊಮ್ಮೆ ಅನಿಸುತ್ತೆ
ನೀನು ಇಲ್ಲೇ ಇದ್ದೀ
ಎಂದಿನಂತೆ ನಿನ್ನ ಬಿಡುವಿಲ್ಲದ
ಕೆಲಸದಲ್ಲಿ ಮುಳುಗಿಹೋಗಿದ್ದೀ..
ಅದಕೆಂದೇ ಈ ವಾರ
ಮನೆಗೆ ಬರದೇ ಹೋದೀ..

ಆದರೆ ಮಿಕ್ಕ ಸಮಯದಲ್ಲೆ
ನಿಜ ಮುಖಕ್ಕೆ ರಾಚುತ್ತೆ
ನೀನಿನ್ನು ಬರಲ್ಲ
ಎಂದೆಂದೆಂದಿಗೂ ಬರಲ್ಲ
ಅನ್ನೋ ಕಹಿಸತ್ಯ ಅರಿವಾಗುತ್ತೆ
ಹೃದಯ ಕಂಪಿಸುತ್ತೆ
ಕಾಲುಗಳು ನಡುಗುತ್ತೆ
ಹೊಟ್ಟೆಯೊಳಗೆ ಸಂಕಟವಾಗಿ
ಒಳಗಿರೋದೆಲ್ಲಾ ಕಕ್ಕುವಂತಾಗುತ್ತೆ..
ಆದರೆ ನನ್ನಂತೆ ಅದೂ ಖಾಲಿಖಾಲಿಯಾಗಿದೆ..

ಎಚ್ಚರವಾದಾಗ ಕೊರಗುತ್ತಾ
ಮಲಗಿದ್ದಾಗ ಬೆಚ್ಚಿಬೀಳುತ್ತಾ..
ಪ್ರತಿಗಳಿಗೆಯೂ ಕಳೆದುಕೊಂಡಿದ್ದರ
ಲೆಕ್ಕ ನೀಡುತ್ತಿದೆ..
ನಿನ್ನ ಆ ಕೊನೆ ಹತ್ತು ಸೆಕೆಂಡುಗಳನ್ನು
ಊಹಿಸಿಕೊಳ್ಳುತ್ತೀನಿ
ಪೊಲೀಸರ ಪ್ರಕಾರ
ಹತ್ತೇ ಸೆಕೆಂಡುಗಳಲ್ಲಿ
ಆ ಕೊಲೆಗಡುಕರು
ನಿನ್ನ ಧ್ವನಿಯಡಗಿಸಿರಬಹುದಂತೆ..

ಹೇಗಿದ್ದಿರಬಹುದು ಆ ಹತ್ತು ಸೆಕೆಂಡುಗಳು
ಹೆಲ್ಮೆಟ್ಟಿನ ಹಿಂದೆ ಅಡಗಿದ್ದ ಆ ಕೊಲೆಗಡುಕ
ಆ ಹೇಡಿ
ನಿನ್ನ ಕಡೆ ನುಗ್ಗುತ್ತಾನೆ
ಯಾರೋ ನೀನು? ಎನ್ಮಾಡ್ತಿದೀಯೋ..ಮಗನೇ?
ಕೂಡಲೇ ಹಾರಿರಬಹುದೇ ಮೊದಲಗುಂಡು!
ಹೇ..ಯಾಕೋ? ಯಾವ ಬೇವರ್ಸಿ ಕಳಿಸಿದ್ದು ನಿನ್ನ..
ಚಡ್ಡಿ ಕಳಚಿ ಪ್ಯಾಂಟು ಹಾಕ್ಕೊಂಡ ತಕ್ಷಣ
ದೊಡ್ಡವನೆಂದು ತಿಳ್ಕೊಂಡ್ಯಾ..
ಎಷ್ಟು ಧೈರ್ಯ..ನನ್ನ ಕೊಲ್ತೀಯ
ಹತ್ತು ಸೆಕೆಂಡುಗಳು. ಮತ್ತೆ ಮೂರು ಬುಲ್ಲೆಟ್ಟುಗಳು.
ಕೊಂದೇ ಬಿಟ್ಟರಲ್ಲೇ ನಿನ್ನ..

ಆ ಕೊನೆಗಳಿಗೆಯಲ್ಲಿ ನಿನ್ನ ಕಣ್ಮುಂದೆ ಬಂದವರು ಯಾರು?
ಇಷಾ? ಅಮ್ಮ? ಅಥವಾ ನಾನೇ?
ನಿನ್ನ ಪ್ರೀತಿ, ಕಾಳಜಿ, ಕಳವಳಗಳೇ?
ಅಥವಾ ಪುಟ್ಟ ಗುಬ್ಬಿಯಂತಿದ್ದ ನಿನ್ನನ್ನು
ಮೊರೆಯುವ ಹೆಣ್ಣುಹುಲಿಯನ್ನಾಗಿಸಿದ ನಿನ್ನ ಕಾಮ್ರೇಡುಗಳೇ?

ನೀನು ತಣ್ಣಗೆ ಮಲಗಿದ್ದಿ ಅಲ್ಲಿ
ರಕ್ತದ ಮಡುವಿನಲ್ಲಿ..
ಆದರೆ ಸಾವೂ ಸುಮ್ಮನಾಗಿಸಲಿಲ್ಲ್ಲ ನಿನ್ನ
ಈಗ ಎಲ್ಲಿ ನೋಡಿದರು ಅಲ್ಲಿ ಗೌರಿಯರು
ಬೀದಿಯಲ್ಲಿ, ಗಲ್ಲಿಯಲ್ಲಿ, ದೂರದ ಡೆಲ್ಲಿಯಲ್ಲಿ..
ನಿನ್ನ ರಕ್ತದ ಕಣಕಣವೂ ಹೋರಾಟದ ಕಣ

ನನಗೀಗ ಮತ್ತಷ್ಟು ಗೊಂದಲ..
ನಿನ್ನಂತೆ
ಧ್ವನಿ ಇಲ್ಲದವರಿಗೆ ಧ್ವನಿಯಾದರೆ
ನಾನೂ ನೀನಾಗಬಲ್ಲೆನೇ?
ಸುಮ್ಮನುಳಿದರೆ
ಬದುಕಿಯೂ ಸತ್ತಂತಾಗುವೆನೇ?

ಇಂಗ್ಲೀಷ್ ಮೂಲ: ಕವಿತಾ ಲಂಕೇಶ್
ಅನು: ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...