Homeಸಾಹಿತ್ಯ-ಸಂಸ್ಕೃತಿಕವನನಿನ್ನ ಕೊನೆ ಹತ್ತು ಸೆಕೆಂಡುಗಳು

ನಿನ್ನ ಕೊನೆ ಹತ್ತು ಸೆಕೆಂಡುಗಳು

- Advertisement -
- Advertisement -

ಕೆಲವೊಮ್ಮೆ ಅನಿಸುತ್ತೆ
ನೀನು ಇಲ್ಲೇ ಇದ್ದೀ
ಎಂದಿನಂತೆ ನಿನ್ನ ಬಿಡುವಿಲ್ಲದ
ಕೆಲಸದಲ್ಲಿ ಮುಳುಗಿಹೋಗಿದ್ದೀ..
ಅದಕೆಂದೇ ಈ ವಾರ
ಮನೆಗೆ ಬರದೇ ಹೋದೀ..

ಆದರೆ ಮಿಕ್ಕ ಸಮಯದಲ್ಲೆ
ನಿಜ ಮುಖಕ್ಕೆ ರಾಚುತ್ತೆ
ನೀನಿನ್ನು ಬರಲ್ಲ
ಎಂದೆಂದೆಂದಿಗೂ ಬರಲ್ಲ
ಅನ್ನೋ ಕಹಿಸತ್ಯ ಅರಿವಾಗುತ್ತೆ
ಹೃದಯ ಕಂಪಿಸುತ್ತೆ
ಕಾಲುಗಳು ನಡುಗುತ್ತೆ
ಹೊಟ್ಟೆಯೊಳಗೆ ಸಂಕಟವಾಗಿ
ಒಳಗಿರೋದೆಲ್ಲಾ ಕಕ್ಕುವಂತಾಗುತ್ತೆ..
ಆದರೆ ನನ್ನಂತೆ ಅದೂ ಖಾಲಿಖಾಲಿಯಾಗಿದೆ..

ಎಚ್ಚರವಾದಾಗ ಕೊರಗುತ್ತಾ
ಮಲಗಿದ್ದಾಗ ಬೆಚ್ಚಿಬೀಳುತ್ತಾ..
ಪ್ರತಿಗಳಿಗೆಯೂ ಕಳೆದುಕೊಂಡಿದ್ದರ
ಲೆಕ್ಕ ನೀಡುತ್ತಿದೆ..
ನಿನ್ನ ಆ ಕೊನೆ ಹತ್ತು ಸೆಕೆಂಡುಗಳನ್ನು
ಊಹಿಸಿಕೊಳ್ಳುತ್ತೀನಿ
ಪೊಲೀಸರ ಪ್ರಕಾರ
ಹತ್ತೇ ಸೆಕೆಂಡುಗಳಲ್ಲಿ
ಆ ಕೊಲೆಗಡುಕರು
ನಿನ್ನ ಧ್ವನಿಯಡಗಿಸಿರಬಹುದಂತೆ..

ಹೇಗಿದ್ದಿರಬಹುದು ಆ ಹತ್ತು ಸೆಕೆಂಡುಗಳು
ಹೆಲ್ಮೆಟ್ಟಿನ ಹಿಂದೆ ಅಡಗಿದ್ದ ಆ ಕೊಲೆಗಡುಕ
ಆ ಹೇಡಿ
ನಿನ್ನ ಕಡೆ ನುಗ್ಗುತ್ತಾನೆ
ಯಾರೋ ನೀನು? ಎನ್ಮಾಡ್ತಿದೀಯೋ..ಮಗನೇ?
ಕೂಡಲೇ ಹಾರಿರಬಹುದೇ ಮೊದಲಗುಂಡು!
ಹೇ..ಯಾಕೋ? ಯಾವ ಬೇವರ್ಸಿ ಕಳಿಸಿದ್ದು ನಿನ್ನ..
ಚಡ್ಡಿ ಕಳಚಿ ಪ್ಯಾಂಟು ಹಾಕ್ಕೊಂಡ ತಕ್ಷಣ
ದೊಡ್ಡವನೆಂದು ತಿಳ್ಕೊಂಡ್ಯಾ..
ಎಷ್ಟು ಧೈರ್ಯ..ನನ್ನ ಕೊಲ್ತೀಯ
ಹತ್ತು ಸೆಕೆಂಡುಗಳು. ಮತ್ತೆ ಮೂರು ಬುಲ್ಲೆಟ್ಟುಗಳು.
ಕೊಂದೇ ಬಿಟ್ಟರಲ್ಲೇ ನಿನ್ನ..

ಆ ಕೊನೆಗಳಿಗೆಯಲ್ಲಿ ನಿನ್ನ ಕಣ್ಮುಂದೆ ಬಂದವರು ಯಾರು?
ಇಷಾ? ಅಮ್ಮ? ಅಥವಾ ನಾನೇ?
ನಿನ್ನ ಪ್ರೀತಿ, ಕಾಳಜಿ, ಕಳವಳಗಳೇ?
ಅಥವಾ ಪುಟ್ಟ ಗುಬ್ಬಿಯಂತಿದ್ದ ನಿನ್ನನ್ನು
ಮೊರೆಯುವ ಹೆಣ್ಣುಹುಲಿಯನ್ನಾಗಿಸಿದ ನಿನ್ನ ಕಾಮ್ರೇಡುಗಳೇ?

ನೀನು ತಣ್ಣಗೆ ಮಲಗಿದ್ದಿ ಅಲ್ಲಿ
ರಕ್ತದ ಮಡುವಿನಲ್ಲಿ..
ಆದರೆ ಸಾವೂ ಸುಮ್ಮನಾಗಿಸಲಿಲ್ಲ್ಲ ನಿನ್ನ
ಈಗ ಎಲ್ಲಿ ನೋಡಿದರು ಅಲ್ಲಿ ಗೌರಿಯರು
ಬೀದಿಯಲ್ಲಿ, ಗಲ್ಲಿಯಲ್ಲಿ, ದೂರದ ಡೆಲ್ಲಿಯಲ್ಲಿ..
ನಿನ್ನ ರಕ್ತದ ಕಣಕಣವೂ ಹೋರಾಟದ ಕಣ

ನನಗೀಗ ಮತ್ತಷ್ಟು ಗೊಂದಲ..
ನಿನ್ನಂತೆ
ಧ್ವನಿ ಇಲ್ಲದವರಿಗೆ ಧ್ವನಿಯಾದರೆ
ನಾನೂ ನೀನಾಗಬಲ್ಲೆನೇ?
ಸುಮ್ಮನುಳಿದರೆ
ಬದುಕಿಯೂ ಸತ್ತಂತಾಗುವೆನೇ?

ಇಂಗ್ಲೀಷ್ ಮೂಲ: ಕವಿತಾ ಲಂಕೇಶ್
ಅನು: ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...