Homeಮುಖಪುಟನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ಈ ಎಂಟು ಲಕ್ಷಣಗಳು ಯಾವುದೇ ತರಹದ ದೌರ್ಬಲ್ಯವನ್ನು ತೋರಿಸುವುದಿಲ್ಲ, ಕೇವಲ ವ್ಯಕ್ತಿತ್ವದ ವೈಶಿಷ್ಠ್ಯವನ್ನು ತಿಳಿಸುತ್ತದೆ. ಈ ಗುಣಲಕ್ಷಣಗಳನ್ನು ಆ ವ್ಯಕ್ತಿ ಅರಿತು ಅದನ್ನು ತನ್ನ “ಶಕ್ತಿ”ಯನ್ನಾಗಿಸಿಕೊಳ್ಳಬಹುದು ಅಥವಾ ಅವರಿಗೆ ಇದು ತನ್ನ ದೌರ್ಬಲ್ಯ ಎಂದು ಅನಿಸಿದಲ್ಲಿ ಅದನ್ನು ತಿದ್ದಿಕೊಳ್ಳಲೂಬಹುದು.

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ವ್ಯಕ್ತಿತ್ವ ವಿಕಸನ 1- ಮೈಯರ್ಸ್-ಬ್ರಿಗ್ಸ್ ಟೈಪ್ ಇಂಡಿಕೇಟರ್

ನಾನು ನನ್ನ ಹಿಂದಿನ ಲೇಖನದಲ್ಲಿ “ಜೀವನಾವಶ್ಯಕ ಕಲೆ” ಬಗ್ಗೆ ತಿಳಿಸುತ್ತಾ, ವಿಶ್ವ ಆರೋಗ್ಯ ಸಂಸ್ಥೆ ಹೆಸರಿಸಿರುವ  10 ಕಲೆಗಳ ಪೈಕಿ ಮೊದಲನೆಯದಾದ “ಸ್ವ-ಅರಿವು” (ಸೆಲ್ಫ್ ಅವೇರ್ನೆಸ್) ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೆ. ಈ ಜೀವನಾವಶ್ಯಕ ಕಲೆಗಳು ನಮಗೆ ಜೀವನದ ಉದ್ದಕ್ಕೂ ಬೇಕಾಗುತ್ತದೆ. ಆದ್ದರಿಂದ ಇದನ್ನು ಚಿಕ್ಕಂದಿನಲ್ಲಿಯೇ ಕಲಿತರೂ ಸಹ, ಸಾಯುವವರೆಗೂ ಬಳಸುತ್ತಿರಬೇಕು. ಇದರಿಂದ ನಾವು ನಿರಂತರ ಲಾಭ ಪಡೆಯಬಹುದು. ಸ್ವ-ಅರಿವನ್ನು ಸ್ವಲ್ಪ ಆಳಕ್ಕಿಳಿಸಿದಾಗ ಓರ್ವ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಹೆಚ್ಚಿನ ಮಾಹಿತಿ ಸಿಗುತ್ತದೆ. ಇದನ್ನು ಪರ್ಸನಾಲಿಟಿ ಟ್ರೇಟ್ (Personality Trait) ಎಂದು ಕರೆಯುತ್ತಾರೆ. ಇದರ ಬಗ್ಗೆ ಸುದೀರ್ಘವಾಗಿ ಅಧ್ಯಯನ/ಅನುಸಂಧಾನ ನಡೆಸಿರುವ ಮನೋವೈಜ್ಞಾನಿಕರು ಮತ್ತು ಸಾಮಾಜಿಕ ಶಾಸ್ತ್ರಜ್ಞರು ವ್ಯಕ್ತಿಗಳಲ್ಲಿ ಮುಖ್ಯವಾಗಿ ಎಂಟು ಗುಣಲಕ್ಷಣವನ್ನು ಗುರುತಿಸಿದ್ದಾರೆ. ಇವುಗಳು ಒಂದು ರೀತಿಯಲ್ಲಿ ವಿರೋಧಾಭಾಸ ಅಥವಾ ಜೋಡಿಗಳು ಎಂಬಂತೆಯೂ ಕಾಣುತ್ತವೆ: ಈ ಎಂಟಕ್ಕೆ ಸೂಚಕವಾಗಿ ಒಂದು ಇಂಗ್ಲೀಷ್ ಅಕ್ಷರವನ್ನೂ ಸೇರಿಸಿದ್ದಾರೆ.

1. ಅಂತರ್ಮುಖಿ (ಇನ್ಟ್ರೊವರ್ಟ್)    -I                   2. ಬಹಿರ್ಮುಖಿ (ಎಕ್ಸ್ಟ್ರೊವರ್ಟ್)     – E

3. ಸೂಕ್ಷ್ಮವೇದಿ (ಸೆನ್ಸಿಟಿವ್)         – S                 4. ಸಹಜ ಜ್ಞಾನಿ (ಇನ್ಟ್ಯೂಟಿವ್)      – N

5. ಯೋಚನಾಶೀಲ (ಥಿಂಕಿಂಗ್)     – T                 6. ಸಂವೇದನಾಶೀಲ (ಫೀಲಿಂಗ್)   – F

7. ತೀರ್ಪುಗಾರ (ಜಡ್ಜಿಂಗ್)           – J                 8. ಗ್ರಹಿಕಾಶಕ್ತಿಯ (ಪರ್ಸೆಪ್ಟಿವ್)      – P

ಒಂದು ಗುಣಲಕ್ಷಣ ಪ್ರಮುಖವಾಗಿದ್ದಾಗ ಅದರ ಜೊತೆಗೆ ಮಿಕ್ಕ ಜೋಡಿಗಳ ಪೈಕಿ ಒಂದನ್ನು ಸೇರಿಸಿ ರಚಿಸಿದ ಹದಿನಾರು ಸಂಯೋಗ ಗುಂಪುಗಳನ್ನು ಮೈಯ್ಯರ್ಸ್-ಬ್ರಿಗ್ಸ್ ಟೈಪ್ ಇಂಡಿಕೇಟರ್ (MBTI) ಎನ್ನುತ್ತಾರೆ. ಇದು ಸಂಪೂರ್ಣ ವೈಜ್ಞಾನಿಕ ತತ್ವವಾದ ಎನ್ನಲು ಬರುವುದಿಲ್ಲ, ಆದರೂ ಸಾಕಷ್ಟು ಪ್ರಚಲಿತವಿರುವ ಅರೆ-ವೈಜ್ಞಾನಿಕ ತತ್ವವಾದ ಎನ್ನಲು ಅಡ್ಡಿಯಿಲ್ಲ. ಈ ನಾಲ್ಕು ಅಕ್ಷರದ ಹಣೆಪಟ್ಟಿ ವಿಶ್ಲೇಷಣೆಯಿಂದ ಓರ್ವ ವ್ಯಕ್ತಿಯ ವ್ಯಕ್ತಿತ್ವ ಏನು ಎಂಬುದನ್ನು ಬಹಳಷ್ಟು ಮಟ್ಟಿಗೆ ಗ್ರಹಿಸಬಹುದು. ಇದರ ಬಗ್ಗೆ ಮುಂದೆ ತಿಳಿಸುತ್ತೇನೆ. MBTI ರಚಿಸಿದ ಶ್ರೇಯ ಕ್ಯಾಥರೀನ್ ಕುಕ್ ಬ್ರಿಗ್ಸ್ ಮತ್ತು ಅವರ ಮಗಳು ಇಸಬೆಲ್ ಬ್ರಿಗ್ಸ್ ಮೈಯ್ಯರ್ಸ್ ಅವರಿಗೆ ಸಲ್ಲುತ್ತದೆ. ಇದು ಮೂಲತಃ ಕಾರ್ಲ್ ಜಂಗ್ ಎಂಬ ಸ್ವಿಸ್ ಮನೋವಿಜ್ಞಾನಿಯ ತತ್ವವಾದದ ಮೇಲೆ ಆಧರಿಸಲ್ಪಟ್ಟಿವೆ. ಕಾರ್ಲ್ ಜಂಗ್ ಪ್ರಕಾರ ಮನುಷ್ಯರಲ್ಲಿ ಸೂಕ್ಷ್ಮತೆ, ಸಹಜ ಜ್ಞಾನ, ಸಂವೇದನೆ ಮತ್ತು ಯೋಚನಾಶಕ್ತಿ ಎಂಬ ನಾಲ್ಕು ಗುಣ-ಲಕ್ಷಣಗಳು, ಹೆಚ್ಚು ಪ್ರಭಾವಶಾಲಿಯಾಗಿರುತ್ತವೆ. ಮೇಲೆ ಹೆಸರಿಸಿದ ಎಂಟು ಗುಣ-ಲಕ್ಷಣಗಳನ್ನು ಪ್ರತ್ಯೇಕವಾಗಿ ನೋಡಿದಾಗ:

1. ಅಂತರ್ಮುಖಿ: ಇವರು ಹೆಚ್ಚು ಸಂಘಜೀವಿಗಳಲ್ಲ. ಇವರಿಗೆ ಜನ ಸಂಪರ್ಕಕ್ಕಿಂತ ಒಂಟಿತನ ಹೆಚ್ಚು ಪ್ರಿಯ. ಇವರಿಗೆ ಬೇರೆಯವರೊಂದಿಗೆ ಮಾತುಕತೆ, ಚರ್ಚೆ ಬೇಕಿಲ್ಲ. ಇದು ಒಂದು ರೀತಿಯ ಮನೋದೌರ್ಬಲ್ಯ ಅಥವಾ ರೋಗವಲ್ಲ, ಕೇವಲ ಅವರ ಆಯ್ಕೆ. ತಮಗೆ ಬೇಕಾದ ವಿಷಯದ ಚರ್ಚೆ ನಡೆಯುತ್ತಿದ್ದಾಗ ಇವರು ಇದ್ದಕ್ಕಿದ್ದಂತೆ ಬಹಿರ್ಮುಖಿಯಾಗಿ ಭಾಗವಹಿಸಲೂಬಹುದು ಆದರೆ ಹೆಚ್ಚಾಗಿ ಮೌನವಾದಿ.

2. ಬಹಿರ್ಮುಖಿ: ಅಂತರ್ಮುಖಿಯ ತದ್ವಿರುದ್ಧ, ಇವರಿಗೆ ಯಾವಾಗಲೂ ಜನರ ಜೊತೆ ಇರಬೇಕು. ಏನೇ ಮಾತುಕತೆ ಇರಲಿ, ಚರ್ಚೆ ಇರಲಿ, ಇವರು ಸದಾ ಸಿದ್ಧ. ಇವರಿಗೆ ಒಂಟಿತನ ಇಷ್ಟವಿಲ್ಲ. ಪಕ್ಕದಲ್ಲಿ ಗುರುತಿಲ್ಲದವರಿದ್ದರೂ ಅವರನ್ನು ತಾವಾಗಿಯೇ ಮಾತನಾಡಿಸುತ್ತಾರೆ. ಇವರೂ ಸಹ ತಮಗೆ ಇಷ್ಟವಿಲ್ಲದ ವಿಷಯದ ಚರ್ಚೆ ಬಂದಾಗ ಅಂತರ್ಮುಖಿಯಾಗಿ ಸುಮ್ಮನಿರಲೂಬಹುದು ಆದರೆ ಹೆಚ್ಚಾಗಿ ಮಾತುಗಾರರು.

3. ಸೂಕ್ಷ್ಮವೇದಿ: ಇವರು ಬಹಳ ಸೂಕ್ಷ್ಮ ಸ್ವಭಾವದವರು ಹಾಗಾಗಿ ಯಾವುದರಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಇವರು ಉದ್ವೇಗಕ್ಕೆ ಬೇಗ ಒಳಗಾಗುತ್ತಾರೆ.

4. ಸಹಜಜ್ಞಾನಿ: ಇವರು ಹೇಳದೆಯೇ ಎಲ್ಲವನ್ನೂ ಅರ್ಥಮಾಡಿಕೊಳ್ಳಬಲ್ಲರು. ಹೀಗಾಗುತ್ತದೆ ಎಂದು ಇವರಿಗೆ ಮೊದಲೇ ಅನುಮಾನವಿರುತ್ತದೆ.

5. ಯೋಚನಾಶೀಲ: ಇವರು ಎಲ್ಲವನ್ನೂ ಬಹಳ ಗಂಭೀರವಾಗಿ, ಮಾಹಿತಿ ಸಂಗ್ರಹಿಸಿ, ಆಳವಾಗಿ ಯೋಚಿಸುತ್ತಾರೆ.

6. ಸಂವೇದನಾಶೀಲ: ಇವರು ಇನ್ನೊಬ್ಬರ ಭಾವನೆಗಳನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳುತ್ತಾರೆ.

7. ತೀರ್ಪುಗಾರ: ಇವರು ಇನ್ನೊಬ್ಬರ ಬಗ್ಗೆ ತಮ್ಮ ಅಭಿಪ್ರಾಯವನ್ನು ಸದಾ ಘೋಷಿಸುತ್ತಿರುತ್ತಾರೆ. ಉದಾ: ಯಾರೋ ಒಬ್ಬರು ಹೇಳಿದ್ದು ಸರಿ ಇಲ್ಲ ಎಂದು ಇವರಿಗೆ ಅನಿಸಿದಲ್ಲಿ ಅವರಿಗೆ ಇವರು “ನೀವು ಹೇಳಿದ್ದು ತಪ್ಪು” ಎಂದು ನೇರವಾಗಿ ಉತ್ತರಿಸುತ್ತಾರೆ.

8. ಗ್ರಹಿಕಾಶಕ್ತಿಯ ವ್ಯಕ್ತಿ: ಇವರು ತಮ್ಮ ಅನಿಸಿಕೆಯನ್ನು ಅನಿಸಿದಂತೆ ತಿಳಿಸಿದರೂ ಸಹ ಇನ್ನೊಬ್ಬರ ಬಗ್ಗೆ ಅದನ್ನು “ತೀರ್ಪು” ಎಂದು ಘೋಷಿಸುವುದಿಲ್ಲ. ಉದಾ: ಯಾರೋ ಒಬ್ಬರು ಹೇಳಿದ್ದು ಸರಿ ಇಲ್ಲ ಎಂದು ಇವರಿಗೆ ಅನಿಸಿದಲ್ಲಿ ಅವರು “ನೀವು ಹೇಳಿದ್ದು ತಪ್ಪು” ಎಂದು ಹೇಳದೆ, ”ನೀವು ಹೇಳಿದ್ದು ನನಗೆ ತಪ್ಪು ಎಂದು ಅನಿಸುತ್ತದೆ” ಎಂದು ಹೇಳುತ್ತಾರೆ ಹಾಗಾಗಿ, ತೀರ್ಪುಗಾರರಲ್ಲ.

ಈ ಎಂಟು ಲಕ್ಷಣಗಳು ಯಾವುದೇ ತರಹದ ದೌರ್ಬಲ್ಯವನ್ನು ತೋರಿಸುವುದಿಲ್ಲ, ಕೇವಲ ವ್ಯಕ್ತಿತ್ವದ ವೈಶಿಷ್ಠ್ಯವನ್ನು ತಿಳಿಸುತ್ತದೆ. ಹೀಗೆ ಜನರನ್ನು ಪ್ರತ್ಯೇಕಿಸಿ “ಗೂಡಿನೊಳಗೆ ಸೇರಿಸು”ವುದರಿಂದ ಏನು ಪ್ರಯೋಜನ ಎಂದು ನೀವು ಕೇಳಬಹುದು. ಈ ಗುಣಲಕ್ಷಣಗಳನ್ನು ಆ ವ್ಯಕ್ತಿ ಅರಿತು ಅದನ್ನು ತನ್ನ “ಶಕ್ತಿ”ಯನ್ನಾಗಿಸಿಕೊಳ್ಳಬಹುದು ಅಥವಾ ಅವರಿಗೆ ಇದು ತನ್ನ ದೌರ್ಬಲ್ಯ ಎಂದು ಅನಿಸಿದಲ್ಲಿ ಅದನ್ನು ತಿದ್ದಿಕೊಳ್ಳಲೂಬಹುದು. ಉದಾ: ಅಂತರ್ಮುಖಿ ವ್ಯಕ್ತಿ ಪ್ರಯತ್ನಪಟ್ಟು ಬಹಿರ್ಮುಖಿಯಾಗಲೂ ಬಹುದು. ಇದರಿಂದ ವ್ಯಕ್ತಿಗೆ ತನ್ನ ಗುಣಲಕ್ಷಣಗಳಿಗೆ ಹೊಂದುವಂತಹ ಜೀವನೋಪಾಯ/ವೃತ್ತಿ, ಅಧ್ಯಯನ ಮಾರ್ಗ ಆರಿಸಿಕೊಳ್ಳಲು ಸಹಕಾರಿಯಾಗುತ್ತದೆ.

MBTI ತರಹದ್ದೇ ಇನ್ನೊಂದು ಪ್ರಚಲನೆಯಲ್ಲಿರುವ ವ್ಯಕ್ತಿತ್ವ ವಿಶ್ಲೇಷಣೆ ಬಿಗ್-ಫೈವ್ ಅಥವಾ ಒಷನ್ (OCEAN) ಮಾಡೆಲ್. ಇವೆರಡರ ಬಗ್ಗೆ ಮುಂದೊಮ್ಮೆ ತಿಳಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...