Homeಮುಖಪುಟನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ನಿಮ್ಮನ್ನು ನೀವೇ ಅರಿತುಕೊಳ್ಳಿ: ವ್ಯಕ್ತಿತ್ವ ವಿಕಸನ 1

ಈ ಎಂಟು ಲಕ್ಷಣಗಳು ಯಾವುದೇ ತರಹದ ದೌರ್ಬಲ್ಯವನ್ನು ತೋರಿಸುವುದಿಲ್ಲ, ಕೇವಲ ವ್ಯಕ್ತಿತ್ವದ ವೈಶಿಷ್ಠ್ಯವನ್ನು ತಿಳಿಸುತ್ತದೆ. ಈ ಗುಣಲಕ್ಷಣಗಳನ್ನು ಆ ವ್ಯಕ್ತಿ ಅರಿತು ಅದನ್ನು ತನ್ನ “ಶಕ್ತಿ”ಯನ್ನಾಗಿಸಿಕೊಳ್ಳಬಹುದು ಅಥವಾ ಅವರಿಗೆ ಇದು ತನ್ನ ದೌರ್ಬಲ್ಯ ಎಂದು ಅನಿಸಿದಲ್ಲಿ ಅದನ್ನು ತಿದ್ದಿಕೊಳ್ಳಲೂಬಹುದು.

- Advertisement -
- Advertisement -

| ಜಿ. ಆರ್. ವಿದ್ಯಾರಣ್ಯ |

ವ್ಯಕ್ತಿತ್ವ ವಿಕಸನ 1- ಮೈಯರ್ಸ್-ಬ್ರಿಗ್ಸ್ ಟೈಪ್ ಇಂಡಿಕೇಟರ್

ನಾನು ನನ್ನ ಹಿಂದಿನ ಲೇಖನದಲ್ಲಿ “ಜೀವನಾವಶ್ಯಕ ಕಲೆ” ಬಗ್ಗೆ ತಿಳಿಸುತ್ತಾ, ವಿಶ್ವ ಆರೋಗ್ಯ ಸಂಸ್ಥೆ ಹೆಸರಿಸಿರುವ  10 ಕಲೆಗಳ ಪೈಕಿ ಮೊದಲನೆಯದಾದ “ಸ್ವ-ಅರಿವು” (ಸೆಲ್ಫ್ ಅವೇರ್ನೆಸ್) ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೆ. ಈ ಜೀವನಾವಶ್ಯಕ ಕಲೆಗಳು ನಮಗೆ ಜೀವನದ ಉದ್ದಕ್ಕೂ ಬೇಕಾಗುತ್ತದೆ. ಆದ್ದರಿಂದ ಇದನ್ನು ಚಿಕ್ಕಂದಿನಲ್ಲಿಯೇ ಕಲಿತರೂ ಸಹ, ಸಾಯುವವರೆಗೂ ಬಳಸುತ್ತಿರಬೇಕು. ಇದರಿಂದ ನಾವು ನಿರಂತರ ಲಾಭ ಪಡೆಯಬಹುದು. ಸ್ವ-ಅರಿವನ್ನು ಸ್ವಲ್ಪ ಆಳಕ್ಕಿಳಿಸಿದಾಗ ಓರ್ವ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಹೆಚ್ಚಿನ ಮಾಹಿತಿ ಸಿಗುತ್ತದೆ. ಇದನ್ನು ಪರ್ಸನಾಲಿಟಿ ಟ್ರೇಟ್ (Personality Trait) ಎಂದು ಕರೆಯುತ್ತಾರೆ. ಇದರ ಬಗ್ಗೆ ಸುದೀರ್ಘವಾಗಿ ಅಧ್ಯಯನ/ಅನುಸಂಧಾನ ನಡೆಸಿರುವ ಮನೋವೈಜ್ಞಾನಿಕರು ಮತ್ತು ಸಾಮಾಜಿಕ ಶಾಸ್ತ್ರಜ್ಞರು ವ್ಯಕ್ತಿಗಳಲ್ಲಿ ಮುಖ್ಯವಾಗಿ ಎಂಟು ಗುಣಲಕ್ಷಣವನ್ನು ಗುರುತಿಸಿದ್ದಾರೆ. ಇವುಗಳು ಒಂದು ರೀತಿಯಲ್ಲಿ ವಿರೋಧಾಭಾಸ ಅಥವಾ ಜೋಡಿಗಳು ಎಂಬಂತೆಯೂ ಕಾಣುತ್ತವೆ: ಈ ಎಂಟಕ್ಕೆ ಸೂಚಕವಾಗಿ ಒಂದು ಇಂಗ್ಲೀಷ್ ಅಕ್ಷರವನ್ನೂ ಸೇರಿಸಿದ್ದಾರೆ.

1. ಅಂತರ್ಮುಖಿ (ಇನ್ಟ್ರೊವರ್ಟ್)    -I                   2. ಬಹಿರ್ಮುಖಿ (ಎಕ್ಸ್ಟ್ರೊವರ್ಟ್)     – E

3. ಸೂಕ್ಷ್ಮವೇದಿ (ಸೆನ್ಸಿಟಿವ್)         – S                 4. ಸಹಜ ಜ್ಞಾನಿ (ಇನ್ಟ್ಯೂಟಿವ್)      – N

5. ಯೋಚನಾಶೀಲ (ಥಿಂಕಿಂಗ್)     – T                 6. ಸಂವೇದನಾಶೀಲ (ಫೀಲಿಂಗ್)   – F

7. ತೀರ್ಪುಗಾರ (ಜಡ್ಜಿಂಗ್)           – J                 8. ಗ್ರಹಿಕಾಶಕ್ತಿಯ (ಪರ್ಸೆಪ್ಟಿವ್)      – P

ಒಂದು ಗುಣಲಕ್ಷಣ ಪ್ರಮುಖವಾಗಿದ್ದಾಗ ಅದರ ಜೊತೆಗೆ ಮಿಕ್ಕ ಜೋಡಿಗಳ ಪೈಕಿ ಒಂದನ್ನು ಸೇರಿಸಿ ರಚಿಸಿದ ಹದಿನಾರು ಸಂಯೋಗ ಗುಂಪುಗಳನ್ನು ಮೈಯ್ಯರ್ಸ್-ಬ್ರಿಗ್ಸ್ ಟೈಪ್ ಇಂಡಿಕೇಟರ್ (MBTI) ಎನ್ನುತ್ತಾರೆ. ಇದು ಸಂಪೂರ್ಣ ವೈಜ್ಞಾನಿಕ ತತ್ವವಾದ ಎನ್ನಲು ಬರುವುದಿಲ್ಲ, ಆದರೂ ಸಾಕಷ್ಟು ಪ್ರಚಲಿತವಿರುವ ಅರೆ-ವೈಜ್ಞಾನಿಕ ತತ್ವವಾದ ಎನ್ನಲು ಅಡ್ಡಿಯಿಲ್ಲ. ಈ ನಾಲ್ಕು ಅಕ್ಷರದ ಹಣೆಪಟ್ಟಿ ವಿಶ್ಲೇಷಣೆಯಿಂದ ಓರ್ವ ವ್ಯಕ್ತಿಯ ವ್ಯಕ್ತಿತ್ವ ಏನು ಎಂಬುದನ್ನು ಬಹಳಷ್ಟು ಮಟ್ಟಿಗೆ ಗ್ರಹಿಸಬಹುದು. ಇದರ ಬಗ್ಗೆ ಮುಂದೆ ತಿಳಿಸುತ್ತೇನೆ. MBTI ರಚಿಸಿದ ಶ್ರೇಯ ಕ್ಯಾಥರೀನ್ ಕುಕ್ ಬ್ರಿಗ್ಸ್ ಮತ್ತು ಅವರ ಮಗಳು ಇಸಬೆಲ್ ಬ್ರಿಗ್ಸ್ ಮೈಯ್ಯರ್ಸ್ ಅವರಿಗೆ ಸಲ್ಲುತ್ತದೆ. ಇದು ಮೂಲತಃ ಕಾರ್ಲ್ ಜಂಗ್ ಎಂಬ ಸ್ವಿಸ್ ಮನೋವಿಜ್ಞಾನಿಯ ತತ್ವವಾದದ ಮೇಲೆ ಆಧರಿಸಲ್ಪಟ್ಟಿವೆ. ಕಾರ್ಲ್ ಜಂಗ್ ಪ್ರಕಾರ ಮನುಷ್ಯರಲ್ಲಿ ಸೂಕ್ಷ್ಮತೆ, ಸಹಜ ಜ್ಞಾನ, ಸಂವೇದನೆ ಮತ್ತು ಯೋಚನಾಶಕ್ತಿ ಎಂಬ ನಾಲ್ಕು ಗುಣ-ಲಕ್ಷಣಗಳು, ಹೆಚ್ಚು ಪ್ರಭಾವಶಾಲಿಯಾಗಿರುತ್ತವೆ. ಮೇಲೆ ಹೆಸರಿಸಿದ ಎಂಟು ಗುಣ-ಲಕ್ಷಣಗಳನ್ನು ಪ್ರತ್ಯೇಕವಾಗಿ ನೋಡಿದಾಗ:

1. ಅಂತರ್ಮುಖಿ: ಇವರು ಹೆಚ್ಚು ಸಂಘಜೀವಿಗಳಲ್ಲ. ಇವರಿಗೆ ಜನ ಸಂಪರ್ಕಕ್ಕಿಂತ ಒಂಟಿತನ ಹೆಚ್ಚು ಪ್ರಿಯ. ಇವರಿಗೆ ಬೇರೆಯವರೊಂದಿಗೆ ಮಾತುಕತೆ, ಚರ್ಚೆ ಬೇಕಿಲ್ಲ. ಇದು ಒಂದು ರೀತಿಯ ಮನೋದೌರ್ಬಲ್ಯ ಅಥವಾ ರೋಗವಲ್ಲ, ಕೇವಲ ಅವರ ಆಯ್ಕೆ. ತಮಗೆ ಬೇಕಾದ ವಿಷಯದ ಚರ್ಚೆ ನಡೆಯುತ್ತಿದ್ದಾಗ ಇವರು ಇದ್ದಕ್ಕಿದ್ದಂತೆ ಬಹಿರ್ಮುಖಿಯಾಗಿ ಭಾಗವಹಿಸಲೂಬಹುದು ಆದರೆ ಹೆಚ್ಚಾಗಿ ಮೌನವಾದಿ.

2. ಬಹಿರ್ಮುಖಿ: ಅಂತರ್ಮುಖಿಯ ತದ್ವಿರುದ್ಧ, ಇವರಿಗೆ ಯಾವಾಗಲೂ ಜನರ ಜೊತೆ ಇರಬೇಕು. ಏನೇ ಮಾತುಕತೆ ಇರಲಿ, ಚರ್ಚೆ ಇರಲಿ, ಇವರು ಸದಾ ಸಿದ್ಧ. ಇವರಿಗೆ ಒಂಟಿತನ ಇಷ್ಟವಿಲ್ಲ. ಪಕ್ಕದಲ್ಲಿ ಗುರುತಿಲ್ಲದವರಿದ್ದರೂ ಅವರನ್ನು ತಾವಾಗಿಯೇ ಮಾತನಾಡಿಸುತ್ತಾರೆ. ಇವರೂ ಸಹ ತಮಗೆ ಇಷ್ಟವಿಲ್ಲದ ವಿಷಯದ ಚರ್ಚೆ ಬಂದಾಗ ಅಂತರ್ಮುಖಿಯಾಗಿ ಸುಮ್ಮನಿರಲೂಬಹುದು ಆದರೆ ಹೆಚ್ಚಾಗಿ ಮಾತುಗಾರರು.

3. ಸೂಕ್ಷ್ಮವೇದಿ: ಇವರು ಬಹಳ ಸೂಕ್ಷ್ಮ ಸ್ವಭಾವದವರು ಹಾಗಾಗಿ ಯಾವುದರಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಇವರು ಉದ್ವೇಗಕ್ಕೆ ಬೇಗ ಒಳಗಾಗುತ್ತಾರೆ.

4. ಸಹಜಜ್ಞಾನಿ: ಇವರು ಹೇಳದೆಯೇ ಎಲ್ಲವನ್ನೂ ಅರ್ಥಮಾಡಿಕೊಳ್ಳಬಲ್ಲರು. ಹೀಗಾಗುತ್ತದೆ ಎಂದು ಇವರಿಗೆ ಮೊದಲೇ ಅನುಮಾನವಿರುತ್ತದೆ.

5. ಯೋಚನಾಶೀಲ: ಇವರು ಎಲ್ಲವನ್ನೂ ಬಹಳ ಗಂಭೀರವಾಗಿ, ಮಾಹಿತಿ ಸಂಗ್ರಹಿಸಿ, ಆಳವಾಗಿ ಯೋಚಿಸುತ್ತಾರೆ.

6. ಸಂವೇದನಾಶೀಲ: ಇವರು ಇನ್ನೊಬ್ಬರ ಭಾವನೆಗಳನ್ನು ಸುಲಭವಾಗಿ ಅರ್ಥ ಮಾಡಿಕೊಳ್ಳುತ್ತಾರೆ.

7. ತೀರ್ಪುಗಾರ: ಇವರು ಇನ್ನೊಬ್ಬರ ಬಗ್ಗೆ ತಮ್ಮ ಅಭಿಪ್ರಾಯವನ್ನು ಸದಾ ಘೋಷಿಸುತ್ತಿರುತ್ತಾರೆ. ಉದಾ: ಯಾರೋ ಒಬ್ಬರು ಹೇಳಿದ್ದು ಸರಿ ಇಲ್ಲ ಎಂದು ಇವರಿಗೆ ಅನಿಸಿದಲ್ಲಿ ಅವರಿಗೆ ಇವರು “ನೀವು ಹೇಳಿದ್ದು ತಪ್ಪು” ಎಂದು ನೇರವಾಗಿ ಉತ್ತರಿಸುತ್ತಾರೆ.

8. ಗ್ರಹಿಕಾಶಕ್ತಿಯ ವ್ಯಕ್ತಿ: ಇವರು ತಮ್ಮ ಅನಿಸಿಕೆಯನ್ನು ಅನಿಸಿದಂತೆ ತಿಳಿಸಿದರೂ ಸಹ ಇನ್ನೊಬ್ಬರ ಬಗ್ಗೆ ಅದನ್ನು “ತೀರ್ಪು” ಎಂದು ಘೋಷಿಸುವುದಿಲ್ಲ. ಉದಾ: ಯಾರೋ ಒಬ್ಬರು ಹೇಳಿದ್ದು ಸರಿ ಇಲ್ಲ ಎಂದು ಇವರಿಗೆ ಅನಿಸಿದಲ್ಲಿ ಅವರು “ನೀವು ಹೇಳಿದ್ದು ತಪ್ಪು” ಎಂದು ಹೇಳದೆ, ”ನೀವು ಹೇಳಿದ್ದು ನನಗೆ ತಪ್ಪು ಎಂದು ಅನಿಸುತ್ತದೆ” ಎಂದು ಹೇಳುತ್ತಾರೆ ಹಾಗಾಗಿ, ತೀರ್ಪುಗಾರರಲ್ಲ.

ಈ ಎಂಟು ಲಕ್ಷಣಗಳು ಯಾವುದೇ ತರಹದ ದೌರ್ಬಲ್ಯವನ್ನು ತೋರಿಸುವುದಿಲ್ಲ, ಕೇವಲ ವ್ಯಕ್ತಿತ್ವದ ವೈಶಿಷ್ಠ್ಯವನ್ನು ತಿಳಿಸುತ್ತದೆ. ಹೀಗೆ ಜನರನ್ನು ಪ್ರತ್ಯೇಕಿಸಿ “ಗೂಡಿನೊಳಗೆ ಸೇರಿಸು”ವುದರಿಂದ ಏನು ಪ್ರಯೋಜನ ಎಂದು ನೀವು ಕೇಳಬಹುದು. ಈ ಗುಣಲಕ್ಷಣಗಳನ್ನು ಆ ವ್ಯಕ್ತಿ ಅರಿತು ಅದನ್ನು ತನ್ನ “ಶಕ್ತಿ”ಯನ್ನಾಗಿಸಿಕೊಳ್ಳಬಹುದು ಅಥವಾ ಅವರಿಗೆ ಇದು ತನ್ನ ದೌರ್ಬಲ್ಯ ಎಂದು ಅನಿಸಿದಲ್ಲಿ ಅದನ್ನು ತಿದ್ದಿಕೊಳ್ಳಲೂಬಹುದು. ಉದಾ: ಅಂತರ್ಮುಖಿ ವ್ಯಕ್ತಿ ಪ್ರಯತ್ನಪಟ್ಟು ಬಹಿರ್ಮುಖಿಯಾಗಲೂ ಬಹುದು. ಇದರಿಂದ ವ್ಯಕ್ತಿಗೆ ತನ್ನ ಗುಣಲಕ್ಷಣಗಳಿಗೆ ಹೊಂದುವಂತಹ ಜೀವನೋಪಾಯ/ವೃತ್ತಿ, ಅಧ್ಯಯನ ಮಾರ್ಗ ಆರಿಸಿಕೊಳ್ಳಲು ಸಹಕಾರಿಯಾಗುತ್ತದೆ.

MBTI ತರಹದ್ದೇ ಇನ್ನೊಂದು ಪ್ರಚಲನೆಯಲ್ಲಿರುವ ವ್ಯಕ್ತಿತ್ವ ವಿಶ್ಲೇಷಣೆ ಬಿಗ್-ಫೈವ್ ಅಥವಾ ಒಷನ್ (OCEAN) ಮಾಡೆಲ್. ಇವೆರಡರ ಬಗ್ಗೆ ಮುಂದೊಮ್ಮೆ ತಿಳಿಸುತ್ತೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...