Homeಚಳವಳಿ'ನೀನೊಬ್ಬಳೆ ಅಲ್ಲ, ನಿನ್ನೊಂದಿಗೆ ನಾವಿದ್ದೇವೆ': ಉನ್ನವೋ ಸಂತ್ರಸ್ತೆ ಪರ ಬೀದಿಗಿಳಿದ ದೆಹಲಿ ಜನತೆ

‘ನೀನೊಬ್ಬಳೆ ಅಲ್ಲ, ನಿನ್ನೊಂದಿಗೆ ನಾವಿದ್ದೇವೆ’: ಉನ್ನವೋ ಸಂತ್ರಸ್ತೆ ಪರ ಬೀದಿಗಿಳಿದ ದೆಹಲಿ ಜನತೆ

- Advertisement -
- Advertisement -

‘ನೀನೊಬ್ಬಳೆ ಅಲ್ಲ, ನಿನ್ನೊಂದಿಗೆ ನಾವಿದ್ದೇವೆ’ ಎಂದು ಹೇಳುವ ಮೂಲಕ ಉನ್ನವೋ ಸಂತ್ರಸ್ತೆಯ ಪರ ದೆಹಲಿಯಲ್ಲಿ ಪ್ರತಿಭಟನೆ ನಡೆಯಿತು. ಕೂಡಲೇ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಲಾಯಿತು.

ಉತ್ತರಪ್ರದೇಶದ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಪ್ರಮುಖ ಆರೋಪಿಯಾಗಿರುವ ಉನ್ನಾಂವ್ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ಸಂತ್ರಸ್ತ ಯುವತಿ ಮತ್ತು ಆಕೆಯ ವಕೀಲರು ತೀವ್ರವಾಗಿ ಗಾಯಗೊಂಡು ಪ್ರಾಣಾಪಾಯದಲ್ಲಿದ್ದರೆ, ಆಕೆಯ ಇಬ್ಬರು ಸಂಬಂಧಿಕರು ಅಪಘಾತದಲ್ಲಿ ನಿಧನರಾಗಿದ್ದಾರೆ. ಈ ಹಿಂದೆಯೂ ಕೂಡ ಸಂತ್ರಸ್ತೆಯ ತಂದೆ ಜೈಲಿನಲ್ಲಿಯೇ ಅನುಮಾಸ್ಪದವಾಗಿ ಸಾವಿಗೀಡಾಗಿದ್ದರು.

ಈ ಹಿನ್ನೆಲಯಲ್ಲಿ ಅತ್ಯಾಚಾರದ ಆರೋಪಿ ಶಾಸಕನು ಆಗಿದ್ದಲ್ಲದೇ ಆಡಳಿತದಲ್ಲಿರುವ ಬಿಜೆಪಿ ಪಕ್ಷದವರಾಗಿರುವುದರಿಂದ ಅಧಿಕಾರ ದುರುಪಯೋಗ ಮಾಡಿಕೊಂಡು, ಸಾಕ್ಷ್ಯ ನಾಶಕ್ಕೆ ಈ ರೀತಿ ಸಂತ್ರಸ್ತೆಯ ಪ್ರಾಣಕ್ಕೆ ಎರವಾಗಿರುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು.

ಕೇವಲ ಸಾಮಾಜಿಕ ಜಾಲತಾಣದಲ್ಲಿ ಮಾತ್ರವಲ್ಲದೇ ನಾವು ನೇರವಾಗಿ ಬೀದಿಗಿಳಿದು ಹೋರಾಟ ಮಾಡಬೇಕೆಂದು ಸ್ವರಾಜ್ ಇಂಡಿಯಾ ಪಕ್ಷದ ಯೋಗೇಂದ್ರ ಯಾದವ್ ರವು ನಿನ್ನೆ ಬೆಳಿಗ್ಗೆ ಕರೆ ನೀಡಿದ್ದರು.

“ಉನ್ನಾಂವ್ ಘಟನೆ ನೋಡಿ ನಿಮಗೆ ಆಕ್ರೋಶ ಹುಟ್ಟುತ್ತಿಲ್ಲವೇ? ಹೌದು ಎಂದಾದರೆ, ಆ ಧೈರ್ಯಶಾಲಿ ಮಹಿಳೆಯೊಂದಿಗೆ ನಿಲ್ಲಲು ಇಂದು ಸಂಜೆ 7 ಗಂಟೆಗೆ ದೆಹಲಿಯ ಇಂಡಿಯಾ ಗೇಟ್ ಬಳಿ ಬನ್ನಿ ಸೇರಿಕೊಳ್ಳಿ.” #TumAkeliNahinHo (you are not alone ನೀನೊಬ್ಬಳೆ ಅಲ್ಲ) ಎಂಬ ಹ್ಯಾಷ್ ಟ್ಯಾಗ್ ಬಳಸಿದ್ದರು. ಈ ಕರೆಗೆ ಸಾಕಷ್ಟು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತಲ್ಲದೇ ನೂರಾರು ಜನ ಇಂಡಿಯಾ ಗೇಟ್ ಬಳಿ ಸೇರಿ ಟಾರ್ಚ್ ಲೈಟ್ ಹಿಡಿದು ಪ್ರತಿಭಟಿಸಿದ್ದರು.

ಇಂದು ದೇಶಾದ್ಯಂತ ಲಕ್ಷ ಕೋಟಿ ಜನರು ಇದೆಂತಾ ಅನ್ಯಾಯ ಎಂದು ಈ ಘಟನೆಯನ್ನು ಖಂಡಿಸುತ್ತಿದ್ದಾರೆ. ಅದನ್ನೇ ಸಾರಿ ಹೇಳಲು ನಾವು ಇಲ್ಲಿ ಬಂದಿದ್ದೇವೆ. ಆ ಯುವತಿಯ ವಿಶ್ವಾಸ ಹುದುಗಿಸುವ ಯತ್ನ ನಡೆಯುತ್ತಿರುವಾಗ ಆಕೆಯ ಜೊತೆ ನಿಲ್ಲುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...