Homeಅಂಕಣಗಳುನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

ನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

- Advertisement -
- Advertisement -
  • ಡಾ. ವಿನಯಾ ಒಕ್ಕುಂದ |

ನಮ್ಮ ಸುತ್ತ ನಡೆಯುತ್ತಿರುವ ಸಣ್ಣ ಸಂಗತಿಗಳನ್ನು ಉಪೇಕ್ಷಿಸಲು ಸಾಧ್ಯವಿಲ್ಲ. ಅವು ಬೃಹತ್ ವಿದ್ಯಮಾನದ ನೆರಳಿನಂತಿರುತ್ತವೆ. ಮೊನ್ನೆ ಧಾರವಾಡದ ಮೇ ಸಾಹಿತ್ಯದ ಕಾರ್ಯಕ್ರಮದಲ್ಲಿದ್ದೆ. ನನ್ನ ಪಕ್ಕ ಹಿರಿಯರೊಬ್ಬರು ಕೂತಿದ್ದರು. ನಿಧಾನ ಮಾತು ಆರಂಭಿಸಿದರು. ‘ನಿಮ್ಮ ಮಗಳಾ?’ ‘ಹೀಗೆ ಫೋಟೋ ತೆಗೆದು ಓಡಾಡಿ ಮುಂದೇನು ಮಾಡುತ್ತಾಳೆ?’ .. ಆ ಮಾತುಗಳಲ್ಲಿ ಮಮತೆ ಇರಲಿಲ್ಲ. ವ್ಯಂಗ್ಯವಿತ್ತು. ಪೇಚಿಗೆ ಸಿಲುಕಿಸುವ ಇರಾದೆಯಿತ್ತು. ನಾನು ‘ಗೊತ್ತಿಲ್ಲ’ ಎಂದೆ. ‘ಚಿತ್ರ ಗಿತ್ರ ತಗೀತಾಳಂತಲ್ಲ?’ ‘ಹೂಂ’. ‘ಓದೋದು ಬರೆಯೋದು?’ ‘ಅಂಥದೇನಿಲ್ಲ’… ನಾನು ಕುರ್ಚಿಯನ್ನು ಅತ್ತಿತ್ತ ಜರುಗಿಸಿಕೊಂಡು ಕೂತೆ. ಅವಳು ಬಂದಾಗ ‘ನೋಡು ಚಿತ್ರವೆಂದರೆ ಹೀಗೆ ತಗೀಬೇಕು’ ಎಂದು ಮೊಬೈಲ್‍ನಿಂದ ತೋರಿಸಿದರು. ಬಿಜೆಪಿ ಶಾಸಕರೊಬ್ಬರ ಚಿತ್ರ ಬಿಡಿಸಿದ ಕಲಾವಿದರೊಬ್ಬರ ಚಿತ್ರಗಳವು. ಇವಳು ತಲೆಯಾಡಿಸಿ ಎದ್ದುಹೋದಳು. ಧರ್ಮದ ಕುರಿತ ಗೋಷ್ಠಿಯಲ್ಲಿ ವೀರಶೈವ- ಲಿಂಗಾಯತ ಚರ್ಚೆ ಬಂತು. ಎಚ್.ಎಸ್.ಶಿವಪ್ರಕಾಶ್, ಎಸ್ ಜಿ. ಸಿದ್ದರಾಮಯ್ಯ, ರಂಜಾನ್ ದರ್ಗಾ ಚರ್ಚಿಸುತ್ತಿದ್ದರು. ‘ಇದೇನಿದು, ಸಾಹಿತ್ಯದ ಬಗ್ಗೆ ಮಾತಾ? ತಥ್.. ನೀವು ಇಂಗ್ಲಿಷ್ ಲಿಟರೇಚರ್ ಓದಿದ್ದೀರಾ ಮೇಡಂ? ಅಲ್ಲಿ ಹೀಗೆ ಮಾತಾಡುವುದನ್ನು ಮಾತಿನ ವಾಂತಿ ಅಂತಾರೆ’. ನನಗೆ ಕೋಪ ಬರುತ್ತಿತ್ತು. ‘ನಿಮಗೆ ಬೇಡವಾದರೆ ಎದ್ದು ಹೋಗಿ’ ಎಂದೆ. ‘ಇಲ್ಲ ಇಲ್ಲ ನಾನು ಕೇಳಲಿಕ್ಕೇ ಬಂದಿದ್ದು’ ಎಂದು ಉತ್ತರ ಬಂತು. ದಿನೇಶ್ ಅಮೀನ್‍ಮಟ್ಟು, ‘ಇಷ್ಟೆಲ್ಲ ಮಾಡುವ ಬದಲು ಇವಿಎಂ ಮಶಿನ್‍ಗಳನ್ನು ಹ್ಯಾಕ್ ಮಾಡುವವರನ್ನು ತಯಾರು ಮಾಡಿಕೊಂಡಿದ್ದರೆ ಸಾಕಾಗಿತ್ತು’ ಎಂದು ಪ್ರಜಾಪ್ರಭುತ್ವದ ಅಭದ್ರತೆಯ ಬಗ್ಗೆ ವ್ಯಂಗ್ಯದಿಂದ ಮಾತು ಆರಂಭಿಸಿದರು. ನನ್ನ ಪಕ್ಕದ ವ್ಯಕ್ತಿಗೆ ಸಿಟ್ಟು ನೆತ್ತಿಗೇರಿತ್ತು. ‘ಏನಿದು ಬಾಯಿಬಡುಕರ ಹಾಗೆ ಒದರಿದರೆ..? ವಿವಿಪ್ಯಾಟ್ ಲಗತ್ತಿಸಿಲ್ವಾ?’ ಈ ಬಾರಿ ಆಸಾಮಿ ನನ್ನ ಕಡೆ ಹೊರಳಿರಲಿಲ್ಲ. ಆ ಕಡೆಯ ವ್ಯಕ್ತಿಯ ಜತೆಗೆ ಮಾತಾಡುತ್ತಿತ್ತು. ಆ ಕ್ಷಣ ವಿವಿಪ್ಯಾಟ್ ಹಿಂದೆ ಹೀಗೆ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದೆ ಅನ್ನಿಸಿತು.

ಸಂಜೆಯ ಸಮಾರೋಪದಲ್ಲಿ ಮಾತನಾಡುತ್ತ ಸುನಂದಾ ಕಡಮೆ, ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋ ಫೇಸ್ ಬುಕ್ಕಿಗೆ ಹಾಕಿದಾಗ ಕೆಲ ದಿನ ನಿರಂತರವಾಗಿ ಕೆಟ್ಟ ಮೆಸೇಜ್‍ಗಳು ಬಂದಿದ್ದನ್ನು ಪ್ರಸ್ತಾಪಿಸಿದರು. ನನಗೆ ಗಾಬರಿಯಾಯಿತು. ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋಗಳನ್ನು ನನ್ನ ಗಂಡನೂ ಮಗಳೂ ಫೇಸ್ ಬುಕ್ಕಿಗೆ ಹಾಕಿದ್ದರು. ಮಗಳಿಗೆ ಪ್ರಕಾಶ್ ರೈ ಕುರಿತು ಕೆಲವು ಕೆಟ್ಟ ಕಮೆಂಟ್‍ಗಳು ಬಂದಿದ್ದವಂತೆ. ‘ನನಗೆ ಹೇಳಲಿಲ್ಲವಲ್ಲ’ಎಂದರೆ ‘ನಾನೇ ಓದ್ಲಿಲ್ಲ, ಹೀಗೆ ಅಂತ ಕಂಡ ತಕ್ಷಣ ಬ್ಲಾಕ್ ಮಾಡಿ ಒಗೆದೆ’ ಎಂದಳು ನಿಸೂರಾಗಿ. ಇವೆಲ್ಲ ಇಷ್ಟು ಉಪೇಕ್ಷಿಸುವ ಸಂಗತಿಗಳಲ್ಲ ಎಂದು ಅವಳಿಗೆ ತಿಳಿದಿರಲಿಲ್ಲ. ಪ್ರಕಾಶ್ ರೈ, ನಮ್ಮ ಮನೆಯಲ್ಲಿ ಕೆಲಗಂಟೆ ಕಳೆದು ಹೋದ ಮೇಲೆ ನಡೆದ ಸಂಗತಿಗಳನ್ನು ನೆನಪಿಸಿಕೊಂಡೆ. ಅಕ್ಕಪಕ್ಕದವರ ಕಣ್ಣು ಬೇರೆ ನಮೂನಿ ತೂಗತೊಡಗಿವೆ ಅನ್ನಿಸಿತ್ತು. ಎಲ್ಲರ ಹಾಗೆ ಬಾಗಿಲಿಗೆ ರಂಗೋಲಿ ಇಕ್ಕಿ, ಎಲ್ಲರ ಹಾಗೆ ಆಕಾಶಬುಟ್ಟಿ ತೂಗುಬಿಟ್ಟು, ಎಲ್ಲರ ಹಾಗೆ ಕಬ್ಬು ನಿಲ್ಲಿಸಿ ತುಳಸಿ ಪೂಜೆ ಮಾಡಿ… ಏನೆಲ್ಲಾ ಮಾಡಿದರೂ ಇವರು ನಮ್ಮಂತಿಲ್ಲ ಅಂತ ಸುತ್ತಲ ಜನ ಇರುಸು-ಮುರಸು ಅನುಭವಿಸುತ್ತಿದ್ದ ಹಾಗಿತ್ತು. ಅವರ ಬಗ್ಗೆ ಪಾಪ ಅನ್ನಿಸಿತು. ನಮ್ಮ ಕೆಲಸದವಳು, ಆವತ್ತು ಪ್ರಕಾಶ್ ರೈ ಅಡಿಗೆ ಮನೆ ಬಾಗಿಲವರೆಗೂ ಬಂದು ಅವಳೊಡನೊಂದು ಫೋಟೋ ಕೂಡ ತಗೊಂಡಿದ್ದರು. ಅವಳು ಆವತ್ತು ಪ್ರಕಾಶ್ ರೈ ಬಗ್ಗೆ ಫಿದಾ ಆಗಿದ್ದು ನಿಜ. ಆದರೆ ದಿನವೂ ಒಂದೊಂದು ಪ್ರಶ್ನೆಗಳನ್ನು ತರುತ್ತಿದ್ದಳು. ‘ಅವರಿಗೆ ಕಾಂಗ್ರೆಸ್ ಏಜೆಂಟ್ ಅಂತಾರಂತಲ್ಲ?’ ‘ಅವರಿಗೆ ಎರಡು ಮದುವೆಯಾಗಿದಾವಂತಲ್ಲ?’ ಹೀಗೆ. ತಿಳಿದಷ್ಟನ್ನು ಸಮಾಧಾನದಿಂದ ವಿವರಿಸಿದ್ದೆ. ಪ್ರಕಾಶ ರೈ ಭಾಷಣದ ತುಣುಕುಗಳನ್ನು ಕೇಳಿಸಿದೆ. ‘ ಹೌದ್ ಬಿಡ್ರೀ, ಸರಿ ಬಿಡ್ರೀ,’ ಅಂತ ಸುಮ್ಮನಾಗಿದ್ದಳು. ನಿಜಕ್ಕೂ ಅವಳ ಅಂತರಂಗದಲ್ಲಿ ಹೌದೆನ್ನಿಸಿತೇ ತಿಳಿಯಲಿಲ್ಲ. ದುಡಿದು ಬದುಕುವ ಇಂತಹ ಜನರ ಅನಕ್ಷರತೆ, ಮುಗ್ಧತೆಗಳನ್ನು ಕೋಮುವಾದ ಬಳಸಿಕೊಳ್ಳುವ ಪರಿ ದಂಗುಬಡಿಯುವಂಥದ್ದು. ಕಲ್ಬುರ್ಗಿಯವರ ಹತ್ಯೆಯ ನಂತರದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮನೆಗೆ ಬರುವಾಗ ಆಟೋ ಚಾಲಕ ಕೇಳಿದ್ದ-‘ ಅವ್ರು ನಮ್ದೇವ್ರ ಮೇಲೆ ಉಚ್ಚಿ ಹೊಯ್ಬಹುದು ಅಂದಿದ್ರಂತಲ್ಲ. ಅಂಥವರ ಸಂಬಂಧ ರ್ಯಾಲಿ ಮಾಡೀರಿ? ಹುಷಾರ್ರೀ ನಿಮ್ಮ ಮನಿಗೋಳ ಮ್ಯಾಲೂ ಕಲ್ ಬಿದ್ದಾವು’. ಹಿಂದುತ್ವದ ಅಜೆಂಡಾ ತುಂಬಾ ಪ್ರಬಲವಾಗಿ ಈ ಕೆಲಸ ಮಾಡುತ್ತಿದೆ. ಸಾಮಾಜಿಕ ವ್ಯವಸ್ಥೆಯ ತಳಹದಿಯಲ್ಲಿರುವ ಜೀವಿಗಳಲ್ಲಿ ತನ್ನ ನಂಬಿಕೆಯನ್ನು ಉತ್ಪಾದಿಸುತ್ತಿದೆ. ನಿಧಾನ ವಿಷದಂತೆ ದಿನವೂ ಸುಳ್ಳುಗಳು ತಪ್ಪುಗಳು ಅರೆ ಬರೆ ವ್ಯಾಖ್ಯಾನಗಳು ಅವರನ್ನು ತಲುಪುತ್ತವೆ. ಮರು ವಿಶ್ಲೇಷಿಸಬಹುದಾದ ಸುದ್ದಿಯಾಗಿಯಲ್ಲ, ನಂಬಿಕೆಯಾಗಿ. ಈ ನಂಬಿಕೆಯ ಲೇಹ್ಯದ ಕಟುತ್ವವನ್ನು ಯಾವ ವೈಚಾರಿಕತೆಯೂ ಮಾಗಿಸಲಾರದು ಎನ್ನುವಷ್ಟು ತೀವ್ರವಾಗಿ.

ಪ್ರಕಾಶ್ ರೈ ಬಂದುಹೋದ ಕೆಲ ದಿನಗಳಲ್ಲಿ, ಮಗಳು ತನ್ನ ಗೆಳತಿಯೊಂದಿಗೆ ಸಮೀಪದ ಪರಿಚಯದ ಪಾರ್ಲರಿಗೆ ಹೋಗಿದ್ದಳು ಕೂದಲು ಶೇಪ್‍ಲೆಸ್ ಆಗಿದೆ ಎಂದು ಗೊಣಗಿಕೊಳ್ಳುತ್ತ. ಬೇಡವೆಂದರೂ ಏನೋ ಮಹತ್ವದ್ದನ್ನು ಪಡೆಯುವ ಉಮೇದಿಯಲ್ಲಿ. ಬಂದಾಗ ಕೋಪದಿಂದ ಧುಮುಗುಡುತ್ತಿದ್ದಳು. ಆ ಪಾರ್ಲರಿನಲ್ಲಿ ಗಂಡಹೆಂಡತಿ ಇಬ್ಬರೂ ಇರುತ್ತಾರೆ. ಮಕ್ಕಳ ಕೂದಲನ್ನು ಶೇಪ್ ಮಾಡೋದು ಸಾಮಾನ್ಯವಾಗಿ ಗಂಡನೇ ಅಂತೆ. ಅವರ ಮಗಳು ಇವರ ಗೆಳತಿ ಕೂಡ. ಅವರು ತೆಲುಗು ಮಾತಾಡುವ ದಲಿತರು. ಬಹಳ ಕಾಲದಿಂದ ಇಲ್ಲೇ ಇರುವವರು. ಇವಳು ಕೂದಲು ಕೊಟ್ಟು ಕೂತಾಗ ಆತ ಕೇಳಿದನಂತೆ. ‘ನಿಮ್ಮನೆಗೆ ಹುಚ್ಚ ಬಂದಿದ್ದನಂತಲ್ಲ?’ ‘ಆಂ’? ‘ಆ ಪ್ರಕಾಶ ರೈ ಅನ್ನೋ ಹುಚ್ಚ ಬಂದಿದ್ದನಂತಲ್ಲ?’ ‘ಯಾಕ್ರಿ ಅಂಕಲ್, ಅನಂತಕುಮಾರ ಹೆಗಡೆ ಬಂದಿದ್ದರೆ ಹಾಗನ್ನಬಹುದಿತ್ತು. ಹೋಗಿ ಹೋಗಿ ಅಷ್ಟು ದೊಡ್ಡ ವ್ಯಕ್ತಿಗೆ ಹೀಗನ್ನುತ್ತೀರಲ್ರೀ.. ಏನ್ರೀ ನೀವು…?’ ಆತ ದಂಗಾದನಂತೆ. ಇಷ್ಟು ಸಣ್ಣ ಹುಡುಗಿ ಹೀಗೆ ಉತ್ತರಿಸಬಹುದೆಂದುಕೊಂಡಿರಲಿಲ್ಲವೇನೋ. ನಂತರದ್ದು ಇನ್ನೊಂದು ಬಗೆಯ ವಿಕಾರ. ಚೆಂದದ ಕೂದಲನ್ನು ಅಸಡ್ಡಾಳ ಕತ್ತರಿಸಿದ್ದ. ಕಣ್ಣೊರೆಸಿಕೊಳ್ಳುತ್ತ ಬಂದವಳು ಕೂದಲ ದುಃಸ್ಥಿತಿ ನೋಡಿ ಕೊರಗುತ್ತಲೇ ಇದ್ದಳು. ಆದರೆ, ಪ್ರಕಾಶ್ ರೈ ಜತೆ ಇದ್ದ ಬಿದ್ದ ಫೋಟೋಗಳನ್ನೆಲ್ಲ ಅಪ್ ಲೋಡ್ ಮಾಡಿದಳು. ನನಗೆ ಅರ್ಧ ಹೇರ್ ಕಟಿಂಗ್ ಮಾಡಿ ಹೊರದಬ್ಬಿಸಿಕೊಂಡಿದ್ದ ಹಿರೇಕೆರೂರಿನ ದಲಿತ ಯುವಕ ನೆನಪಾಗುತ್ತಿದ್ದ. ಅವನನ್ನು ಹೊರದಬ್ಬಲಾಗಿತ್ತು. ಇವಳು ಇನ್ನೊಂದು ರೀತಿಯಲ್ಲಿ ಹೊರಬಂದಿದ್ದಳು, ಇನ್ನೆಂದೂ ಅಲ್ಲಿ ಕಾಲಿಡಲಾರದಂತೆ. ಜಾತಿ, ಧರ್ಮ, ಲಿಂಗಗಳ ಜತೆಗೆ ವೈಚಾರಿಕತೆಯೂ ತೀವ್ರ ಒತ್ತುವರಿಗೆ ಒಳಗಾಗುತ್ತಿರುವ ಕಾಲವಿದು.

ರಾಜೇಂದ್ರ ಚೆನ್ನಿಯವರು ನಮ್ಮ ಈ ವರ್ತಮಾನವನ್ನು ಜಾರ್ಜ್ ಆರ್ವೆಲ್ 1984ರಲ್ಲಿ ಬರೆದ Thought police ವಿಧಾನದೊಂದಿಗೆ ಇಡುತ್ತಾರೆ. ಬಿಗ್ ಬ್ರದರ್ ತನ್ನ ಪ್ರಜೆಗಳ ಮೇಲೆ ನಿಗಾ ಇಡುತ್ತಾನೆ. ಸಾರ್ವಜನಿಕ ಸ್ಥಳಗಳಲ್ಲಿ ಪರದೆಯ ಮೇಲೆ ದೊಡ್ಡ ಭಾವಚಿತ್ರ ಮೂಡುತ್ತದೆ. ಯಾರು ನಮಸ್ಕರಿಸುವುದಿಲ್ಲವೋ ಅದು ದಾಖಲಾಗುತ್ತದೆ. ಅಂಥವರನ್ನು ಅರೆಸ್ಟ್ ಮಾಡಲಾಗುತ್ತದೆ. ಇದು ಸಲೀಸಾಗಿ ನಡೆಯುತ್ತದೆ. ಯಾಕೆಂದರೆ ಪ್ರಭುತ್ವಕ್ಕೆ ಅಪಥ್ಯವೆನ್ನಿಸುವ ಚರಿತ್ರೆಯ ನೆನಪುಗಳನ್ನು ಜನರ ಮನಸ್ಸಿನಿಂದ ಶಾಶ್ವತವಾಗಿ ಅಳಿಸಲಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಸಣ್ಣಸಣ್ಣ ಸಂಗತಿಗಳು ಅದೇ ಕರೆಗಂಟೆಗಳೇ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...