Homeಅಂಕಣಗಳುನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

ನೀರನಡೆ | ಭವಿಷ್ಯದ ನೆರಳಿನಂತಿರುವ ವರ್ತಮಾನದ ಸಣ್ಣ ಸಂಗತಿಗಳು

- Advertisement -
- Advertisement -
  • ಡಾ. ವಿನಯಾ ಒಕ್ಕುಂದ |

ನಮ್ಮ ಸುತ್ತ ನಡೆಯುತ್ತಿರುವ ಸಣ್ಣ ಸಂಗತಿಗಳನ್ನು ಉಪೇಕ್ಷಿಸಲು ಸಾಧ್ಯವಿಲ್ಲ. ಅವು ಬೃಹತ್ ವಿದ್ಯಮಾನದ ನೆರಳಿನಂತಿರುತ್ತವೆ. ಮೊನ್ನೆ ಧಾರವಾಡದ ಮೇ ಸಾಹಿತ್ಯದ ಕಾರ್ಯಕ್ರಮದಲ್ಲಿದ್ದೆ. ನನ್ನ ಪಕ್ಕ ಹಿರಿಯರೊಬ್ಬರು ಕೂತಿದ್ದರು. ನಿಧಾನ ಮಾತು ಆರಂಭಿಸಿದರು. ‘ನಿಮ್ಮ ಮಗಳಾ?’ ‘ಹೀಗೆ ಫೋಟೋ ತೆಗೆದು ಓಡಾಡಿ ಮುಂದೇನು ಮಾಡುತ್ತಾಳೆ?’ .. ಆ ಮಾತುಗಳಲ್ಲಿ ಮಮತೆ ಇರಲಿಲ್ಲ. ವ್ಯಂಗ್ಯವಿತ್ತು. ಪೇಚಿಗೆ ಸಿಲುಕಿಸುವ ಇರಾದೆಯಿತ್ತು. ನಾನು ‘ಗೊತ್ತಿಲ್ಲ’ ಎಂದೆ. ‘ಚಿತ್ರ ಗಿತ್ರ ತಗೀತಾಳಂತಲ್ಲ?’ ‘ಹೂಂ’. ‘ಓದೋದು ಬರೆಯೋದು?’ ‘ಅಂಥದೇನಿಲ್ಲ’… ನಾನು ಕುರ್ಚಿಯನ್ನು ಅತ್ತಿತ್ತ ಜರುಗಿಸಿಕೊಂಡು ಕೂತೆ. ಅವಳು ಬಂದಾಗ ‘ನೋಡು ಚಿತ್ರವೆಂದರೆ ಹೀಗೆ ತಗೀಬೇಕು’ ಎಂದು ಮೊಬೈಲ್‍ನಿಂದ ತೋರಿಸಿದರು. ಬಿಜೆಪಿ ಶಾಸಕರೊಬ್ಬರ ಚಿತ್ರ ಬಿಡಿಸಿದ ಕಲಾವಿದರೊಬ್ಬರ ಚಿತ್ರಗಳವು. ಇವಳು ತಲೆಯಾಡಿಸಿ ಎದ್ದುಹೋದಳು. ಧರ್ಮದ ಕುರಿತ ಗೋಷ್ಠಿಯಲ್ಲಿ ವೀರಶೈವ- ಲಿಂಗಾಯತ ಚರ್ಚೆ ಬಂತು. ಎಚ್.ಎಸ್.ಶಿವಪ್ರಕಾಶ್, ಎಸ್ ಜಿ. ಸಿದ್ದರಾಮಯ್ಯ, ರಂಜಾನ್ ದರ್ಗಾ ಚರ್ಚಿಸುತ್ತಿದ್ದರು. ‘ಇದೇನಿದು, ಸಾಹಿತ್ಯದ ಬಗ್ಗೆ ಮಾತಾ? ತಥ್.. ನೀವು ಇಂಗ್ಲಿಷ್ ಲಿಟರೇಚರ್ ಓದಿದ್ದೀರಾ ಮೇಡಂ? ಅಲ್ಲಿ ಹೀಗೆ ಮಾತಾಡುವುದನ್ನು ಮಾತಿನ ವಾಂತಿ ಅಂತಾರೆ’. ನನಗೆ ಕೋಪ ಬರುತ್ತಿತ್ತು. ‘ನಿಮಗೆ ಬೇಡವಾದರೆ ಎದ್ದು ಹೋಗಿ’ ಎಂದೆ. ‘ಇಲ್ಲ ಇಲ್ಲ ನಾನು ಕೇಳಲಿಕ್ಕೇ ಬಂದಿದ್ದು’ ಎಂದು ಉತ್ತರ ಬಂತು. ದಿನೇಶ್ ಅಮೀನ್‍ಮಟ್ಟು, ‘ಇಷ್ಟೆಲ್ಲ ಮಾಡುವ ಬದಲು ಇವಿಎಂ ಮಶಿನ್‍ಗಳನ್ನು ಹ್ಯಾಕ್ ಮಾಡುವವರನ್ನು ತಯಾರು ಮಾಡಿಕೊಂಡಿದ್ದರೆ ಸಾಕಾಗಿತ್ತು’ ಎಂದು ಪ್ರಜಾಪ್ರಭುತ್ವದ ಅಭದ್ರತೆಯ ಬಗ್ಗೆ ವ್ಯಂಗ್ಯದಿಂದ ಮಾತು ಆರಂಭಿಸಿದರು. ನನ್ನ ಪಕ್ಕದ ವ್ಯಕ್ತಿಗೆ ಸಿಟ್ಟು ನೆತ್ತಿಗೇರಿತ್ತು. ‘ಏನಿದು ಬಾಯಿಬಡುಕರ ಹಾಗೆ ಒದರಿದರೆ..? ವಿವಿಪ್ಯಾಟ್ ಲಗತ್ತಿಸಿಲ್ವಾ?’ ಈ ಬಾರಿ ಆಸಾಮಿ ನನ್ನ ಕಡೆ ಹೊರಳಿರಲಿಲ್ಲ. ಆ ಕಡೆಯ ವ್ಯಕ್ತಿಯ ಜತೆಗೆ ಮಾತಾಡುತ್ತಿತ್ತು. ಆ ಕ್ಷಣ ವಿವಿಪ್ಯಾಟ್ ಹಿಂದೆ ಹೀಗೆ ಬಾಯ್ಮುಚ್ಚಿಸುವ ತಂತ್ರಗಾರಿಕೆ ಇದೆ ಅನ್ನಿಸಿತು.

ಸಂಜೆಯ ಸಮಾರೋಪದಲ್ಲಿ ಮಾತನಾಡುತ್ತ ಸುನಂದಾ ಕಡಮೆ, ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋ ಫೇಸ್ ಬುಕ್ಕಿಗೆ ಹಾಕಿದಾಗ ಕೆಲ ದಿನ ನಿರಂತರವಾಗಿ ಕೆಟ್ಟ ಮೆಸೇಜ್‍ಗಳು ಬಂದಿದ್ದನ್ನು ಪ್ರಸ್ತಾಪಿಸಿದರು. ನನಗೆ ಗಾಬರಿಯಾಯಿತು. ಪ್ರಕಾಶ್ ರೈ ಮನೆಗೆ ಬಂದಿದ್ದ ಫೋಟೋಗಳನ್ನು ನನ್ನ ಗಂಡನೂ ಮಗಳೂ ಫೇಸ್ ಬುಕ್ಕಿಗೆ ಹಾಕಿದ್ದರು. ಮಗಳಿಗೆ ಪ್ರಕಾಶ್ ರೈ ಕುರಿತು ಕೆಲವು ಕೆಟ್ಟ ಕಮೆಂಟ್‍ಗಳು ಬಂದಿದ್ದವಂತೆ. ‘ನನಗೆ ಹೇಳಲಿಲ್ಲವಲ್ಲ’ಎಂದರೆ ‘ನಾನೇ ಓದ್ಲಿಲ್ಲ, ಹೀಗೆ ಅಂತ ಕಂಡ ತಕ್ಷಣ ಬ್ಲಾಕ್ ಮಾಡಿ ಒಗೆದೆ’ ಎಂದಳು ನಿಸೂರಾಗಿ. ಇವೆಲ್ಲ ಇಷ್ಟು ಉಪೇಕ್ಷಿಸುವ ಸಂಗತಿಗಳಲ್ಲ ಎಂದು ಅವಳಿಗೆ ತಿಳಿದಿರಲಿಲ್ಲ. ಪ್ರಕಾಶ್ ರೈ, ನಮ್ಮ ಮನೆಯಲ್ಲಿ ಕೆಲಗಂಟೆ ಕಳೆದು ಹೋದ ಮೇಲೆ ನಡೆದ ಸಂಗತಿಗಳನ್ನು ನೆನಪಿಸಿಕೊಂಡೆ. ಅಕ್ಕಪಕ್ಕದವರ ಕಣ್ಣು ಬೇರೆ ನಮೂನಿ ತೂಗತೊಡಗಿವೆ ಅನ್ನಿಸಿತ್ತು. ಎಲ್ಲರ ಹಾಗೆ ಬಾಗಿಲಿಗೆ ರಂಗೋಲಿ ಇಕ್ಕಿ, ಎಲ್ಲರ ಹಾಗೆ ಆಕಾಶಬುಟ್ಟಿ ತೂಗುಬಿಟ್ಟು, ಎಲ್ಲರ ಹಾಗೆ ಕಬ್ಬು ನಿಲ್ಲಿಸಿ ತುಳಸಿ ಪೂಜೆ ಮಾಡಿ… ಏನೆಲ್ಲಾ ಮಾಡಿದರೂ ಇವರು ನಮ್ಮಂತಿಲ್ಲ ಅಂತ ಸುತ್ತಲ ಜನ ಇರುಸು-ಮುರಸು ಅನುಭವಿಸುತ್ತಿದ್ದ ಹಾಗಿತ್ತು. ಅವರ ಬಗ್ಗೆ ಪಾಪ ಅನ್ನಿಸಿತು. ನಮ್ಮ ಕೆಲಸದವಳು, ಆವತ್ತು ಪ್ರಕಾಶ್ ರೈ ಅಡಿಗೆ ಮನೆ ಬಾಗಿಲವರೆಗೂ ಬಂದು ಅವಳೊಡನೊಂದು ಫೋಟೋ ಕೂಡ ತಗೊಂಡಿದ್ದರು. ಅವಳು ಆವತ್ತು ಪ್ರಕಾಶ್ ರೈ ಬಗ್ಗೆ ಫಿದಾ ಆಗಿದ್ದು ನಿಜ. ಆದರೆ ದಿನವೂ ಒಂದೊಂದು ಪ್ರಶ್ನೆಗಳನ್ನು ತರುತ್ತಿದ್ದಳು. ‘ಅವರಿಗೆ ಕಾಂಗ್ರೆಸ್ ಏಜೆಂಟ್ ಅಂತಾರಂತಲ್ಲ?’ ‘ಅವರಿಗೆ ಎರಡು ಮದುವೆಯಾಗಿದಾವಂತಲ್ಲ?’ ಹೀಗೆ. ತಿಳಿದಷ್ಟನ್ನು ಸಮಾಧಾನದಿಂದ ವಿವರಿಸಿದ್ದೆ. ಪ್ರಕಾಶ ರೈ ಭಾಷಣದ ತುಣುಕುಗಳನ್ನು ಕೇಳಿಸಿದೆ. ‘ ಹೌದ್ ಬಿಡ್ರೀ, ಸರಿ ಬಿಡ್ರೀ,’ ಅಂತ ಸುಮ್ಮನಾಗಿದ್ದಳು. ನಿಜಕ್ಕೂ ಅವಳ ಅಂತರಂಗದಲ್ಲಿ ಹೌದೆನ್ನಿಸಿತೇ ತಿಳಿಯಲಿಲ್ಲ. ದುಡಿದು ಬದುಕುವ ಇಂತಹ ಜನರ ಅನಕ್ಷರತೆ, ಮುಗ್ಧತೆಗಳನ್ನು ಕೋಮುವಾದ ಬಳಸಿಕೊಳ್ಳುವ ಪರಿ ದಂಗುಬಡಿಯುವಂಥದ್ದು. ಕಲ್ಬುರ್ಗಿಯವರ ಹತ್ಯೆಯ ನಂತರದ ಪ್ರತಿಭಟನಾ ರ್ಯಾಲಿಯಲ್ಲಿ ಪಾಲ್ಗೊಂಡು ಮನೆಗೆ ಬರುವಾಗ ಆಟೋ ಚಾಲಕ ಕೇಳಿದ್ದ-‘ ಅವ್ರು ನಮ್ದೇವ್ರ ಮೇಲೆ ಉಚ್ಚಿ ಹೊಯ್ಬಹುದು ಅಂದಿದ್ರಂತಲ್ಲ. ಅಂಥವರ ಸಂಬಂಧ ರ್ಯಾಲಿ ಮಾಡೀರಿ? ಹುಷಾರ್ರೀ ನಿಮ್ಮ ಮನಿಗೋಳ ಮ್ಯಾಲೂ ಕಲ್ ಬಿದ್ದಾವು’. ಹಿಂದುತ್ವದ ಅಜೆಂಡಾ ತುಂಬಾ ಪ್ರಬಲವಾಗಿ ಈ ಕೆಲಸ ಮಾಡುತ್ತಿದೆ. ಸಾಮಾಜಿಕ ವ್ಯವಸ್ಥೆಯ ತಳಹದಿಯಲ್ಲಿರುವ ಜೀವಿಗಳಲ್ಲಿ ತನ್ನ ನಂಬಿಕೆಯನ್ನು ಉತ್ಪಾದಿಸುತ್ತಿದೆ. ನಿಧಾನ ವಿಷದಂತೆ ದಿನವೂ ಸುಳ್ಳುಗಳು ತಪ್ಪುಗಳು ಅರೆ ಬರೆ ವ್ಯಾಖ್ಯಾನಗಳು ಅವರನ್ನು ತಲುಪುತ್ತವೆ. ಮರು ವಿಶ್ಲೇಷಿಸಬಹುದಾದ ಸುದ್ದಿಯಾಗಿಯಲ್ಲ, ನಂಬಿಕೆಯಾಗಿ. ಈ ನಂಬಿಕೆಯ ಲೇಹ್ಯದ ಕಟುತ್ವವನ್ನು ಯಾವ ವೈಚಾರಿಕತೆಯೂ ಮಾಗಿಸಲಾರದು ಎನ್ನುವಷ್ಟು ತೀವ್ರವಾಗಿ.

ಪ್ರಕಾಶ್ ರೈ ಬಂದುಹೋದ ಕೆಲ ದಿನಗಳಲ್ಲಿ, ಮಗಳು ತನ್ನ ಗೆಳತಿಯೊಂದಿಗೆ ಸಮೀಪದ ಪರಿಚಯದ ಪಾರ್ಲರಿಗೆ ಹೋಗಿದ್ದಳು ಕೂದಲು ಶೇಪ್‍ಲೆಸ್ ಆಗಿದೆ ಎಂದು ಗೊಣಗಿಕೊಳ್ಳುತ್ತ. ಬೇಡವೆಂದರೂ ಏನೋ ಮಹತ್ವದ್ದನ್ನು ಪಡೆಯುವ ಉಮೇದಿಯಲ್ಲಿ. ಬಂದಾಗ ಕೋಪದಿಂದ ಧುಮುಗುಡುತ್ತಿದ್ದಳು. ಆ ಪಾರ್ಲರಿನಲ್ಲಿ ಗಂಡಹೆಂಡತಿ ಇಬ್ಬರೂ ಇರುತ್ತಾರೆ. ಮಕ್ಕಳ ಕೂದಲನ್ನು ಶೇಪ್ ಮಾಡೋದು ಸಾಮಾನ್ಯವಾಗಿ ಗಂಡನೇ ಅಂತೆ. ಅವರ ಮಗಳು ಇವರ ಗೆಳತಿ ಕೂಡ. ಅವರು ತೆಲುಗು ಮಾತಾಡುವ ದಲಿತರು. ಬಹಳ ಕಾಲದಿಂದ ಇಲ್ಲೇ ಇರುವವರು. ಇವಳು ಕೂದಲು ಕೊಟ್ಟು ಕೂತಾಗ ಆತ ಕೇಳಿದನಂತೆ. ‘ನಿಮ್ಮನೆಗೆ ಹುಚ್ಚ ಬಂದಿದ್ದನಂತಲ್ಲ?’ ‘ಆಂ’? ‘ಆ ಪ್ರಕಾಶ ರೈ ಅನ್ನೋ ಹುಚ್ಚ ಬಂದಿದ್ದನಂತಲ್ಲ?’ ‘ಯಾಕ್ರಿ ಅಂಕಲ್, ಅನಂತಕುಮಾರ ಹೆಗಡೆ ಬಂದಿದ್ದರೆ ಹಾಗನ್ನಬಹುದಿತ್ತು. ಹೋಗಿ ಹೋಗಿ ಅಷ್ಟು ದೊಡ್ಡ ವ್ಯಕ್ತಿಗೆ ಹೀಗನ್ನುತ್ತೀರಲ್ರೀ.. ಏನ್ರೀ ನೀವು…?’ ಆತ ದಂಗಾದನಂತೆ. ಇಷ್ಟು ಸಣ್ಣ ಹುಡುಗಿ ಹೀಗೆ ಉತ್ತರಿಸಬಹುದೆಂದುಕೊಂಡಿರಲಿಲ್ಲವೇನೋ. ನಂತರದ್ದು ಇನ್ನೊಂದು ಬಗೆಯ ವಿಕಾರ. ಚೆಂದದ ಕೂದಲನ್ನು ಅಸಡ್ಡಾಳ ಕತ್ತರಿಸಿದ್ದ. ಕಣ್ಣೊರೆಸಿಕೊಳ್ಳುತ್ತ ಬಂದವಳು ಕೂದಲ ದುಃಸ್ಥಿತಿ ನೋಡಿ ಕೊರಗುತ್ತಲೇ ಇದ್ದಳು. ಆದರೆ, ಪ್ರಕಾಶ್ ರೈ ಜತೆ ಇದ್ದ ಬಿದ್ದ ಫೋಟೋಗಳನ್ನೆಲ್ಲ ಅಪ್ ಲೋಡ್ ಮಾಡಿದಳು. ನನಗೆ ಅರ್ಧ ಹೇರ್ ಕಟಿಂಗ್ ಮಾಡಿ ಹೊರದಬ್ಬಿಸಿಕೊಂಡಿದ್ದ ಹಿರೇಕೆರೂರಿನ ದಲಿತ ಯುವಕ ನೆನಪಾಗುತ್ತಿದ್ದ. ಅವನನ್ನು ಹೊರದಬ್ಬಲಾಗಿತ್ತು. ಇವಳು ಇನ್ನೊಂದು ರೀತಿಯಲ್ಲಿ ಹೊರಬಂದಿದ್ದಳು, ಇನ್ನೆಂದೂ ಅಲ್ಲಿ ಕಾಲಿಡಲಾರದಂತೆ. ಜಾತಿ, ಧರ್ಮ, ಲಿಂಗಗಳ ಜತೆಗೆ ವೈಚಾರಿಕತೆಯೂ ತೀವ್ರ ಒತ್ತುವರಿಗೆ ಒಳಗಾಗುತ್ತಿರುವ ಕಾಲವಿದು.

ರಾಜೇಂದ್ರ ಚೆನ್ನಿಯವರು ನಮ್ಮ ಈ ವರ್ತಮಾನವನ್ನು ಜಾರ್ಜ್ ಆರ್ವೆಲ್ 1984ರಲ್ಲಿ ಬರೆದ Thought police ವಿಧಾನದೊಂದಿಗೆ ಇಡುತ್ತಾರೆ. ಬಿಗ್ ಬ್ರದರ್ ತನ್ನ ಪ್ರಜೆಗಳ ಮೇಲೆ ನಿಗಾ ಇಡುತ್ತಾನೆ. ಸಾರ್ವಜನಿಕ ಸ್ಥಳಗಳಲ್ಲಿ ಪರದೆಯ ಮೇಲೆ ದೊಡ್ಡ ಭಾವಚಿತ್ರ ಮೂಡುತ್ತದೆ. ಯಾರು ನಮಸ್ಕರಿಸುವುದಿಲ್ಲವೋ ಅದು ದಾಖಲಾಗುತ್ತದೆ. ಅಂಥವರನ್ನು ಅರೆಸ್ಟ್ ಮಾಡಲಾಗುತ್ತದೆ. ಇದು ಸಲೀಸಾಗಿ ನಡೆಯುತ್ತದೆ. ಯಾಕೆಂದರೆ ಪ್ರಭುತ್ವಕ್ಕೆ ಅಪಥ್ಯವೆನ್ನಿಸುವ ಚರಿತ್ರೆಯ ನೆನಪುಗಳನ್ನು ಜನರ ಮನಸ್ಸಿನಿಂದ ಶಾಶ್ವತವಾಗಿ ಅಳಿಸಲಾಗಿದೆ. ನಮ್ಮ ಸುತ್ತ ನಡೆಯುತ್ತಿರುವ ಸಣ್ಣಸಣ್ಣ ಸಂಗತಿಗಳು ಅದೇ ಕರೆಗಂಟೆಗಳೇ ಅಲ್ಲವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...