Homeಅಂಕಣಗಳುನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

ನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

- Advertisement -
- Advertisement -
  • ಎಚ್.ಎಸ್.ದೊರೆಸ್ವಾಮಿ |

27.05.2018ರ ಪ್ರಜಾವಾಣಿ ಪತ್ರಿಕೆಯಲ್ಲಿ ಒಂದು ಜಾಹೀರಾತು ಅಚ್ಚಾಗಿದೆ. ಮಾದಿಗ ಜನಾಂಗದವರು ಕಾಂಗ್ರೆಸ್ಸನ್ನು ಚಿಂದಿ ಮಾಡಿದೆವು ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಜಾಹೀರಾತು ಅದು.

ಮಾದಿಗರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ನಾಲ್ಕಾರು ವರ್ಷಗಳಿಂದ ಕರ್ನಾಟಕದಲ್ಲಿ ಚಳವಳಿ ನಡೆಯುತ್ತಿದೆ. ನ್ಯಾಯಮೂರ್ತಿ ಸದಾಶಿವ ಅವರು ಕೂಡ ತಮ್ಮ ವರದಿಯಲ್ಲಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಿದ್ದೂ ಸಿದ್ದರಾಮಯ್ಯನವರ ಸರ್ಕಾರ ಮಾದಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿಲ್ಲ. ಇತ್ತೀಚೆಗೆ ವಿಭಜನೆಗೊಂಡ ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತರ ಹಣೆಪಟ್ಟಿಗೆ ಶಿಫಾರಸ್ಸು ಮಾಡಿ, ಆ ಮೂಲಕ ಅವರಿಗೆ ಮೀಸಲಾತಿ ಸೌಲಭ್ಯಕ್ಕೂ ಅವಕಾಶ ಕಲ್ಪಿಸಿದÀ ಸರ್ಕಾರ ಮಾದಿಗ ಸಮುದಾಯದ ಬಹಳ ದಿನಗಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಮಾದಿಗ ಮುಖಂಡರು ಕಾಂಗ್ರೆಸ್ಸಿಗೆ ಈ ಬಾರಿ ನಾವು ಮತ ಹಾಕುವುದಿಲ್ಲವೆಂದು ಘೋಷಣೆ ಕೂಡ ಮಾಡಿದ್ದರು. ನಾನಾಕಾರಣಗಳಿಂದ ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ 78 ಉಮೇದುವಾರರು ಮಾತ್ರ ಗೆದ್ದು ಬಂದರು. ಭಾಜಪ, ಕಾಂಗ್ರೆಸ್, ಜಾತ್ಯತೀತ ಜನತಾದಳದ ಯಾರಿಗೂ ಬಹುಮತ ದೊರಕಲಿಲ್ಲ. ಈಗ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳದ ಸಂಯುಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಲಿ ಸರ್ಕಾರ ಕೂಡಲೇ ತಡಮಾಡದೆ ವಂಚಿತ ಮಾದಿಗ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಬೇಕು ಹಾಗೂ ಆ ಸಮುದಾಯದ ಆದರಕ್ಕೆ ಪಾತ್ರರಾಗಬೇಕು.

ಹಾಗೆಯೇ ಮಾದಿಗ ಸಮುದಾಯದವರು ಒಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರಿಗೋ ಅಪಶಕುನ ಮಾಡಲು ಹೋಗಿ ತನ್ನ ಮೂಗನ್ನೇ ಕೊಯ್ದುಕೊಂಡಂತಾಗಬಾರದು. ಒಳಮೀಸಲಾತಿ ಒದಗಿಸಲಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್‍ಅನ್ನು ಚಿಂದಿ ಮಾಡುವ ಆವೇಶದಲ್ಲಿ, ಸಂವಿಧಾನವನ್ನೇ ಬುಡಮೇಲು ಮಾಡುವ ಹಾಗೂ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡಲು ಹವಣಿಸುತ್ತಿರುವ ಶಕ್ತಿಗಳ ಕಡೆಗೆ ವಾಲುವಂತಾಗಬಾರದು. ಹಾಗಾದರೆ ನಮ್ಮ ಕಾಲನ್ನು ನಾವೇ ಕತ್ತರಿಸಿಕೊಂಡಂತೆ.

ಮಾದಿಗ ಸಮುದಾಯದ ಜಾಹೀರಾತನ್ನು ಮತ್ತೊಂದು ದೃಷ್ಟಿಯಿಂದ ಗಮನಿಸಿ ಅರ್ಥಮಾಡಿಕೊಳ್ಳಬೇಕಾದ ಜರೂರಿದೆ. ಸ್ವತಂತ್ರ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಕುರಿತು ನಾವೆಲ್ಲ ಚಿಂತನೆ ಮಾಡಬೇಕು. ಕೆಂಗಲ್ ಹನುಮಂತಯ್ಯನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಧಾನಸಭೆಯ ಚುನಾವಣೆ ಬಂತು. ಕಾಂಗ್ರೆಸ್ ಉಮೇದುವಾರರ ಆಯ್ಕೆಯೂ ಆಯ್ತು. ಬಲಿಜ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‍ನ ಹಿರಿಯ ಧುರೀಣ ಕೆ.ಪಟ್ಟಾಬಿರಾಮನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಾಗಿತ್ತಾದರೂ, ಅವರು ಅಲ್ಪಸಂಖ್ಯಾತ ಸಮುದಾಯದವರ ಆಯ್ಕೆಯ ಕ್ರಮವನ್ನು ಒಪ್ಪದೆ ತಮಗೆ ನೀಡಿದ್ದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರು. ಅವರು ಹನುಮಂತಯ್ಯನವರಿಗೆ ಒಂದು ಪತ್ರ ಬರೆದು ‘ನೀವು ವಿಚಾರವಂತರು, ಆಧುನಿಕರು. ಉಮೇದುವಾರರ ಆಯ್ಕೆಯಲ್ಲಿ ಹೊಸ ವಿಧಾನವನ್ನು ಅನುಸರಿಸುವಿರಿ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಒಕ್ಕಲಿಗರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಮತ್ತು ಲಿಂಗಾಯತರು ಜಾಸ್ತಿ ಇರುವ ಕ್ಷೇತ್ರಗಳಲ್ಲಿ ಲಿಂಗಾಯತ ಉಮೇದುವಾರರನ್ನೇ ಆಯ್ಕೆ ಮಾಡಿದ್ದಿರಿ. ಈ ಹಳೆಯ ಸಂಪ್ರದಾಯವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಒಕ್ಕಲಿಗ, ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಉಮೇದುವಾರರನ್ನಾಗಿ ನಿಲ್ಲಿಸಿ, ಗೆಲ್ಲಿಸುವಿರೆಂದು ಭಾವಿಸಿದ್ದೆ. ನೀವು ಕೂಡ ಹಿಂದಿನ ಅಧ್ಯಕ್ಷರುಗಳಂತೆ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಕೆಲಸ ಮಾಡಿದ್ದೀರಿ. ಇದನ್ನು ವಿರೋಧಿಸಿ ನಾನು ನೀವು ನೀಡಿರುವ ಟಿಕೆಟ್‍ಅನ್ನು ಹಿಂದಿರುಗಿಸುತ್ತಿದ್ದೇನೆ. ನಾನು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದ್ದರು. ಅದರಂತೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕೋಲಾರದಲ್ಲಿ ನಿಂತು ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಇಂಥಾ ಆದರ್ಶಗಳೆಲ್ಲಾ ಈಗ ಎಲ್ಲಿ ಮಾಯವಾದವು?

ಇಂದು ಕಾಂಗ್ರೆಸ್ ಮಾತ್ರವಲ್ಲ, ಎಲ್ಲ ಪಕ್ಷಗಳಲ್ಲೂ ಬಹುಸಂಖ್ಯೆಯಲ್ಲಿರುವ ಜಾತಿಗಳ ಉಮೇದುವಾರರನ್ನೇ ಹುಡುಕಿ ಹುಡುಕಿ ಉಮೇದುವಾರರನ್ನಾಗಿ ಮಾಡುವ ಚಾಳಿ ವ್ಯಾಪಿಸಿದೆ. ಅಲ್ಪಸಂಖ್ಯೆಯ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯೆಂದರೆ ‘ನಿಮಗೆ ಜಾತಿಯ ಜಾತಿಯ ಬಲವಿದೆಯೆ? ನಿಮ್ಮಲ್ಲಿ ಕೋಟಿ ಕೋಟಿ ಹಣವಿದೆಯೆ? ನೀವು ಗೆಲ್ಲುವ ಕುದುರೆಯೆ?’ ಎಂಬ ಅಂಶಗಳ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗುತ್ತಿದೆ. ದೀನದಲಿತರು, ಅಲ್ಪಸಂಖ್ಯಾತರನ್ನು ಈ ಮೂಲಕ ಕಡೆಗಣಿಸಲಾಗುತ್ತಿದೆ.

ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಡ್ಡಾಯ ಮೀಸಲಾತಿ ಇರುವುದರಿಂದ, ವಿಧಿಯಿಲ್ಲದೆ ರಾಜಕೀಯ ಪಕ್ಷಗಳು ಅವರಿಗೆ ಉಮೇದುವಾರಿಕೆ ನೀಡುತ್ತಿವೆ. ಈ ಮೀಸಲಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ ಈ ರಾಜಕೀಯ ಪಕ್ಷಗಳು ಬಹುಸಂಖ್ಯೆಯ ಹಾಗೂ ಬಲಾಢ್ಯ ಜನಾಂಗದವರಿಗೇ ಎಲ್ಲ ಸೀಟುಗಳನ್ನು ಹಂಚಿಬಿಡುತ್ತಿದ್ದರು ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ.

ಜನಸಂಖ್ಯೆಯ ಅನುಪಾತದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಸಿಗಬೇಕಾಗಿದ್ದ ಪ್ರಾತಿನಿಧ್ಯ 57 ಶಾಸಕ ಸ್ಥಾನಗಳು ಮಾತ್ರ. ಆದರೆ 2018ರ ಚುನಾವಣೆಯಲ್ಲಿ ಗೆದ್ದು ಬಂದಿರುವ ಲಿಂಗಾಯತ ಮತ್ತು ಒಕ್ಕಲಿಗರ ಪ್ರಾತಿನಿಧ್ಯ 117. ಅಲ್ಪಸಂಖ್ಯಾತರನ್ನು ಕಡೆಗಣಿಸಿರುವುದಕ್ಕೆ ಜೀವಂತ ನಿದರ್ಶನ ಇದು. ಪ್ರಜಾತಂತ್ರದ ಮೂಲ ಆಶಯವನ್ನೇ ದುರ್ಬಲಗೊಳಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ತುರ್ತು ಬಂದೊದಗಿದೆ.

ಬಿಜೆಪಿಯಂತೂ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಡಬಾರದು ಎಂಬ ತೀರ್ಮಾನ ಮಾಡಿ ಎಷ್ಟೋ ವರ್ಷಗಳಾದವು. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಒಕ್ಕಲಿಗ ಮತ್ತು ಲಿಂಗಾಯತ ರಾಜಕಾರಣಿಗಳಿಗೆ ಸಿಂಹಪಾಲು ಹಂಚಿಕೆ ಮಾಡುತ್ತಿವೆ. ಬಿಜೆಪಿ ಪಕ್ಷವು ಈ ಮಲತಾಯಿ ಮಾತ್ಸರ್ಯದ ಜೊತೆಗೆ, ಅಲ್ಪಸಂಖ್ಯಾತ ಧಾರ್ಮಿಕರನ್ನು ಮೂಲೆಗುಂಪು ಮಾಡುವ ಧೋರಣೆಯನ್ನೂ ಅಳವಡಿಸಿಕೊಂಡಿದೆ.

ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರಿರುವ ಕ್ಷೇತ್ರದಲ್ಲಿ ನಿಲ್ಲಿಸಿ, ನಿಮ್ಮ ಗೆಲುವು ನಮ್ಮ ಹೊಣೆ ಎಂದು ಬಹುಸಂಖ್ಯಾತರು ಘೋಷಣೆ ಮಾಡುವಂತಾಗಬೇಕು. ಆಗ ಸಾಮಾಜಿಕ ನ್ಯಾಯ ಎಲ್ಲ ಜನಾಂಗದವರಿಗೂ ದೊರಕಿಸಿಕೊಟ್ಟಂತಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...