Homeಅಂಕಣಗಳುನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

ನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

- Advertisement -
- Advertisement -
  • ಎಚ್.ಎಸ್.ದೊರೆಸ್ವಾಮಿ |

27.05.2018ರ ಪ್ರಜಾವಾಣಿ ಪತ್ರಿಕೆಯಲ್ಲಿ ಒಂದು ಜಾಹೀರಾತು ಅಚ್ಚಾಗಿದೆ. ಮಾದಿಗ ಜನಾಂಗದವರು ಕಾಂಗ್ರೆಸ್ಸನ್ನು ಚಿಂದಿ ಮಾಡಿದೆವು ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಜಾಹೀರಾತು ಅದು.

ಮಾದಿಗರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ನಾಲ್ಕಾರು ವರ್ಷಗಳಿಂದ ಕರ್ನಾಟಕದಲ್ಲಿ ಚಳವಳಿ ನಡೆಯುತ್ತಿದೆ. ನ್ಯಾಯಮೂರ್ತಿ ಸದಾಶಿವ ಅವರು ಕೂಡ ತಮ್ಮ ವರದಿಯಲ್ಲಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಿದ್ದೂ ಸಿದ್ದರಾಮಯ್ಯನವರ ಸರ್ಕಾರ ಮಾದಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿಲ್ಲ. ಇತ್ತೀಚೆಗೆ ವಿಭಜನೆಗೊಂಡ ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತರ ಹಣೆಪಟ್ಟಿಗೆ ಶಿಫಾರಸ್ಸು ಮಾಡಿ, ಆ ಮೂಲಕ ಅವರಿಗೆ ಮೀಸಲಾತಿ ಸೌಲಭ್ಯಕ್ಕೂ ಅವಕಾಶ ಕಲ್ಪಿಸಿದÀ ಸರ್ಕಾರ ಮಾದಿಗ ಸಮುದಾಯದ ಬಹಳ ದಿನಗಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಮಾದಿಗ ಮುಖಂಡರು ಕಾಂಗ್ರೆಸ್ಸಿಗೆ ಈ ಬಾರಿ ನಾವು ಮತ ಹಾಕುವುದಿಲ್ಲವೆಂದು ಘೋಷಣೆ ಕೂಡ ಮಾಡಿದ್ದರು. ನಾನಾಕಾರಣಗಳಿಂದ ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ 78 ಉಮೇದುವಾರರು ಮಾತ್ರ ಗೆದ್ದು ಬಂದರು. ಭಾಜಪ, ಕಾಂಗ್ರೆಸ್, ಜಾತ್ಯತೀತ ಜನತಾದಳದ ಯಾರಿಗೂ ಬಹುಮತ ದೊರಕಲಿಲ್ಲ. ಈಗ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳದ ಸಂಯುಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಲಿ ಸರ್ಕಾರ ಕೂಡಲೇ ತಡಮಾಡದೆ ವಂಚಿತ ಮಾದಿಗ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಬೇಕು ಹಾಗೂ ಆ ಸಮುದಾಯದ ಆದರಕ್ಕೆ ಪಾತ್ರರಾಗಬೇಕು.

ಹಾಗೆಯೇ ಮಾದಿಗ ಸಮುದಾಯದವರು ಒಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರಿಗೋ ಅಪಶಕುನ ಮಾಡಲು ಹೋಗಿ ತನ್ನ ಮೂಗನ್ನೇ ಕೊಯ್ದುಕೊಂಡಂತಾಗಬಾರದು. ಒಳಮೀಸಲಾತಿ ಒದಗಿಸಲಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್‍ಅನ್ನು ಚಿಂದಿ ಮಾಡುವ ಆವೇಶದಲ್ಲಿ, ಸಂವಿಧಾನವನ್ನೇ ಬುಡಮೇಲು ಮಾಡುವ ಹಾಗೂ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡಲು ಹವಣಿಸುತ್ತಿರುವ ಶಕ್ತಿಗಳ ಕಡೆಗೆ ವಾಲುವಂತಾಗಬಾರದು. ಹಾಗಾದರೆ ನಮ್ಮ ಕಾಲನ್ನು ನಾವೇ ಕತ್ತರಿಸಿಕೊಂಡಂತೆ.

ಮಾದಿಗ ಸಮುದಾಯದ ಜಾಹೀರಾತನ್ನು ಮತ್ತೊಂದು ದೃಷ್ಟಿಯಿಂದ ಗಮನಿಸಿ ಅರ್ಥಮಾಡಿಕೊಳ್ಳಬೇಕಾದ ಜರೂರಿದೆ. ಸ್ವತಂತ್ರ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಕುರಿತು ನಾವೆಲ್ಲ ಚಿಂತನೆ ಮಾಡಬೇಕು. ಕೆಂಗಲ್ ಹನುಮಂತಯ್ಯನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಧಾನಸಭೆಯ ಚುನಾವಣೆ ಬಂತು. ಕಾಂಗ್ರೆಸ್ ಉಮೇದುವಾರರ ಆಯ್ಕೆಯೂ ಆಯ್ತು. ಬಲಿಜ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‍ನ ಹಿರಿಯ ಧುರೀಣ ಕೆ.ಪಟ್ಟಾಬಿರಾಮನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಾಗಿತ್ತಾದರೂ, ಅವರು ಅಲ್ಪಸಂಖ್ಯಾತ ಸಮುದಾಯದವರ ಆಯ್ಕೆಯ ಕ್ರಮವನ್ನು ಒಪ್ಪದೆ ತಮಗೆ ನೀಡಿದ್ದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರು. ಅವರು ಹನುಮಂತಯ್ಯನವರಿಗೆ ಒಂದು ಪತ್ರ ಬರೆದು ‘ನೀವು ವಿಚಾರವಂತರು, ಆಧುನಿಕರು. ಉಮೇದುವಾರರ ಆಯ್ಕೆಯಲ್ಲಿ ಹೊಸ ವಿಧಾನವನ್ನು ಅನುಸರಿಸುವಿರಿ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಒಕ್ಕಲಿಗರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಮತ್ತು ಲಿಂಗಾಯತರು ಜಾಸ್ತಿ ಇರುವ ಕ್ಷೇತ್ರಗಳಲ್ಲಿ ಲಿಂಗಾಯತ ಉಮೇದುವಾರರನ್ನೇ ಆಯ್ಕೆ ಮಾಡಿದ್ದಿರಿ. ಈ ಹಳೆಯ ಸಂಪ್ರದಾಯವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಒಕ್ಕಲಿಗ, ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಉಮೇದುವಾರರನ್ನಾಗಿ ನಿಲ್ಲಿಸಿ, ಗೆಲ್ಲಿಸುವಿರೆಂದು ಭಾವಿಸಿದ್ದೆ. ನೀವು ಕೂಡ ಹಿಂದಿನ ಅಧ್ಯಕ್ಷರುಗಳಂತೆ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಕೆಲಸ ಮಾಡಿದ್ದೀರಿ. ಇದನ್ನು ವಿರೋಧಿಸಿ ನಾನು ನೀವು ನೀಡಿರುವ ಟಿಕೆಟ್‍ಅನ್ನು ಹಿಂದಿರುಗಿಸುತ್ತಿದ್ದೇನೆ. ನಾನು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದ್ದರು. ಅದರಂತೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕೋಲಾರದಲ್ಲಿ ನಿಂತು ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಇಂಥಾ ಆದರ್ಶಗಳೆಲ್ಲಾ ಈಗ ಎಲ್ಲಿ ಮಾಯವಾದವು?

ಇಂದು ಕಾಂಗ್ರೆಸ್ ಮಾತ್ರವಲ್ಲ, ಎಲ್ಲ ಪಕ್ಷಗಳಲ್ಲೂ ಬಹುಸಂಖ್ಯೆಯಲ್ಲಿರುವ ಜಾತಿಗಳ ಉಮೇದುವಾರರನ್ನೇ ಹುಡುಕಿ ಹುಡುಕಿ ಉಮೇದುವಾರರನ್ನಾಗಿ ಮಾಡುವ ಚಾಳಿ ವ್ಯಾಪಿಸಿದೆ. ಅಲ್ಪಸಂಖ್ಯೆಯ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯೆಂದರೆ ‘ನಿಮಗೆ ಜಾತಿಯ ಜಾತಿಯ ಬಲವಿದೆಯೆ? ನಿಮ್ಮಲ್ಲಿ ಕೋಟಿ ಕೋಟಿ ಹಣವಿದೆಯೆ? ನೀವು ಗೆಲ್ಲುವ ಕುದುರೆಯೆ?’ ಎಂಬ ಅಂಶಗಳ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗುತ್ತಿದೆ. ದೀನದಲಿತರು, ಅಲ್ಪಸಂಖ್ಯಾತರನ್ನು ಈ ಮೂಲಕ ಕಡೆಗಣಿಸಲಾಗುತ್ತಿದೆ.

ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಡ್ಡಾಯ ಮೀಸಲಾತಿ ಇರುವುದರಿಂದ, ವಿಧಿಯಿಲ್ಲದೆ ರಾಜಕೀಯ ಪಕ್ಷಗಳು ಅವರಿಗೆ ಉಮೇದುವಾರಿಕೆ ನೀಡುತ್ತಿವೆ. ಈ ಮೀಸಲಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ ಈ ರಾಜಕೀಯ ಪಕ್ಷಗಳು ಬಹುಸಂಖ್ಯೆಯ ಹಾಗೂ ಬಲಾಢ್ಯ ಜನಾಂಗದವರಿಗೇ ಎಲ್ಲ ಸೀಟುಗಳನ್ನು ಹಂಚಿಬಿಡುತ್ತಿದ್ದರು ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ.

ಜನಸಂಖ್ಯೆಯ ಅನುಪಾತದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಸಿಗಬೇಕಾಗಿದ್ದ ಪ್ರಾತಿನಿಧ್ಯ 57 ಶಾಸಕ ಸ್ಥಾನಗಳು ಮಾತ್ರ. ಆದರೆ 2018ರ ಚುನಾವಣೆಯಲ್ಲಿ ಗೆದ್ದು ಬಂದಿರುವ ಲಿಂಗಾಯತ ಮತ್ತು ಒಕ್ಕಲಿಗರ ಪ್ರಾತಿನಿಧ್ಯ 117. ಅಲ್ಪಸಂಖ್ಯಾತರನ್ನು ಕಡೆಗಣಿಸಿರುವುದಕ್ಕೆ ಜೀವಂತ ನಿದರ್ಶನ ಇದು. ಪ್ರಜಾತಂತ್ರದ ಮೂಲ ಆಶಯವನ್ನೇ ದುರ್ಬಲಗೊಳಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ತುರ್ತು ಬಂದೊದಗಿದೆ.

ಬಿಜೆಪಿಯಂತೂ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಡಬಾರದು ಎಂಬ ತೀರ್ಮಾನ ಮಾಡಿ ಎಷ್ಟೋ ವರ್ಷಗಳಾದವು. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಒಕ್ಕಲಿಗ ಮತ್ತು ಲಿಂಗಾಯತ ರಾಜಕಾರಣಿಗಳಿಗೆ ಸಿಂಹಪಾಲು ಹಂಚಿಕೆ ಮಾಡುತ್ತಿವೆ. ಬಿಜೆಪಿ ಪಕ್ಷವು ಈ ಮಲತಾಯಿ ಮಾತ್ಸರ್ಯದ ಜೊತೆಗೆ, ಅಲ್ಪಸಂಖ್ಯಾತ ಧಾರ್ಮಿಕರನ್ನು ಮೂಲೆಗುಂಪು ಮಾಡುವ ಧೋರಣೆಯನ್ನೂ ಅಳವಡಿಸಿಕೊಂಡಿದೆ.

ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರಿರುವ ಕ್ಷೇತ್ರದಲ್ಲಿ ನಿಲ್ಲಿಸಿ, ನಿಮ್ಮ ಗೆಲುವು ನಮ್ಮ ಹೊಣೆ ಎಂದು ಬಹುಸಂಖ್ಯಾತರು ಘೋಷಣೆ ಮಾಡುವಂತಾಗಬೇಕು. ಆಗ ಸಾಮಾಜಿಕ ನ್ಯಾಯ ಎಲ್ಲ ಜನಾಂಗದವರಿಗೂ ದೊರಕಿಸಿಕೊಟ್ಟಂತಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...