Homeಅಂಕಣಗಳುನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

ನೂರರ ನೋಟ | ವಂಚಿತ ಸಮುದಾಯಗಳ ಕಡೆಗಣನೆ ನಿಲ್ಲಲಿ

- Advertisement -
- Advertisement -
  • ಎಚ್.ಎಸ್.ದೊರೆಸ್ವಾಮಿ |

27.05.2018ರ ಪ್ರಜಾವಾಣಿ ಪತ್ರಿಕೆಯಲ್ಲಿ ಒಂದು ಜಾಹೀರಾತು ಅಚ್ಚಾಗಿದೆ. ಮಾದಿಗ ಜನಾಂಗದವರು ಕಾಂಗ್ರೆಸ್ಸನ್ನು ಚಿಂದಿ ಮಾಡಿದೆವು ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಜಾಹೀರಾತು ಅದು.

ಮಾದಿಗರಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕೆಂದು ನಾಲ್ಕಾರು ವರ್ಷಗಳಿಂದ ಕರ್ನಾಟಕದಲ್ಲಿ ಚಳವಳಿ ನಡೆಯುತ್ತಿದೆ. ನ್ಯಾಯಮೂರ್ತಿ ಸದಾಶಿವ ಅವರು ಕೂಡ ತಮ್ಮ ವರದಿಯಲ್ಲಿ ಮಾದಿಗರಿಗೆ ಪ್ರತ್ಯೇಕ ಮೀಸಲಾತಿ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಹೀಗಿದ್ದೂ ಸಿದ್ದರಾಮಯ್ಯನವರ ಸರ್ಕಾರ ಮಾದಿಗರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿಲ್ಲ. ಇತ್ತೀಚೆಗೆ ವಿಭಜನೆಗೊಂಡ ಲಿಂಗಾಯತ ಸಮುದಾಯಕ್ಕೆ ಅಲ್ಪಸಂಖ್ಯಾತರ ಹಣೆಪಟ್ಟಿಗೆ ಶಿಫಾರಸ್ಸು ಮಾಡಿ, ಆ ಮೂಲಕ ಅವರಿಗೆ ಮೀಸಲಾತಿ ಸೌಲಭ್ಯಕ್ಕೂ ಅವಕಾಶ ಕಲ್ಪಿಸಿದÀ ಸರ್ಕಾರ ಮಾದಿಗ ಸಮುದಾಯದ ಬಹಳ ದಿನಗಳ ಕೋರಿಕೆಯನ್ನು ಗಂಭೀರವಾಗಿ ಪರಿಗಣಿಸಲೇ ಇಲ್ಲ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಮುನ್ನವೇ ಮಾದಿಗ ಮುಖಂಡರು ಕಾಂಗ್ರೆಸ್ಸಿಗೆ ಈ ಬಾರಿ ನಾವು ಮತ ಹಾಕುವುದಿಲ್ಲವೆಂದು ಘೋಷಣೆ ಕೂಡ ಮಾಡಿದ್ದರು. ನಾನಾಕಾರಣಗಳಿಂದ ಈ ಸಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ 78 ಉಮೇದುವಾರರು ಮಾತ್ರ ಗೆದ್ದು ಬಂದರು. ಭಾಜಪ, ಕಾಂಗ್ರೆಸ್, ಜಾತ್ಯತೀತ ಜನತಾದಳದ ಯಾರಿಗೂ ಬಹುಮತ ದೊರಕಲಿಲ್ಲ. ಈಗ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳದ ಸಂಯುಕ್ತ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹಾಲಿ ಸರ್ಕಾರ ಕೂಡಲೇ ತಡಮಾಡದೆ ವಂಚಿತ ಮಾದಿಗ ಸಮುದಾಯಕ್ಕೆ ಮೀಸಲಾತಿ ಸೌಲಭ್ಯ ಘೋಷಣೆ ಮಾಡಬೇಕು ಹಾಗೂ ಆ ಸಮುದಾಯದ ಆದರಕ್ಕೆ ಪಾತ್ರರಾಗಬೇಕು.

ಹಾಗೆಯೇ ಮಾದಿಗ ಸಮುದಾಯದವರು ಒಂದು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾರಿಗೋ ಅಪಶಕುನ ಮಾಡಲು ಹೋಗಿ ತನ್ನ ಮೂಗನ್ನೇ ಕೊಯ್ದುಕೊಂಡಂತಾಗಬಾರದು. ಒಳಮೀಸಲಾತಿ ಒದಗಿಸಲಿಲ್ಲವೆಂಬ ಕಾರಣಕ್ಕೆ ಕಾಂಗ್ರೆಸ್‍ಅನ್ನು ಚಿಂದಿ ಮಾಡುವ ಆವೇಶದಲ್ಲಿ, ಸಂವಿಧಾನವನ್ನೇ ಬುಡಮೇಲು ಮಾಡುವ ಹಾಗೂ ಮೀಸಲಾತಿ ವ್ಯವಸ್ಥೆಯನ್ನೇ ನಾಶ ಮಾಡಲು ಹವಣಿಸುತ್ತಿರುವ ಶಕ್ತಿಗಳ ಕಡೆಗೆ ವಾಲುವಂತಾಗಬಾರದು. ಹಾಗಾದರೆ ನಮ್ಮ ಕಾಲನ್ನು ನಾವೇ ಕತ್ತರಿಸಿಕೊಂಡಂತೆ.

ಮಾದಿಗ ಸಮುದಾಯದ ಜಾಹೀರಾತನ್ನು ಮತ್ತೊಂದು ದೃಷ್ಟಿಯಿಂದ ಗಮನಿಸಿ ಅರ್ಥಮಾಡಿಕೊಳ್ಳಬೇಕಾದ ಜರೂರಿದೆ. ಸ್ವತಂತ್ರ ಭಾರತದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನು ಕುರಿತು ನಾವೆಲ್ಲ ಚಿಂತನೆ ಮಾಡಬೇಕು. ಕೆಂಗಲ್ ಹನುಮಂತಯ್ಯನವರು ಮೈಸೂರು ಕಾಂಗ್ರೆಸ್ಸಿನ ಅಧ್ಯಕ್ಷರಾಗಿದ್ದ ಸಮಯದಲ್ಲಿ ವಿಧಾನಸಭೆಯ ಚುನಾವಣೆ ಬಂತು. ಕಾಂಗ್ರೆಸ್ ಉಮೇದುವಾರರ ಆಯ್ಕೆಯೂ ಆಯ್ತು. ಬಲಿಜ ಸಮುದಾಯಕ್ಕೆ ಸೇರಿದ ಕಾಂಗ್ರೆಸ್‍ನ ಹಿರಿಯ ಧುರೀಣ ಕೆ.ಪಟ್ಟಾಬಿರಾಮನ್ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಲಾಗಿತ್ತಾದರೂ, ಅವರು ಅಲ್ಪಸಂಖ್ಯಾತ ಸಮುದಾಯದವರ ಆಯ್ಕೆಯ ಕ್ರಮವನ್ನು ಒಪ್ಪದೆ ತಮಗೆ ನೀಡಿದ್ದ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದರು. ಅವರು ಹನುಮಂತಯ್ಯನವರಿಗೆ ಒಂದು ಪತ್ರ ಬರೆದು ‘ನೀವು ವಿಚಾರವಂತರು, ಆಧುನಿಕರು. ಉಮೇದುವಾರರ ಆಯ್ಕೆಯಲ್ಲಿ ಹೊಸ ವಿಧಾನವನ್ನು ಅನುಸರಿಸುವಿರಿ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೆ. ಒಕ್ಕಲಿಗರು ಹೆಚ್ಚು ಸಂಖ್ಯೆಯಲ್ಲಿರುವ ಕ್ಷೇತ್ರದಲ್ಲಿ ಒಕ್ಕಲಿಗರನ್ನು ಮತ್ತು ಲಿಂಗಾಯತರು ಜಾಸ್ತಿ ಇರುವ ಕ್ಷೇತ್ರಗಳಲ್ಲಿ ಲಿಂಗಾಯತ ಉಮೇದುವಾರರನ್ನೇ ಆಯ್ಕೆ ಮಾಡಿದ್ದಿರಿ. ಈ ಹಳೆಯ ಸಂಪ್ರದಾಯವನ್ನು ಕೈಬಿಟ್ಟು ಅಲ್ಪಸಂಖ್ಯಾತರನ್ನು ಒಕ್ಕಲಿಗ, ಲಿಂಗಾಯತ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಉಮೇದುವಾರರನ್ನಾಗಿ ನಿಲ್ಲಿಸಿ, ಗೆಲ್ಲಿಸುವಿರೆಂದು ಭಾವಿಸಿದ್ದೆ. ನೀವು ಕೂಡ ಹಿಂದಿನ ಅಧ್ಯಕ್ಷರುಗಳಂತೆ ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊಳ್ಳುವ ಕೆಲಸ ಮಾಡಿದ್ದೀರಿ. ಇದನ್ನು ವಿರೋಧಿಸಿ ನಾನು ನೀವು ನೀಡಿರುವ ಟಿಕೆಟ್‍ಅನ್ನು ಹಿಂದಿರುಗಿಸುತ್ತಿದ್ದೇನೆ. ನಾನು ಸ್ವತಂತ್ರವಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ’ ಎಂದು ತಿಳಿಸಿದ್ದರು. ಅದರಂತೆ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಕೋಲಾರದಲ್ಲಿ ನಿಂತು ಹೆಚ್ಚಿನ ಮತಗಳ ಅಂತರದಿಂದ ಗೆದ್ದು ಬಂದಿದ್ದರು. ಇಂಥಾ ಆದರ್ಶಗಳೆಲ್ಲಾ ಈಗ ಎಲ್ಲಿ ಮಾಯವಾದವು?

ಇಂದು ಕಾಂಗ್ರೆಸ್ ಮಾತ್ರವಲ್ಲ, ಎಲ್ಲ ಪಕ್ಷಗಳಲ್ಲೂ ಬಹುಸಂಖ್ಯೆಯಲ್ಲಿರುವ ಜಾತಿಗಳ ಉಮೇದುವಾರರನ್ನೇ ಹುಡುಕಿ ಹುಡುಕಿ ಉಮೇದುವಾರರನ್ನಾಗಿ ಮಾಡುವ ಚಾಳಿ ವ್ಯಾಪಿಸಿದೆ. ಅಲ್ಪಸಂಖ್ಯೆಯ ಸಮುದಾಯಗಳನ್ನು ಕಡೆಗಣಿಸಲಾಗುತ್ತಿದೆ. ಇತ್ತೀಚಿನ ಬೆಳವಣಿಗೆಯೆಂದರೆ ‘ನಿಮಗೆ ಜಾತಿಯ ಜಾತಿಯ ಬಲವಿದೆಯೆ? ನಿಮ್ಮಲ್ಲಿ ಕೋಟಿ ಕೋಟಿ ಹಣವಿದೆಯೆ? ನೀವು ಗೆಲ್ಲುವ ಕುದುರೆಯೆ?’ ಎಂಬ ಅಂಶಗಳ ಆಧಾರದ ಮೇಲೆ ಉಮೇದುವಾರರನ್ನು ಆಯ್ಕೆ ಮಾಡಲಾಗುತ್ತಿದೆ. ದೀನದಲಿತರು, ಅಲ್ಪಸಂಖ್ಯಾತರನ್ನು ಈ ಮೂಲಕ ಕಡೆಗಣಿಸಲಾಗುತ್ತಿದೆ.

ಚುನಾವಣೆಯಲ್ಲಿಯೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಕಡ್ಡಾಯ ಮೀಸಲಾತಿ ಇರುವುದರಿಂದ, ವಿಧಿಯಿಲ್ಲದೆ ರಾಜಕೀಯ ಪಕ್ಷಗಳು ಅವರಿಗೆ ಉಮೇದುವಾರಿಕೆ ನೀಡುತ್ತಿವೆ. ಈ ಮೀಸಲಾತಿ ವ್ಯವಸ್ಥೆ ಇಲ್ಲದೆ ಹೋಗಿದ್ದರೆ ಈ ರಾಜಕೀಯ ಪಕ್ಷಗಳು ಬಹುಸಂಖ್ಯೆಯ ಹಾಗೂ ಬಲಾಢ್ಯ ಜನಾಂಗದವರಿಗೇ ಎಲ್ಲ ಸೀಟುಗಳನ್ನು ಹಂಚಿಬಿಡುತ್ತಿದ್ದರು ಎಂಬುದರಲ್ಲಿ ಯಾರಿಗೂ ಅನುಮಾನ ಬೇಡ.

ಜನಸಂಖ್ಯೆಯ ಅನುಪಾತದಲ್ಲಿ ಲಿಂಗಾಯತ ಹಾಗೂ ಒಕ್ಕಲಿಗರಿಗೆ ಸಿಗಬೇಕಾಗಿದ್ದ ಪ್ರಾತಿನಿಧ್ಯ 57 ಶಾಸಕ ಸ್ಥಾನಗಳು ಮಾತ್ರ. ಆದರೆ 2018ರ ಚುನಾವಣೆಯಲ್ಲಿ ಗೆದ್ದು ಬಂದಿರುವ ಲಿಂಗಾಯತ ಮತ್ತು ಒಕ್ಕಲಿಗರ ಪ್ರಾತಿನಿಧ್ಯ 117. ಅಲ್ಪಸಂಖ್ಯಾತರನ್ನು ಕಡೆಗಣಿಸಿರುವುದಕ್ಕೆ ಜೀವಂತ ನಿದರ್ಶನ ಇದು. ಪ್ರಜಾತಂತ್ರದ ಮೂಲ ಆಶಯವನ್ನೇ ದುರ್ಬಲಗೊಳಿಸುತ್ತಿರುವ ಈ ಸಮಸ್ಯೆಯ ಬಗ್ಗೆ ಗಂಭೀರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕಂಡುಕೊಳ್ಳಬೇಕಾದ ತುರ್ತು ಬಂದೊದಗಿದೆ.

ಬಿಜೆಪಿಯಂತೂ ಮುಸ್ಲಿಮರಿಗೆ, ಕ್ರಿಶ್ಚಿಯನ್ನರಿಗೆ ಟಿಕೆಟ್ ಕೊಡಬಾರದು ಎಂಬ ತೀರ್ಮಾನ ಮಾಡಿ ಎಷ್ಟೋ ವರ್ಷಗಳಾದವು. ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕೂಡ ಒಕ್ಕಲಿಗ ಮತ್ತು ಲಿಂಗಾಯತ ರಾಜಕಾರಣಿಗಳಿಗೆ ಸಿಂಹಪಾಲು ಹಂಚಿಕೆ ಮಾಡುತ್ತಿವೆ. ಬಿಜೆಪಿ ಪಕ್ಷವು ಈ ಮಲತಾಯಿ ಮಾತ್ಸರ್ಯದ ಜೊತೆಗೆ, ಅಲ್ಪಸಂಖ್ಯಾತ ಧಾರ್ಮಿಕರನ್ನು ಮೂಲೆಗುಂಪು ಮಾಡುವ ಧೋರಣೆಯನ್ನೂ ಅಳವಡಿಸಿಕೊಂಡಿದೆ.

ಅಲ್ಪಸಂಖ್ಯಾತರನ್ನು ಬಹುಸಂಖ್ಯಾತರಿರುವ ಕ್ಷೇತ್ರದಲ್ಲಿ ನಿಲ್ಲಿಸಿ, ನಿಮ್ಮ ಗೆಲುವು ನಮ್ಮ ಹೊಣೆ ಎಂದು ಬಹುಸಂಖ್ಯಾತರು ಘೋಷಣೆ ಮಾಡುವಂತಾಗಬೇಕು. ಆಗ ಸಾಮಾಜಿಕ ನ್ಯಾಯ ಎಲ್ಲ ಜನಾಂಗದವರಿಗೂ ದೊರಕಿಸಿಕೊಟ್ಟಂತಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...