Homeಮುಖಪುಟನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

ನೋಟು ರದ್ದತಿ : ಬಿಜೆಪಿಯ `ಕ್ಯಾಶ್ ಲೆಸ್’ ಸುಳ್ಳೂ ಇದೀಗ ಬಯಲಾಯ್ತು

- Advertisement -
- Advertisement -

ನೋಟು ರದ್ದತಿ ಮಾಡಲು ಹೊರಟಾಗ ಅದರಿಂದ ಕಪ್ಪುಹಣ ಹಿಡಿಯುತ್ತೇವೆಂದು ಹೇಳಿದ್ದರು. 3 ರಿಂದ 4 ಲಕ್ಷ ಕೋಟಿ ಕಪ್ಪುಹಣ ಬ್ಯಾಂಕ್‌ಗಳಿಗೆ ವಾಪಸ್ ಬರಲ್ಲ, ಅದೇ ದೊಡ್ಡ ಸಾಧನೆಯೆಂದು. ಶೇ.99.99ರಷ್ಟು ಹಣ ವಾಪಸ್ ಬಂದಿತು. ಏನೂ ಪ್ರಯೋಜನವಾಗಲಿಲ್ಲ. ಬದಲಿಗೆ ಸರ್ಕಾರವು ಹೊಸ ನೋಟು ಮುದ್ರಿಸಲು ಸಾವಿರಾರು ಕೋಟಿ ರೂ. ವೆಚ್ಚ ಮಾಡಬೇಕಾಯಿತು.

ಖೋಟಾ ನೋಟು ಹಿಡಿಯುತ್ತೇವೆಂದು ಹೇಳಿದ್ದರು. ಅದಕ್ಕಾಗಿ ಇಂತಹ ದೊಡ್ಡ ಸರ್ಕಸ್ ಬೇಕಿಲ್ಲವೆಂದು ತಜ್ಞರು ಹೇಳಿದ್ದರು. ಕೆಲವೇ ದಿನಗಳಲ್ಲಿ ಹೊಸ 2000 ರೂ. ಖೋಟಾ ನೋಟೂ ಪತ್ತೆಯಾಯಿತು.

ಭಯೋತ್ಪಾದನೆ ತಡೆಯುತ್ತೇವೆಂದಿದ್ದರು. ಈ ದೇಶದ ದುರಂತವೆಂದರೆ, ಯಾವ ಪಕ್ಷವೂ ಭಯೋತ್ಪಾದನೆ ನಿರ್ಮೂಲನೆಗೆ ಬೇಕಾದ ಸಮಗ್ರ ಕ್ರಮ ತೆಗೆದುಕೊಳ್ಳುತ್ತಿಲ್ಲ. ನೋಟು ರದ್ದತಿಯ ನಂತರ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾದವೆಂದು ಅಂಕಿ-ಅಂಶ ಹೇಳುತ್ತಿವೆ.

ಇರಲಿ, ಅವೆಲ್ಲಾ ವಿವರಗಳಿಗೆ ಇಲ್ಲಿ ಹೋಗಲ್ಲ.

ನೋಟು ರದ್ದತಿಯಿಂದಾಗುವ ಅನುಕೂಲವೆಂದು ಕಡೆಯಲ್ಲಿ ಹೇಳಿದ ಸುಳ್ಳು ಯಾವುದು ಗೊತ್ತೇ? ಡಿಸೆಂಬರ್ ಹೊತ್ತಿಗೆ ಮಿಕ್ಕವೆಲ್ಲಾ ಸುಳ್ಳು ಎಂದು ಬಯಲಾದ ನಂತರ ಹೊಸೆದ ಹೊಸ ಕಾರಣ ಅದು. ನವೆಂಬರ್ 8ರಂದು ಪ್ರಸ್ತಾಪಿಸಿಯೇ ಇರದಿದ್ದ ಕ್ಯಾಷ್‌ಲೆಸ್/ನಗದು ರಹಿತ ವಹಿವಾಟು ಹೆಚ್ಚಿಸುವುದು. ಹಾಗಾಗಿ ಇನ್ನು ಮುಂದೆ ನೋಟುಗಳ ಚಲಾವಣೆ ಬಹಳ ಕಡಿಮೆ ಇರುತ್ತದೆಂದು ಬಿಜೆಪಿ ಮತ್ತದರ ಪ್ರಚಾರಕರು ಹೇಳುತ್ತಾ ಹೋದರು.

ಇದೀಗ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಯಲ್ಲಿ ವಿವರವಾಗಿ ಬರೆದಿರುವಂತೆ, ವಾಸ್ತವದಲ್ಲಿ ನೋಟುಗಳ ಚಲಾವಣೆ ಹೆಚ್ಚಾಗಿದೆ. ಅಂದರೆ ಆರ್‌ಬಿಐ ನೋಟು ಮುದ್ರಣವನ್ನು ಹೆಚ್ಚಿಸಬೇಕಾಗಿ ಬಂದಿದೆ. 2016 ನವೆಂಬರ್ 4ರಂದು (ಅಂದರೆ ನೋಟು ರದ್ದತಿಗೆ ನಾಲ್ಕು ದಿನ ಮುಂಚೆ ಆರ್‌ಬಿಐ ಬಿಡುಗಡೆ ಮಾಡಿದಂತೆ) ದೇಶದಲ್ಲಿ 17.97 ಲಕ್ಷ ಕೋಟಿಗಳಷ್ಟು ನೋಟು ಚಲಾವಣೆ ಇತ್ತು. ಮಾರ್ಚ್ 15, 2015ರ ಹೊತ್ತಿಗೆ ಭಾರತದ ಆರ್ಥಿಕತೆಯಲ್ಲಿ 21.41 ಲಕ್ಷ ಕೋಟಿಗಳಷ್ಟು ನೋಟುಗಳ ಚಲಾವಣೆ ಆಗುತ್ತಿದೆ. ಇದು ಸ್ವತಃ ಆರ್‌ಬಿಐ ಬಿಡುಗಡೆ ಮಾಡಿದ ಅಂಕಿ-ಅಂಶ ಆಗಿದೆ. ಅಂದರೆ ಶೇ.19ರಷ್ಟು ಹೆಚ್ಚಳ!

ನೋಟು ರದ್ದತಿಯಾದ ತಕ್ಷಣ ಸುಳ್ಳು ಪ್ರಚಾರಕರು ಬ್ಲ್ಯಾಕ್ ಅಂಡ್ ವೈಟ್ ಕಾರ್ಯಕ್ರಮ ಮಾಡಲು ಹೊರಟಿದ್ದರು. ಅದು ಫೇಕ್ ಎಂದು ಸಾಬೀತಾದ ನಂತರ ಕ್ಯಾಷ್‌ಲೆಸ್ ದುನಿಯಾ ಅಂತಹ ಸುಳ್ಳು ಹರಡಲು ಹೊರಟರು. ಈಗ ಕ್ಯಾಷ್‌ಫುಲ್ ಆಗಿದೆ. ಸಾಮಾನ್ಯ ಜನರು ಮಾತ್ರ ಕ್ಯಾಷ್‌ಲೆಸ್ ಆಗಿದ್ದಾರೆ.

ನೋಟು ರದ್ದತಿಯಂತಹ ಒಂದು ಅಪಕ್ವವಾದ, ದುರುದ್ದೇಶಪೂರ್ವಕವಾದ ಕ್ರಮದಿಂದ ಆದ ನಷ್ಟ ಅಗಾಧವಾದದ್ದು. ಅದರಿಂದ ಒಂದೇ ಒಂದು ಲಾಭವೂ ಆಗಲಿಲ್ಲ; ಬದಲಿಗೆ ಜನರಲ್ಲಿ ಹುಟ್ಟಿಸಿದ ಹೆದರಿಕೆಯಿಂದ ಜನರು ಹೆಚ್ಚೆಚ್ಚು ಕ್ಯಾಷ್ ಇಟ್ಟುಕೊಳ್ಳಲು ಆರಂಭಿಸಿರುವುದಷ್ಟೇ ಇದಕ್ಕೆ ಕಾರಣವಲ್ಲ. ಕ್ಯಾಷ್‌ಲೆಸ್ ಮಾಡಲು ಬೇಕಾದ ನಿಧಾನಗತಿಯ ಪ್ರೋತ್ಸಾಹಕರ ಕ್ರಮಗಳ ಮೂಲಕ ಬದಲಾವಣೆ ತರದೇ, ಕೆಟ್ಟ ಆಪರೇಷನ್ ಮಾಡಿದರು. ಕ್ಯಾಷ್‌ಲೆಸ್ ಆಗಲು ಪ್ರೋತ್ಸಾಹ ಕೊಡುವ ಬದಲು, ಜನರು ಕ್ಯಾಷ್‌ಲೆಸ್ ವಹಿವಾಟು ಮಾಡಿದರೆ, ಕಮೀಷನ್ ಕಟ್ ಆಗಲು ಶುರುವಾಯಿತು.

ಹಾಗಾಗಿ ಸುಳ್ಳು ಪ್ರಚಾರಕರು ಭಾಷಣಗಳ ಮುಖಾಂತರ ಮತ್ತು ವಾಟ್ಸಾಪ್ ಫಾರ್ವರ್ಡ್‌ಗಳ ಮೂಲಕ ಜನರನ್ನು ದಿಕ್ಕುತಪ್ಪಿಸಲು ಹೊಸ ಹೊಸ ಸುಳ್ಳುಗಳನ್ನು ಹೆಣೆಯಯುತ್ತಾ ಸಾಗಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿಗೆ ನೋಡಿ:

https://indianexpress.com/article/business/economy/cash-in-circulation-jumps-19-1-from-pre-demonetisation-level-5637325/

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...