Homeಅಂಕಣಗಳುನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ....

ನ್ಯಾಯದ ಕೈಯಿಯೇ ಅನ್ಯಾಯವ ಎಸಗಿದಾಗ….

- Advertisement -
- Advertisement -

ಜನಸಾಮಾನ್ಯರು ನ್ಯಾಯಕ್ಕಾಗಿ ನ್ಯಾಯಾಧೀಶರ ಮೊರೆ ಹೋಗುವುದು ಸಹಜ. ಆದರೆ ನ್ಯಾಯಾಧೀಶರೇ ಅಪರಾಧಿ ಸ್ಥಾನದಲ್ಲಿ ನಿಂತರೆ…? ಬಿಹಾರದ ಖಗಾರಿಯಾ ಜಿಲ್ಲಾ ಸತ್ರ ನ್ಯಾಯಾಧೀಶ ಸುಭಾಷ್ ಚಂದ್ರ ಚೌರಾಸಿಯಾ ಅಂಥದೊಂದು ಘನಕಾರ್ಯದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾನೂನು ಪದವೀಧರೆಯಾಗಿರುವ ತನ್ನ 24 ವರ್ಷದ ಮಗಳು ಯಶಸ್ವಿನಿಯನ್ನು ಗೃಹಬಂಧನದಲ್ಲಿರಿಸಿ, ಹಿಂಸಿಸುವ ಮೂಲಕ. ಆ ಮಗಳು ಮಾಡಿದ ಅಪರಾಧವಾದರೂ ಏನು? ತನ್ನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿದವÀನನ್ನು ಮದುವೆಯಾಗಲು ಹೊರಟಿದ್ದು. ಆಕೆ ಸ್ವತಃ ನ್ಯಾಯಾಧೀಶಳಾಗಲು ಬಯಸಿ ಸಂಬಂಧಿತ ಪರೀಕ್ಷೆ ಕೂಡ ಬರೆದಿದ್ದಳು. ಆಕೆ ಪ್ರೇಮಿಸಿದ್ದು ಸುಪ್ರಿಂ ಕೋರ್ಟಿನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಸಿದ್ಧಾರ್ಥ್ ಬನ್ಸಲ್ ಎಂಬ ದೆಹಲಿಯ ಯುವ ವಕೀಲನನ್ನು.
ಈ ಮಹಾನುಭಾವ ನ್ಯಾಯಾಧೀಶ ತನ್ನ ಮಗಳು ಐಎಎಸ್ ಅಧಿಕಾರಿ ಅಥವ ನ್ಯಾಯಾಧೀಶ ಹುದ್ದೆಯಲ್ಲಿರುವ ವ್ಯಕ್ತಿಯನ್ನಷ್ಟೇ ಮದುವೆಯಾಗಬೇಕೆಂದು ಹಟ ಹಿಡಿದು ಈ ಘನ ಕಾರ್ಯ ಮಾಡಿದ್ದಾರಂತೆ. ಈ ನ್ಯಾಯಾಧೀಶರ ಮನವೊಲಿಸಲು ಪ್ರಯತ್ನಿಸಿ ವಿಫಲನಾದ ಆ ಪ್ರಿಯಕರ ಬೇರೆ ವಿಧಿಯಿಲ್ಲದೆ ಪಟ್ನಾ ಉಚ್ಚ ನ್ಯಾಯಾಲಯದ ಮೊರೆ ಹೋದ. ಮನವಿಯನ್ನು ಪುರಸ್ಕರಿಸಿದ ಕೋರ್ಟ್ ಯಶಸ್ವಿನಿಯನ್ನು ಕರೆತಂದು ತನ್ನ ಮುಂದೆ ನಿಲ್ಲಿಸುವಂತೆ ಆದೇಶ ಹೊರಡಿಸಿದೆ. ಪರಿಣಾಮವಾಗಿ ಎಸ್ಪಿ ನೇತೃತ್ವದಲ್ಲಿ ಒಂದು ಟೀಂ ರಚಿಸಿ ಯಶಸ್ವಿನಿಯನ್ನು ಸುರಕ್ಷಿತವಾಗಿ ಕರೆ ತರುವಂತೆ ನಿರ್ದೇಶನ ನೀಡಿದೆ.
ನ್ಯಾಯಾಧೀಶರೊಬ್ಬರು ತಮ್ಮ ಮಗಳನ್ನು ಗೃಹ ಬಂಧನದಲ್ಲಿಟ್ಟಿದ್ದು ಇದೇ ಮೊದಲೇನಲ್ಲ. 2013 ರಲ್ಲಿ ರಾಜಸ್ಥಾನದ ರಾಠೋಡ್ ಎಂಬ ಜಿಲ್ಲಾ ನ್ಯಾಯಾಧೀಶರೊಬ್ಬರು ಇದನ್ನೇ ಮಾಡಿದ್ದರು. ಆದರೂ ಇಂತಹ ಘಟನೆಗಳು ಮುಂದುವರಿಯುತ್ತಲೇ ಇರುವುದಕ್ಕೆ ಇಂಥವರ ಮೇಲೆ ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಇರುವುದೇ ಕಾರಣ.
ಇಲ್ಲಿ ಎರಡು ಪ್ರಮುಖ ಅಂಶಗಳನ್ನು ನಾವು ಗಮನಿಸಬೇಕು. ಒಬ್ಬ ತಂದೆಯಾಗಿ ಈ ನ್ಯಾಯಾಧೀಶ ಅದೇ ಪಿತೃಪ್ರಧಾನ ಕಟ್ಟುಪಾಡುಗಳಿಗೆ ಅಡಿಯಾಳಾಗಿರುವುದು ಒಂದು ಅಂಶವಾದರೆ, ಇಂತಹ ಮೌಲ್ಯಗಳನ್ನು ಹೊಂದಿರುವ ಇವರು ನ್ಯಾಯ ಪ್ರದಾನ ಮಾಡುವ ತಮ್ಮ ಕಾರ್ಯದಲ್ಲಿ ಎಷ್ಟರ ಮಟ್ಟಿಗೆ ಸಂವಿಧಾನ ಮತ್ತು ಕಾನೂನುಗಳಿಗೆ ನಿಷ್ಠರಾಗಿರುತ್ತಾರೆ ಎಂಬುದು ಇನ್ನೊಂದು ಅಂಶ. ಈ ಎರಡನೇ ಅಂಶ ಹೆಚ್ಚು ಅಪಾಯಕಾರಿ. ಏಕೆಂದರೆ ತನ್ನ ಎದುರು ಬರುವ ವ್ಯಾಜ್ಯಗಳನ್ನು ತೀರ್ಮಾನಿಸುವಾಗ ಪ್ರತಿಯೊಬ್ಬ ನ್ಯಾಯಾಧೀಶ ತನ್ನ ವೈಯಕ್ತಿಕ ಜ್ಞಾನ ಹಾಗೂ ಅನುಭವವಗಳ ಆಧಾರದಲ್ಲೇ ತೀರ್ಪು ಕೊಡುತ್ತಾರೆ. ಜಾತಿ ಹಾಗೂ ಅಂತಸ್ತುಗಳ ವ್ಯಸನದಲ್ಲಿರುವ ಇಂತಹ ಕುಂಠಿತ ಮನಸ್ಸಿನ ನ್ಯಾಯಾಧೀಶರಿಂದ ಮೊದಲೇ ಹದಗೆಟ್ಟಿರುವ ದೇಶದ ನ್ಯಾಯ ವ್ಯವಸ್ಥೆ ಇನ್ನೂ ಹೆಚ್ಚಿನ ಅಪಾಯವನ್ನು ಎದುರಿಸುವ ಸಾದ್ಯತೆಗಳಿವೆ.
ಕಾನೂನು ಪದವೀಧರೆಯಾದ ಮಗಳನ್ನೇ ಗೃಹ ಬಂಧನದಲ್ಲಿರಿಸುವ ಈ ವ್ಯಕ್ತಿ, ತಾನು ನ್ಯಾಯಾಧೀಶನಾಗಿರುವುದರಿಂದ ಏನು ಬೇಕಾದರೂ ಮಾಡಬಹುದು ಎಂಬ ದಾಷ್ಟ್ರ್ಯ ಪ್ರದರ್ಶಿಸಿದ್ದಾರೆ. ಇಂಥವರಿಂದ ‘ನ್ಯಾಯ ಪಡೆದ’ ಸಹಸ್ರಾರು ಬಡಪಾಯಿಗಳ ಪರಿಸ್ಥಿತಿಯನ್ನು ಯಾರಾದರೂ ಊಹಿಸಬಹುದು. ಇಲ್ಲಿ ಇನ್ನೂ ದಾರುಣವಾದ ಸಂಗತಿಯೆಂದರೆ, ಪ್ರಿಯಕರ ಸಿದ್ಧಾರ್ಥ್ ಬನ್ಸಲ್ ತನ್ನ ದೂರನ್ನು ಹೇಳಿಕೊಂಡು ಮಹಿಳಾ ಆಯೋಗದಿಂದ ಹಿಡಿದು ಪೊಲೀಸ್ ಠಾಣೆಗಳು ಹಾಗೂ ಓಉಔಗಳ ಬಳಿ ಅಲೆದಾಡಿದರೂ ಪರಿಹಾರ ಸಿಗುವುದಿರಲಿ, ನ್ಯಾಯದ ಭರವಸೆಯೂ ಸಿಗಲಿಲ್ಲವೆಂಬುದು. ಒಬ್ಬ ಸುಶಿಕ್ಷಿತ, ಸುಪ್ರಿಂಕೋರ್ಟ್ ವಕೀಲನ ಪಾಡೇ ಹೀಗಾದರೆ ಈ ನಮ್ಮ ದೇಶದ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಜನಸಾಮಾನ್ಯರ ಗತಿಯೇನು ಎಂಬುದಕ್ಕೆ ಈ ಪ್ರಕರಣ ಕನ್ನಡಿ ಹಿಡಿದಿದೆ. ಇಂತಹ ಅದೆಷ್ಟು ಪ್ರಕರಣಗಳು ಬೆಳಕಿಗೆ ಬಾರದೆ ಕತ್ತಲೆಯಲ್ಲಿ ಮುಚ್ಚಿ ಹೋಗುತ್ತವೆಯೋ ಗೊತ್ತಿಲ್ಲ. ಸಮಾನತೆ ಎಂಬುದು ಮಹಿಳೆಯರ ಪಾಲಿಗೆ ಕೇವಲ ಮರೀಚಿಕೆಯೇ?

– ರಾಜಲಕ್ಷ್ಮಿ ಅಂಕಲಗಿ
ಹೈಕೋರ್ಟ್ ವಕೀಲರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...