HomeUncategorizedಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

ಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ.ರಂಜಿತ್ ಮೇಲಿನ ಮೇಲ್ಜಾತಿ ಮನಸ್ಸಿನ ದಾಳಿ ಮತ್ತು ಬೆದರಿಕೆಗಳನ್ನು ವಿರೋಧಿಸಿ, ಆನ್ ಲೈನ್ ಪಿಟಿಷನ್ ಆರಂಭಿಸಿ 300ಕ್ಕೂ ಹೆಚ್ಚು ಕಲಾವಿದರು ಖ್ಯಾತ ಜನಪ್ರಿಯ ತಮಿಳು ಚಿತ್ರನಿರ್ದೇಶಕ ಪ.ರಂಜಿತ್ ದೃಢವಾಗಿ ಬೆಂಬಲಕ್ಕೆ ನಿಂತಿದ್ದಾರೆ.

ಅಪರೂಪದ ಚಿತ್ರನಿರ್ದೇಶಕ ಪಾ.ರಂಜಿತ್‍ನ ಇತ್ತೀಚಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಚೋಳರ ಕಾಲದ ರಾಜರಾಜ ಚೋಳನ ಆಳ್ವಿಕೆಯಲ್ಲಿ ದಲಿತರ ಮೇಲೆ ದಬ್ಬಾಳಿಕೆ, ದಲಿತರ ಭೂ ಕಬಳಿಕೆ ಮತ್ತು ದಲಿತ ಹೆಣ್ಣುಮಕ್ಕಳನ್ನು ದೇವದಾಸಿ ಮಾಡುವಂತಹ ಘಟನೆಗಳು ನಡೆದಿವೆ… ಇವುಗಳನ್ನೆಲ್ಲ ಸಿನೆಮಾ ಮಾಡಿ ತೋರಿಸಬೇಕು” ಎಂದಿದ್ದರು. ಇದಕ್ಕೆ ಬಾಲಾ ಎನ್ನುವವವರು ಪೋಲಿಸ್ ಸ್ಟೇಶನ್‍ನಲ್ಲಿ “ರಂಜಿತ್ ಅವರು ಮಾಡುತ್ತಿರುವ ಸಿನಿಮಾ, ಸಮಾಜದಲ್ಲಿ ಜಾತಿ ಜಾತಿಗಳ ಮಧ್ಯ ವೈಷಮ್ಯವನ್ನು ಬೆಳೆಸುತ್ತದೆ” ಎನ್ನುವ ಕಾರಣ ಕೊಟ್ಟು ದೂರನ್ನೂ ದಾಖಲಿಸಿದ್ದರು.

ಈ ವಿಷಯದ ಕುರಿತು ಅರ್ಥಪೂರ್ಣ ಮತ್ತು ರಚನಾತ್ಮಕ ಚರ್ಚೆ ಸಂವಾದ ಮಾಡಲು ಸಾಧ್ಯವಿದೆ ಎಂದು collective Coalition for Artist’s Right to Speech ನ ಹೇಳಿಕೆಯಲ್ಲಿ ತಿಳಿಸಿರುವ ಕಲಾವಿದರು, ಆದರೆ ದುರಾದೃಷ್ಟವಶಾತ್ ಇದಕ್ಕೆ ವಿರುದ್ಧವಾಗಿ ಪ.ರಂಜಿತ್ ಅಭಿಪ್ರಾಯದ ಮೇಲೆ ದಾಳಿ ನಡೆಯುತ್ತಿದೆ. ಅಷ್ಟೇ ಅಲ್ಲದೇ ಕೆಲವು ಜಾತಿವಾದಿ ಮನಸ್ಥಿತಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಪ.ರಂಜಿತ್ ವಿರುದ್ಧ ಮಾತಾಡಿ ಅವರ ಮೊಬೈಲ್ ನಂಬರ್ ಅನ್ನು ಹಂಚುವ ಮೂಲಕ ಜೀವ ಬೆದರಿಕೆ ಹಾಕಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕಲಾವಿದರ ಒಕ್ಕೂಟ ಆರೋಪ ಮಾಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಚಿಂತನೆಯ ಬಗ್ಗೆ ನಂಬಿಕೆ ಇರುವುದರಿಂದ, ಸಂಬಂಧಪಟ್ಟ ಕಲಾವಿದನಿಗೆ ಅವರ ವಾಕ್ ಸ್ವಾತಂತ್ರ್ಯದ ಹಕ್ಕು ಅಪಾಯದಲ್ಲಿದ್ದಾಗ ಅವರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ನಾವು ನಂಬುತ್ತೇವೆ” ಎಂದು ಹೇಳಿಕೆ ತಿಳಿಸಿದೆ.

ರಂಜಿತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದನ್ನು ತಡೆಯುವ ಸಲುವಾಗಿ ಈ ಗುಂಪು ಆನ್‍ಲೈನ್ ಅರ್ಜಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ತಿಳಿಸಿದೆ. ಅರ್ಜಿಯಲ್ಲಿ ಮಂಗಳವಾರ ರಾತ್ರಿಯ ವೇಳೆಗೆ 6,300 ಕ್ಕೂ ಹೆಚ್ಚು ಸಹಿಗಳಿವೆ. ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...