HomeUncategorizedಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

ಪ.ರಂಜಿತ್ ಬೆಂಬಲಕ್ಕೆ ನಿಂತ 300ಕ್ಕೂ ಹೆಚ್ಚು ಕಲಾವಿದರು. ಆನ್ ಲೈನ್ ಪಿಟಿಷನ್ ಆರಂಭ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ.ರಂಜಿತ್ ಮೇಲಿನ ಮೇಲ್ಜಾತಿ ಮನಸ್ಸಿನ ದಾಳಿ ಮತ್ತು ಬೆದರಿಕೆಗಳನ್ನು ವಿರೋಧಿಸಿ, ಆನ್ ಲೈನ್ ಪಿಟಿಷನ್ ಆರಂಭಿಸಿ 300ಕ್ಕೂ ಹೆಚ್ಚು ಕಲಾವಿದರು ಖ್ಯಾತ ಜನಪ್ರಿಯ ತಮಿಳು ಚಿತ್ರನಿರ್ದೇಶಕ ಪ.ರಂಜಿತ್ ದೃಢವಾಗಿ ಬೆಂಬಲಕ್ಕೆ ನಿಂತಿದ್ದಾರೆ.

ಅಪರೂಪದ ಚಿತ್ರನಿರ್ದೇಶಕ ಪಾ.ರಂಜಿತ್‍ನ ಇತ್ತೀಚಿನ ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಾ “ಚೋಳರ ಕಾಲದ ರಾಜರಾಜ ಚೋಳನ ಆಳ್ವಿಕೆಯಲ್ಲಿ ದಲಿತರ ಮೇಲೆ ದಬ್ಬಾಳಿಕೆ, ದಲಿತರ ಭೂ ಕಬಳಿಕೆ ಮತ್ತು ದಲಿತ ಹೆಣ್ಣುಮಕ್ಕಳನ್ನು ದೇವದಾಸಿ ಮಾಡುವಂತಹ ಘಟನೆಗಳು ನಡೆದಿವೆ… ಇವುಗಳನ್ನೆಲ್ಲ ಸಿನೆಮಾ ಮಾಡಿ ತೋರಿಸಬೇಕು” ಎಂದಿದ್ದರು. ಇದಕ್ಕೆ ಬಾಲಾ ಎನ್ನುವವವರು ಪೋಲಿಸ್ ಸ್ಟೇಶನ್‍ನಲ್ಲಿ “ರಂಜಿತ್ ಅವರು ಮಾಡುತ್ತಿರುವ ಸಿನಿಮಾ, ಸಮಾಜದಲ್ಲಿ ಜಾತಿ ಜಾತಿಗಳ ಮಧ್ಯ ವೈಷಮ್ಯವನ್ನು ಬೆಳೆಸುತ್ತದೆ” ಎನ್ನುವ ಕಾರಣ ಕೊಟ್ಟು ದೂರನ್ನೂ ದಾಖಲಿಸಿದ್ದರು.

ಈ ವಿಷಯದ ಕುರಿತು ಅರ್ಥಪೂರ್ಣ ಮತ್ತು ರಚನಾತ್ಮಕ ಚರ್ಚೆ ಸಂವಾದ ಮಾಡಲು ಸಾಧ್ಯವಿದೆ ಎಂದು collective Coalition for Artist’s Right to Speech ನ ಹೇಳಿಕೆಯಲ್ಲಿ ತಿಳಿಸಿರುವ ಕಲಾವಿದರು, ಆದರೆ ದುರಾದೃಷ್ಟವಶಾತ್ ಇದಕ್ಕೆ ವಿರುದ್ಧವಾಗಿ ಪ.ರಂಜಿತ್ ಅಭಿಪ್ರಾಯದ ಮೇಲೆ ದಾಳಿ ನಡೆಯುತ್ತಿದೆ. ಅಷ್ಟೇ ಅಲ್ಲದೇ ಕೆಲವು ಜಾತಿವಾದಿ ಮನಸ್ಥಿತಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಪ.ರಂಜಿತ್ ವಿರುದ್ಧ ಮಾತಾಡಿ ಅವರ ಮೊಬೈಲ್ ನಂಬರ್ ಅನ್ನು ಹಂಚುವ ಮೂಲಕ ಜೀವ ಬೆದರಿಕೆ ಹಾಕಲು ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕಲಾವಿದರ ಒಕ್ಕೂಟ ಆರೋಪ ಮಾಡಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಚಿಂತನೆಯ ಬಗ್ಗೆ ನಂಬಿಕೆ ಇರುವುದರಿಂದ, ಸಂಬಂಧಪಟ್ಟ ಕಲಾವಿದನಿಗೆ ಅವರ ವಾಕ್ ಸ್ವಾತಂತ್ರ್ಯದ ಹಕ್ಕು ಅಪಾಯದಲ್ಲಿದ್ದಾಗ ಅವರೊಂದಿಗೆ ನಿಲ್ಲುವುದು ನಮ್ಮ ಕರ್ತವ್ಯ ಎಂದು ನಾವು ನಂಬುತ್ತೇವೆ” ಎಂದು ಹೇಳಿಕೆ ತಿಳಿಸಿದೆ.

ರಂಜಿತ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದನ್ನು ತಡೆಯುವ ಸಲುವಾಗಿ ಈ ಗುಂಪು ಆನ್‍ಲೈನ್ ಅರ್ಜಿಯನ್ನು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ತಿಳಿಸಿದೆ. ಅರ್ಜಿಯಲ್ಲಿ ಮಂಗಳವಾರ ರಾತ್ರಿಯ ವೇಳೆಗೆ 6,300 ಕ್ಕೂ ಹೆಚ್ಚು ಸಹಿಗಳಿವೆ. ನೀವೂ ಸಹಿ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...