Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...