Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...