Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

ಪಂಗನಾಮ ಹಾಕೋರಿಗೆ ಬ್ಯಾಂಕು ಸಾಲ

- Advertisement -
- Advertisement -

ತಪ್ಪುದಾರಿಯಲ್ಲಿ ಸರ್ಕಾರಿ ಬ್ಯಾಂಕುಗಳಿಂದ ಪಡೆದ ಸಾಲಗಳನ್ನು ಉದ್ದೇಶ ಪೂರ್ವಕವಾಗಿ ತೀರಿಸದೆ ಛದ್ಮವೇಷಧಾರಿ ಕೈಗಾರಿಕೋದ್ಯಮಿಗಳು ಇಂದು ಬ್ಯಾಂಕಿಗ್ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಈ ವ್ಯವಹಾರದಲ್ಲಿ ಹೇರಳ ಭ್ರಷ್ಟಾಚಾರ ನಡೆಯುತ್ತಿದೆ.
2018ರ ಮಾರ್ಚ್ 25ರ ಲೆಕ್ಕದಂತೆ ಭಾರತೀಯ ಬ್ಯಾಂಕುಗಳಲ್ಲಿ ಸಾರ್ವಜನಿಕರು ತೊಡಗಿಸಿದ್ದ ಮೊತ್ತ 110 ಲಕ್ಷ ಕೋಟಿ. ಈ ಹಣದಲ್ಲಿ 80ಲಕ್ಷÀ ಕೋಟಿ ರೂಪಾಯಿಗಳು 21 ಸರ್ಕಾರಿ ಬ್ಯಾಂಕುಗಳಲ್ಲೇ ಇತ್ತು. ಬ್ಯಾಂಕುಗಳು ಸಾರ್ವಜನಿಕರ ಈ ಹಣವನ್ನು ಹೇಗೆ ನಿರ್ವಹಿಸಿದವು ಎಂಬುದನ್ನು ನೋಡೋಣ. 2017-18ರ ಸಾಲಿನಲ್ಲಿ ಈ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 19 ಬ್ಯಾಂಕುಗಳು ನಷ್ಟದಲ್ಲಿರುವುದಾಗಿ ಸರ್ಕಾರ ಘೋಷಣೆ ಮಾಡಿತು. ನಷ್ಟದ ಮೊತ್ತ ಎಷ್ಟು ಗೊತ್ತೇ? ಬರೋಬ್ಬರಿ 87,351 ಕೋಟಿಗಳು. ಪರಿಣಾಮವಾಗಿ ಈ ವರ್ಷ ಕೇಂದ್ರ ಸರ್ಕಾರ ಪ್ರಧಾನಿಯವರ ಯೋಜನೆಗಳಾದ ನೀರಾವರಿ, ಗ್ರಾಮೀಣ ರಸ್ತೆ, ಕುಡಿಯುವ ನೀರಿನ ಯೋಜನೆ, ಸ್ವಚ್ಛಭಾರತ ಆಂದೋಲನ, ಶಿಕ್ಷಣಗಳಿಗೆ ತೆಗೆದಿಟ್ಟಿರುವ ಹಣವನ್ನು ಈ 19 ರಾಷ್ಟ್ರೀಕೃತ ಬ್ಯಾಂಕುಗಳು ಸಾಲವಾಗಿ ಪಂಗನಾಮ ಹಾಕುವವರಿಗೆ ನೀಡಿವೆ. ಈ 19 ಬ್ಯಾಂಕುಗಳಲ್ಲಿ 9 ಬ್ಯಾಂಕುಗಳು ನೀಡಿರುವ ಒಟ್ಟು ಸಾಲದಲ್ಲಿ ಶೇ.15ರಷ್ಟು ಸಾಲ ಸುಸ್ತಿಯಲ್ಲಿದೆ; ಈ ಸಾಲಗಳು ವಸೂಲಾಗುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿವೆ. ಇನ್ನೂ 6 ಬ್ಯಾಂಕುಗಳು ಇನ್ನಷ್ಟು ಹಣ ವಸೂಲಾಗದ ಸಾಲಗಳ ಪಟ್ಟಿಯನ್ನು ಘೋಷಿಸುವುದರಲ್ಲಿವೆ.
ಒಟ್ಟಿನಲ್ಲಿ 21 ರಾಷ್ಟ್ರೀಕೃತ ಬ್ಯಾಂಕುಗಳ ಪೈಕಿ 17 ಬ್ಯಾಂಕುಗಳಲ್ಲಿ ವಸೂಲಾಗದ ಸಾಲ ಏರಿಕೆಯಾಗಿದೆ. ಈ ವಸೂಲಾಗದ ಸಾಲಗಳ ಪಿಡುಗು 2007ರಲ್ಲೇ ಶುರುವಾಗಿತ್ತು. ವಿಶ್ವ ಆರ್ಥಿಕ ಮುಗ್ಗಟ್ಟು, ಕಲ್ಲಿದ್ದಲು ಹಗರಣ, 2ಜಿ ಹಗರಣ ಕೂಡ ಅದೇ ಸಮಯದಲ್ಲೇ ನಡೆದರೂ ಕೂಡ ಬ್ಯಾಂಕುಗಳು ಅಲ್ಲಿಯವರೆಗೆ ತಮ್ಮ ಬಂಡವಾಳವನ್ನು ಖoಟಟouಣ ಮಾಡುತ್ತಿದ್ದವು. 2007ರಿಂದ ನುಂಗಣ್ಣಗಳ ಪಾಲಾಗುತ್ತಾ ಬಂದ ರಾಷ್ಟ್ರೀಕೃತ ಬ್ಯಾಂಕುಗಳ ಬಂಡವಾಳ 2018ರಲ್ಲಿ 9 ಲಕ್ಷ ಕೋಟಿಗಳಿಗೇರಿದೆ.
2017-18ರಲ್ಲಿ ಕಂಪೆನಿಗಳಿಂದ, ವ್ಯಕ್ತಿಗಳಿಂದ ಸಂಗ್ರಹವಾದ ಆದಾಯ ತೆರಿಗೆಗಿಂತಲೂ ಈ ನುಂಗಣ್ಣರ ಪಾಲಾದ ಮೊತ್ತ ಅಧಿಕವಾಗಿತ್ತು. ಬ್ಯಾಂಕಿನಲ್ಲಿ ತೊಡಗಿಸುವ ಠೇವಣಿ ಹಣಕ್ಕೆ ವಿಮೆ ಸೌಲಭ್ಯ ಇತ್ತು. ಅದರ ಪರಿಮಿತಿ ಒಂದುಲಕ್ಷ ಠೇವಣಿಗೆ ಮಾತ್ರ. ಒಂದುಲಕ್ಷ ಮೀರಿದ ಠೇವಣಿಗೆ ಭದ್ರತೆ ಇದೆಯೇ? ಬ್ಯಾಂಕುಗಳು ಈ ಹೊಣೆ ಹೊರುತ್ತವೆಯೇ?
ಆದರೆ ಲಕ್ಷಕ್ಕಿಂತ ಕಡಿಮೆ ಠೇವಣಿಯ ಮೊತ್ತ 30-50 ಲಕ್ಷಕೋಟಿ. ಅಂದರೆ ಉಳಿದ 70% ಇಡುಗಂಟನ್ನಿಟ್ಟವರಿಗೆ ಯಾವ ಭದ್ರತೆಯೂ ಇಲ್ಲ. ಇವರಿಟ್ಟಿರುವ ಠೇವಣಿ 72 ಲಕ್ಷಕೋಟಿ. ಜನರು ತಾವು ಕಷ್ಟಪಟ್ಟು ಗಳಿಸಿದ ಹಣವನ್ನು ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡಿ, ಬ್ಯಾಂಕುಗಳಲ್ಲಿ ಠೇವಣಿ ಇಟ್ಟಿರುವುದು ಮಕ್ಕಳ ಶಿಕ್ಷಣ, ಮದುವೆ, ಮನೆಕೊಳ್ಳುವುದು, ನಿವೃತ್ತ ಜೀವನ ಮುಂತಾದ ಕಾರಣಕ್ಕಾಗಿ. ಇವರ ಹಣದ ರಕ್ಷಣೆಗಾಗಿ ಕೇಂದ್ರ ಸರ್ಕಾರ ಮುಂದೆ ಬರಬೇಕು.ಈ 70% ಜನರ ಹಣದ ಭದ್ರತೆಗಾಗಿ ಸರ್ಕಾರ ಜ್ಞಾನಸಂಗಮ, ಇಂದ್ರಧನುಷ್, ಬ್ಯಾಂಕ್‍ಬೋರ್ಡ್ ಬ್ಯೂರೋ ಮುಂತಾದ ಯೋಜನೆಗಳನ್ನು ಅಸ್ತಿತ್ವಕ್ಕೆ ತಂದಿತ್ತು. ಅವುಗಳೆಲ್ಲವೂ ಈಗ ವಿಫಲಗೊಂಡಿವೆ. ಪಾಪರ್ ಚೀಟಿ ಕಾನೂನನ್ನು ಜಾರಿಗೊಳಿಸಲು ಸರ್ಕಾರ ಯೋಚನೆ ಮಾಡುತ್ತಿದೆ. ಇದು ಒಂದು ಸ್ವಾಗತಾರ್ಹ ವಿಚಾರ. ಒಂದು ವರ್ಷ ಕಳೆದ ಮೇಲೆ ಸರ್ಕಾರ ಸಾಲಕೊಟ್ಟು ಹಣ ಕಳೆದುಕೊಂಡಿರುವ 12 ಬ್ಯಾಂಕುಗಳ ಪೈಕಿ 2 ಮಾತ್ರ litigation ನಿಂದ ಪಾರಾಗಿವೆ. ಈಗಾಗಲೇ 2511 ಪಾಪರ್ ಚೀಟಿ ಕೇಸುಗಳು ದಾಖಲಾಗಿದ್ದು ಅವು ಇನ್ನಷ್ಟು ಹೆಚ್ಚಾಗಲಿವೆ. ಈ ವೇಗದಲ್ಲೇ ಕೇಸುಗಳು ದಾಖಲಾಗುವುದಾದರೆ ಬ್ಯಾಂಕುಗಳು ಸಾಲವಸೂಲಿಗೆ ಸುದೀರ್ಘ ಕಾಲ ಕಾಯಬೇಕಾಗಬಹುದು.
ಈಗ ಕೆಲವು ದಿನಗಳ ಹಿಂದೆ ಹಂಗಾಮಿ ಹಣಕಾಸು ಮಂತ್ರಿ ಪೀಯೂಷ್ ಗೋಯಲ್ ಸಾಲವಸೂಲಿಯನ್ನೂ ಸುಗಮಗೊಳಿಸಲು ಬ್ಯಾಂಕುಗಳ meಡಿgeಡಿ ಮಾಡಲಾಗುವುದೆಂದೂ ಕರಡು ಸಾಲದ ಬ್ಯಾಂಕೊಂದನ್ನು ಆರಂಭಿಸಬೇಕೆಂದೂ ವಿಚಾರ ಮಾಡಿ, ಸಮಿತಿಯೊಂದನ್ನು ರಚಿಸಿದ್ದಾರೆ. ಆದರೆ ಸಮಿತಿಗಳನ್ನು ಮಾಡುವ, ವರದಿ ತರಿಸಿಕೊಳ್ಳುವ ಸಮಯ ಈಗ ಮೀರಿಹೋಗಿದೆ. ರಾಷ್ಟ್ರೀಕೃತ ಬ್ಯಾಂಕುಗಳಿಗೆ ಹಣ ತುಂಬಿ ಅವುಗಳ ನಿರ್ವಹಣೆಗೆ ಹೊಸ ರೂಪ ಕೊಡಬೇಕು. ಬ್ಯಾಂಕುಗಳು ಸರ್ಕಾರದ ನೇರ ಹಿಡಿತಕ್ಕೆ ಬರಬಾರದು. ಬ್ಯಾಂಕುಗಳ ಮೇಲ್ವಿಚಾರಣೆಗೆ ಒಂದು ಸ್ವತಂತ್ರ ಆಡಳಿತ ಸಂಸ್ಥೆ ಅಸ್ತಿತ್ವಕ್ಕೆ ಬರಬೇಕು.

 

  • – ಹೆಚ್.ಎಸ್.ದೊರೆಸ್ವಾಮಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...