Homeರಾಜಕೀಯಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

ಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

- Advertisement -
- Advertisement -

ಮಲ್ಲಿ |

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಸುಳ್ ಸುದ್ದಿಗಳನ್ನು ಯಥೇಚ್ಛವಾಗಿ ಹರಡುತ್ತಿರುವುದು ಪೋಸ್ಟ್‍ಕಾರ್ಡ್ ಪೋರ್ಟಲ್. ಕುಳಿತರೆ ಸುಳ್ಳು, ನಿಂತರೆ ಸುಳ್ಳು, ಉಸಿರಾಡಿದರೆ ಸುಳ್ಳು, ಹೂಸಿದರೆ ಸುಳ್ಳು-ಇದು ಪೋಸ್ಟ್‍ಕಾರ್ಡ್ ಸಂಸ್ಥಾಪಕ ಚೆಡ್ಡಿ ಮಹೇಶ ಹೆಗಡೆಯ ಧ್ಯೇಯವಾಕ್ಯ. ಆತ ಪದವಿ ಓದಿದವರನ್ನೂ ಯಾಮಾರಿಸುವಂತೆ ಸುಳ್ ಸುದ್ದಿ ಹರಡುತ್ತಾನೆ. ಈಗಷ್ಟೇ ಕೇಂದ್ರ ಸರ್ಕಾರ ‘ಕಾಂಗ್ರೆಸ್’ನ ಪ್ರಣಬ್ ಮುಖರ್ಜಿಗೆ ಭಾರತರತ್ನ ನೀಡಿದೆ. ಅದಿರಲಿ, ಈಗ ನಾವು ಪ್ರಸ್ತಾಪಿಸುತ್ತಿರುವ ವಿಷಯ ಎಂದರೆ, ಪ್ರಣಬ್ ಮುಖರ್ಜಿ ಸೋನಿಯಾ ಗಾಂಧಿ ವಿರುದ್ಧ ತಮ್ಮ ನಾಲ್ಕನೇ ಪುಸ್ತಕದಲ್ಲಿ ಕಿಡಿ ಕಾರಿದ್ದಾರೆ ಎಂದು ಪೋಸ್ಟ್‍ಕಾರ್ಡ್ ಹೇಳುತ್ತ ಬಂದ ಸುಳ್ ಸುದ್ದಿಯ ಕುರಿತು. ಐದು ತಿಂಗಳ ಹಿಂದೆಯೇ ಈ ಕೆಲಸವನ್ನು ಅದು ಶುರು ಮಾಡಿತ್ತು.
ಇನ್ನೂ ಪುಸ್ತಕವೇ ಪ್ರಕಟವಾಗಿಲ್ಲ. ಅದರ ಒಂದು ಸಣ್ಣ ಭಾಗವನ್ನು ಸುಳ್ಳನ್ನೇ ಉಸಿರಾಡುವ ಪೋಸ್ಟ್‍ಕಾರ್ಡ್ ಡಾಟ್ ನ್ಯೂಸ್ ಪ್ರಕಟಿಸಿತ್ತು ಮತ್ತು ಅದು ಆಗಾಗ ವೈರಲ್ ಆಗುತ್ತಲೇ ಇದೆ, ಚುನಾವಣೆ ಬಂತಲ್ಲ, ಮತ್ತಷ್ಟು ಜೋರಾಗಿಯೇ ಹರಡಲಿದೆ.
ಮಿಥ್ಯ: ಪೋಸ್ಟ್‍ಕಾರ್ಡ್ ಪ್ರಕಾರ, ಮಾಜಿ ರಾಷ್ಟ್ರÀಪತಿ ಪ್ರಣಬ್ ಮುಖರ್ಜಿ ಅವರ ಪುಸ್ತಕದಿಂದ ಆಯ್ದ ಭಾಗ ಹೀಗಿದೆ:
“ನರೆಂದ್ರ ಮೋದಿಯವರ ಒಂದನೇ ವರ್ಷದ ಆಡಳಿತ ಮುಗಿದಾಗ, ಅವರು ಅಲ್ಲಿವರೆಗೆ ಮಾಡಿದ್ದ ಕೆಲಸಗಳನ್ನು ಮೆಚ್ಚಿ ನಾನು ಅವರನ್ನು ಹೊಗಳಿದ್ದೆ. ಸೋನಿಯಾ ಗಾಂಧಿಯವರಿಗೆ ಇದು ಸಿಟ್ಟು ಬರಿಸಿತು.

ರಾಷ್ಟಪತಿಯವರ ಪುಸ್ತಕದಿಂದ ಆಯ್ದ ಭಾಗ ಎಂದು ಪುಟ್ಟಾಪೂರಾ ಸುಳ್ ಬರೆದ ಪೋಸ್ಟ್‍ಕಾರ್ಡ್.

ಒಮ್ಮೆ ಸಂಸತ್ತಿನಲ್ಲಿ ಭಾಷಣ ಮುಗಿಸಿ ಹೊರಬರುವಾಗ ಸೋನಿಯಾ ನನಗೆ ಎದುರಾದರು. ಅವರ ಜೊತೆಗಿದ್ದ ಗುಲಾಮ್ ನಬಿ ಅಜಾದ್ ಮತ್ತು ಮಣಶಂಕರ್ ಅಯ್ಯರ್ ನನಗೆ ಗೌರವದಿಂದ ಹಾರೈಸಿದರು. ಆದರೆ ಸೋನಿಯಾ ಸುಮ್ಮನೆ ನಿಂತಿದ್ದರು. ನಾನೇ ಮೊದಲು ಅವರಿಗೆ ಹಾರೈಸಬೇಕೆಂದು ಅವರು ಬಯಸಿದ್ದರು. ಅವರ ಎದುರು ಈ ದೇಶದ ಪ್ರಥಮ ಪ್ರಜೆ ನಿಂತಿದ್ದಾರೆ ಎಂಬುದನ್ನೇ ಅವರು ಮರೆತಿದ್ದರು.
ಪ್ರಣಬ್ ಮುಖರ್ಜಿಯಾಗಿ ಅಲ್ಲ, ಈ ದೇಶದ ರಾಷ್ಟ್ರಪತಿ ನಾನು ಎಂಂಬುದನ್ನು ಅವರು ಒಪ್ಪಿಕೊಳ್ಳಬೇಕಿತ್ತು.
ಸೋನಿಯಾರ ಈ ವರ್ತನೆ ನನ್ನೊಳಗೆ ತೀವ್ರ ನೋವನ್ನು ಉಂಟು ಮಾಡಿತು…”
ಮೇಲಿನ ಘಟನೆ 2015ರ ಮೇನಲ್ಲಿ ನಡೆಯಿತು ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‍ಕಾರ್ಡ್ ಪ್ರಕಾರ ಇದು ಪ್ರಣಬ್ ಮುಖರ್ಜಿ ಅವರ ಪುಸ್ತಕದ ಒಂದು ಭಾಗ. ಇದನ್ನು ನಂಬಿದ ಅಮಾಯಕರು ಮತ್ತು ಸುಳ್ಳೆಂದು ಗೊತ್ತಿರುವ ಸಾವಿರಾರು ಕಿರಾತಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತ ಅನಗತ್ಯವಾಗಿ ಸೋನಿಯಾ ಗಾಂಧಿಯವರ ಮೇಲೆ ಆಕ್ರಮಣ ನಡೆಸುತ್ತಲೇ ಬಂದಿದ್ದಾರೆ.
ಸತ್ಯ: ಪ್ರಣಬ್ ಅವರ ಉದ್ದೇಶಿತ ಪುಸ್ತಕ 2018ರ ಡಿಸೆಂಬರ್‍ನಲ್ಲಿ ಪ್ರಕಟನೆಯಾಗಲಿದೆ ಎಂದು ಅದರ ಪ್ರಕಟಣಾ ಹಕ್ಕು ಪಡೆದಿರುವ ರೂಪಾ ಪ್ರಕಾಶನ ಸಂಸ್ಥೆ ಹೇಳಿತ್ತು. (ಈಗಲೂ ದು ಪ್ರಕಟವಾಗಿಲ್ಲ) ಅಂದರೆ ಪ್ರಣಬ್‍ರವರು ಈಗಾಗಲೇ ಕಾಗದದಲ್ಲಿ ಬರೆದಿರಬಹುದಾದ ಅಥವಾ ಕಂಪ್ಯೂಟರ್‍ನಲ್ಲಿ ಕೀ-ಇನ್ ಮಾಡಿರಬಹುದಾದ ಕಾಪಿಯನ್ನು ಪೋಸ್ಟ್‍ಕಾರ್ಡ್ ಕದ್ದಿರಬಹುದು ಅಂತಾ ಭಾವಿಸೋಕೂ ಆಸ್ಪದವಿಲ್ಲ. ಏಕೆಂದರೆ ಆಗ ಪ್ರಕಾಶಕರು ಮತ್ತು ಪ್ರಣಬ್ ಮುಖರ್ಜಿ ಕಚೇರಿ ಪ್ರಕಾರ ಅವರಿನ್ನೂ ಬರೆಯಲು ಶುರೂನೇ ಮಾಡಿರಲಿಲ್ಲ!

ಸೋನಿಯಾ ಗಾಂಧಿಯವರ ಜೊತೆ ಪ್ರಣಬ್ ಮುಖರ್ಜಿ

ಈ ಮೊದಲು ಪ್ರಣಬ್ ಬರೆದ ದ ಡೆಮಾಕ್ರಟಿಕ್ ಡಿಕೇಡ್, ದ ಟರ್ಬುಲೆಂಟ್ ಇಯರ್ಸ್ ಮತ್ತು ದ ಕೊಅಲಾಯನ್ಸ್ ಇಯರ್ಸ್- ಪುಸ್ತಕಗಳಲ್ಲಿ ಪ್ರಣಬ್ ಮೇಲಿನ ವಿಷಯ ಬರೆದಿಲ್ಲ, ಬರೆಯಲು ಸಾಧ್ಯವೂ ಇಲ್ಲ. ಏಕೆಂದರೆ ಇವು ಯಾವುವು 2004ರ ನಂತರದ ವಿಷಯ ಒಳಗೊಂಡಿಲ್ಲ. ಹಾಗಾದರೆ ಬರಲಿರುವ ನಾಲ್ಕನೇ ಪುಸ್ತಕ ‘ದ ಪ್ರೆಸಿಡೆನ್ಸಿಯಲ್ ಇಯರ್ಸ್’ ಪುಸ್ತಕದಲ್ಲಿ ಮೇಲಿನಂತೆ ಬರೆಯಬಹುದೇನೋ ಎಂದು ಗೆಸ್ ಮಾಡಲೂ ಆಗಲ್ಲ. ಏಕೆಂದರೆ ಪ್ರಣಬ್ ಎಂದೂ ಸಾರ್ವಜನಿಕವಾಗಿ ಸೋನಿಯಾರ ಬಗ್ಗೆ ಆಕ್ಷೇಪದ ಮಾತು ಆಡಿಲ್ಲ.
ಆಗ ಸ್ಪಷ್ಟೀಕರಣ ನೀಡಿದ್ದ ಪ್ರಣಬ್ ಕಚೇರಿ, ‘ಉದ್ದೇಶಿತ ಪುಸ್ತಕ ಪ್ರಣಬ್ ಮುಖರ್ಜಿಯವರನ್ನು ರಾಷ್ಟ್ರಪತಿ ಎಂದು ಘೋಷಿಸುವಲ್ಲಿಗೆ ಮುಗಿಯುತ್ತದೆ. ರಾಷ್ಟ್ರಪತಿಯಾದ ನಂತರದ ಘಟನೆಗಳು ಇದರಲ್ಲಿ ಬರುವುದೇ ಇಲ್ಲ. ಈ ಪುಸ್ತಕವು 2004-2012ರವರೆಗಿನ ಅವಧಿಗೆ ಸಿಮೀತ. ಇನ್ನು ಮೇ, 2015ರ ವಿಷಯ (ಅಂದರೆ ಪೋಸ್ಟ್‍ಕಾರ್ಡ್‍ನ ಸುಳ್ಳು) ಇದರಲ್ಲಿ ಹೇಗೆ ಬರಲು ಸಾಧ್ಯ?’ ಎಂದು ಪ್ರಕಟಣೆ ನೀಡುವ ಮೂಲಕ ಪೋಸ್ಟ್‍ಕಾರ್ಡ್ ಕುತಂತ್ರವನ್ನು ಬಯಲು ಮಾಡಿತ್ತು.

(ಕೃಪೆ:Altnews.com)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...