Homeರಾಜಕೀಯಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

ಪರಮಪಾಪಿ ಪೋಸ್ಟ್‍ಕಾರ್ಡ್ ಪೋರ್ಟಲ್

- Advertisement -
- Advertisement -

ಮಲ್ಲಿ |

ಕರ್ನಾಟಕದ ಮಟ್ಟಿಗೆ ಹೇಳುವುದಾದರೆ, ಇಲ್ಲಿ ಸುಳ್ ಸುದ್ದಿಗಳನ್ನು ಯಥೇಚ್ಛವಾಗಿ ಹರಡುತ್ತಿರುವುದು ಪೋಸ್ಟ್‍ಕಾರ್ಡ್ ಪೋರ್ಟಲ್. ಕುಳಿತರೆ ಸುಳ್ಳು, ನಿಂತರೆ ಸುಳ್ಳು, ಉಸಿರಾಡಿದರೆ ಸುಳ್ಳು, ಹೂಸಿದರೆ ಸುಳ್ಳು-ಇದು ಪೋಸ್ಟ್‍ಕಾರ್ಡ್ ಸಂಸ್ಥಾಪಕ ಚೆಡ್ಡಿ ಮಹೇಶ ಹೆಗಡೆಯ ಧ್ಯೇಯವಾಕ್ಯ. ಆತ ಪದವಿ ಓದಿದವರನ್ನೂ ಯಾಮಾರಿಸುವಂತೆ ಸುಳ್ ಸುದ್ದಿ ಹರಡುತ್ತಾನೆ. ಈಗಷ್ಟೇ ಕೇಂದ್ರ ಸರ್ಕಾರ ‘ಕಾಂಗ್ರೆಸ್’ನ ಪ್ರಣಬ್ ಮುಖರ್ಜಿಗೆ ಭಾರತರತ್ನ ನೀಡಿದೆ. ಅದಿರಲಿ, ಈಗ ನಾವು ಪ್ರಸ್ತಾಪಿಸುತ್ತಿರುವ ವಿಷಯ ಎಂದರೆ, ಪ್ರಣಬ್ ಮುಖರ್ಜಿ ಸೋನಿಯಾ ಗಾಂಧಿ ವಿರುದ್ಧ ತಮ್ಮ ನಾಲ್ಕನೇ ಪುಸ್ತಕದಲ್ಲಿ ಕಿಡಿ ಕಾರಿದ್ದಾರೆ ಎಂದು ಪೋಸ್ಟ್‍ಕಾರ್ಡ್ ಹೇಳುತ್ತ ಬಂದ ಸುಳ್ ಸುದ್ದಿಯ ಕುರಿತು. ಐದು ತಿಂಗಳ ಹಿಂದೆಯೇ ಈ ಕೆಲಸವನ್ನು ಅದು ಶುರು ಮಾಡಿತ್ತು.
ಇನ್ನೂ ಪುಸ್ತಕವೇ ಪ್ರಕಟವಾಗಿಲ್ಲ. ಅದರ ಒಂದು ಸಣ್ಣ ಭಾಗವನ್ನು ಸುಳ್ಳನ್ನೇ ಉಸಿರಾಡುವ ಪೋಸ್ಟ್‍ಕಾರ್ಡ್ ಡಾಟ್ ನ್ಯೂಸ್ ಪ್ರಕಟಿಸಿತ್ತು ಮತ್ತು ಅದು ಆಗಾಗ ವೈರಲ್ ಆಗುತ್ತಲೇ ಇದೆ, ಚುನಾವಣೆ ಬಂತಲ್ಲ, ಮತ್ತಷ್ಟು ಜೋರಾಗಿಯೇ ಹರಡಲಿದೆ.
ಮಿಥ್ಯ: ಪೋಸ್ಟ್‍ಕಾರ್ಡ್ ಪ್ರಕಾರ, ಮಾಜಿ ರಾಷ್ಟ್ರÀಪತಿ ಪ್ರಣಬ್ ಮುಖರ್ಜಿ ಅವರ ಪುಸ್ತಕದಿಂದ ಆಯ್ದ ಭಾಗ ಹೀಗಿದೆ:
“ನರೆಂದ್ರ ಮೋದಿಯವರ ಒಂದನೇ ವರ್ಷದ ಆಡಳಿತ ಮುಗಿದಾಗ, ಅವರು ಅಲ್ಲಿವರೆಗೆ ಮಾಡಿದ್ದ ಕೆಲಸಗಳನ್ನು ಮೆಚ್ಚಿ ನಾನು ಅವರನ್ನು ಹೊಗಳಿದ್ದೆ. ಸೋನಿಯಾ ಗಾಂಧಿಯವರಿಗೆ ಇದು ಸಿಟ್ಟು ಬರಿಸಿತು.

ರಾಷ್ಟಪತಿಯವರ ಪುಸ್ತಕದಿಂದ ಆಯ್ದ ಭಾಗ ಎಂದು ಪುಟ್ಟಾಪೂರಾ ಸುಳ್ ಬರೆದ ಪೋಸ್ಟ್‍ಕಾರ್ಡ್.

ಒಮ್ಮೆ ಸಂಸತ್ತಿನಲ್ಲಿ ಭಾಷಣ ಮುಗಿಸಿ ಹೊರಬರುವಾಗ ಸೋನಿಯಾ ನನಗೆ ಎದುರಾದರು. ಅವರ ಜೊತೆಗಿದ್ದ ಗುಲಾಮ್ ನಬಿ ಅಜಾದ್ ಮತ್ತು ಮಣಶಂಕರ್ ಅಯ್ಯರ್ ನನಗೆ ಗೌರವದಿಂದ ಹಾರೈಸಿದರು. ಆದರೆ ಸೋನಿಯಾ ಸುಮ್ಮನೆ ನಿಂತಿದ್ದರು. ನಾನೇ ಮೊದಲು ಅವರಿಗೆ ಹಾರೈಸಬೇಕೆಂದು ಅವರು ಬಯಸಿದ್ದರು. ಅವರ ಎದುರು ಈ ದೇಶದ ಪ್ರಥಮ ಪ್ರಜೆ ನಿಂತಿದ್ದಾರೆ ಎಂಬುದನ್ನೇ ಅವರು ಮರೆತಿದ್ದರು.
ಪ್ರಣಬ್ ಮುಖರ್ಜಿಯಾಗಿ ಅಲ್ಲ, ಈ ದೇಶದ ರಾಷ್ಟ್ರಪತಿ ನಾನು ಎಂಂಬುದನ್ನು ಅವರು ಒಪ್ಪಿಕೊಳ್ಳಬೇಕಿತ್ತು.
ಸೋನಿಯಾರ ಈ ವರ್ತನೆ ನನ್ನೊಳಗೆ ತೀವ್ರ ನೋವನ್ನು ಉಂಟು ಮಾಡಿತು…”
ಮೇಲಿನ ಘಟನೆ 2015ರ ಮೇನಲ್ಲಿ ನಡೆಯಿತು ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‍ಕಾರ್ಡ್ ಪ್ರಕಾರ ಇದು ಪ್ರಣಬ್ ಮುಖರ್ಜಿ ಅವರ ಪುಸ್ತಕದ ಒಂದು ಭಾಗ. ಇದನ್ನು ನಂಬಿದ ಅಮಾಯಕರು ಮತ್ತು ಸುಳ್ಳೆಂದು ಗೊತ್ತಿರುವ ಸಾವಿರಾರು ಕಿರಾತಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತ ಅನಗತ್ಯವಾಗಿ ಸೋನಿಯಾ ಗಾಂಧಿಯವರ ಮೇಲೆ ಆಕ್ರಮಣ ನಡೆಸುತ್ತಲೇ ಬಂದಿದ್ದಾರೆ.
ಸತ್ಯ: ಪ್ರಣಬ್ ಅವರ ಉದ್ದೇಶಿತ ಪುಸ್ತಕ 2018ರ ಡಿಸೆಂಬರ್‍ನಲ್ಲಿ ಪ್ರಕಟನೆಯಾಗಲಿದೆ ಎಂದು ಅದರ ಪ್ರಕಟಣಾ ಹಕ್ಕು ಪಡೆದಿರುವ ರೂಪಾ ಪ್ರಕಾಶನ ಸಂಸ್ಥೆ ಹೇಳಿತ್ತು. (ಈಗಲೂ ದು ಪ್ರಕಟವಾಗಿಲ್ಲ) ಅಂದರೆ ಪ್ರಣಬ್‍ರವರು ಈಗಾಗಲೇ ಕಾಗದದಲ್ಲಿ ಬರೆದಿರಬಹುದಾದ ಅಥವಾ ಕಂಪ್ಯೂಟರ್‍ನಲ್ಲಿ ಕೀ-ಇನ್ ಮಾಡಿರಬಹುದಾದ ಕಾಪಿಯನ್ನು ಪೋಸ್ಟ್‍ಕಾರ್ಡ್ ಕದ್ದಿರಬಹುದು ಅಂತಾ ಭಾವಿಸೋಕೂ ಆಸ್ಪದವಿಲ್ಲ. ಏಕೆಂದರೆ ಆಗ ಪ್ರಕಾಶಕರು ಮತ್ತು ಪ್ರಣಬ್ ಮುಖರ್ಜಿ ಕಚೇರಿ ಪ್ರಕಾರ ಅವರಿನ್ನೂ ಬರೆಯಲು ಶುರೂನೇ ಮಾಡಿರಲಿಲ್ಲ!

ಸೋನಿಯಾ ಗಾಂಧಿಯವರ ಜೊತೆ ಪ್ರಣಬ್ ಮುಖರ್ಜಿ

ಈ ಮೊದಲು ಪ್ರಣಬ್ ಬರೆದ ದ ಡೆಮಾಕ್ರಟಿಕ್ ಡಿಕೇಡ್, ದ ಟರ್ಬುಲೆಂಟ್ ಇಯರ್ಸ್ ಮತ್ತು ದ ಕೊಅಲಾಯನ್ಸ್ ಇಯರ್ಸ್- ಪುಸ್ತಕಗಳಲ್ಲಿ ಪ್ರಣಬ್ ಮೇಲಿನ ವಿಷಯ ಬರೆದಿಲ್ಲ, ಬರೆಯಲು ಸಾಧ್ಯವೂ ಇಲ್ಲ. ಏಕೆಂದರೆ ಇವು ಯಾವುವು 2004ರ ನಂತರದ ವಿಷಯ ಒಳಗೊಂಡಿಲ್ಲ. ಹಾಗಾದರೆ ಬರಲಿರುವ ನಾಲ್ಕನೇ ಪುಸ್ತಕ ‘ದ ಪ್ರೆಸಿಡೆನ್ಸಿಯಲ್ ಇಯರ್ಸ್’ ಪುಸ್ತಕದಲ್ಲಿ ಮೇಲಿನಂತೆ ಬರೆಯಬಹುದೇನೋ ಎಂದು ಗೆಸ್ ಮಾಡಲೂ ಆಗಲ್ಲ. ಏಕೆಂದರೆ ಪ್ರಣಬ್ ಎಂದೂ ಸಾರ್ವಜನಿಕವಾಗಿ ಸೋನಿಯಾರ ಬಗ್ಗೆ ಆಕ್ಷೇಪದ ಮಾತು ಆಡಿಲ್ಲ.
ಆಗ ಸ್ಪಷ್ಟೀಕರಣ ನೀಡಿದ್ದ ಪ್ರಣಬ್ ಕಚೇರಿ, ‘ಉದ್ದೇಶಿತ ಪುಸ್ತಕ ಪ್ರಣಬ್ ಮುಖರ್ಜಿಯವರನ್ನು ರಾಷ್ಟ್ರಪತಿ ಎಂದು ಘೋಷಿಸುವಲ್ಲಿಗೆ ಮುಗಿಯುತ್ತದೆ. ರಾಷ್ಟ್ರಪತಿಯಾದ ನಂತರದ ಘಟನೆಗಳು ಇದರಲ್ಲಿ ಬರುವುದೇ ಇಲ್ಲ. ಈ ಪುಸ್ತಕವು 2004-2012ರವರೆಗಿನ ಅವಧಿಗೆ ಸಿಮೀತ. ಇನ್ನು ಮೇ, 2015ರ ವಿಷಯ (ಅಂದರೆ ಪೋಸ್ಟ್‍ಕಾರ್ಡ್‍ನ ಸುಳ್ಳು) ಇದರಲ್ಲಿ ಹೇಗೆ ಬರಲು ಸಾಧ್ಯ?’ ಎಂದು ಪ್ರಕಟಣೆ ನೀಡುವ ಮೂಲಕ ಪೋಸ್ಟ್‍ಕಾರ್ಡ್ ಕುತಂತ್ರವನ್ನು ಬಯಲು ಮಾಡಿತ್ತು.

(ಕೃಪೆ:Altnews.com)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...