Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

ಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

- Advertisement -
- Advertisement -

ನಿನ್ನೆ ದೆಹಲಿಯಲ್ಲಿ ಅತ್ಯಂತ ಹೆಚ್ಚು ಮಾಲಿನ್ಯವಿತ್ತೆಂದು ಇಂದಿನ ದಿನಪತ್ರಿಕೆಗಳು ಬರೆದಿವೆ. ಇದರಿಂದ ಜನರು ಕಂಗಾಲಾಗಿದ್ದಾರೆಂದೂ ವರದಿಯಲ್ಲಿ ಹೇಳಲಾಗಿದೆ. ವಾಸ್ತವದಲ್ಲಿ ಜನರೇನೂ ಕಂಗಾಲಾಗಿಲ್ಲ. ಏಕೆಂದರೆ, ಇದು ಇದ್ದಕ್ಕಿದ್ದಂತೆ ಒಂದು ದಿನ ಸಂಭವಿಸಿದ ವಿಕೋಪವಲ್ಲ. ಪ್ರವಾಹ, ಸುನಾಮಿ, ಭೂಕಂಪದಂತಹ ಕೆಲವು ಪ್ರಾಕೃತಿಕ ವಿಕೋಪಗಳು ಉಂಟುಮಾಡುವ ಪರಿಣಾಮದ ಸ್ವರೂಪ ಬೇರೆ. ಒಳಗೊಳಗೇ ಶಿಥಿಲಗೊಳಿಸುವ ಬರ, ಪರಿಸರ ಮಾಲಿನ್ಯಗಳ ಪರಿಣಾಮದ ಸ್ವರೂಪ ಬೇರೆ. ನಿಧಾನಕ್ಕೆ ಹೆಚ್ಚಾಗುತ್ತಾ ಹೋಗುವ ಎರಡನೆಯ ಬಗೆಯ ಸಮಸ್ಯೆಗಳಿಗೆ ಜನರು ಹೊಂದಿ ಕೊಳ್ಳುತ್ತಾ ಹೋಗುತ್ತಾರೆ. ಅವರಲ್ಲಿ ಅಂತಹ ‘ಕಂಗಾಲು’ ಉಂಟಾ ಗುವುದಿಲ್ಲ. ಸದರಿ ವರದಿಯನ್ನು ಬರೆದ ವರದಿಗಾರರಿಗೂ ಕಂಗಾಲು ಉಂಟಾಗಿರುವುದಿಲ್ಲ; ತನ್ನ ಕರ್ತವ್ಯದ ಭಾಗವಾಗಿ ಬರೆದ ವರದಿಯಾಗಿರುತ್ತದೆ. ಇಲ್ಲವೇ ಗಮನ ಸೆಳೆಯುವ ದೃಷ್ಟಿಯಿಂದ ಪರಿಣಾಮ ಬೀರುವ ಪದಗಳನ್ನು ಬಳಸಬೇಕೆಂಬ ಉದ್ದೇಶ ಅವರದ್ದಾಗಿರುತ್ತದೆ.
ಇದಕ್ಕೆ ಕಾರಣವಿದೆ. ಈಗಾಗಲೇ ಚಾಲ್ತಿಯಲ್ಲಿರುವ ಉದಾಹರಣೆಯೊಂದರ ಮೂಲಕ ಅದನ್ನು ವಿವರಿಸಬಹುದು. ನೀವು ಕಪ್ಪೆಯೊಂದನ್ನು ಬಿಸಿ ನೀರಿಗೆ ಹಾಕಿದಲ್ಲಿ ಅದು ಕೂಡಲೇ ನೆಗೆದು ಅಲ್ಲಿಂದ ತಪ್ಪಿಸಿಕೊಳ್ಳುತ್ತದೆ. ಆದರೆ, ತಣ್ಣೀರಿನ ಪಾತ್ರೆಯಲ್ಲಿ ಅದನ್ನು ಇಟ್ಟು ತಳವನ್ನು ನಿಧಾನಕ್ಕೆ ಬಿಸಿ ಮಾಡುತ್ತಾ ಹೋದಲ್ಲಿ, ತಾನು ಬೆಂದು ಹೋಗುವವರೆಗೂ ಅದು ಸುಮ್ಮನೇ ಇರುತ್ತದೆ.
ಈ ರೀತಿ ಬೇಯುವ ಸ್ಥಿತಿಗೆ ಭೂಮಿ ಬರುತ್ತಿದೆ ಎಂದು ಹಲವು ತಜ್ಞರು ಹೇಳುತ್ತಿದ್ದಾರೆ. ಅದನ್ನು ಸೂಚಿಸುತ್ತಿರುವ ಹಲವು ಸಂಗತಿಗಳನ್ನೂ ಅವರು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಇನ್ನೂ ಎಲ್ಲವೂ ಮುಗಿದು ಹೋಗಿಲ್ಲ ಎಂಬ ಸಮಜಾಯಿಷಿಯನ್ನು ನೀಡುತ್ತಾ, ಭೂಮಿಯನ್ನು ಮತ್ತಷ್ಟು ಸಂಕಷ್ಟಕ್ಕೆ ಒಡ್ಡುವ ಕೆಲಸ ನಡೆಯುತ್ತಲೇ ಇದೆ. ಉದಾಹರಣೆಗೆ ಕಾವೇರಿಗೆ ಅಡ್ಡಲಾಗಿರುವ ಕಟ್ಟಿರುವ ಕೆಆರ್‍ಎಸ್ ಪ್ರದೇಶದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಉಂಟಾದ ಕಂಪನಗಳು, ಅಣೆಕಟ್ಟೆಯ ಪಕ್ಕದಲ್ಲೇ ಸ್ಥಾಪನೆಯಾಗಿರುವ ಕಂಪನ ಮಾಪನ ಕೇಂದ್ರದವರೆಗೂ ಹೋಗಿ ಅಲ್ಲಿ ದಾಖಲಾಗಿವೆ. ಆದರೆ, ಆ ಕಂಪನದಿಂದ ಅಣೆಕಟ್ಟೆಗೆ ಯಾವುದೇ ಧಕ್ಕೆಯಾಗಿಲ್ಲವೆಂಬ ವರದಿಯನ್ನು ಇಟ್ಟುಕೊಂಡು ಗಣಿಗಾರಿಕೆ ಮುಂದುವರೆಸುವ ಸನ್ನಾಹಗಳು ಜಾರಿಯಲ್ಲಿವೆ. ಹಾಗಾದರೆ, ಒಮ್ಮೆ ಅಣೆಕಟ್ಟೆಗೆ ಧಕ್ಕೆಯಾದ ಮೇಲೆಯೇ ನಾವು ಎಚ್ಚೆತ್ತುಕೊಳ್ಳಬೇಕೆಂಬುದು ಅದರ ಅರ್ಥವೇ?
ಇಂತಹ ಅದೆಷ್ಟೋ ಉದಾಹರಣೆಗಳನ್ನು ನೀಡುತ್ತಾ ಹೋಗಬಹುದು. ಒಟ್ಟಿನಲ್ಲಿ ಮನುಷ್ಯರು ಸಾಂದ್ರವಾಗಿ ಜೀವನ ನಡೆಸುವ ಎಲ್ಲೆಡೆ ಪ್ರಕೃತಿಯಲ್ಲಿ ಭಾರೀ ಪ್ರಮಾಣದ ಏರುಪೇರುಗಳುಂಟಾಗುತ್ತವೆ. ಅವರು ಬಳಸಿ ಎಸೆಯುವ ತ್ಯಾಜ್ಯದ ನಿರ್ವಹಣೆಯೇ ದೊಡ್ಡ ಸಮಸ್ಯೆಯಾಗುತ್ತದೆ. ಆದರೆ, ಅದನ್ನೂ ದಾಟಿ ನೋಡಿದರೆ, ಇದು ‘ಜೀವನ’ದ ಪ್ರಶ್ನೆ ಅಷ್ಟೇ ಅಲ್ಲ. ಈ ರೀತಿಯ ನಗರೀಕರಣ ಹೆಚ್ಚಾದರೆ, ಭೂಮಿಯನ್ನು ಬೇಯಿಸುತ್ತಲೇ ಹೋಗುವ ಅಭಿವೃದ್ಧಿ ಹೆಚ್ಚಾಗುತ್ತಾ ಹೋದರೆ ಜಿಡಿಪಿ ಹೆಚ್ಚಾಗುತ್ತದೆ. ಹಾಗಾಗಿ ಜಿಡಿಪಿ ಹೆಚ್ಚಳದ ಹಿಂದೆ ಬಿದ್ದಿರುವ, ಕೆಲವು ಕಂಪೆನಿಗಳ ಲಾಭ ಹೆಚ್ಚಿಸುವ ಅಭಿವೃದ್ಧಿಯನ್ನು ರಾಜಕಾರಣಿಗಳು ಮತ್ತು ಅಧಿಕಾರಿಗಳ ಕೂಟ ಬೆಂಬಲಿಸುತ್ತಾ ಹೋಗುತ್ತದೆ. ಅಂತಿಮವಾಗಿ ಇನ್ನು ತಡೆದುಕೊಳ್ಳುವುದು ಸಾಧ್ಯವೇ ಇಲ್ಲ ಎನಿಸಿದಾಗ, ದೂರದ ಕಾಡಿನಲ್ಲಿರುವ ಜನರಿಗೆ ಕಾಡನ್ನು ರಕ್ಷಿಸುವ ಹೊಣೆ ವಹಿಸಲಾಗುತ್ತದೆ. ಅಲ್ಲಿ ಉಳಿದುಕೊಳ್ಳುವ ಕಾಡು, ಇನ್ನೆಲ್ಲೋ ನಡೆಯುತ್ತಿರುವ ಉತ್ಪಾತವನ್ನು ತಡೆಗಟ್ಟುವ ವಿಪರೀತದ ಪರಿಸರ ಸಮತೋಲನದ ಯೋಜನೆಗಾಗಿ ವರದಿಗಳು ತಯಾರಾಗುತ್ತವೆ.
ಒಂದಲ್ಲಾ ಒಂದು ರೀತಿಯಲ್ಲಿ ಕಸ್ತೂರಿ ರಂಗನ್ ವರದಿ ಅದೇ ಆಗಿದೆ. ಪಶ್ಚಿಮಘಟ್ಟ ಏನು ಮಾಡಬೇಕು ಎಂದು ನೀಡಲಾಗುತ್ತಿರುವ ವರದಿಗಿಂತ, ಈ ನಗರಗಳಲ್ಲಿ ಏನು ಮಾಡಬೇಕು ಎಂಬ ವರದಿಗಳು ಬರಬೇಕು ಮತ್ತು ಅವನ್ನು ಉಲ್ಲಂಘಿಸಲೇಬಾರದು ಎಂಬ ನಿಯಮಗಳನ್ನು ಹಾಕಿಕೊಳ್ಳಬೇಕು. ಅದು ನಡೆಯುತ್ತಿಲ್ಲ.
ನಮ್ಮ ನಗರಗಳ ಜನರ ಬದುಕನ್ನು ಸಹನೀಯಗೊಳಿಸಲು ಪ್ರತ್ಯೇಕ ಬಿಡಿ ಯೋಜನೆಗಳನ್ನು ತಯಾರಿಸುವುದನ್ನೇ ಬಿಡಬೇಕು. ಇಡೀ ಭೂಮಿಯ ಎಲ್ಲಾ ಭಾಗಗಳಲ್ಲೂ ಸಮತೋಲನದ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳಲು ಹೆಚ್ಚಿನ ತಜ್ಞತೆಯೇನೂ ಬೇಕಿಲ್ಲ. ದೆಹಲಿಯ ವಿಚಾರವನ್ನೇ ನೋಡಿ. ದೆಹಲಿ ಕೇಂದ್ರಿತವಾದ ಅಭಿವೃದ್ಧಿಯ ಭಾಗವಾಗಿ ಜಾರಿಗೆ ಬಂದ ಹಸಿರುಕ್ರಾಂತಿಯನ್ನು ಪಂಜಾಬಿನವರು ಅನುಸರಿಸಬೇಕಾಯಿತು. ಈಗ ಅಲ್ಲಿನ ಹೊಲಗದ್ದೆಗಳಲ್ಲಿ ಬೆಳೆ ಬೆಳೆದ ನಂತರ ಉಳಿಯುವ ಹುಲ್ಲಿನ ವಿಲೇವಾರಿ ಸಾಧ್ಯವಾಗದೇ ಬೆಂಕಿ ಹಾಕಲಾಗುತ್ತದೆ. ಆಗ ಅಲ್ಲಿಂದ ಏಳುವ ಹೊಗೆಯು ದೆಹಲಿಯವರೆಗೆ ಬಂದು ಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ವರದಿಯೊಂದಿದೆ. ಅದೇ ಪಂಜಾಬಿನವರೂ, ಹರಿಯಾಣದವರು ತಮ್ಮ ಹಳ್ಳಿಗಳಲ್ಲಿ ಬದುಕಲಾರದೇ ದೆಹಲಿಗೆ ಬಂದು ದುಡಿಯುತ್ತಾರೆ. ದೆಹಲಿಯನ್ನು ಜೀವಂತವಾಗಿಡಲು ಅವರೂ ಬೆವರು ಸುರಿಸುತ್ತಾರೆ ಮತ್ತು ದೆಹಲಿಯ ಕೊಳೆಗೆ ಅವರೂ ಕಾರಣರಾಗುತ್ತಾರೆ.
ಅಂದರೆ ಎಲ್ಲವೂ ಪರಸ್ಪರ ಹೆಣೆದುಕೊಂಡಿರುವ ಸಂಗತಿಗಳಿವು ಮತ್ತು ದೆಹಲಿಗೋ ಬೆಂಗಳೂರಿಗೋ ವಾಷಿಂಗ್ಟನ್ನಿಗೋ ಸೀಮಿತವಾದ ಸಂಗತಿಗಳೂ ಅಲ್ಲ. ಹಾಗೆಯೇ ಇದನ್ನು ಉಳಿಸಿಕೊಳ್ಳುವ ಕರ್ಮವನ್ನು ಅಂಚಿನಲ್ಲಿರುವವರ ಮೇಲೆ ಹೇರುವುದಕ್ಕಿಂತ ಆಷಾಢಭೂತಿತನ ಹಾಗೂ ಕ್ರೌರ್ಯ ಇನ್ನೊಂದಿಲ್ಲ. ಯಾರು ಶುರು ಮಾಡಬೇಕೆಂದು ಯಾದಿ ತಯಾರಿಸುವುದಾದರೆ, ಇದು ಮೊದಲು ಮೇಲಿನವರಿಂದ ಶುರುವಾಗಬೇಕಾದ ಕೆಲಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...