Homeಅಂಕಣಗಳುಸಂಪಾದಕೀಯ | ಕಂಡದ್ದು ಕಂಡಹಾಗೆಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

ಬೇಯುವ ಭೂಮಿಯನ್ನು ಉಳಿಸುವುದು ಎಲ್ಲರ ಕರ್ತವ್ಯ

- Advertisement -
- Advertisement -

ನಿನ್ನೆ ದೆಹಲಿಯಲ್ಲಿ ಅತ್ಯಂತ ಹೆಚ್ಚು ಮಾಲಿನ್ಯವಿತ್ತೆಂದು ಇಂದಿನ ದಿನಪತ್ರಿಕೆಗಳು ಬರೆದಿವೆ. ಇದರಿಂದ ಜನರು ಕಂಗಾಲಾಗಿದ್ದಾರೆಂದೂ ವರದಿಯಲ್ಲಿ ಹೇಳಲಾಗಿದೆ. ವಾಸ್ತವದಲ್ಲಿ ಜನರೇನೂ ಕಂಗಾಲಾಗಿಲ್ಲ. ಏಕೆಂದರೆ, ಇದು ಇದ್ದಕ್ಕಿದ್ದಂತೆ ಒಂದು ದಿನ ಸಂಭವಿಸಿದ ವಿಕೋಪವಲ್ಲ. ಪ್ರವಾಹ, ಸುನಾಮಿ, ಭೂಕಂಪದಂತಹ ಕೆಲವು ಪ್ರಾಕೃತಿಕ ವಿಕೋಪಗಳು ಉಂಟುಮಾಡುವ ಪರಿಣಾಮದ ಸ್ವರೂಪ ಬೇರೆ. ಒಳಗೊಳಗೇ ಶಿಥಿಲಗೊಳಿಸುವ ಬರ, ಪರಿಸರ ಮಾಲಿನ್ಯಗಳ ಪರಿಣಾಮದ ಸ್ವರೂಪ ಬೇರೆ. ನಿಧಾನಕ್ಕೆ ಹೆಚ್ಚಾಗುತ್ತಾ ಹೋಗುವ ಎರಡನೆಯ ಬಗೆಯ ಸಮಸ್ಯೆಗಳಿಗೆ ಜನರು ಹೊಂದಿ ಕೊಳ್ಳುತ್ತಾ ಹೋಗುತ್ತಾರೆ. ಅವರಲ್ಲಿ ಅಂತಹ ‘ಕಂಗಾಲು’ ಉಂಟಾ ಗುವುದಿಲ್ಲ. ಸದರಿ ವರದಿಯನ್ನು ಬರೆದ ವರದಿಗಾರರಿಗೂ ಕಂಗಾಲು ಉಂಟಾಗಿರುವುದಿಲ್ಲ; ತನ್ನ ಕರ್ತವ್ಯದ ಭಾಗವಾಗಿ ಬರೆದ ವರದಿಯಾಗಿರುತ್ತದೆ. ಇಲ್ಲವೇ ಗಮನ ಸೆಳೆಯುವ ದೃಷ್ಟಿಯಿಂದ ಪರಿಣಾಮ ಬೀರುವ ಪದಗಳನ್ನು ಬಳಸಬೇಕೆಂಬ ಉದ್ದೇಶ ಅವರದ್ದಾಗಿರುತ್ತದೆ.
ಇದಕ್ಕೆ ಕಾರಣವಿದೆ. ಈಗಾಗಲೇ ಚಾಲ್ತಿಯಲ್ಲಿರುವ ಉದಾಹರಣೆಯೊಂದರ ಮೂಲಕ ಅದನ್ನು ವಿವರಿಸಬಹುದು. ನೀವು ಕಪ್ಪೆಯೊಂದನ್ನು ಬಿಸಿ ನೀರಿಗೆ ಹಾಕಿದಲ್ಲಿ ಅದು ಕೂಡಲೇ ನೆಗೆದು ಅಲ್ಲಿಂದ ತಪ್ಪಿಸಿಕೊಳ್ಳುತ್ತದೆ. ಆದರೆ, ತಣ್ಣೀರಿನ ಪಾತ್ರೆಯಲ್ಲಿ ಅದನ್ನು ಇಟ್ಟು ತಳವನ್ನು ನಿಧಾನಕ್ಕೆ ಬಿಸಿ ಮಾಡುತ್ತಾ ಹೋದಲ್ಲಿ, ತಾನು ಬೆಂದು ಹೋಗುವವರೆಗೂ ಅದು ಸುಮ್ಮನೇ ಇರುತ್ತದೆ.
ಈ ರೀತಿ ಬೇಯುವ ಸ್ಥಿತಿಗೆ ಭೂಮಿ ಬರುತ್ತಿದೆ ಎಂದು ಹಲವು ತಜ್ಞರು ಹೇಳುತ್ತಿದ್ದಾರೆ. ಅದನ್ನು ಸೂಚಿಸುತ್ತಿರುವ ಹಲವು ಸಂಗತಿಗಳನ್ನೂ ಅವರು ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಇನ್ನೂ ಎಲ್ಲವೂ ಮುಗಿದು ಹೋಗಿಲ್ಲ ಎಂಬ ಸಮಜಾಯಿಷಿಯನ್ನು ನೀಡುತ್ತಾ, ಭೂಮಿಯನ್ನು ಮತ್ತಷ್ಟು ಸಂಕಷ್ಟಕ್ಕೆ ಒಡ್ಡುವ ಕೆಲಸ ನಡೆಯುತ್ತಲೇ ಇದೆ. ಉದಾಹರಣೆಗೆ ಕಾವೇರಿಗೆ ಅಡ್ಡಲಾಗಿರುವ ಕಟ್ಟಿರುವ ಕೆಆರ್‍ಎಸ್ ಪ್ರದೇಶದಲ್ಲಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯಿಂದ ಉಂಟಾದ ಕಂಪನಗಳು, ಅಣೆಕಟ್ಟೆಯ ಪಕ್ಕದಲ್ಲೇ ಸ್ಥಾಪನೆಯಾಗಿರುವ ಕಂಪನ ಮಾಪನ ಕೇಂದ್ರದವರೆಗೂ ಹೋಗಿ ಅಲ್ಲಿ ದಾಖಲಾಗಿವೆ. ಆದರೆ, ಆ ಕಂಪನದಿಂದ ಅಣೆಕಟ್ಟೆಗೆ ಯಾವುದೇ ಧಕ್ಕೆಯಾಗಿಲ್ಲವೆಂಬ ವರದಿಯನ್ನು ಇಟ್ಟುಕೊಂಡು ಗಣಿಗಾರಿಕೆ ಮುಂದುವರೆಸುವ ಸನ್ನಾಹಗಳು ಜಾರಿಯಲ್ಲಿವೆ. ಹಾಗಾದರೆ, ಒಮ್ಮೆ ಅಣೆಕಟ್ಟೆಗೆ ಧಕ್ಕೆಯಾದ ಮೇಲೆಯೇ ನಾವು ಎಚ್ಚೆತ್ತುಕೊಳ್ಳಬೇಕೆಂಬುದು ಅದರ ಅರ್ಥವೇ?
ಇಂತಹ ಅದೆಷ್ಟೋ ಉದಾಹರಣೆಗಳನ್ನು ನೀಡುತ್ತಾ ಹೋಗಬಹುದು. ಒಟ್ಟಿನಲ್ಲಿ ಮನುಷ್ಯರು ಸಾಂದ್ರವಾಗಿ ಜೀವನ ನಡೆಸುವ ಎಲ್ಲೆಡೆ ಪ್ರಕೃತಿಯಲ್ಲಿ ಭಾರೀ ಪ್ರಮಾಣದ ಏರುಪೇರುಗಳುಂಟಾಗುತ್ತವೆ. ಅವರು ಬಳಸಿ ಎಸೆಯುವ ತ್ಯಾಜ್ಯದ ನಿರ್ವಹಣೆಯೇ ದೊಡ್ಡ ಸಮಸ್ಯೆಯಾಗುತ್ತದೆ. ಆದರೆ, ಅದನ್ನೂ ದಾಟಿ ನೋಡಿದರೆ, ಇದು ‘ಜೀವನ’ದ ಪ್ರಶ್ನೆ ಅಷ್ಟೇ ಅಲ್ಲ. ಈ ರೀತಿಯ ನಗರೀಕರಣ ಹೆಚ್ಚಾದರೆ, ಭೂಮಿಯನ್ನು ಬೇಯಿಸುತ್ತಲೇ ಹೋಗುವ ಅಭಿವೃದ್ಧಿ ಹೆಚ್ಚಾಗುತ್ತಾ ಹೋದರೆ ಜಿಡಿಪಿ ಹೆಚ್ಚಾಗುತ್ತದೆ. ಹಾಗಾಗಿ ಜಿಡಿಪಿ ಹೆಚ್ಚಳದ ಹಿಂದೆ ಬಿದ್ದಿರುವ, ಕೆಲವು ಕಂಪೆನಿಗಳ ಲಾಭ ಹೆಚ್ಚಿಸುವ ಅಭಿವೃದ್ಧಿಯನ್ನು ರಾಜಕಾರಣಿಗಳು ಮತ್ತು ಅಧಿಕಾರಿಗಳ ಕೂಟ ಬೆಂಬಲಿಸುತ್ತಾ ಹೋಗುತ್ತದೆ. ಅಂತಿಮವಾಗಿ ಇನ್ನು ತಡೆದುಕೊಳ್ಳುವುದು ಸಾಧ್ಯವೇ ಇಲ್ಲ ಎನಿಸಿದಾಗ, ದೂರದ ಕಾಡಿನಲ್ಲಿರುವ ಜನರಿಗೆ ಕಾಡನ್ನು ರಕ್ಷಿಸುವ ಹೊಣೆ ವಹಿಸಲಾಗುತ್ತದೆ. ಅಲ್ಲಿ ಉಳಿದುಕೊಳ್ಳುವ ಕಾಡು, ಇನ್ನೆಲ್ಲೋ ನಡೆಯುತ್ತಿರುವ ಉತ್ಪಾತವನ್ನು ತಡೆಗಟ್ಟುವ ವಿಪರೀತದ ಪರಿಸರ ಸಮತೋಲನದ ಯೋಜನೆಗಾಗಿ ವರದಿಗಳು ತಯಾರಾಗುತ್ತವೆ.
ಒಂದಲ್ಲಾ ಒಂದು ರೀತಿಯಲ್ಲಿ ಕಸ್ತೂರಿ ರಂಗನ್ ವರದಿ ಅದೇ ಆಗಿದೆ. ಪಶ್ಚಿಮಘಟ್ಟ ಏನು ಮಾಡಬೇಕು ಎಂದು ನೀಡಲಾಗುತ್ತಿರುವ ವರದಿಗಿಂತ, ಈ ನಗರಗಳಲ್ಲಿ ಏನು ಮಾಡಬೇಕು ಎಂಬ ವರದಿಗಳು ಬರಬೇಕು ಮತ್ತು ಅವನ್ನು ಉಲ್ಲಂಘಿಸಲೇಬಾರದು ಎಂಬ ನಿಯಮಗಳನ್ನು ಹಾಕಿಕೊಳ್ಳಬೇಕು. ಅದು ನಡೆಯುತ್ತಿಲ್ಲ.
ನಮ್ಮ ನಗರಗಳ ಜನರ ಬದುಕನ್ನು ಸಹನೀಯಗೊಳಿಸಲು ಪ್ರತ್ಯೇಕ ಬಿಡಿ ಯೋಜನೆಗಳನ್ನು ತಯಾರಿಸುವುದನ್ನೇ ಬಿಡಬೇಕು. ಇಡೀ ಭೂಮಿಯ ಎಲ್ಲಾ ಭಾಗಗಳಲ್ಲೂ ಸಮತೋಲನದ ಅಗತ್ಯವಿದೆ ಎಂಬುದನ್ನು ಒಪ್ಪಿಕೊಳ್ಳಲು ಹೆಚ್ಚಿನ ತಜ್ಞತೆಯೇನೂ ಬೇಕಿಲ್ಲ. ದೆಹಲಿಯ ವಿಚಾರವನ್ನೇ ನೋಡಿ. ದೆಹಲಿ ಕೇಂದ್ರಿತವಾದ ಅಭಿವೃದ್ಧಿಯ ಭಾಗವಾಗಿ ಜಾರಿಗೆ ಬಂದ ಹಸಿರುಕ್ರಾಂತಿಯನ್ನು ಪಂಜಾಬಿನವರು ಅನುಸರಿಸಬೇಕಾಯಿತು. ಈಗ ಅಲ್ಲಿನ ಹೊಲಗದ್ದೆಗಳಲ್ಲಿ ಬೆಳೆ ಬೆಳೆದ ನಂತರ ಉಳಿಯುವ ಹುಲ್ಲಿನ ವಿಲೇವಾರಿ ಸಾಧ್ಯವಾಗದೇ ಬೆಂಕಿ ಹಾಕಲಾಗುತ್ತದೆ. ಆಗ ಅಲ್ಲಿಂದ ಏಳುವ ಹೊಗೆಯು ದೆಹಲಿಯವರೆಗೆ ಬಂದು ಮಾಲಿನ್ಯ ಹೆಚ್ಚಾಗುತ್ತಿದೆ ಎಂಬ ವರದಿಯೊಂದಿದೆ. ಅದೇ ಪಂಜಾಬಿನವರೂ, ಹರಿಯಾಣದವರು ತಮ್ಮ ಹಳ್ಳಿಗಳಲ್ಲಿ ಬದುಕಲಾರದೇ ದೆಹಲಿಗೆ ಬಂದು ದುಡಿಯುತ್ತಾರೆ. ದೆಹಲಿಯನ್ನು ಜೀವಂತವಾಗಿಡಲು ಅವರೂ ಬೆವರು ಸುರಿಸುತ್ತಾರೆ ಮತ್ತು ದೆಹಲಿಯ ಕೊಳೆಗೆ ಅವರೂ ಕಾರಣರಾಗುತ್ತಾರೆ.
ಅಂದರೆ ಎಲ್ಲವೂ ಪರಸ್ಪರ ಹೆಣೆದುಕೊಂಡಿರುವ ಸಂಗತಿಗಳಿವು ಮತ್ತು ದೆಹಲಿಗೋ ಬೆಂಗಳೂರಿಗೋ ವಾಷಿಂಗ್ಟನ್ನಿಗೋ ಸೀಮಿತವಾದ ಸಂಗತಿಗಳೂ ಅಲ್ಲ. ಹಾಗೆಯೇ ಇದನ್ನು ಉಳಿಸಿಕೊಳ್ಳುವ ಕರ್ಮವನ್ನು ಅಂಚಿನಲ್ಲಿರುವವರ ಮೇಲೆ ಹೇರುವುದಕ್ಕಿಂತ ಆಷಾಢಭೂತಿತನ ಹಾಗೂ ಕ್ರೌರ್ಯ ಇನ್ನೊಂದಿಲ್ಲ. ಯಾರು ಶುರು ಮಾಡಬೇಕೆಂದು ಯಾದಿ ತಯಾರಿಸುವುದಾದರೆ, ಇದು ಮೊದಲು ಮೇಲಿನವರಿಂದ ಶುರುವಾಗಬೇಕಾದ ಕೆಲಸ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...