Homeಚಳವಳಿಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

| ಮೂಲ : ಶಾ ಅಲಂ ಖಾನ್ |
| ಕನ್ನಡಕ್ಕೆ: ಶ್ರೀ ಪಾದ್ ಭಟ್ |

ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಬೂತಪೂರ್ವ ಗೆಲುವಿನ ನಂತರ ಪ್ರದಾನ ಮಂತ್ರಿ ಮೋದಿ ಅವರು ಬಿಜೆಪಿ ಕೇಂದ್ರ ಕಾರ್ಯಾಲಯದಲ್ಲಿ ಮಾತನಾಡುತ್ತ ‘ ಇಂಡಿಯಾದಲ್ಲಿ ಈಗ ಕೇವಲ ಎರಡು ಜಾತಿಗಳಿವೆ – ಒಂದು ಬಡವರು ಮತ್ತೊಂದು ಈ ಬಡತನವನ್ನ ಉಪಶಮನಗೊಳಿಸುವವರು’ ಎಂದು ಹೇಳಿದರು. ಅವರ ಮಾತುಗಳ ಪ್ರತಿದ್ವನಿ ಕಮರಿಹೋಗುವುದಕ್ಕೂ ಮೊದಲೆ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯವ ವೈದ್ಯೆ ‘ಪಾಯಲ್ ತಾಡ್ವಿ’ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ತಾಡ್ವಿಯವರು ಆ ಆಸ್ಪತ್ರೆಯಲ್ಲಿ ತಮ್ಮ ಹಿರಿಯ ವೈದ್ಯೆಯರಿಂದ ನಿರಂತರವಾಗಿ ಜಾತಿ ಅಪಮಾನ ಮತ್ತು ತಾರತಮ್ಯದ ಹಿಂಸೆಗೆ ಒಳಗಾಗಿದ್ದರು. ಆದಿವಾಸಿ ಭಿಲ್ ಮುಸ್ಲಿಂ ಸಮುದಾಯದ ತಾಡ್ವಿ ಅವರು ಮೇ 2018ರಿಂದ ಆ ಸಂಸ್ಥೆಯಲ್ಲಿ ಎಂ.ಡಿ. ಗೈನಕಾಲಜಿ ವಿಶಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಪ್ರದಾನಿ ಏನೇ ಹೇಳಿದರೂ ಇಂದಿಗೂ ಜಾತಿಯು ಇಂಡಿಯಾ ಸಮಾಜದಲ್ಲಿ ಭಯಾನಕ ವಾಸ್ತವವಾಗಿದೆ

ನಮ್ಮ ಕಚೇರಿಗಳಲ್ಲಿ, ಆಸ್ಪತ್ರೆಗಳಲ್ಲಿ, ಫ್ಯಾಕ್ಟರಿಗಳಲ್ಲಿ, ವ್ಯಾಪಾರದಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂದಿಗೂ ಜಾತೀಯತೆಯು ವಿಶದಂತೆ ಹಬ್ಬಿಕೊಂಡಿದೆ. ಈ ಜಾತಿ ತಾರತಮ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ತಳಸಮುದಾಯಗಳ ವಿದ್ಯಾರ್ಥಿಗಳು, ವಿದ್ವಾಂಸರಾದ ಮಾದಾರಿ ವೆಂಕಟೇಶ್, ರೋಹಿತ್ ವೇಮುಲ, ಸೆಂತಿಲ್ ಕುಮಾರ್ ಮತ್ತು ಪುಲ್ಯಾಲ ರಾಜು ಅವರೊಂದಿಗೆ ಈಗ ತಾಡ್ವಿಯವರೂ ಕೂಡಿಕೊಂಡಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಆದಾರಿತ ಪ್ರತ್ಯೇಕತೆಯನ್ನ ಇಂದು ತ್ವರಿತವಾಗಿ ಬಗೆಹರಿಸಬೇಕಾಗಿದೆ. ಉತ್ತರ ಪ್ರದೇಶದ ದಲಿತ ಕುಟುಂಬದಿಂದ ಬಂದ ಏಮ್ಸ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಬಾಲ ಮುಕುಂದ್ ಭಾರತಿ ಈ ಜಾತಿ ಹಿಂಸೆಯ ಕಾರಣಕ್ಕಾಗಿ ಮಾರ್ಚ 2010ರಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಕಳೆದ 50 ವರ್ಶಗಳಲ್ಲಿ ಭಾರತಿ ಅವರು ತಮ್ಮ ಗ್ರಾಮದಿಂದ ವೈದ್ಯಕೀಯ ವ್ಯಾಸಂಗಕ್ಕೆ ಪ್ರವೇಶ ಪಡೆದ ಮೊದಲ ದಲಿತ ವಿದ್ಯಾರ್ಥಿಯಾಗಿದ್ದರು. ಏಮ್ಸ್‍ನಲ್ಲಿ ಓದುತ್ತಿದ್ದ ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ಅನಿಲ್ ಕುಮಾರ್ ಮೀನಾ ಮಾರ್ಚ 2012ರಲ್ಲಿ ತಮ್ಮ ಹಿಂದುಳಿದ ಜಾತಿಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು. ಏಮ್ಸ್‍ನಲ್ಲಿ ಜಾತಿ ಆಧಾರಿತ ತಾರತಮ್ಮ ಎಶ್ಟು ಗಂಬೀರವಾಗಿದೆಯೆಂದರೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮೇಲೆ ನಡೆಯುತ್ತಿರುವ ದೌರ್ಜನ್ಯದ ಸತ್ಯಶೋದನೆಗಾಗಿ 2007ರಲ್ಲಿ ಸುಖದೇವ ಥೋರೊಟ್ ಅವರ ಅದ್ಯಕ್ಷತೆಯಲ್ಲಿ ಸಮಿತಿಯನ್ನ ರಚಿಸಲಾಯಿತು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ. ಈ ವರದಿಯ ಪ್ರಮುಖಾಂಶಗಳು : ಶೇಕಡಾ 69 ಪ್ರಮಾಣದ ಪ.ಜಾತಿ/ ಪ.ಪಂಗಡದ ವಿದ್ಯಾರ್ಥಿಗಳು ತಮಗೆ ಪ್ರಾದ್ಯಾಪಕರಿಂದ ಯಾವುದೆ ಪ್ರೋತ್ಸಾಹ ದೊರಕುವುದಿಲ್ಲ, ಈ ಪ್ರಾದ್ಯಾಪಕರ ತಾತ್ಸಾರ ಮತ್ತು ಅನುಪಸ್ಥಿತಿಯಿಂದಾಗಿ ಅವರೊಂದಿಗೆ ಸಂಪರ್ಕ ಸಾದಿಸಲು ಸಾದ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಶೇಕಡಾ 72 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಜಾತಿಯ ಹಿನ್ನೆಲೆ ಕಾರಣಕ್ಕೆ ಈ ಪ್ರಾದ್ಯಾಪಕರು ತಮ್ಮಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದರು ಮತ್ತು ತರಗತಿಗಳಲ್ಲಿ ಪಾಠ ಮಾಡುವಾಗ ತಾರತಮ್ಯದಿಂದ ನೋಡುತ್ತಿದ್ದರು ಎಂದು ಹೇಳಿದ್ದಾರೆ. ಶೇಕಡಾ 76 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳನ್ನ ನ್ಯಾಯವಾದ ರೀತಿಯಲ್ಲಿ ಮೌಲ್ಯಮಾಪನ ಮಾಡಲೆ ಇಲ್ಲ ಎಂದು ಹೇಳಿದ್ದಾರೆ.

ಶೇಕಡಾ 88 ಪ್ರಮಾಣದ ವಿದ್ಯಾರ್ಥಿಗಳು ತಾವು ನಿರೀಕ್ಷಿಸಿದಕ್ಕಿಂತಲೂ ಕಡಿಮೆ ಅಂಕಗಳನ್ನ ನೀಡಿದ್ದಾರೆ ಎಂದು ಹೇಳಿದ್ದಾರೆ. ಶೇಕಡಾ 84 ಪ್ರಮಾಣದ ವಿದ್ಯಾರ್ಥಿಗಳು ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳಲ್ಲಿ ಪಕ್ಷಪಾತ ಮಾಡಿದರು ಎಂದು ಹೇಳಿದ್ದಾರೆ. ಶೇಕಡಾ 86 ಪ್ರಮಾಣದ ವಿದ್ಯಾರ್ಥಿಗಳು ಮೇಲ್ಜಾತಿಯವರಿಗೆ ಹೋಲಿಸಿದಾಗ ಈ ಪ್ರಾದ್ಯಾಪಕರು ಪರೀಕ್ಷೆಯಲ್ಲಿ ತಮಗೆ ಸಾಕಶ್ಟು ಸಮಯವನ್ನೆ ಕೊಡಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಏಮ್ಸ್ ಹಾಸ್ಟೆಲ್‍ಗಳಲ್ಲಿ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಸಾಮಾಜಿಕ ಪ್ರತ್ಯೇಕತೆ ಮತ್ತು ತಾರತಮ್ಯದ ಹಿಂಸೆಯನ್ನ ಅನುಬವಿಸಬೇಕಾಯಿತು. ದೆಹಲಿಯ ಏಮ್ಸ್‍ನಲ್ಲಿ ಕೆಲಸ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ಪ್ರಾದ್ಯಾಪಕರೂ ಸಹ ಈ ತಾರತಮ್ಯಕ್ಕೆ ಒಳಗಾಗಿದ್ದರು ಎಂದು ಆ ವರದಿಯಲ್ಲಿ ವಿವರಿಸಲಾಗಿದೆ

ದೆಹಲಿಯ ಏಮ್ಸ್‍ನ ಪಕ್ಕದಲ್ಲಿರುವ ಮತ್ತೊಂದು ಪ್ರಮುಖ ವೈದ್ಯ ಶಿಕ್ಷಣ ಬೋದಿಸುವ ವರ್ದಮಾನ ಮಹಾವೀರ ವೈದ್ಯಕೀಯ ಕಾಲೇಜ್‍ನಲ್ಲಿ ಶೇಕಡಾ 25 ಪ್ರಮಾಣದ ದಲಿತ ವಿದ್ಯಾರ್ಥಿಗಳನ್ನ ಜಾತಿ ತಾರತಮ್ಯದ ಕಾರಣಕ್ಕೆ ಶರೀರ ವಿಜ್ಞಾನ (physiology) ಪರೀಕ್ಷೆಯಲ್ಲಿ ಸಾಮೂಹಿವಾಗಿ ಅನುತ್ತೀರ್ಣಗೊಳಿಸಲಾಯಿತು. ಈ ಹಗರಣಕ್ಕೆ ಸಂಬಂದಸಿದಂತೆ 2012ರಲ್ಲಿ ಮುಂಗೇಕರ್ ಸಮಿತಿಯು ತನಿಖೆ ನಡೆಸಿತು. ಈ ಸಮಿತಿಯು ಪರಿಶಿಷ್ಟ ಜಾತಿಗಳ ರಾಶ್ಟ್ರೀಯ ಆಯೋಗಕ್ಕೆ (NCSC) ನೀಡಿದ ವರದಿಯಲ್ಲಿ ‘ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳ ವಿರುದ್ದ ಕಾಲೇಜ್‍ನ ಆಡಳಿತ ಮಂಡಳಿಯ ದ್ವೇಶ ಯಾವ ಮಟ್ಟದಲ್ಲಿದೆಯೆಂದರೆ ದಲಿತರು ಮಾಹಿತಿ ಹಕ್ಕು ಕಾಯಿದೆಯ ಅಡಿಯಲ್ಲಿ ಮಾಹಿತಿ ಆಯೋಗಕ್ಕೆ ಪ್ರತಿನಿತ್ಯ ಅರ್ಜಿಗಳನ್ನ ಸಲ್ಲಿಸುತ್ತಿದ್ದರು’ ಎಂದು ಉಲ್ಲೇಖಿಸಲಾಗಿದೆ. ಕಿರುಕುಳಕ್ಕೆ ಒಳಗಾದ ದಲಿತ ವಿದ್ಯಾರ್ಥಿಗಳಿಗೆ 10 ಲಕ್ಷ ಮೊತ್ತದ ಪರಿಹಾರ ಕೊಡಬೇಕೆಂದು ಮತ್ತು ಆ ಕಾಲೇಜ್‍ನ ಬೋದಕ ಮತ್ತು ಆಡಳಿತ ಸಿಬ್ಬಂದಿಯನ್ನ ಅಮಾನತ್ತು ಮಾಡಬೇಕೆಂದು ಸಮಿತಿಯು ಶಿಫಾರಸ್ಸು ಮಾಡಿತ್ತು.

ಶಿಕ್ಷಣ ಸಂಸ್ಥೆಗಳನ್ನ ಮೇಲ್ಜಾತಿಗಳು ಮತ್ತು ಶ್ರೀಮಂತ ವರ್ಗದವರಿಗೆ ಕಾಯ್ದಿರಿಸಲಾಗುತ್ತದೆ. ಆದರೆ ಜಾತಿ ಆದಾರಿತ ಮೀಸಲಾತಿಯ ಸಾಮಾಜಿಕ ನ್ಯಾಯದ ಮೂಲಕ ಈ ಯಾಜಮಾನಕೀಯಕ್ಕೆ ಒಡ್ಡಲಾಗುವ ಸವಾಲನ್ನ ಮೀರಲು ಈ ಕಿರುಕುಳ, ಅಪಮಾನ, ಪ್ರತ್ಯೇಕತೆ, ತಾರತಮ್ಯವನ್ನ ತುರ್ತಾಗಿ ಜಾರಿಗೊಳಿಲಾಗುತ್ತದೆ. ಈ ಅಪರಾದಿಗಳಿಗೆ ದಂಡನೆಯ ಕ್ರಮ ಮತ್ತು ಶಾಸನಬದ್ದ ಆದೇಶವಿದ್ದರೂ ಸಹ ದೀರ್ಘಾವದಿ ಪರಿಹಾರವನ್ನ ಕಂಡುಕೊಳ್ಳುವುದು ಅವಶ್ಯಕವಾಗಿದೆ.
( ಕೃಪೆ : ಇಂಡಿಯನ್ ಎಕ್ಸ್‍ಪ್ರೆಸ್ 29, ಮೇ, 2019)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...