Homeಚಳವಳಿಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಪಾಯಲ್ ತಾಡ್ವಿ ಆತ್ಮಹತ್ಯೆ : ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯದ ಮುಂದುವರಿಕೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

| ಮೂಲ : ಶಾ ಅಲಂ ಖಾನ್ |
| ಕನ್ನಡಕ್ಕೆ: ಶ್ರೀ ಪಾದ್ ಭಟ್ |

ಮೊನ್ನೆ ನಡೆದ ಲೋಕಸಭಾ ಚುನಾವಣೆಯಲ್ಲಿ ಅಬೂತಪೂರ್ವ ಗೆಲುವಿನ ನಂತರ ಪ್ರದಾನ ಮಂತ್ರಿ ಮೋದಿ ಅವರು ಬಿಜೆಪಿ ಕೇಂದ್ರ ಕಾರ್ಯಾಲಯದಲ್ಲಿ ಮಾತನಾಡುತ್ತ ‘ ಇಂಡಿಯಾದಲ್ಲಿ ಈಗ ಕೇವಲ ಎರಡು ಜಾತಿಗಳಿವೆ – ಒಂದು ಬಡವರು ಮತ್ತೊಂದು ಈ ಬಡತನವನ್ನ ಉಪಶಮನಗೊಳಿಸುವವರು’ ಎಂದು ಹೇಳಿದರು. ಅವರ ಮಾತುಗಳ ಪ್ರತಿದ್ವನಿ ಕಮರಿಹೋಗುವುದಕ್ಕೂ ಮೊದಲೆ ಮುಂಬೈನ ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯವ ವೈದ್ಯೆ ‘ಪಾಯಲ್ ತಾಡ್ವಿ’ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮೊದಲು ತಾಡ್ವಿಯವರು ಆ ಆಸ್ಪತ್ರೆಯಲ್ಲಿ ತಮ್ಮ ಹಿರಿಯ ವೈದ್ಯೆಯರಿಂದ ನಿರಂತರವಾಗಿ ಜಾತಿ ಅಪಮಾನ ಮತ್ತು ತಾರತಮ್ಯದ ಹಿಂಸೆಗೆ ಒಳಗಾಗಿದ್ದರು. ಆದಿವಾಸಿ ಭಿಲ್ ಮುಸ್ಲಿಂ ಸಮುದಾಯದ ತಾಡ್ವಿ ಅವರು ಮೇ 2018ರಿಂದ ಆ ಸಂಸ್ಥೆಯಲ್ಲಿ ಎಂ.ಡಿ. ಗೈನಕಾಲಜಿ ವಿಶಯದಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಪ್ರದಾನಿ ಏನೇ ಹೇಳಿದರೂ ಇಂದಿಗೂ ಜಾತಿಯು ಇಂಡಿಯಾ ಸಮಾಜದಲ್ಲಿ ಭಯಾನಕ ವಾಸ್ತವವಾಗಿದೆ

ನಮ್ಮ ಕಚೇರಿಗಳಲ್ಲಿ, ಆಸ್ಪತ್ರೆಗಳಲ್ಲಿ, ಫ್ಯಾಕ್ಟರಿಗಳಲ್ಲಿ, ವ್ಯಾಪಾರದಲ್ಲಿ, ಶಿಕ್ಷಣ ಸಂಸ್ಥೆಗಳಲ್ಲಿ ಇಂದಿಗೂ ಜಾತೀಯತೆಯು ವಿಶದಂತೆ ಹಬ್ಬಿಕೊಂಡಿದೆ. ಈ ಜಾತಿ ತಾರತಮ್ಯದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ತಳಸಮುದಾಯಗಳ ವಿದ್ಯಾರ್ಥಿಗಳು, ವಿದ್ವಾಂಸರಾದ ಮಾದಾರಿ ವೆಂಕಟೇಶ್, ರೋಹಿತ್ ವೇಮುಲ, ಸೆಂತಿಲ್ ಕುಮಾರ್ ಮತ್ತು ಪುಲ್ಯಾಲ ರಾಜು ಅವರೊಂದಿಗೆ ಈಗ ತಾಡ್ವಿಯವರೂ ಕೂಡಿಕೊಂಡಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಆದಾರಿತ ಪ್ರತ್ಯೇಕತೆಯನ್ನ ಇಂದು ತ್ವರಿತವಾಗಿ ಬಗೆಹರಿಸಬೇಕಾಗಿದೆ. ಉತ್ತರ ಪ್ರದೇಶದ ದಲಿತ ಕುಟುಂಬದಿಂದ ಬಂದ ಏಮ್ಸ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಬಾಲ ಮುಕುಂದ್ ಭಾರತಿ ಈ ಜಾತಿ ಹಿಂಸೆಯ ಕಾರಣಕ್ಕಾಗಿ ಮಾರ್ಚ 2010ರಲ್ಲಿ ಆತ್ಮಹತ್ಯೆ ಮಾಡಿಕೊಂಡರು. ಕಳೆದ 50 ವರ್ಶಗಳಲ್ಲಿ ಭಾರತಿ ಅವರು ತಮ್ಮ ಗ್ರಾಮದಿಂದ ವೈದ್ಯಕೀಯ ವ್ಯಾಸಂಗಕ್ಕೆ ಪ್ರವೇಶ ಪಡೆದ ಮೊದಲ ದಲಿತ ವಿದ್ಯಾರ್ಥಿಯಾಗಿದ್ದರು. ಏಮ್ಸ್‍ನಲ್ಲಿ ಓದುತ್ತಿದ್ದ ಮತ್ತೊಬ್ಬ ವೈದ್ಯಕೀಯ ವಿದ್ಯಾರ್ಥಿ ಅನಿಲ್ ಕುಮಾರ್ ಮೀನಾ ಮಾರ್ಚ 2012ರಲ್ಲಿ ತಮ್ಮ ಹಿಂದುಳಿದ ಜಾತಿಯ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡರು. ಏಮ್ಸ್‍ನಲ್ಲಿ ಜಾತಿ ಆಧಾರಿತ ತಾರತಮ್ಮ ಎಶ್ಟು ಗಂಬೀರವಾಗಿದೆಯೆಂದರೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮೇಲೆ ನಡೆಯುತ್ತಿರುವ ದೌರ್ಜನ್ಯದ ಸತ್ಯಶೋದನೆಗಾಗಿ 2007ರಲ್ಲಿ ಸುಖದೇವ ಥೋರೊಟ್ ಅವರ ಅದ್ಯಕ್ಷತೆಯಲ್ಲಿ ಸಮಿತಿಯನ್ನ ರಚಿಸಲಾಯಿತು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ಜಾತಿ ಆದಾರಿತ ದೌರ್ಜನ್ಯಗಳನ್ನ ಪತ್ತೆಹಚ್ಚಲು ಈ ಥೋರೋಟ್ ಸಮಿತಿಯ ವರದಿಯನ್ನ ಒಂದು ಮೈಲಿಗಲ್ಲು ಎಂದು ಪರಿಗಣಿಸಲಾಗುತ್ತದೆ. ಈ ವರದಿಯ ಪ್ರಮುಖಾಂಶಗಳು : ಶೇಕಡಾ 69 ಪ್ರಮಾಣದ ಪ.ಜಾತಿ/ ಪ.ಪಂಗಡದ ವಿದ್ಯಾರ್ಥಿಗಳು ತಮಗೆ ಪ್ರಾದ್ಯಾಪಕರಿಂದ ಯಾವುದೆ ಪ್ರೋತ್ಸಾಹ ದೊರಕುವುದಿಲ್ಲ, ಈ ಪ್ರಾದ್ಯಾಪಕರ ತಾತ್ಸಾರ ಮತ್ತು ಅನುಪಸ್ಥಿತಿಯಿಂದಾಗಿ ಅವರೊಂದಿಗೆ ಸಂಪರ್ಕ ಸಾದಿಸಲು ಸಾದ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಶೇಕಡಾ 72 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಜಾತಿಯ ಹಿನ್ನೆಲೆ ಕಾರಣಕ್ಕೆ ಈ ಪ್ರಾದ್ಯಾಪಕರು ತಮ್ಮಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದರು ಮತ್ತು ತರಗತಿಗಳಲ್ಲಿ ಪಾಠ ಮಾಡುವಾಗ ತಾರತಮ್ಯದಿಂದ ನೋಡುತ್ತಿದ್ದರು ಎಂದು ಹೇಳಿದ್ದಾರೆ. ಶೇಕಡಾ 76 ಪ್ರಮಾಣದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳನ್ನ ನ್ಯಾಯವಾದ ರೀತಿಯಲ್ಲಿ ಮೌಲ್ಯಮಾಪನ ಮಾಡಲೆ ಇಲ್ಲ ಎಂದು ಹೇಳಿದ್ದಾರೆ.

ಶೇಕಡಾ 88 ಪ್ರಮಾಣದ ವಿದ್ಯಾರ್ಥಿಗಳು ತಾವು ನಿರೀಕ್ಷಿಸಿದಕ್ಕಿಂತಲೂ ಕಡಿಮೆ ಅಂಕಗಳನ್ನ ನೀಡಿದ್ದಾರೆ ಎಂದು ಹೇಳಿದ್ದಾರೆ. ಶೇಕಡಾ 84 ಪ್ರಮಾಣದ ವಿದ್ಯಾರ್ಥಿಗಳು ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆಗಳಲ್ಲಿ ಪಕ್ಷಪಾತ ಮಾಡಿದರು ಎಂದು ಹೇಳಿದ್ದಾರೆ. ಶೇಕಡಾ 86 ಪ್ರಮಾಣದ ವಿದ್ಯಾರ್ಥಿಗಳು ಮೇಲ್ಜಾತಿಯವರಿಗೆ ಹೋಲಿಸಿದಾಗ ಈ ಪ್ರಾದ್ಯಾಪಕರು ಪರೀಕ್ಷೆಯಲ್ಲಿ ತಮಗೆ ಸಾಕಶ್ಟು ಸಮಯವನ್ನೆ ಕೊಡಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ ಏಮ್ಸ್ ಹಾಸ್ಟೆಲ್‍ಗಳಲ್ಲಿ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಸಾಮಾಜಿಕ ಪ್ರತ್ಯೇಕತೆ ಮತ್ತು ತಾರತಮ್ಯದ ಹಿಂಸೆಯನ್ನ ಅನುಬವಿಸಬೇಕಾಯಿತು. ದೆಹಲಿಯ ಏಮ್ಸ್‍ನಲ್ಲಿ ಕೆಲಸ ಮಾಡುತ್ತಿರುವ ಪ.ಜಾತಿ/ಪ.ಪಂಗಡದ ಪ್ರಾದ್ಯಾಪಕರೂ ಸಹ ಈ ತಾರತಮ್ಯಕ್ಕೆ ಒಳಗಾಗಿದ್ದರು ಎಂದು ಆ ವರದಿಯಲ್ಲಿ ವಿವರಿಸಲಾಗಿದೆ

ದೆಹಲಿಯ ಏಮ್ಸ್‍ನ ಪಕ್ಕದಲ್ಲಿರುವ ಮತ್ತೊಂದು ಪ್ರಮುಖ ವೈದ್ಯ ಶಿಕ್ಷಣ ಬೋದಿಸುವ ವರ್ದಮಾನ ಮಹಾವೀರ ವೈದ್ಯಕೀಯ ಕಾಲೇಜ್‍ನಲ್ಲಿ ಶೇಕಡಾ 25 ಪ್ರಮಾಣದ ದಲಿತ ವಿದ್ಯಾರ್ಥಿಗಳನ್ನ ಜಾತಿ ತಾರತಮ್ಯದ ಕಾರಣಕ್ಕೆ ಶರೀರ ವಿಜ್ಞಾನ (physiology) ಪರೀಕ್ಷೆಯಲ್ಲಿ ಸಾಮೂಹಿವಾಗಿ ಅನುತ್ತೀರ್ಣಗೊಳಿಸಲಾಯಿತು. ಈ ಹಗರಣಕ್ಕೆ ಸಂಬಂದಸಿದಂತೆ 2012ರಲ್ಲಿ ಮುಂಗೇಕರ್ ಸಮಿತಿಯು ತನಿಖೆ ನಡೆಸಿತು. ಈ ಸಮಿತಿಯು ಪರಿಶಿಷ್ಟ ಜಾತಿಗಳ ರಾಶ್ಟ್ರೀಯ ಆಯೋಗಕ್ಕೆ (NCSC) ನೀಡಿದ ವರದಿಯಲ್ಲಿ ‘ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳ ವಿರುದ್ದ ಕಾಲೇಜ್‍ನ ಆಡಳಿತ ಮಂಡಳಿಯ ದ್ವೇಶ ಯಾವ ಮಟ್ಟದಲ್ಲಿದೆಯೆಂದರೆ ದಲಿತರು ಮಾಹಿತಿ ಹಕ್ಕು ಕಾಯಿದೆಯ ಅಡಿಯಲ್ಲಿ ಮಾಹಿತಿ ಆಯೋಗಕ್ಕೆ ಪ್ರತಿನಿತ್ಯ ಅರ್ಜಿಗಳನ್ನ ಸಲ್ಲಿಸುತ್ತಿದ್ದರು’ ಎಂದು ಉಲ್ಲೇಖಿಸಲಾಗಿದೆ. ಕಿರುಕುಳಕ್ಕೆ ಒಳಗಾದ ದಲಿತ ವಿದ್ಯಾರ್ಥಿಗಳಿಗೆ 10 ಲಕ್ಷ ಮೊತ್ತದ ಪರಿಹಾರ ಕೊಡಬೇಕೆಂದು ಮತ್ತು ಆ ಕಾಲೇಜ್‍ನ ಬೋದಕ ಮತ್ತು ಆಡಳಿತ ಸಿಬ್ಬಂದಿಯನ್ನ ಅಮಾನತ್ತು ಮಾಡಬೇಕೆಂದು ಸಮಿತಿಯು ಶಿಫಾರಸ್ಸು ಮಾಡಿತ್ತು.

ಶಿಕ್ಷಣ ಸಂಸ್ಥೆಗಳನ್ನ ಮೇಲ್ಜಾತಿಗಳು ಮತ್ತು ಶ್ರೀಮಂತ ವರ್ಗದವರಿಗೆ ಕಾಯ್ದಿರಿಸಲಾಗುತ್ತದೆ. ಆದರೆ ಜಾತಿ ಆದಾರಿತ ಮೀಸಲಾತಿಯ ಸಾಮಾಜಿಕ ನ್ಯಾಯದ ಮೂಲಕ ಈ ಯಾಜಮಾನಕೀಯಕ್ಕೆ ಒಡ್ಡಲಾಗುವ ಸವಾಲನ್ನ ಮೀರಲು ಈ ಕಿರುಕುಳ, ಅಪಮಾನ, ಪ್ರತ್ಯೇಕತೆ, ತಾರತಮ್ಯವನ್ನ ತುರ್ತಾಗಿ ಜಾರಿಗೊಳಿಲಾಗುತ್ತದೆ. ಈ ಅಪರಾದಿಗಳಿಗೆ ದಂಡನೆಯ ಕ್ರಮ ಮತ್ತು ಶಾಸನಬದ್ದ ಆದೇಶವಿದ್ದರೂ ಸಹ ದೀರ್ಘಾವದಿ ಪರಿಹಾರವನ್ನ ಕಂಡುಕೊಳ್ಳುವುದು ಅವಶ್ಯಕವಾಗಿದೆ.
( ಕೃಪೆ : ಇಂಡಿಯನ್ ಎಕ್ಸ್‍ಪ್ರೆಸ್ 29, ಮೇ, 2019)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...