Homeಅಂಕಣಗಳುನೂರು ನೋಟ | ಎಚ್.ಎಸ್.ದೊರೆಸ್ವಾಮಿಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

ಪಾರ್ಲಿಮೆಂಟ್ ಚುನಾವಣೆಯ ಅಸಲಿ ಸವಾಲುಗಳು

- Advertisement -
- Advertisement -

ಮುಬೈನಿಂದ ಪ್ರಕಟವಾಗುವ ‘ಫೈನಾನ್ಷಿಯಲ್ ಟೈಮ್ಸ್’ ಪತ್ರಿಕೆಯ ಮಾಜಿ ಮುಖ್ಯಸ್ಥರಾದ ಜೇಮ್ಸ್ ಕ್ರಾಬ್‍ಟ್ರೀ ಅವರು ‘ದಿ ಬಿಲಿಯನೇರ್ ರಾಜ್’ ಎಂಬ ಗ್ರಂಥವೊಂದನ್ನು ಪ್ರಕಟಿಸಿದ್ದಾರೆ. ಹಳೇ 1000, 500ರೂಗಳ ನೋಟನ್ನು ಅಪಮೌಲ್ಯ ಮಾಡಿದ್ದು ಒಂದು ತಪ್ಪು ಹೆಜ್ಜೆ ಎಂಬುದು ಈಗ ಸಾಬೀತಾಗಿದೆ. ನೋಟು ಅಪಮೌಲ್ಯದ ಮೂಲಕ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಅಬ್ಬರದ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿಗೆ ಭಾರಿ ಹಿನ್ನಡೆಯಾಗಿದೆ ಎಂದು ಪ್ರಸ್ತಾಪಿಸಿದ್ದಾರೆ. ನೋಟುಗಳ ಅಪಮೌಲ್ಯದಿಂದ ಜನ ಜೀವನ ಅಸ್ತವ್ಯಸ್ತವಾಯಿತು. ಅನುಕೂಲಕ್ಕಿಂತಲೂ ಅದರಿಂದ ಆದ ತೊಂದರೆಯೇ ಜಾಸ್ತಿ. ನೋಟುಗಳ ಅಪಮೌಲ್ಯ ತಪ್ಪು ಗ್ರಹಿಕೆಯಿಂದ ಆದ ಪ್ರಮಾದ, ಜನಪ್ರಿಯತೆ ಗಿಟ್ಟಿಸಲಿಕ್ಕಾಗಿ ಮೋದಿಯವರು ತೆಗೆದುಕೊಂಡ ಈ ಕ್ರಮದಿಂದ ಜನಸಾಮಾನ್ಯರ ಸಂಕಷ್ಟಗಳಿಗೆ ಈಡಾದರು. ಕರೆನ್ಸಿ ನೋಟುಗಳ ಅಭಾವದಿಂದ ಅನೇಕ ಸಣ್ಣ ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಯಿತು. ಜನ ತಮ್ಮ ಹಣವನ್ನು ತಾವು ಪಡೆಯಲು ಬಿಸಿಲಿನಲ್ಲಿ ಬ್ಯಾಂಕುಗಳ ಮುಂದೆ ಗಂಟೆಗಟ್ಟಲೆ ಕ್ಯೂಗಳಲ್ಲಿ ನಿಲ್ಲಬೇಕಾಯಿತು. ಅದೆಷ್ಟೋ ರಸ್ತೆಬದಿ ವ್ಯಾಪಾರಿಗಳು ಚಿಲ್ಲರೆಗೆ ಪರದಾಡಿ ತಮ್ಮ ಕಸುಬನ್ನೇ ಬಿಡಬೇಕಾಯಿತು. ಕಾಳಧನ ಹೊಂದಿದ್ದವರು ಹಳೇ ನೋಟುಗಳನ್ನು ಕೊಟ್ಟು ಹೊಸ ನೋಟನ್ನು ಪಡೆದುಕೊಳ್ಳಲು ಕೋ-ಆಪರೇಟಿವ್ ಬ್ಯಾಂಕುಗಳ ಮೂಲಕ ರಾಷ್ಟ್ರೀಯ ಅಂತಾರಾಷ್ಟ್ರೀಯ ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಕಪ್ಪುಹಣವನ್ನು ಬಿಳಿ ಹಣವನ್ನಾಗಿ ಪರಿವರ್ತಿಸಿಕೊಂಡರು. ಹೀಗೆ ನೋಟು ಬ್ಯಾನ್ ಎಂಬುದು ಶ್ರೀಮಂತರಿಗೆ, ಪಟ್ಟಭದ್ರರಿಗೆ ಶಾಪವಾಗುವ ಬದಲು ವರವಾಗಿ ಪರಿಣಮಿಸಿದ್ದು ಈಗ ಇತಿಹಾಸ.
ಮೋದಿ ಅನುಸರಿಸುತ್ತಿರುವ ನೀತಿಯಿಂದಾಗಿ ದೇಶದ ಆರ್ಥಿಕತೆಯ ಉನ್ನತ ಸ್ತರದಲ್ಲಿರುವ ಆಯ್ದ ಕೆಲವೇ ಶ್ರೀಮಂತರ ಅಭಿವೃದ್ಧಿ ಮಾತ್ರ ಆಗುತ್ತಿದೆ. ವಸ್ತುಸ್ಥಿತಿ ಹೀಗಿದ್ದರೂ ಬುದ್ಧಿಜೀವಿಗಳ ಒಂದು ಬಣ ಮೋದಿಯವರ ಘಾತುಕ ಆರ್ಥಿಕ ನೀತಿಗಳನ್ನು, ಮುಖ್ಯವಾಗಿ ನೋಟ್ ಬ್ಯಾನ್‍ನಿಂದ ಉಂಟಾದ ದುಷ್ಪರಿಣಾಮಗಳನ್ನು ಹಗುರವಾಗಿ ಪರಿಗಣಿಸಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಉದಾರೀಕರಣವನ್ನು ಸರ್ಕಾರ ಜಾರಿಗೆ ತಂದ ನಂತರದ ದಿನಗಳಲ್ಲಿ, ಅಭಿವೃದ್ಧಿಯ ಫಲ ಎಲ್ಲರಿಗೂ ಹಂಚಿಕೆಯಾಗಬೇಕು ಎನ್ನುವುದಕ್ಕಿಂತಲೂ ‘ಕ್ಷಿಪ್ರಗತಿಯ ಅಭಿವೃದ್ಧಿ’ ಮುಖ್ಯ ಎಂಬುದು ಇಂತಹ ಬುದ್ಧಿಜೀವಿಗಳ ನಿಲುವು. ದೇಶದ ಸಂಪತ್ತು ಕೆಲವೇ ಬಂಡವಾಳಿಗರಲ್ಲಿ ಹೆಚ್ಚೆಚ್ಚು ಕ್ರೋಢೀಕರಣವಾಗುತ್ತಿದ್ದು, ಬಡವ ಬಲ್ಲಿದರ ಕಂದರ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆಯಾದರೂ ಸರ್ಕಾರದ ಬಳಿ ಈ ಕಂದರ ಮುಚ್ಚುವ ಯಾವ ಯೋಜನೆಯೂ ಇಲ್ಲ. ರಾಷ್ಟ್ರವನ್ನು ಕಾಡುತ್ತಿರುವ ಈ ಜ್ವಲಂತ ಸಮಸ್ಯೆಯನ್ನು ಬಗೆಹರಿಸಬೇಕೆಂಬ ಅಭಿಲಾಷೆ ಯಾವೊಂದು ರಾಜಕೀಯ ಪಕ್ಷಕ್ಕೂ ಇಲ್ಲ. ರಾಜಕೀಯ ಪಕ್ಷಗಳ ಒಳಗೇ ಪ್ರಭಾವಶಾಲಿಗಳಾದ ಧನಾಡ್ಯರು ಇರುವುದರಿಂದ ಅವರು ಆರ್ಥಿಕ ಅಸಮಾನತೆಯ ವಿಚಾರವನ್ನು ಬಗೆಹರಿಸಲು ಅಡಚಣೆಗಳನ್ನು ತಂದೊಡ್ಡುತ್ತಾರೆ.
1991ರ ನಂತರ ಭಾರತದ ಅಭಿವೃದ್ಧಿಯ ದರ ಹೆಚ್ಚಾದುದರ ಫಲವಾಗಿ ಬಡವರ ಸಂಖ್ಯೆ ಇಳಿಮುಖವಾಗಿದೆ ಎಂದೂ, ಬಡವರ ಕೊಳ್ಳುವ ಶಕ್ತಿ ಹೆಚ್ಚಾಗಿದೆಯೆಂದೂ ಹೇಳಲಾಗುತ್ತಿದೆ. ಬಡವರು ಮೊದಲಿಗಿಂತ ಹೆಚ್ಚಿನ ಆಹಾರ ಸೇವಿಸುತ್ತಿದ್ದು, ಹಸಿವು ಇಂಗಿದೆಯೆಂದು ಹೇಳಲಾಗುತ್ತಿದೆ. ಆದರೆ ದೇಶದಲ್ಲಿ ಒಂದೆಡೆ ಶತಕೋಟ್ಯಾಧಿಪತಿಗಳ ಸಂಖ್ಯೆ ಏರುತ್ತಿದೆ. ಮತ್ತೊಂದೆಡೆ ದಿನಕ್ಕೆ ಎರಡು ಹೊತ್ತಿನ ಊಟವೂ ಇಲ್ಲದ ಬಡವರ ಸಂಖ್ಯೆ 7 ಕೋಟಿಗಿಂತಲೂ ಹೆಚ್ಚಿದೆ ಎಂಬುದನ್ನು ನಾವು ಮರೆಮಾಚಕೂಡದು. ನಮ್ಮ ಕಣ್ಣೆದುರಿನಲ್ಲೇ ಕೋಟ್ಯಾಂತರ ಜನರು ತಲೆಮೇಲೆ ಕನಿಷ್ಟ ಸೂರೂ ಇಲ್ಲದೆ ಬೀದಿಗಳಲ್ಲಿರುವುದನ್ನು ಮರೆಯುವಂತಿಲ್ಲ. ಆರ್ಥಿಕವಾಗಿ ದೇಶ ಬೆಳೆಯಬೇಕಾದರೆ, ಇಡೀ ರಾಷ್ಟ್ರಕ್ಕೆ ಅಭಿವೃದ್ಧಿಯ ಫಲ ಸಿಗುವಂತಹ ಆರ್ಥಿಕ ಸುಧಾರಣೆಗಳನ್ನು ನಾವು ಮೊದಲು ತಂದುಕೊಳ್ಳಬೇಕು. ಇಂತಹ ಸಮಾಜಮುಖಿ ಸುಧಾರಣೆಗಳಿಗೆ ಪಟ್ಟ ಭದ್ರರಿಂದ ಅಡ್ಡಿ ಅಡಚಣೆಗಳಾಗದಂತೆ ನೋಡಿಕೊಂಡಾಗ ಮಾತ್ರ ಬಡವ ಬಲ್ಲಿದರ ನಡುವಿನ ಕಂದರವನ್ನು ನಾವು ಮುಚ್ಚಬಹುದು. ಆದರೆ ಆಸ್ಥಾನದ ಆರ್ಥಿಕ ಪಂಡಿತರು ಜಿಡಿಪಿ ವೃದ್ಧಿಯನ್ನೇ ದೇಶದ ಅಭಿವೃದ್ಧಿಯೆಂಬ ಭ್ರಮೆ ಬಿತ್ತುತ್ತಿದ್ದಾರೆ.
ಮುಂಬರುವ ಪಾರ್ಲಿಮೆಂಟ್ ಚುನಾವಣೆಯಲ್ಲಿ ಈ ಜ್ವಲಂತ ಸಮಸ್ಯೆಯನ್ನು ಮುನ್ನೆಲೆಗೆ ತರಬೇಕಾದ ಅಗತ್ಯವಿದೆ. ಈ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖವಾದ ವಿಷಯವಾಗುವ ಲಕ್ಷಣ ಕಾಣುತ್ತಿದೆ. ಮೋದಿಯವರು ತಾವು ಭ್ರಷ್ಟಾಚಾರವನ್ನು ಮಟ್ಟ ಹಾಕಿರುವುದಾಗಿ ಪ್ರಚಾರ ಭಾಷಣ ಮಾಡಬಹುದು. ಹಿಂದೆ ಆಡಳಿತ ನಡೆಸಿದವರ ಕಾಲದಲ್ಲಿ ನಡೆದಿರುವ ಹಗರಣಗಳ ಬಗೆಗೆ ಪುಂಖಾನುಪುಂಖವಾಗಿ ಬೊಬ್ಬೆ ಹೊಡೆಯಬಹುದು. ಅದರಂತೆಯೇ ವಿರೋಧ ಪಕ್ಷಗಳೂ ಕೂಡ ಮೋದಿ ಅವರ ಕಾಲದಲ್ಲಾದ ಡಸ್ಸಾಲ್ಟ್ ರಫೈಲ್ ಫೈಟರ್ ಜೆಟ್ಸ್ ಖರೀದಿಯಲ್ಲಿ ಆಗಿರುವ ಭ್ರಷ್ಟಾಚಾರ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ನಮ್ಮ ಬ್ಯಾಂಕುಗಳಿಂದ ಸಾವಿರಾರು ಕೋಟಿಗಳ ಸಾಲ ಗುಳುಂ ಮಾಡಿ, ಕದ್ದು ಪರದೇಶಕ್ಕೆ ಹೋಗಲು ಅವಕಾಶ ಕಲ್ಪಿಸಿದ ಮೋದಿ ಸರ್ಕಾರದ ವಿರುದ್ಧ ದನಿಯೆತ್ತಬಹುದು. ಕ್ರೋನೀ ಕ್ಯಾಪಿಟಲಿಸಂ ಬಗೆಗೆ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ಒಂದು ಪರಿಣಾಮಕಾರಿ ಭಾಷಣ ಮಾಡಿ ಮೋದಿಯವರನ್ನು ಜರ್ಝರಿತಗೊಳಿಸಿದ್ದಾರೆ. ಹೀಗೆ ಈ ಸಾರಿಯ ಚುನಾವಣೆಯಲ್ಲಿ ಸರ್ಕಾರದ ಭ್ರಷ್ಟಾಚಾರ ಪ್ರಮುಖ ವಿಷಯವಾಗುತ್ತದೆ ಎನಿಸುತ್ತದೆ. ಬ್ಯಾಂಕಿನ ಹಣ ನುಂಗಿ ಪಲಾಯನ ಗೈದವರು ನಮ್ಮ ಬ್ಯಾಂಕುಗಳನ್ನು ಬರಿದು ಮಾಡಿ ಓಡಿ ಹೋಗಿದ್ದಾರೆ. ಬ್ಯಾಂಕುಗಳ ಸಮಸ್ಯೆ ಕಗ್ಗಂಟಾಗಿದೆ. ಭ್ರಷ್ಟಾಚಾರದಲ್ಲಿ ಭಾರತ ಇಂದಿಗೂ ಎತ್ತಿದ ಕೈ ಎಂಬುದು ಜಗಜ್ಜಾಹೀರಾಗಿದೆ.
ದೇಶ ಇಂತಹ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿದೆ. ಇದೇ ಸಂದರ್ಭದಲ್ಲಿ ಹಿಂದುತ್ವದ ಮುಸುಕಿನಲ್ಲಿ ಮತಾಂಧ ಸಂಚಿನ ಸಂಘಟನೆಗಳ ಹಾವಳಿಯೂ ಹೆಚ್ಚುತ್ತಿದೆ. ಜಾತಿ ಕಲಹಗಳೂ, ಕೋಮು ಘರ್ಷಣೆಗಳೂ ದಿನಬೆಳಗಾದರೆ ಉಲ್ಬಣವಾಗುತ್ತಿರುವುದರಿಂದ ಅಶಾಂತಿ, ಅಸ್ಥಿರತೆ ವ್ಯಾಪಕವಾಗಿ ಬೆಳೆಯುತ್ತಿದೆ. ಸಂಪದ್ಭರಿತವೂ, ಉದ್ಯಮಗಳ ಕೇಂದ್ರವೂ ಆಗಿದ್ದ ಗುಜರಾತ್ ರಾಜ್ಯದಲ್ಲಿ ಇಂತಹ ವಿದ್ಯಮಾನ ಹೆಚ್ಚಾಗಿ ಕಂಡುಬಂದಿತ್ತು. ಈ ಗುಜರಾತ್ ಮಾದರಿ ಈಗ ಇಡೀ ದೇಶಾದ್ಯಂತ ಹರಡಿಕೊಂಡಿದೆ. ಈ ಕಠಿಣ ಸಂದರ್ಭದಲ್ಲಿ ದೇಶದ ನಿಜವಾದ ಅಭಿವೃದ್ಧಿಯ ಪ್ರಶ್ನೆಗಳನ್ನು ನಾವು ಮುನ್ನೆಲೆಗೆ ತರುವಂತಾಗಬೇಕು. ಆಶಾದಾಯಕ ಸಂಗತಿಯೆಂದರೆ, ಕ್ರಮೇಣ ಗುಜರಾತ್‍ನ ಜನತೆ ಎಚ್ಚೆತ್ತುಕೊಳ್ಳುತ್ತಿದ್ದಾರೆ; ಈ ಸಮಾಜಘಾತುಕ ಅಭಿವೃದ್ಧಿ ಮಾದರಿಯ ವಿರುದ್ಧ ದನಿಯೆತ್ತುತ್ತಿದ್ದಾರೆ. ಮೋದಿಯವರ ಹಿನ್ನಡೆ ಗುಜರಾತಿನಿಂದಲೇ ಅರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...