Homeಸಿನಿಮಾಸಿನಿ ಸುದ್ದಿಸಾಮಾಜಿಕ ದುರಂತದ ವಿಡಂಬನೆಯಸಿನಿಕಾರ ಪೀಟರ್ ಬಾಷೋ.

ಸಾಮಾಜಿಕ ದುರಂತದ ವಿಡಂಬನೆಯಸಿನಿಕಾರ ಪೀಟರ್ ಬಾಷೋ.

- Advertisement -
- Advertisement -

ರಾಜಶೇಖರ್ ಅಕ್ಕಿ |

ರಷಿಯಾದ ಒಂದು ಗ್ರಾಮ, ಆಗತಾನೆ ಕ್ರಾಂತಿಯಾಗಿದೆ. ಮಹಾಯುದ್ಧದ ಪರಿಣಾಮಗಳು ಇನ್ನೂ ಕಾಣಿಸಿಕೊಳ್ಳುತ್ತಿವೆ. ಅಂತಹದ್ದರಲ್ಲಿ ಒಂದು ಗೂಡ್ಸ್ ರೈಲಿನಿಂದ ಪರಾನ್ಯಾ ಎನ್ನುವ ಹೆಣ್ಣುಮಗಳು ಬಂದಿಳಿಯುತ್ತಾಳೆ. ಗೋಣಿಚೀಲವನ್ನೇ ಉಡುಪಾಗಿ ಧರಿಸಿದ ಅವಳು ಮಾನಸಿಕವಾಗಿ ಅಸ್ವಸ್ಥ ಎನ್ನುವುದು ಅವಳ ವರ್ತನೆಗಳಿಂದ ಸ್ಪಷ್ಟವಾಗುತ್ತದೆ. ಜೋಕ್ರ್ಯಾ ಎನ್ನುವ ವ್ಯಕ್ತಿ ತನ್ನ ಕುದುರೆಯನ್ನು ಕಳೆದುಕೊಂಡು, ಹೊಸ ಸೋಷಲಿಸ್ಟ್ ಆಳ್ವಕೆಗೆ ಹೊಂದಿಕೊಳ್ಳದೇ ಸ್ಥಳೀಯ ಕೆಫೆಯಲ್ಲಿ ಕಾಲಹರಣ ಮಾಡುತ್ತಿರುತ್ತಾನೆ. ಪರಾನ್ಯಾ ಹೇಗೋ ಆ ಹಳ್ಳಿಯವಳಾಗುತ್ತಾಳೆ. ಅಲ್ಲಿಯ ಪಡ್ಡೆ ಹುಡುಗರಿಗೆ ಅವಳನ್ನು ಪೀಡಿಸುವುದೇ ಒಂದು ಕೆಲಸ. ಒಂದು ದಿನ ಕಿರುಕುಳದಿಂದ ಪಾರಾಗಲು ಓಡುತ್ತ ಹೋಗಿ ಸ್ಟ್ಯಾಲಿನ್‍ನ ಪ್ರತಿಮೆಯೊಂದರ ಪಕ್ಕಕ್ಕೆ ನಿಂತುಕೊಳ್ಳುತ್ತಾಳೆ. ಜನರ ಒಂದು ಗುಂಪೇ ಬಂದು ತಮಾಷೆ ನೋಡುತ್ತಿದೆ. ಅಷ್ಟರಲ್ಲಿ ಪುಟ್ಟಹುಡುಗಿಯೊಬ್ಬಳು ಅವಳನ್ನು ‘ಸ್ಟಾಲಿನ್‍ನ ಹೆಂಡತಿ’ ಎಂದು ಕರೆದುಬಿಡುತ್ತಾಳೆ. ಅಲ್ಲಿಂದ ಪ್ರಾರಂಭವಾಗುವುದು ಅವಳ ನರಕಯಾತನೆ. ಅಧಿಕಾರಿಗಳು ಅವಳೊಬ್ಬ ಗೂಢಚಾರಿ ಎನ್ನುವ ಸಂಶಯದ ಮೇಲೆ ಬಂಧಿಸಿ ಚಿತ್ರಹಿಂಸೆ ನೀಡುತ್ತಾರೆ. ಆದರೆ ಅವಳಿಂದ ಯಾವ ಮಾಹಿತಿಯೂ ಹೊರಬರುವುದಿಲ್ಲ ಆಗ ಅವಳನ್ನು ಬಿಡುಗಡೆ ಮಾಡಿ, ಅವಳ ಚಲನವಲನಗಳಿಂದ ಮಾಹಿತಿ ಸಿಗಬಹುದು ಎನ್ನುವ ಲೆಕ್ಕಾಚಾರದ ಮೇಲೆ ಅವಳ ಮೇಲೆ ಕಣ್ಣಿಟ್ಟಿರುತ್ತಾರೆ. ಹಿತ್ರಹಿಂಸೆಯನ್ನು ಅನುಭವಿಸಿದ ಪರಾನ್ಯಾಳ ಮಾನಸಿಕ ಸ್ಥಿಮಿತ ಇನ್ನಷ್ಟು ಹದಗೆಟ್ಟಿ, ತನಗೆ ಚಿತ್ರಹಿಂಸೆ ನೀಡಿದಾಗ ಪದೇ ಪದೇ ಕೇಳಿದ ಪದಗಳಾದ ‘ಗೂಢಚಾರ’ ‘ದೇಶದ್ರೋಹಿ’ ಎಂದು ಕಂಡಕಂಡವರನ್ನು ನೋಡಿ ಕರೆಯತೊಡಗುತ್ತಾಳೆ. ಅವಳು ಹೆಸರಿಸಿದ ವ್ಯಕ್ತಿಗಳನ್ನು ಪೊಲೀಸರು ಬಂಧಿಸತೊಡಗಿದಾಗ ಇಡೀ ಊರೇ ಪ್ರಕ್ಷುಬ್ದಗೊಳ್ಳುತ್ತದೆ. ಆಗ ಏನಾದರೂ ಮಾಡಲೇಬೇಕು ಎನ್ನುವ ಸ್ಥಿತಿಗೆ ಬಂದುನಿಂತ ಊರಲ್ಲಿ ಜೋಕ್ರ್ಯಾ ಮಾತ್ರ ಈ ಸಮಸ್ಯೆಯನ್ನು ಪರಿಹರಿಸಬಲ್ಲ.

ಇದು ಹಂಗೇರಿಯದ ಚಿತ್ರನಿರ್ದೇಶಕ ಪೀಟರ್ ಬಾಷೋ 1990 ರಲ್ಲಿ ನಿರ್ದೇಶಿಸಿದ ‘ಸ್ಟ್ಯಾಲಿನ್’ಸ್ ಬ್ರೈಡ್’ ಎನ್ನುವ ಚಿತ್ರದ ಸಾರಾಂಶ.

ಒಂದು ಕಛೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬಳ ನರ್ವಸ್ ಬ್ರೆಕ್‍ಡೌನ್ ಆಗಿ, ತನ್ನೆಲ್ಲ ಬಟ್ಟೆಗಳನ್ನು ಕಳಚಿ ಬೆತ್ತಲೆಯಾಗಿ ರಸ್ತೆಯಲ್ಲಿ ನಡೆಯತೊಡುತ್ತಾಳೆ. ತನ್ನಪಾಡಿಗೆ ತಾನು ಆಸ್ಪತ್ರೆಗೆ ಹೋಗುತ್ತಿದ್ದ ಯುವವೈದ್ಯನೊಬ್ಬ ಇವಳನ್ನು ನೋಡಿ ತನ್ನ ಓವರ್‍ಕೋಟನ್ನು ಅವಳಿಗೆ ಧರಿಸುತ್ತಾನೆ. ತಾನು ಮಾಡಿದ ಈ ಪುಟ್ಟ ಕ್ರಿಯೆಯಿಂದ ಆಗುವ ಪರಿಣಾಮಗಳ ಯಾವುದೇ ಅರಿವಿಲ್ಲದೇ ಆ ವೈದ್ಯ ಮುಂದೆ ಸಾಗುತ್ತಾನೆ. ಆದರೆ ಅವನು ತನ್ನ ಓವರ್‍ಕೋಟನ್ನು ಆ ಬಡಪಾಯಿ ಹೆಣ್ಣುಮಗಳಿಗೆ ಕೊಟ್ಟ ಸ್ಥಳ ಆ ದೇಶದ ಆಳ್ವಿಕೆಯ ವಿರುದ್ಧ ಪ್ರತಿಭಟನೆ ಮಾಡುವವರ ತಾಣ. ಯುವವೈದ್ಯನ ಈ ಒಂದು ಪುಟ್ಟ ಕ್ರಿಯೆಯನ್ನೂ ಪ್ರತಿಭಟನೆಯ ಸಂಕೇತವೆಂದೇ ಅರ್ಥೈಸಿಕೊಳ್ಳುವ ಅಲ್ಲಿಯ ಅಧಿಕಾರಿಗಳು ಆ ವೈದ್ಯನನ್ನು ಬಂಧಿಸಿ, ತನಿಖೆಗೆ ಒಳಪಡಿಸುತ್ತಾರೆ. ಅಲ್ಲಿಂದ ಆ ವೈದ್ಯ ತನ್ನ ಜೀವನವನ್ನು ಹೊಸದಾಗಿ ಕಂಡಿಕೊಳ್ಳಬೇಕಾಗುತ್ತದೆ.

ಇದು ಪೀಟರ್ ಬಾಷೋ ಅವರ ‘ಬನಾನಾ ಸ್ಕಿನ್ ವಾಲ್ಟ್ಜ್’ (1987) ಚಿತ್ರದ ಸಾರಾಂಶ.

1928ರಲ್ಲಿ ಆಗಿನ ಚೆಕೊಸ್ಲೋವೇಕಿಯಾದಲ್ಲಿ ಹುಟ್ಟಿದ ಪೀಟರ್ ಬಾಷೋ, ಹಂಗರಿಯಾದ ಸಿನೆಮಾ ಮತ್ತು ನಾಟಕದ ಶಾಲೆಯಲ್ಲಿ ಪದವಿ ಪಡೆದುಕೊಂಡರು. ಎರಡನೇ ಮಹಾಯುದ್ಧದಲ್ಲಿ ಆದ ಸಾವು ನೋವುಗಳು, ಮಹಾಯುದ್ಧದ ನಂತರ ಹಂಗರಿ ದೇಶ ರಷಿಯಾದ ಸೆಟಲೈಟ್ ಸ್ಟೇಟ್ ಆಗಿ ಮುಂದುವರೆದದ್ದು, ಹೊಸ ಸಮಾಜವಾದಿ ವ್ಯವಸ್ಥೆಯ ಕಟ್ಟುನಿಟ್ಟುಗಳಿಗೆ ಸಾಕ್ಷಿಯಾಗಿದ್ದ ಪೀಟರ್ ಬಾಷೊ ಜೀವನದುದ್ದಕ್ಕೂ ಹೆಚ್ಚಾಗಿ ರಾಜಕೀಯ ಸಿನೆಮಾಗಳನ್ನೇ ಮಾಡಿದರು. 1969 ರಲ್ಲಿ ಅವರು ಮಾಡಿದ ಚಿತ್ರ ‘ದಿ ವಿಟ್ನೆಸ್’ನಲ್ಲಿ ಹಂಗರಿಯ ಕಮ್ಯುನಿಸ್ಟ್ ಕ್ರಾಂತಿಯಲ್ಲಿ ಭಾಗವಹಿಸಿದ್ದ ಒಬ್ಬ ವ್ಯಕ್ತಿ ತನ್ನ ಊರಿನ ಚರಂಡಿ, ನೀರಿನ ಹರಿವುಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಅವನು ತನ್ನ ಮನೆಯಲ್ಲಿ ಅಡುಗೆಗಾಗಿ ಹಂದಿಯೊಂದನ್ನು ಕೊಯ್ಯುತ್ತಾನೆ. ಹಂಗರಿಯಲ್ಲಿ ಆಗ ಅದು ನಿಷಿದ್ಧ. ಯಾರಿಗೂ ಗೊತ್ತಾಗಬಾರದು ಎಂದು ಎಷ್ಟೇ ಲಕ್ಷ ವಹಿಸಿದ್ದರೂ ಅಧಿಕಾರಿಗಳ ಕೈಗೆ ಸಿಕ್ಕಿಹಾಕಿಕೊಳ್ಳುತ್ತಾನೆ. ಅವನನ್ನು ಬಂಧಿಸಿದ ನಂತರ ಶಿಕ್ಷೆಯಾಗುವ ಬದಲು ಬೇರೊಂದು ಊರಲ್ಲಿ ಉನ್ನತ ಕೆಲಸಕ್ಕೆ ನೇಮಿಸಲಾಗುತ್ತದೆ. ಏಕೆ ಎಂದು ಅವನಿಗೆ ತಿಳಿಯದು, ಒಂದು ಸಲ ನ್ಯಾಯಧೀಶನ ಮುಂದೆ ಬಂದು ನಿಲ್ಲಬೇಕಾದಲ್ಲಿ ತನ್ನ ಎಲ್ಲ ಸತ್ಯಗಳನ್ನು ಹೇಳಿಬಿಡುತ್ತಾನೆ. ಅದರಿಂದ ಅವನಿಗೆ ಮರಣದಂಡನೆ

ವಿಧಿಸಬೇಕೆಂದು ತೀರ್ಪು ಬರುತ್ತದೆ ಆದರೆ ಮರಣೆದಂಡನೆ ಜಾರಿಗೊಳ್ಳಬೇಕಾದ ಸಮಯದಲ್ಲಿಯೇ ರಾಜಕೀಯ ಪರಿಸ್ಥಿತಿ ಬದಲಾಯಿಸುತ್ತವೆ. ‘ದಿ ವಿಟ್ನೆಸ್’ ಎನ್ನುವ ಈ ಚಿತ್ರವನ್ನು ಆ ದೇಶದ ಸರಕಾರವೇ ನಿರ್ಮಿಸಿತ್ತು ಆದರೆ ಬಿಡುಗಡೆಯ ಮುಂಚೆಯೇ ಚಿತ್ರವನ್ನು ನಿಷೇಧಿಸಿತು. ಈ ಚಿತ್ರ ವಿದೇಶಗಳಲ್ಲಿ ಬಿಡುಗಡೆಯಾಗಿ ಪ್ರಸಿದ್ಧಿ ಮಾಡಿದ ನಂತರವೇ ಹಂಗೇರಿಯ ಕಮ್ಯನಿಸ್ಟ್ ಸರಕಾರ ನಿಷೇಧವನ್ನು ವಾಪಸ್ ತೆಗೆದುಕೊಂಡಿತು. ಬಾಷೋ ಅವರ ಚಿತ್ರಗಳಲ್ಲಿ ಕಮ್ಯನಿಸ್ಟ್ ಆಡಳಿತದ ಕೊರತೆಗಳನ್ನು ಪ್ರಶ್ನಿಸುತ್ತಾರೆಯೇ ಹೊರತು ಕಮ್ಯೂನಿಸಂ ಅನ್ನು ಅಲ್ಲ. ಹಾಗೂ ಅವರೆಲ್ಲ ಚಿತ್ರಗಳು ಎಷ್ಟೇ ಗಂಭೀರ ವಿಷಯಗಳನ್ನೆತ್ತಿಕೊಂಡರೂ ಚಿತ್ರದುದ್ದಕ್ಕೂ ಹಾಸ್ಯ, ದುರಂತದ ವಿಡಂಬನೆಯೇ ಎದ್ದುಕಾಣುತ್ತವೆ. ಕಮ್ಯನಿಸಂ ಬಗ್ಗೆ, ಅದರ ಇತಿಹಾಸದ ಬಗ್ಗೆ ಅನೇಕ ಅಧ್ಯಯನಗಳು ನಮಗೆ ಲಭ್ಯವಿವೆ ಆದರೆ ಕ್ರಾಂತಿಯ ನಂತರ ಅಲ್ಲಿಯ ಸಬ್‍ಆಲ್ಟರ್ನ್ ಇತಿಹಾಸದ ಬಗ್ಗೆ ತಿಳಿಯಬೇಕಾದರೆ ನಾವು ಸಾಹಿತ್ಯ, ಸಿನೆಮಾಗಳನ್ನೇ ನೆಚ್ಚಬೇಕಾಗುತ್ತದೆ. ಆ ನಿಟ್ಟಿನಲ್ಲಿ ಪೀಟರ್ ಬಾಷೋ ಮಹತ್ವದ ಚಿತ್ರ ಬರಹಗಾರ ಮತ್ತು ನಿರ್ದೇಶಕ.

ಸಿನೆಮಾ ನಿರ್ದೇಶನದ ಕೌಶಲ್ಯದ ಪ್ರಶ್ನೆ ಬಂದಾಗಲೂ ಪೀಟರ್ ಬಾಷೋ ನಂತಹ ನಿರ್ದೇಶಕರು ಗೆಲ್ಲುತ್ತಾರೆ ಎಂದು ನನಗನಿಸುತ್ತದೆ. ಏಕೆಂದರೆ ಅವರ ಚಿತ್ರಗಳಲ್ಲಿ ನಮಗೆ ಕಾಣಿಸುವುದು, ಮನಕ್ಕೆ ತಟ್ಟುವುದು ಆಯಾ ಕಥೆಗಳು, ಪಾತ್ರಗಳು, ಪಾತ್ರಗಳು ನೋವು ನಲಿವು ಅದರೊಂದಿಗೆ ಆಯಾ ಸಾಮಾಜಿಕ ಪರಿಸರದ ಚಿತ್ರಣ ಮತ್ತು ಅವರು ಕೇಳುವ ಪ್ರಶ್ನೆಗಳೇ ಹೊರತು ಎಲ್ಲಿಯೂ ನಮಗೆ ನಿರ್ದೇಶಕÀ ಅಥವಾ ಛಾಯಗ್ರಹಕÀ ಕಾಣಿಸಿಕೊಳ್ಳುವುದಿಲ್ಲ. ಒಂದು ಉತ್ತಮ ಚಿತ್ರದ ಕರುಹು ಇದೇ ತಾನೇ?

ವಿಶ್ವದ ಅಂಡರ್‍ರೇಟೆಡ್ ನಿರ್ದೇಶಕರಲ್ಲಿ ಒಬ್ಬರು ಎನ್ನಲಾಗುವ ಪೀಟರ್ ಬಾಷೋ ತಮ್ಮ ಚಲನಚಿತ್ರ ನಿರ್ದೇಶನದ ಸುಧೀರ್ಘ ಜೀವನವನ್ನು ಮುಗಿಸಿ 2009ರಲ್ಲಿ ತಮ್ಮ 81ನೇ ವಯಸ್ಸಿನಲ್ಲಿ ತೀರಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...