Homeಸಿನಿಮಾಸಿನಿ ಸುದ್ದಿಸಾಮಾಜಿಕ ದುರಂತದ ವಿಡಂಬನೆಯಸಿನಿಕಾರ ಪೀಟರ್ ಬಾಷೋ.

ಸಾಮಾಜಿಕ ದುರಂತದ ವಿಡಂಬನೆಯಸಿನಿಕಾರ ಪೀಟರ್ ಬಾಷೋ.

- Advertisement -
- Advertisement -

ರಾಜಶೇಖರ್ ಅಕ್ಕಿ |

ರಷಿಯಾದ ಒಂದು ಗ್ರಾಮ, ಆಗತಾನೆ ಕ್ರಾಂತಿಯಾಗಿದೆ. ಮಹಾಯುದ್ಧದ ಪರಿಣಾಮಗಳು ಇನ್ನೂ ಕಾಣಿಸಿಕೊಳ್ಳುತ್ತಿವೆ. ಅಂತಹದ್ದರಲ್ಲಿ ಒಂದು ಗೂಡ್ಸ್ ರೈಲಿನಿಂದ ಪರಾನ್ಯಾ ಎನ್ನುವ ಹೆಣ್ಣುಮಗಳು ಬಂದಿಳಿಯುತ್ತಾಳೆ. ಗೋಣಿಚೀಲವನ್ನೇ ಉಡುಪಾಗಿ ಧರಿಸಿದ ಅವಳು ಮಾನಸಿಕವಾಗಿ ಅಸ್ವಸ್ಥ ಎನ್ನುವುದು ಅವಳ ವರ್ತನೆಗಳಿಂದ ಸ್ಪಷ್ಟವಾಗುತ್ತದೆ. ಜೋಕ್ರ್ಯಾ ಎನ್ನುವ ವ್ಯಕ್ತಿ ತನ್ನ ಕುದುರೆಯನ್ನು ಕಳೆದುಕೊಂಡು, ಹೊಸ ಸೋಷಲಿಸ್ಟ್ ಆಳ್ವಕೆಗೆ ಹೊಂದಿಕೊಳ್ಳದೇ ಸ್ಥಳೀಯ ಕೆಫೆಯಲ್ಲಿ ಕಾಲಹರಣ ಮಾಡುತ್ತಿರುತ್ತಾನೆ. ಪರಾನ್ಯಾ ಹೇಗೋ ಆ ಹಳ್ಳಿಯವಳಾಗುತ್ತಾಳೆ. ಅಲ್ಲಿಯ ಪಡ್ಡೆ ಹುಡುಗರಿಗೆ ಅವಳನ್ನು ಪೀಡಿಸುವುದೇ ಒಂದು ಕೆಲಸ. ಒಂದು ದಿನ ಕಿರುಕುಳದಿಂದ ಪಾರಾಗಲು ಓಡುತ್ತ ಹೋಗಿ ಸ್ಟ್ಯಾಲಿನ್‍ನ ಪ್ರತಿಮೆಯೊಂದರ ಪಕ್ಕಕ್ಕೆ ನಿಂತುಕೊಳ್ಳುತ್ತಾಳೆ. ಜನರ ಒಂದು ಗುಂಪೇ ಬಂದು ತಮಾಷೆ ನೋಡುತ್ತಿದೆ. ಅಷ್ಟರಲ್ಲಿ ಪುಟ್ಟಹುಡುಗಿಯೊಬ್ಬಳು ಅವಳನ್ನು ‘ಸ್ಟಾಲಿನ್‍ನ ಹೆಂಡತಿ’ ಎಂದು ಕರೆದುಬಿಡುತ್ತಾಳೆ. ಅಲ್ಲಿಂದ ಪ್ರಾರಂಭವಾಗುವುದು ಅವಳ ನರಕಯಾತನೆ. ಅಧಿಕಾರಿಗಳು ಅವಳೊಬ್ಬ ಗೂಢಚಾರಿ ಎನ್ನುವ ಸಂಶಯದ ಮೇಲೆ ಬಂಧಿಸಿ ಚಿತ್ರಹಿಂಸೆ ನೀಡುತ್ತಾರೆ. ಆದರೆ ಅವಳಿಂದ ಯಾವ ಮಾಹಿತಿಯೂ ಹೊರಬರುವುದಿಲ್ಲ ಆಗ ಅವಳನ್ನು ಬಿಡುಗಡೆ ಮಾಡಿ, ಅವಳ ಚಲನವಲನಗಳಿಂದ ಮಾಹಿತಿ ಸಿಗಬಹುದು ಎನ್ನುವ ಲೆಕ್ಕಾಚಾರದ ಮೇಲೆ ಅವಳ ಮೇಲೆ ಕಣ್ಣಿಟ್ಟಿರುತ್ತಾರೆ. ಹಿತ್ರಹಿಂಸೆಯನ್ನು ಅನುಭವಿಸಿದ ಪರಾನ್ಯಾಳ ಮಾನಸಿಕ ಸ್ಥಿಮಿತ ಇನ್ನಷ್ಟು ಹದಗೆಟ್ಟಿ, ತನಗೆ ಚಿತ್ರಹಿಂಸೆ ನೀಡಿದಾಗ ಪದೇ ಪದೇ ಕೇಳಿದ ಪದಗಳಾದ ‘ಗೂಢಚಾರ’ ‘ದೇಶದ್ರೋಹಿ’ ಎಂದು ಕಂಡಕಂಡವರನ್ನು ನೋಡಿ ಕರೆಯತೊಡಗುತ್ತಾಳೆ. ಅವಳು ಹೆಸರಿಸಿದ ವ್ಯಕ್ತಿಗಳನ್ನು ಪೊಲೀಸರು ಬಂಧಿಸತೊಡಗಿದಾಗ ಇಡೀ ಊರೇ ಪ್ರಕ್ಷುಬ್ದಗೊಳ್ಳುತ್ತದೆ. ಆಗ ಏನಾದರೂ ಮಾಡಲೇಬೇಕು ಎನ್ನುವ ಸ್ಥಿತಿಗೆ ಬಂದುನಿಂತ ಊರಲ್ಲಿ ಜೋಕ್ರ್ಯಾ ಮಾತ್ರ ಈ ಸಮಸ್ಯೆಯನ್ನು ಪರಿಹರಿಸಬಲ್ಲ.

ಇದು ಹಂಗೇರಿಯದ ಚಿತ್ರನಿರ್ದೇಶಕ ಪೀಟರ್ ಬಾಷೋ 1990 ರಲ್ಲಿ ನಿರ್ದೇಶಿಸಿದ ‘ಸ್ಟ್ಯಾಲಿನ್’ಸ್ ಬ್ರೈಡ್’ ಎನ್ನುವ ಚಿತ್ರದ ಸಾರಾಂಶ.

ಒಂದು ಕಛೇರಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿರುವ ಮಹಿಳೆಯೊಬ್ಬಳ ನರ್ವಸ್ ಬ್ರೆಕ್‍ಡೌನ್ ಆಗಿ, ತನ್ನೆಲ್ಲ ಬಟ್ಟೆಗಳನ್ನು ಕಳಚಿ ಬೆತ್ತಲೆಯಾಗಿ ರಸ್ತೆಯಲ್ಲಿ ನಡೆಯತೊಡುತ್ತಾಳೆ. ತನ್ನಪಾಡಿಗೆ ತಾನು ಆಸ್ಪತ್ರೆಗೆ ಹೋಗುತ್ತಿದ್ದ ಯುವವೈದ್ಯನೊಬ್ಬ ಇವಳನ್ನು ನೋಡಿ ತನ್ನ ಓವರ್‍ಕೋಟನ್ನು ಅವಳಿಗೆ ಧರಿಸುತ್ತಾನೆ. ತಾನು ಮಾಡಿದ ಈ ಪುಟ್ಟ ಕ್ರಿಯೆಯಿಂದ ಆಗುವ ಪರಿಣಾಮಗಳ ಯಾವುದೇ ಅರಿವಿಲ್ಲದೇ ಆ ವೈದ್ಯ ಮುಂದೆ ಸಾಗುತ್ತಾನೆ. ಆದರೆ ಅವನು ತನ್ನ ಓವರ್‍ಕೋಟನ್ನು ಆ ಬಡಪಾಯಿ ಹೆಣ್ಣುಮಗಳಿಗೆ ಕೊಟ್ಟ ಸ್ಥಳ ಆ ದೇಶದ ಆಳ್ವಿಕೆಯ ವಿರುದ್ಧ ಪ್ರತಿಭಟನೆ ಮಾಡುವವರ ತಾಣ. ಯುವವೈದ್ಯನ ಈ ಒಂದು ಪುಟ್ಟ ಕ್ರಿಯೆಯನ್ನೂ ಪ್ರತಿಭಟನೆಯ ಸಂಕೇತವೆಂದೇ ಅರ್ಥೈಸಿಕೊಳ್ಳುವ ಅಲ್ಲಿಯ ಅಧಿಕಾರಿಗಳು ಆ ವೈದ್ಯನನ್ನು ಬಂಧಿಸಿ, ತನಿಖೆಗೆ ಒಳಪಡಿಸುತ್ತಾರೆ. ಅಲ್ಲಿಂದ ಆ ವೈದ್ಯ ತನ್ನ ಜೀವನವನ್ನು ಹೊಸದಾಗಿ ಕಂಡಿಕೊಳ್ಳಬೇಕಾಗುತ್ತದೆ.

ಇದು ಪೀಟರ್ ಬಾಷೋ ಅವರ ‘ಬನಾನಾ ಸ್ಕಿನ್ ವಾಲ್ಟ್ಜ್’ (1987) ಚಿತ್ರದ ಸಾರಾಂಶ.

1928ರಲ್ಲಿ ಆಗಿನ ಚೆಕೊಸ್ಲೋವೇಕಿಯಾದಲ್ಲಿ ಹುಟ್ಟಿದ ಪೀಟರ್ ಬಾಷೋ, ಹಂಗರಿಯಾದ ಸಿನೆಮಾ ಮತ್ತು ನಾಟಕದ ಶಾಲೆಯಲ್ಲಿ ಪದವಿ ಪಡೆದುಕೊಂಡರು. ಎರಡನೇ ಮಹಾಯುದ್ಧದಲ್ಲಿ ಆದ ಸಾವು ನೋವುಗಳು, ಮಹಾಯುದ್ಧದ ನಂತರ ಹಂಗರಿ ದೇಶ ರಷಿಯಾದ ಸೆಟಲೈಟ್ ಸ್ಟೇಟ್ ಆಗಿ ಮುಂದುವರೆದದ್ದು, ಹೊಸ ಸಮಾಜವಾದಿ ವ್ಯವಸ್ಥೆಯ ಕಟ್ಟುನಿಟ್ಟುಗಳಿಗೆ ಸಾಕ್ಷಿಯಾಗಿದ್ದ ಪೀಟರ್ ಬಾಷೊ ಜೀವನದುದ್ದಕ್ಕೂ ಹೆಚ್ಚಾಗಿ ರಾಜಕೀಯ ಸಿನೆಮಾಗಳನ್ನೇ ಮಾಡಿದರು. 1969 ರಲ್ಲಿ ಅವರು ಮಾಡಿದ ಚಿತ್ರ ‘ದಿ ವಿಟ್ನೆಸ್’ನಲ್ಲಿ ಹಂಗರಿಯ ಕಮ್ಯುನಿಸ್ಟ್ ಕ್ರಾಂತಿಯಲ್ಲಿ ಭಾಗವಹಿಸಿದ್ದ ಒಬ್ಬ ವ್ಯಕ್ತಿ ತನ್ನ ಊರಿನ ಚರಂಡಿ, ನೀರಿನ ಹರಿವುಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾನೆ. ಅವನು ತನ್ನ ಮನೆಯಲ್ಲಿ ಅಡುಗೆಗಾಗಿ ಹಂದಿಯೊಂದನ್ನು ಕೊಯ್ಯುತ್ತಾನೆ. ಹಂಗರಿಯಲ್ಲಿ ಆಗ ಅದು ನಿಷಿದ್ಧ. ಯಾರಿಗೂ ಗೊತ್ತಾಗಬಾರದು ಎಂದು ಎಷ್ಟೇ ಲಕ್ಷ ವಹಿಸಿದ್ದರೂ ಅಧಿಕಾರಿಗಳ ಕೈಗೆ ಸಿಕ್ಕಿಹಾಕಿಕೊಳ್ಳುತ್ತಾನೆ. ಅವನನ್ನು ಬಂಧಿಸಿದ ನಂತರ ಶಿಕ್ಷೆಯಾಗುವ ಬದಲು ಬೇರೊಂದು ಊರಲ್ಲಿ ಉನ್ನತ ಕೆಲಸಕ್ಕೆ ನೇಮಿಸಲಾಗುತ್ತದೆ. ಏಕೆ ಎಂದು ಅವನಿಗೆ ತಿಳಿಯದು, ಒಂದು ಸಲ ನ್ಯಾಯಧೀಶನ ಮುಂದೆ ಬಂದು ನಿಲ್ಲಬೇಕಾದಲ್ಲಿ ತನ್ನ ಎಲ್ಲ ಸತ್ಯಗಳನ್ನು ಹೇಳಿಬಿಡುತ್ತಾನೆ. ಅದರಿಂದ ಅವನಿಗೆ ಮರಣದಂಡನೆ

ವಿಧಿಸಬೇಕೆಂದು ತೀರ್ಪು ಬರುತ್ತದೆ ಆದರೆ ಮರಣೆದಂಡನೆ ಜಾರಿಗೊಳ್ಳಬೇಕಾದ ಸಮಯದಲ್ಲಿಯೇ ರಾಜಕೀಯ ಪರಿಸ್ಥಿತಿ ಬದಲಾಯಿಸುತ್ತವೆ. ‘ದಿ ವಿಟ್ನೆಸ್’ ಎನ್ನುವ ಈ ಚಿತ್ರವನ್ನು ಆ ದೇಶದ ಸರಕಾರವೇ ನಿರ್ಮಿಸಿತ್ತು ಆದರೆ ಬಿಡುಗಡೆಯ ಮುಂಚೆಯೇ ಚಿತ್ರವನ್ನು ನಿಷೇಧಿಸಿತು. ಈ ಚಿತ್ರ ವಿದೇಶಗಳಲ್ಲಿ ಬಿಡುಗಡೆಯಾಗಿ ಪ್ರಸಿದ್ಧಿ ಮಾಡಿದ ನಂತರವೇ ಹಂಗೇರಿಯ ಕಮ್ಯನಿಸ್ಟ್ ಸರಕಾರ ನಿಷೇಧವನ್ನು ವಾಪಸ್ ತೆಗೆದುಕೊಂಡಿತು. ಬಾಷೋ ಅವರ ಚಿತ್ರಗಳಲ್ಲಿ ಕಮ್ಯನಿಸ್ಟ್ ಆಡಳಿತದ ಕೊರತೆಗಳನ್ನು ಪ್ರಶ್ನಿಸುತ್ತಾರೆಯೇ ಹೊರತು ಕಮ್ಯೂನಿಸಂ ಅನ್ನು ಅಲ್ಲ. ಹಾಗೂ ಅವರೆಲ್ಲ ಚಿತ್ರಗಳು ಎಷ್ಟೇ ಗಂಭೀರ ವಿಷಯಗಳನ್ನೆತ್ತಿಕೊಂಡರೂ ಚಿತ್ರದುದ್ದಕ್ಕೂ ಹಾಸ್ಯ, ದುರಂತದ ವಿಡಂಬನೆಯೇ ಎದ್ದುಕಾಣುತ್ತವೆ. ಕಮ್ಯನಿಸಂ ಬಗ್ಗೆ, ಅದರ ಇತಿಹಾಸದ ಬಗ್ಗೆ ಅನೇಕ ಅಧ್ಯಯನಗಳು ನಮಗೆ ಲಭ್ಯವಿವೆ ಆದರೆ ಕ್ರಾಂತಿಯ ನಂತರ ಅಲ್ಲಿಯ ಸಬ್‍ಆಲ್ಟರ್ನ್ ಇತಿಹಾಸದ ಬಗ್ಗೆ ತಿಳಿಯಬೇಕಾದರೆ ನಾವು ಸಾಹಿತ್ಯ, ಸಿನೆಮಾಗಳನ್ನೇ ನೆಚ್ಚಬೇಕಾಗುತ್ತದೆ. ಆ ನಿಟ್ಟಿನಲ್ಲಿ ಪೀಟರ್ ಬಾಷೋ ಮಹತ್ವದ ಚಿತ್ರ ಬರಹಗಾರ ಮತ್ತು ನಿರ್ದೇಶಕ.

ಸಿನೆಮಾ ನಿರ್ದೇಶನದ ಕೌಶಲ್ಯದ ಪ್ರಶ್ನೆ ಬಂದಾಗಲೂ ಪೀಟರ್ ಬಾಷೋ ನಂತಹ ನಿರ್ದೇಶಕರು ಗೆಲ್ಲುತ್ತಾರೆ ಎಂದು ನನಗನಿಸುತ್ತದೆ. ಏಕೆಂದರೆ ಅವರ ಚಿತ್ರಗಳಲ್ಲಿ ನಮಗೆ ಕಾಣಿಸುವುದು, ಮನಕ್ಕೆ ತಟ್ಟುವುದು ಆಯಾ ಕಥೆಗಳು, ಪಾತ್ರಗಳು, ಪಾತ್ರಗಳು ನೋವು ನಲಿವು ಅದರೊಂದಿಗೆ ಆಯಾ ಸಾಮಾಜಿಕ ಪರಿಸರದ ಚಿತ್ರಣ ಮತ್ತು ಅವರು ಕೇಳುವ ಪ್ರಶ್ನೆಗಳೇ ಹೊರತು ಎಲ್ಲಿಯೂ ನಮಗೆ ನಿರ್ದೇಶಕÀ ಅಥವಾ ಛಾಯಗ್ರಹಕÀ ಕಾಣಿಸಿಕೊಳ್ಳುವುದಿಲ್ಲ. ಒಂದು ಉತ್ತಮ ಚಿತ್ರದ ಕರುಹು ಇದೇ ತಾನೇ?

ವಿಶ್ವದ ಅಂಡರ್‍ರೇಟೆಡ್ ನಿರ್ದೇಶಕರಲ್ಲಿ ಒಬ್ಬರು ಎನ್ನಲಾಗುವ ಪೀಟರ್ ಬಾಷೋ ತಮ್ಮ ಚಲನಚಿತ್ರ ನಿರ್ದೇಶನದ ಸುಧೀರ್ಘ ಜೀವನವನ್ನು ಮುಗಿಸಿ 2009ರಲ್ಲಿ ತಮ್ಮ 81ನೇ ವಯಸ್ಸಿನಲ್ಲಿ ತೀರಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...