Homeಸಾಹಿತ್ಯ-ಸಂಸ್ಕೃತಿಕಥೆಪುರಾಣ ಮತ್ತು ವರ್ತಮಾನದ ಭೀಷ್ಮಂದಿರ ಹೋಲಿಕೆಗಳು !!!

ಪುರಾಣ ಮತ್ತು ವರ್ತಮಾನದ ಭೀಷ್ಮಂದಿರ ಹೋಲಿಕೆಗಳು !!!

- Advertisement -
- Advertisement -

| ಇಸ್ಮತ್ ಪಜೀರ್ |

ಭೀಷ್ಮ ಒಮ್ಮೆ ನಡೆದುಕೊಂಡು ಹೋಗುತ್ತಿರುವಾಗ ಆತನ ಊರುಗೋಲಿನಡಿಗೆ ಸಿಲುಕಿದ ಓತಿಕ್ಯಾತವೊಂದು ಅಪ್ಪಚ್ಚಿಯಾಗುತ್ತದೆ. ಹಾಗೆ ವಿಲವಿಲನೆ ಒದ್ದಾಡುತ್ತಿರುವ ಓತಿಕ್ಯಾತನ ಮೇಲೆ ಕಿಂಚಿತ್ತೂ ಕರುಣೆ ತೋರದೇ ಭೀಷ್ಮ ಅದನ್ನು ತನ್ನ ಊರಿಗೋಲಿನ ತುದಿಯಲ್ಲೇ ಎತ್ತಿ ಮುಳ್ಳಿನ ಗಿಡವೊಂದರ ಮೇಲೆ ಎಸೆಯುತ್ತಾನೆ. ಅಸಹಾಯಕ ಓತಿಕ್ಯಾತ ಭೀಷ್ಮ ನಿಗೆ ನೀನು ಶರಶಯ್ಯೆಯಲ್ಲೇ ಒದ್ದಾಡಿ ಪ್ರಾಣ ಬಿಡುವಂತಾಗಲಿ ಎಂದು ಶಾಪ ಹಾಕುತ್ತದೆ. ಓತಿಕ್ಯಾತನ ಶಾಪವೇ ಭೀಷ್ಮನಿಗೆ ಶರಶಯ್ಯೆಯ ಮರಣ ತಂದಿದೆ ಎಂಬುವುದೂ ಕನ್ನಡದ ಜನಪದರ ನಂಬುಗೆ.

ಮಹಾಭಾರತದ ಭೀಷ್ಮ ತನ್ನ ಶಿಷ್ಯಂದಿರ ಪಟ್ಟವನ್ನು ಖಾಯಂಗೊಳಿಸುವ ಕನಸ ಹೊತ್ತವನಾಗಿದ್ದರೆ…
ಬಿಜೆಪಿಯ ಭೀಷ್ಮ ಸ್ವತಃ ತಾನೇ ರಾಜನಾಗುವ ಕನಸು ಹೊತ್ತಿದ್ದವರು. ಮಹಾಭಾರತದ ಭೀಷ್ಮ ಹೇಗೆ ಕೊನೆಗೂ ತನ್ನ ಶಿಷ್ಯಂದಿರ ಪಟ್ಟ ಉಳಿಸಲು ಸಾಧ್ಯವಾಗಲಿಲ್ಲವೋ… ಹಾಗೆಯೇ ಬಿಜೆಪಿಯ ಭೀಷ್ಮನೂ ತನ್ನ ಕನಸನ್ನು ಸಾಕಾರಗೊಳಿಸಿ ಪಟ್ಟವೇರಲು ಸಾಧ್ಯವಾಗದಿದ್ದುದು ಪುರಾಣ ಮತ್ತು ವರ್ತಮಾನದ ಕ್ರೂರ ವ್ಯಂಗ್ಯವೇ ಸರಿ.

ಇದೀಗ‌ ಬಿಜೆಪಿಯ ಭೀಷ್ಮ ‌ಅಡ್ವಾಣಿಯದ್ದೂ‌ ಮಹಾಭಾರತದ ಭೀಷ್ಮನದ್ದೇ ಸ್ಥಿತಿ. ಇಂದು ಅಡ್ವಾಣಿ ಎಷ್ಟೇ‌‌ ಸುಭಗನಂತೆ ನಟಿಸಲಿ. ಅಡ್ವಾಣಿಗೆ ಅವರ ಪಾಪದ ಫಲ ದೊರೆಯುತ್ತಿದೆ ಎಂದಷ್ಟೇ ಇಂದಿನ‌ ಅವರ ದಯನೀಯ ಸ್ಥಿತಿಯನ್ನು ವಿಶ್ಲೇಷಿಸುವುದು ಹೆಚ್ಚು ಸೂಕ್ತ.

ಅಡ್ವಾಣಿ ತನ್ನ ರಾಜಕೀಯ ಏಳಿಗೆಗಾಗಿ ಮಾಡಿದ ಕೃತ್ಯಗಳು ಕಡಿಮೆ ಕ್ರೌರ್ಯಯದ್ದೇನಲ್ಲ. ಸ್ವತಃ ತಾನು ಕ್ರೌರ್ಯ ಮಾಡಿಸಿದ್ದಲ್ಲದೇ, ತನ್ನ ಶಿಷ್ಯಂದಿರಾದ ಕೌರವರು ಮಾಡಿದ ಕ್ರೌರ್ಯಕ್ಕೆ ಬೀಷ್ಮ ಮೌನಸಮ್ಮತಿ ನೀಡಿ ಒಳಗೊಳಗೇ ನಕ್ಕಂತೆ… ತನ್ನ ಶಿಷ್ಯಂದಿರಾದ ಮೋದಿ- ಶಾ ಜೋಡಿ ಗುಜರಾತಿನಲ್ಲಿ ಮಾಡಿದ ಅಮಾನವೀಯ ಬರ್ಬರ ಕೃತ್ಯಕ್ಕೆ ಇಂದು ತನ್ನ ರಾಜಕೀಯ ಬದುಕಿನ ಶರಶಯ್ಯೆಯಲ್ಲಿ ಮಲಗಿರುವ ಬಿಜೆಪಿಯ ಬೀಷ್ಮ ಪಿತಾಮಹ ಅಡ್ವಾಣಿ ಒಳಗೊಳಗೇ ನಗುತ್ತಾ ಮೌನ ಸಮ್ಮತಿ ನೀಡಿದ್ದು ಇತಿಹಾಸದ ಪುಟ ಸೇರುವಷ್ಟು ಹಳತಾಗಿಲ್ಲ.

ಮಹಾಭಾರತದ ಬೀಷ್ಮನಿಗೆ ಓತಿಕ್ಯಾತನ ಶಾಪವೆಂದು ಜನಪದರು ನಂಬಿದರೆ, ನಮ್ಮ ಕಾಲದ ರಾಜಕೀಯ ಬೀಷ್ಮನಿಗೆ ಎರಡೆರಡು ಶಾಪವಿದೆ. ಒಂದನೆಯದಾಗಿ ರಾಮ ಜನ್ಮ ಭೂಮಿಯ ಹೆಸರಲ್ಲಿ ದೇಶದ ಉದ್ದಗಲದ ಚರಂಡಿಗಳಲ್ಲಿ ಮಾನವ ರಕ್ತದ ಕೋಡಿ ಹರಿಸಿದ್ದರ ಶಾಪ. ಎರಡನೆಯದಾಗಿ ತನ್ನ ಶಿಷ್ಯಂದಿರ ಬರ್ಬರತೆಗೆ ಮೌನ ಸಮ್ಮತಿ ಸೂಚಿಸುತ್ತಾ, ಮಹಾಭಾರತದ ಭೀಷ್ಮ ಓತಿಕ್ಯಾತನ ಸಾವನ್ನು ಆನಂದಿಸಿದಂತೆ ಗುಜರಾತಿನ ಅಮಾಯಕ ಮುಸ್ಲಿಮರ ಸಾವನ್ನು ಆನಂದಿಸಿದುದರ ಶಾಪ.

ಮೊದಲನೆಯದಾಗಿ ನಮ್ಮ ತುಳನಾಡಿನ ಜನಪದರ ನಂಬಿಕೆಯಂತೆ ತಲೆಗೆ ಹಾಕಿದ ನೀರು ಕಾಲಿಗೆ ಬರಲೇಬೇಕು…
ಎರಡನೆಯದಾಗಿ ನಮ್ಮ ಕನ್ನಡದ ಗಾದೆಯಂತೆ ಮಾಡಿದ್ದುಣ್ಣೋ ಮಹರಾಯ.

ಬಿಜೆಪಿಯ ಭೀಷ್ಮನ ಈ ಸ್ಥಿತಿಗೆ ಇದಕ್ಕಿಂತ ಬೇರೆ ಕಾರಣ ಬೇಕೇ….?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...