Homeಅಂಕಣಗಳುಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ 'ಪಾಲಿಸಿ'ಯೇ ಕಾರಣ....

ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ಪುಲ್ವಾಮಾ ಹತ್ಯಾಕಾಂಡ ಸಂಭವಿಸಲು ಮೂಲ ಕಾರಣ ಕಾಶ್ಮೀರದಲ್ಲಿ ಈ 5 ವರ್ಷಗಳಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಉಲ್ಬಣವಾಗಿರುವುದು. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಕಾಶ್ಮೀರ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ಮಾರ್ಗ ಎಂಬ ಅದರ ಧೋರಣೆಯಿಂದಾಗಿ ಕಾಶೀರದಲ್ಲಿ ಇಂದು ಜನಜೀವನವೂ ಕಷ್ಟವಾಗಿದೆ.
ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಗೆಚ್ಚಿದೆ.

ಸೈನಿಕರ ಹತ್ಯೆ: ಶೇ. 93ರಷ್ಟು ಹೆಚ್ಚಳ!

ಮೋದಿ ಅವಧಿಯಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿಗಳು

ಕಳೆದ ಐದು ವರ್ಷಗಳ (2014-18) ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮೋದಿಯ ‘ಬಲಿಷ್ಠ ಸರ್ಕಾರ’ದ ಅವಧಿಯಲ್ಲಿ ಅಲ್ಲಿ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ. ಉಗ್ರ ದಾಳಿಯ ಪ್ರಕರಣಗಳು ಶೇ. 173ರಷ್ಟು ಹೆಚ್ಚಿವೆ. ಆದರೆ ಇವತ್ತು ಪುಲ್ವಾಮಾದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಜೆಪಿಗರು ಮತ್ತು ಸೋಷಿಯಲ್ ಮೀಡಿಯಾದ ‘ಭಕ್ತರ’ ಕಣ್ಣಿಗೆ ದಿನವೂ ಕಾಶ್ಮೀರದಲ್ಲಿ ಹುತಾತ್ಮರಾಗುತ್ತಲೇ ಇರುವ ಒಬ್ಬಿಬ್ಬರು ಸೈನಿಕರ ಬಗ್ಗೆ ಎಂದೂ ತಲೆ ಕೆಡಿಸಿಕೊಂಡಿಲ್ಲ. ಈಗ ಚುನಾವಣೆ ಹತ್ತಿರ ಬಂದಿರುವುದರಿಂದ, ಪುಲ್ವಾಮಾ ಘಟನೆಯನ್ನು ಮುಂದು ಮಾಡಿ, ಕಾಶ್ಮೀರ ಸಮಸ್ಯೆಗೆ ಬಿಜೆಪಿ ಮಾತ್ರ, ಅದರಲ್ಲೂ ಮೋದಿ ಮಾತ್ರ ಉತ್ತರ ನೀಡಬಲ್ಲರು ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಇದೇ ಮೋದಿಯ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರು ಮತ್ತು ನಾಗರಿಕರ ಹತ್ಯೆ ಸಂಖ್ಯೆ ಏರುತ್ತಲೇ ಬಂದಿದೆ.

ಇದೇ ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಸರ್ಕಾರವೇ ನೀಡಿದ ಮಾಹಿತಿ-ಅಂಕಿಸಂಖ್ಯೆಯ ಪ್ರಕಾರ, 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಅಂದರೆ ತಿಂಗಳಿಗೆ ಸರಾಸರಿ 28 ಕೃತ್ಯಗಳು! ಆಗ ಮೋದಿಗೆ ಮತ್ತು ಅವರ ಭಕ್ತರಿಗೆ ಕಾಶ್ಮೀರ ನೆನಪೇ ಆಗಲಿಲ್ಲ! ಅಲ್ಲಿ ಮಿಲಿಟರಿಯನ್ನು ಇನ್ನಷ್ಟು ಹೆಚ್ಚಿಸಿ ಪರಿಸ್ಥಿತಿಯನ್ನು ಕೇಂದ್ರ ಇನ್ನಷ್ಟು ಹದಗೆಡಿಸಿತು.

ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಹತರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ

2018ರಲ್ಲಂತೂ ಅಲ್ಲಿ ಪ್ರತಿ ತಿಂಗಳು ಸರಾಸರಿ 15 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಸೈನಿಕರು ಹುತಾತ್ಮರಾಗುತ್ತಲೇ ಇದ್ದಾರೆ. ನಾಗರಿಕರೂ ಬಲಿಯಾಗುತ್ತಿದ್ದಾರೆ. ಭಯೋತ್ಪಾದಕರ ದಾಳಿ ಮತ್ತು ಸೇನೆಯ ಅಟ್ಟಹಾಸ ಎರಡರ ನಡುವೆ ಸಿಕ್ಕಿರುವ ಅಲ್ಲಿಯ ಸಾಮಾನ್ಯ ನಾಗರಿಕರ ಬಗ್ಗೆ ವೇಷಭಕ್ತರು ಎಂದೂ ಯೋಚಿಸಲೇ ಇಲ್ಲವಲ್ಲ? ಮೋದಿ ಅವಧಿಯಲ್ಲಿ ಭಯೋತ್ಪಾದನಾ ಕೃತ್ಯ ಮತ್ತು ಸೇನೆಯ ಕ್ರಮಗಳಿಂದ ಪ್ರತಿವರ್ಷವೂ ನೂರಾರು ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ಈ ಅಮಾಯಕರ ಸಾವುಗಳ ಬಗ್ಗೆ ಸಂತಾಪ ಇರದವನಿಗೆ ಮೊನ್ನೆ ಹುತಾತ್ಮರಾದ ಸೈನಿಕರ ಬಗ್ಗೆ ಸಂತಾಪ ಮಿಡಿಯುವ ಯಾವ ಹಕ್ಕೂ ಇಲ್ಲ. ಅಷ್ಟಕ್ಕೂ ಈಗ ಸೈನಿಕರ ಹೆಸರಲ್ಲಿ ಇವರೆಲ್ಲ ಮೊಸಳೆ ಕಣ್ಣೀರು ಹಾಕುತ್ತಲೇ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟವರು. ಮೋದಿ ಅವಧಿಯಲ್ಲಿ (2014-18) ಕಾಶ್ಮೀರದಲ್ಲಿ ಒಟ್ಟು 339 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಂದರೆ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ.
ಹಾಗಾದರೆ ಈ ಅವಧಿಯಲ್ಲಿ ಮೋದಿ ಏನೂ ಕ್ರಮ ಕೈಗೊಳ್ಳಲಿಲ್ಲವೇಕೆ? ರಾಜಕೀಯ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ದಾರಿ ಎಂದು ಹೊರಟಾಗ ಇಂಥದ್ದೆಲ್ಲ ಸಂಭವಿಸುತ್ತದೆ ಎಂಬುದು ಜಗತ್ತಿನ ಹಲವಾರು ಕಡೆ ಪ್ರೂವ್ ಆಗಿದೆ. ಹಾಗಿದ್ದೂ ಇವತ್ತು ಮತ್ತೆ ಮಿಲಿಟರಿ ಕ್ರಮ ಮಾತ್ರದಿಂದಲೇ ಪರಿಹಾರ ಎಂಬಂತೆ ಕೆಲವು ಮೂರ್ಖ ಆ್ಯಂಕರ್‌ಗಳು, ಸಾವಿರಾರು ನೆಟ್ಟಿಗರು ಅರಚುತ್ತಿದ್ದಾರೆ. ಇವರೆಲ್ಲರಿಗೆ ದೇಶಭಕ್ತಿ ಎಂದರೇನೇ ಕೊಲ್ಲುವ ಆಟ, ಆದರೆ ತಾವು ಮಾತ್ರ ಸೇಫ್ ಆಗಿರಬೇಕು.

ಉಗ್ರರ ನುಸುಳುವಿಕೆಯಲ್ಲೂ ಹೆಚ್ಚಳ

2016-18 ಅವಧಿಯಲ್ಲಿ ಹೆಚ್ಚಿರುವ ಉಗ್ರರ ನುಸುಳುವಿಕೆ ಪ್ರಮಾಣ

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಇದೇ ನರೇಂದ್ರ ಮೋದಿಯವರು ಭಯೋತ್ಪಾದನಾ ಕೃತ್ಯ ಖಂಡಿಸುತ್ತ, “ದೇಶದ ಪ್ರಧಾನಿ ಏನು ಮಾಡುತ್ತಿದ್ದಾರೆ? ಅವರ ಬಳಿ ಬಿಎಸ್‌ಎಫ್ ಇದೆ, ಸಿಆರ್‌ಪಿಎಫ್ ಇದೆ….ಹೀಗಿರುವಾಗ ಉಗ್ರು ಗಡಿ ದಾಟಿ ನುಸುಳಿ ಬರಲು ಹೇಗೆ ಸಾಧ್ಯವಾಯಿತು” ಎಂದೆಲ್ಲ ಧೀರೋದ್ಧಾತ ಭಾಷಣ ಮಾಡುತ್ತಿದ್ದರು. ಈಗ ಲೋಕಸಭೆ ಮತ್ತು ರಾಜ್ಯಸಭೆಗೆ ಗೃಹ ಇಲಾಖೆಯೇ ನೀಡಿದ ಅಂಕಿಅಂಶಗಳ ಪ್ರಕಾರ ಉಗ್ರ ನುಸುಳುವಿಕೆ ಈಗ ಹಿಂದೆಂದಿಗಿಂತ ಹೆಚ್ಚಾಗಿದೆ. ಪುಲ್ವಾಮಾ ದುರಂತ ನಡೆಯುವ ವಾರ ಮೊದಲಷ್ಟೇ ಈ ಅಂಕಿಅಂಶಗಳು ಹೊರಬಿದ್ದಿವೆ. ಹಾಗಾದರೆ 5 ವರ್ಷ ಈ 56 ಇಂಚಿನ ಮೋದಿ ಏನು ಮಾಡುತ್ತಿದ್ದರು? ಗೃಹ ಇಲಾಖೆಯ ಮಾಹಿತಿ ಪ್ರಕಾರ, 2016-18ರ ಅವಧಿಯಲ್ಲಿ 400ಕ್ಕೂ ಹೆಚ್ಚು ಭಯೋತ್ಪಾದಕರು ಪಾಕಿಸ್ತಾನದಿಂದ ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಶಂಖೆಗಳಿವೆ. ಅಂದರೆ ಈ ಮೂರು ವರ್ಷದ ಅವಧಿಯಲ್ಲಿ ತಿಂಗಳಿಗೆ ಸರಾಸರಿ 11 ಉಗ್ರರು ಕಾಶ್ಮೀರದೊಳಕ್ಕೆ ನುಸುಳುತ್ತಿದ್ದಾರೆ. ರಕ್ಷಣಾ ಸಚಿವರನ್ನು ಡಮ್ಮಿ ಮಾಡಿ, ವಿದೇಶಾಂಗ ಸಚಿವಾಲಯವನ್ನು ಮೂಕಪ್ರೇಕ್ಷಕನಂತೆ ಕೂಡಿಸಿ, ಎಲ್ಲವನ್ನೂ ಪ್ರಧಾನಿ ಕಾರ್ಯಾಲಯವೇ ನಿಯಂತ್ರಿಸಲು ಹೋದದ್ದರ ಫಲವಿದು. ಇದರ ಪರಿಣಾಮವಾಗಿ ನಮ್ಮ ಸೈನಿಕರು ಜೀವ ಕಳೆದುಕೊಳ್ಳುತ್ತಲೇ ಇದ್ದಾರೆ. ದಿನವೂ ಹುತಾತ್ಮರಾಗುವ ಸೈನಿಕರ ಬಗ್ಗೆ ಎಂದೂ ಸಂತಾಪ ವ್ಯಕ್ತಪಡಿಸಿದವರು ಈಗ ಚುನಾವಣೆ ಹತ್ತಿರ ಬಂದ ಪರಿಣಾಮವಾಗಿ ಸೈನಿಕರ ಪರವಾಗಿ ಶೋಕಿಸುವ ನಾಟಕ ಆಡುತ್ತಿದ್ದಾರೆ.
ನೋಟು ಅಮಾನ್ಯೀ ನಂತರ ಉಗ್ರರ ಬೆನ್ನೆಲುಬು ಮುರಿಯಲಾಗಿದೆ ಎಂದು ಆಗಾಗ ಪ್ರಧಾನಿ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಸುಳ್ಳನ್ನು ಹೇಳುತ್ತಲೇ ಬಂದಿದ್ದಾರೆ. ಸರ್ಕಾರವೇ ಹೇಳಿದ ಪ್ರಕಾರ, 2018 ಜೂನ್ ತಿಂಗಳು ಒಂದರಲ್ಲೇ 38 ಉಗ್ರರು ಕಾಶ್ಮೀರದೊಳಕ್ಕೆ ನುಸುಳಿದ್ದಾರೆ ಎಂಬ ಸಂಶಯ ಇದೆ. ಇದೆಲ್ಲ ಗೊತ್ತಿದ್ದೂ ಕ್ರಮ ಕೈಗೊಳ್ಳದ ಮೋದಿ ಮತ್ತು ಅವರ ಸರ್ಕಾರವೇ ಈಗ ಪುಲ್ವಾಮಾ ಸಾವುಗಳಿಗೆ ನೇರ ಕಾರಣವಾಗಿದೆ.

Stratergical, policy ವಿಷಯವನ್ನು ಕೇವಲ ಮಿಲಿಟರಿ ನೆಲೆಯಲ್ಲಿ ಯೋಚಿಸುವ ಹುಂಬತನಕ್ಕೆ ಬಡ ಕುಟುಂಬಗಳಿಂದ ನಮ್ಮ ಸೈನಿಕರು ಪ್ರಾಣ ತೆರುತ್ತಿದ್ದಾರೆ. ಅರ್ನಾಬ್‌ಗಳು, ರಂಗ-ಇತ್ಯಾದಿಗಳು ಯುದ್ಧ ಎಂದು ಅರಚುತ್ತಿದ್ದರೆ, ಜಾಲತಾಣಗಳಲ್ಲಿ ಇತಿಹಾಸದ ಅರಿವೇ ಇಲ್ಲದವರು ಬಿಜೆಪಿಗೆ ಲಾಭ ಆಗುವಂತೆ ತಮ್ಮ ನಕಲಿ ದೇಶಪ್ರೇಮವನ್ನು ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...