Homeಅಂಕಣಗಳುಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ 'ಪಾಲಿಸಿ'ಯೇ ಕಾರಣ....

ಪುಲ್ವಾಮಾ ಹತ್ಯಾಕಾಂಡಕ್ಕೆ ಮೋದಿಯ ‘ಪಾಲಿಸಿ’ಯೇ ಕಾರಣ….

- Advertisement -
- Advertisement -

ಪಿ.ಕೆ. ಮಲ್ಲನಗೌಡರ್ |

ಪುಲ್ವಾಮಾ ಹತ್ಯಾಕಾಂಡ ಸಂಭವಿಸಲು ಮೂಲ ಕಾರಣ ಕಾಶ್ಮೀರದಲ್ಲಿ ಈ 5 ವರ್ಷಗಳಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಉಲ್ಬಣವಾಗಿರುವುದು. ಇದಕ್ಕೆ ಮೋದಿ ಸರ್ಕಾರದ ನೀತಿಗಳೇ ಕಾರಣ. ಕಾಶ್ಮೀರ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ಮಾರ್ಗ ಎಂಬ ಅದರ ಧೋರಣೆಯಿಂದಾಗಿ ಕಾಶೀರದಲ್ಲಿ ಇಂದು ಜನಜೀವನವೂ ಕಷ್ಟವಾಗಿದೆ.
ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಮತ್ತು ಫೆಬ್ರುವರಿ 7ರಂದು ರಾಜ್ಯಸಭೆಯಲ್ಲಿ ಗೃಹ ಸಚಿವಾಲ ನೀಡಿದ ಅಂಕಿಅಂಶಗಳ ಪ್ರಕಾರ, 2014-18ರ ಅವಧಿಯಲ್ಲಿ ಸೈನಿಕರ ಹತ್ಯೆ, ನಾಗರಿಕರ ಹತ್ಯೆ ಪ್ರಮಾಣ ಏರಿಕೆಯಾಗಿದೆ. ಹಾಗೆಯೇ ಉಗ್ರ ನುಸುಳುವಿಕೆ ಪ್ರಮಾಣವೂ ಗೆಚ್ಚಿದೆ.

ಸೈನಿಕರ ಹತ್ಯೆ: ಶೇ. 93ರಷ್ಟು ಹೆಚ್ಚಳ!

ಮೋದಿ ಅವಧಿಯಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿಗಳು

ಕಳೆದ ಐದು ವರ್ಷಗಳ (2014-18) ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮೋದಿಯ ‘ಬಲಿಷ್ಠ ಸರ್ಕಾರ’ದ ಅವಧಿಯಲ್ಲಿ ಅಲ್ಲಿ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ. ಉಗ್ರ ದಾಳಿಯ ಪ್ರಕರಣಗಳು ಶೇ. 173ರಷ್ಟು ಹೆಚ್ಚಿವೆ. ಆದರೆ ಇವತ್ತು ಪುಲ್ವಾಮಾದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಜೆಪಿಗರು ಮತ್ತು ಸೋಷಿಯಲ್ ಮೀಡಿಯಾದ ‘ಭಕ್ತರ’ ಕಣ್ಣಿಗೆ ದಿನವೂ ಕಾಶ್ಮೀರದಲ್ಲಿ ಹುತಾತ್ಮರಾಗುತ್ತಲೇ ಇರುವ ಒಬ್ಬಿಬ್ಬರು ಸೈನಿಕರ ಬಗ್ಗೆ ಎಂದೂ ತಲೆ ಕೆಡಿಸಿಕೊಂಡಿಲ್ಲ. ಈಗ ಚುನಾವಣೆ ಹತ್ತಿರ ಬಂದಿರುವುದರಿಂದ, ಪುಲ್ವಾಮಾ ಘಟನೆಯನ್ನು ಮುಂದು ಮಾಡಿ, ಕಾಶ್ಮೀರ ಸಮಸ್ಯೆಗೆ ಬಿಜೆಪಿ ಮಾತ್ರ, ಅದರಲ್ಲೂ ಮೋದಿ ಮಾತ್ರ ಉತ್ತರ ನೀಡಬಲ್ಲರು ಎಂಬಂತೆ ಬಿಂಬಿಸಲಾಗುತ್ತಿದೆ. ಆದರೆ ಇದೇ ಮೋದಿಯ ಅವಧಿಯಲ್ಲಿ ಕಾಶ್ಮೀರದಲ್ಲಿ ಸೈನಿಕರು ಮತ್ತು ನಾಗರಿಕರ ಹತ್ಯೆ ಸಂಖ್ಯೆ ಏರುತ್ತಲೇ ಬಂದಿದೆ.

ಇದೇ ಫೆಬ್ರುವರಿ 5ರಂದು ಲೋಕಸಭೆಯಲ್ಲಿ ಸರ್ಕಾರವೇ ನೀಡಿದ ಮಾಹಿತಿ-ಅಂಕಿಸಂಖ್ಯೆಯ ಪ್ರಕಾರ, 2014-18ರ ಅವಧಿಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಒಟ್ಟು 1,708 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಅಂದರೆ ತಿಂಗಳಿಗೆ ಸರಾಸರಿ 28 ಕೃತ್ಯಗಳು! ಆಗ ಮೋದಿಗೆ ಮತ್ತು ಅವರ ಭಕ್ತರಿಗೆ ಕಾಶ್ಮೀರ ನೆನಪೇ ಆಗಲಿಲ್ಲ! ಅಲ್ಲಿ ಮಿಲಿಟರಿಯನ್ನು ಇನ್ನಷ್ಟು ಹೆಚ್ಚಿಸಿ ಪರಿಸ್ಥಿತಿಯನ್ನು ಕೇಂದ್ರ ಇನ್ನಷ್ಟು ಹದಗೆಡಿಸಿತು.

ಮೋದಿ ಅವಧಿಯಲ್ಲಿ ಕಾಶ್ಮೀರದಲ್ಲಿ ಹತರಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳ

2018ರಲ್ಲಂತೂ ಅಲ್ಲಿ ಪ್ರತಿ ತಿಂಗಳು ಸರಾಸರಿ 15 ಭಯೋತ್ಪಾದನಾ ಕೃತ್ಯಗಳು ನಡೆದಿವೆ. ಸೈನಿಕರು ಹುತಾತ್ಮರಾಗುತ್ತಲೇ ಇದ್ದಾರೆ. ನಾಗರಿಕರೂ ಬಲಿಯಾಗುತ್ತಿದ್ದಾರೆ. ಭಯೋತ್ಪಾದಕರ ದಾಳಿ ಮತ್ತು ಸೇನೆಯ ಅಟ್ಟಹಾಸ ಎರಡರ ನಡುವೆ ಸಿಕ್ಕಿರುವ ಅಲ್ಲಿಯ ಸಾಮಾನ್ಯ ನಾಗರಿಕರ ಬಗ್ಗೆ ವೇಷಭಕ್ತರು ಎಂದೂ ಯೋಚಿಸಲೇ ಇಲ್ಲವಲ್ಲ? ಮೋದಿ ಅವಧಿಯಲ್ಲಿ ಭಯೋತ್ಪಾದನಾ ಕೃತ್ಯ ಮತ್ತು ಸೇನೆಯ ಕ್ರಮಗಳಿಂದ ಪ್ರತಿವರ್ಷವೂ ನೂರಾರು ನಾಗರಿಕರು ಜೀವ ಕಳೆದುಕೊಂಡಿದ್ದಾರೆ. ಈ ಅಮಾಯಕರ ಸಾವುಗಳ ಬಗ್ಗೆ ಸಂತಾಪ ಇರದವನಿಗೆ ಮೊನ್ನೆ ಹುತಾತ್ಮರಾದ ಸೈನಿಕರ ಬಗ್ಗೆ ಸಂತಾಪ ಮಿಡಿಯುವ ಯಾವ ಹಕ್ಕೂ ಇಲ್ಲ. ಅಷ್ಟಕ್ಕೂ ಈಗ ಸೈನಿಕರ ಹೆಸರಲ್ಲಿ ಇವರೆಲ್ಲ ಮೊಸಳೆ ಕಣ್ಣೀರು ಹಾಕುತ್ತಲೇ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟವರು. ಮೋದಿ ಅವಧಿಯಲ್ಲಿ (2014-18) ಕಾಶ್ಮೀರದಲ್ಲಿ ಒಟ್ಟು 339 ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಂದರೆ ಸೈನಿಕರ ಹತ್ಯೆಯ ಪ್ರಮಾಣ ಶೇ. 93ರಷ್ಟು ಹೆಚ್ಚಿದೆ ಎಂದು ಸರ್ಕಾರವೇ ಒಪ್ಪಿಕೊಂಡಿದೆ.
ಹಾಗಾದರೆ ಈ ಅವಧಿಯಲ್ಲಿ ಮೋದಿ ಏನೂ ಕ್ರಮ ಕೈಗೊಳ್ಳಲಿಲ್ಲವೇಕೆ? ರಾಜಕೀಯ ಸಮಸ್ಯೆಗೆ ಮಿಲಿಟರಿ ಪರಿಹಾರವೊಂದೇ ದಾರಿ ಎಂದು ಹೊರಟಾಗ ಇಂಥದ್ದೆಲ್ಲ ಸಂಭವಿಸುತ್ತದೆ ಎಂಬುದು ಜಗತ್ತಿನ ಹಲವಾರು ಕಡೆ ಪ್ರೂವ್ ಆಗಿದೆ. ಹಾಗಿದ್ದೂ ಇವತ್ತು ಮತ್ತೆ ಮಿಲಿಟರಿ ಕ್ರಮ ಮಾತ್ರದಿಂದಲೇ ಪರಿಹಾರ ಎಂಬಂತೆ ಕೆಲವು ಮೂರ್ಖ ಆ್ಯಂಕರ್‌ಗಳು, ಸಾವಿರಾರು ನೆಟ್ಟಿಗರು ಅರಚುತ್ತಿದ್ದಾರೆ. ಇವರೆಲ್ಲರಿಗೆ ದೇಶಭಕ್ತಿ ಎಂದರೇನೇ ಕೊಲ್ಲುವ ಆಟ, ಆದರೆ ತಾವು ಮಾತ್ರ ಸೇಫ್ ಆಗಿರಬೇಕು.

ಉಗ್ರರ ನುಸುಳುವಿಕೆಯಲ್ಲೂ ಹೆಚ್ಚಳ

2016-18 ಅವಧಿಯಲ್ಲಿ ಹೆಚ್ಚಿರುವ ಉಗ್ರರ ನುಸುಳುವಿಕೆ ಪ್ರಮಾಣ

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ಇದೇ ನರೇಂದ್ರ ಮೋದಿಯವರು ಭಯೋತ್ಪಾದನಾ ಕೃತ್ಯ ಖಂಡಿಸುತ್ತ, “ದೇಶದ ಪ್ರಧಾನಿ ಏನು ಮಾಡುತ್ತಿದ್ದಾರೆ? ಅವರ ಬಳಿ ಬಿಎಸ್‌ಎಫ್ ಇದೆ, ಸಿಆರ್‌ಪಿಎಫ್ ಇದೆ….ಹೀಗಿರುವಾಗ ಉಗ್ರು ಗಡಿ ದಾಟಿ ನುಸುಳಿ ಬರಲು ಹೇಗೆ ಸಾಧ್ಯವಾಯಿತು” ಎಂದೆಲ್ಲ ಧೀರೋದ್ಧಾತ ಭಾಷಣ ಮಾಡುತ್ತಿದ್ದರು. ಈಗ ಲೋಕಸಭೆ ಮತ್ತು ರಾಜ್ಯಸಭೆಗೆ ಗೃಹ ಇಲಾಖೆಯೇ ನೀಡಿದ ಅಂಕಿಅಂಶಗಳ ಪ್ರಕಾರ ಉಗ್ರ ನುಸುಳುವಿಕೆ ಈಗ ಹಿಂದೆಂದಿಗಿಂತ ಹೆಚ್ಚಾಗಿದೆ. ಪುಲ್ವಾಮಾ ದುರಂತ ನಡೆಯುವ ವಾರ ಮೊದಲಷ್ಟೇ ಈ ಅಂಕಿಅಂಶಗಳು ಹೊರಬಿದ್ದಿವೆ. ಹಾಗಾದರೆ 5 ವರ್ಷ ಈ 56 ಇಂಚಿನ ಮೋದಿ ಏನು ಮಾಡುತ್ತಿದ್ದರು? ಗೃಹ ಇಲಾಖೆಯ ಮಾಹಿತಿ ಪ್ರಕಾರ, 2016-18ರ ಅವಧಿಯಲ್ಲಿ 400ಕ್ಕೂ ಹೆಚ್ಚು ಭಯೋತ್ಪಾದಕರು ಪಾಕಿಸ್ತಾನದಿಂದ ಕಾಶ್ಮೀರಕ್ಕೆ ನುಸುಳಿದ್ದಾರೆ ಎಂಬ ಶಂಖೆಗಳಿವೆ. ಅಂದರೆ ಈ ಮೂರು ವರ್ಷದ ಅವಧಿಯಲ್ಲಿ ತಿಂಗಳಿಗೆ ಸರಾಸರಿ 11 ಉಗ್ರರು ಕಾಶ್ಮೀರದೊಳಕ್ಕೆ ನುಸುಳುತ್ತಿದ್ದಾರೆ. ರಕ್ಷಣಾ ಸಚಿವರನ್ನು ಡಮ್ಮಿ ಮಾಡಿ, ವಿದೇಶಾಂಗ ಸಚಿವಾಲಯವನ್ನು ಮೂಕಪ್ರೇಕ್ಷಕನಂತೆ ಕೂಡಿಸಿ, ಎಲ್ಲವನ್ನೂ ಪ್ರಧಾನಿ ಕಾರ್ಯಾಲಯವೇ ನಿಯಂತ್ರಿಸಲು ಹೋದದ್ದರ ಫಲವಿದು. ಇದರ ಪರಿಣಾಮವಾಗಿ ನಮ್ಮ ಸೈನಿಕರು ಜೀವ ಕಳೆದುಕೊಳ್ಳುತ್ತಲೇ ಇದ್ದಾರೆ. ದಿನವೂ ಹುತಾತ್ಮರಾಗುವ ಸೈನಿಕರ ಬಗ್ಗೆ ಎಂದೂ ಸಂತಾಪ ವ್ಯಕ್ತಪಡಿಸಿದವರು ಈಗ ಚುನಾವಣೆ ಹತ್ತಿರ ಬಂದ ಪರಿಣಾಮವಾಗಿ ಸೈನಿಕರ ಪರವಾಗಿ ಶೋಕಿಸುವ ನಾಟಕ ಆಡುತ್ತಿದ್ದಾರೆ.
ನೋಟು ಅಮಾನ್ಯೀ ನಂತರ ಉಗ್ರರ ಬೆನ್ನೆಲುಬು ಮುರಿಯಲಾಗಿದೆ ಎಂದು ಆಗಾಗ ಪ್ರಧಾನಿ ಮತ್ತು ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಸುಳ್ಳನ್ನು ಹೇಳುತ್ತಲೇ ಬಂದಿದ್ದಾರೆ. ಸರ್ಕಾರವೇ ಹೇಳಿದ ಪ್ರಕಾರ, 2018 ಜೂನ್ ತಿಂಗಳು ಒಂದರಲ್ಲೇ 38 ಉಗ್ರರು ಕಾಶ್ಮೀರದೊಳಕ್ಕೆ ನುಸುಳಿದ್ದಾರೆ ಎಂಬ ಸಂಶಯ ಇದೆ. ಇದೆಲ್ಲ ಗೊತ್ತಿದ್ದೂ ಕ್ರಮ ಕೈಗೊಳ್ಳದ ಮೋದಿ ಮತ್ತು ಅವರ ಸರ್ಕಾರವೇ ಈಗ ಪುಲ್ವಾಮಾ ಸಾವುಗಳಿಗೆ ನೇರ ಕಾರಣವಾಗಿದೆ.

Stratergical, policy ವಿಷಯವನ್ನು ಕೇವಲ ಮಿಲಿಟರಿ ನೆಲೆಯಲ್ಲಿ ಯೋಚಿಸುವ ಹುಂಬತನಕ್ಕೆ ಬಡ ಕುಟುಂಬಗಳಿಂದ ನಮ್ಮ ಸೈನಿಕರು ಪ್ರಾಣ ತೆರುತ್ತಿದ್ದಾರೆ. ಅರ್ನಾಬ್‌ಗಳು, ರಂಗ-ಇತ್ಯಾದಿಗಳು ಯುದ್ಧ ಎಂದು ಅರಚುತ್ತಿದ್ದರೆ, ಜಾಲತಾಣಗಳಲ್ಲಿ ಇತಿಹಾಸದ ಅರಿವೇ ಇಲ್ಲದವರು ಬಿಜೆಪಿಗೆ ಲಾಭ ಆಗುವಂತೆ ತಮ್ಮ ನಕಲಿ ದೇಶಪ್ರೇಮವನ್ನು ಹರಡುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...