Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...