Homeಅಂಕಣಗಳುಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಮತ್ತು ಪತ್ರಿಕೋದ್ಯಮ

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ

- Advertisement -
- Advertisement -

| ಗೌರಿ ಲಂಕೇಶ್ |
08 ಜೂನ್, 2008 (ಸಂಪಾದಕೀಯದಿಂದ)

ಪೆಟ್ರೋಲ್ ಬೆಲೆಯನ್ನು ಇನ್ನಿಲ್ಲದಂತೆ ಏರಿಸಿರುವ ಕೇಂದ್ರ ಸರ್ಕಾರ ಅದಕ್ಕೆ ಹಲವಾರು ಸಮಜಾಯಿಷಿಗಳನ್ನು ನೀಡುತ್ತಿದೆ. ಅವುಗಳಲ್ಲಿ ತೈಲ ಉತ್ಪಾದನಾ ಕಂಪನಿಗಳ ನಷ್ಟ 42 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ರೂಪಾಯಿಗಳಿಗೆ ಏರದಂತೆ ತಡೆಯಲೆಂದು ಬೆಲೆಯನ್ನು ಹೆಚ್ಚಿಸಬೇಕಾಯಿತು ಎಂಬುದು ಒಂದು.

ಆದರೆ ವಿಚಿತ್ರ ಸಂಗತಿ ಯಾವುದೆಂದರೆ ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಗ್ಯಾಸ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಂಪನಿಗಳು ಕಳೆದ ವರ್ಷ ಇಷ್ಟೊಂದು ನಷ್ಟವನ್ನು ಕಂಡಿದ್ದರೆ, ಅದೇ ಸಾಲಿನಲ್ಲಿ ರಿಲೆಯನ್ಸ್ ಕಂಪನಿಯು ಇದೇ ತೈಲ ಉತ್ಪಾದನೆಯಲ್ಲಿ 10,372 ಕೋಟಿ ರೂಪಾಯಿಗಳಷ್ಟು ಲಾಭವನ್ನು ಕಂಡಿದೆ. ಇದು ಹೇಗೆ ಸಾಧ್ಯವಾಯಿತು?

ಇನ್ನೊಂದು ಸಂಗತಿ ಯಾವುದೆಂದರೆ ಇವತ್ತು ತೈಲ ಬೆಲೆಯನ್ನು ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿರುವ ಕೇಂದ್ರ ಸರ್ಕಾರ ತನ್ನ 2008ನೇ ಬಜೆಟ್‍ನಲ್ಲಿ ಹೇಳಿದ್ದೇನೆಂದರೆ 2007-08ನೇ ಆರ್ಥಿಕ ವರ್ಷದಲ್ಲಿ ಕಾಪೆರ್Çರೇಟ್ ಕಂಪೆನಿಗಳಿಗೆ ನೀಡಿದ ತೆರಿಗೆ ರಿಯಾಯಿತಿಯಿಂದಾಗಿ 58,655 ಕೋಟಿ ರೂಪಾಯಿಗಳ ನಷ್ಟ ಮತ್ತು ಅಬಕಾರಿ ಶುಲ್ಕ ರಿಯಾಯಿತಿಯಿಂದಾಗಿ 87,992 ಕೋಟಿ ರೂಪಾಯಿಗಳಷ್ಟು ನಷ್ಟವಾಗಿದೆ ಎಂದು. ಇವೆರಡರ ಒಟ್ಟು ಮೊತ್ತ 1,46,642 ಕೋಟಿ ರೂಪಾಯಿಗಳು.

ಆ ಹಣವನ್ನು ವಸೂಲಿ ಮಾಡದ ಸರ್ಕಾರ ಇಂದು ತೈಲ ಬೆಲೆಯನ್ನು ಏರಿಸಿ ಈಗಾಗಲೇ ಹಣದುಬ್ಬರದಿಂದ ತತ್ತರಿಸುತ್ತಿರುವ ಜನಸಾಮಾನ್ಯರ ಮೇಲೆ ಮತ್ತಷ್ಟು ಒತ್ತಡ ಹೇರುತ್ತಿದೆ ಎಂದರೆ ಈ ಸರ್ಕಾರಕ್ಕೆ ಜನ ಏನು ಮಾಡಬೇಕು?

ಇಲ್ಲಿಯ ತನಕ ಸಿನಿಮಾ, ಆರ್ಟ್ ಗ್ಯಾಲರಿ, ನಾಟಕ ಇಂತಹವುಗಳ ಮೇಲೆ ದಾಳಿ ಇಡುತ್ತಿದ್ದ ಕೋಮುವಾದಿಗಳು ಈಗ ಪತ್ರಿಕಾ ಕಚೇರಿಗಳ ಮೇಲೂ ದಾಳಿ ಮಾಡಲಾರಂಭಿಸಿವೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ `ಲೋಕಸತ್ತಾ’ ಎಂಬ ಮರಾಠಿ ಪತ್ರಿಕೆಯ ಸಂಪಾದಕ ಕುಮಾರ್ ಕೇಟ್ಕರ್‍ರವರ ಮನೆಯ ಮೇಲೆ ಶಿವಸಂಗ್ರಾಮ್ ಪಾರ್ಟಿ ಎಂಬ ಸಂಘಟನೆಯ ಸದಸ್ಯರು ದಾಳಿ ಮಾಡಿದರು.

ಅದಕ್ಕೆ ಕಾರಣ ಕೇಟ್ಕರ್‍ರವರು ಬರೆದಿದ್ದ ಒಂದು ಲೇಖನ. ಇತ್ತೀಚೆಗೆ ಮಹಾರಾಷ್ಟ್ರ ಸರ್ಕಾರವು ಅಮೆರಿಕದ ಸ್ಟ್ಯಾಚು ಆಫ್ ಲಿಬರ್ಟಿದಂತೆಯೇ ಮುಂಬೈನ ಸಮುದ್ರದಲ್ಲಿ ಶಿವಾಜಿಯ ದೊಡ್ಡ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವನ್ನು ಎತ್ತಿಕೊಂಡಿತು. ಆ ಪ್ರತಿಮೆಯನ್ನು ಸ್ಥಾಪಿಸಲು ಹಲವು ಕೋಟಿ ರೂಪಾಯಿಗಳು ವೆಚ್ಚವಾಗುತ್ತದೆಂದು ಅಂದಾಜಿಸಲಾಗಿತ್ತು.

ಹೇಳಿಕೇಳಿ ಮಹಾರಾಷ್ಟ್ರದ ವಿದರ್ಭ ಪ್ರದೇಶದಲ್ಲಿ ನೂರಾರು ಅಸಹಾಯಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ, ಇತರೆಡೆ ಬಡತನ ತಾಂಡವವಾಡುತ್ತಿದೆ, ಜನ ಸಾಮಾನ್ಯರಿಗೆ ಕುಡಿಯುವ ನೀರೂ ಅಲಭ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಜನರ ಸಮಸ್ಯೆಯನ್ನು ನೀಗಿಸುವ ಬದಲಾಗಿ ಒಂದು ಪ್ರತಿಮೆಗೆ ಕೋಟ್ಯಾಂತರ ರೂಪಾಯಿಗಳನ್ನು ವೆಚ್ಚ ಮಾಡುವುದು ಸರಿಯೇ? ಎಂದು ಕೇಟ್ಕರ್ ತಮ್ಮ ಲೇಖನದಲ್ಲಿ ಪ್ರಶ್ನಿಸಿದರು. ಅವರ ಪ್ರಶ್ನೆ ಸರಿಯಾಗಿಯೇ ಇತ್ತು. ಆದರೆ ಶಿವಸಂಗ್ರಾಮ್ ಪಾರ್ಟಿಯವರಿಗೆ ಕೇಟ್ಕರ್ ಶಿವಾಜಿಗೆ ಅವಮಾನ ಮಾಡಿದ್ದಾರೆ ಎನಿಸಿತು. ಶಿವಾಜಿಯ ಪ್ರತಿಮೆ ಅಗತ್ಯವಿಲ್ಲ ಎಂದೇ ಆತ ಹೇಳಿದ್ದಾರೆಂದು ಭಾವಿಸಿದ ಅವರು ಕೇಟ್ಕರ್‍ರವರ ಮನೆಯ ಮೇಲೆ ದಾಳಿ ಮಾಡಿದರು. ಆದರೆ ಶಿವಸಂಗ್ರಾಮ್ ಪಾರ್ಟಿಯವರು ಶರದ್ ಪವಾರ್‍ರವರ ಎನ್‍ಸಿಪಿ ಪಕ್ಷದ ಅಂಗ ಸಂಸ್ಥೆಯಾಗಿರುವುದರಿಂದ ಅವರ ವಿರುದ್ಧ ಯಾವ ಕಾನೂನು ಕ್ರಮವನ್ನು ಅಲ್ಲಿನ ಸರ್ಕಾರ ತೆಗೆದುಕೊಂಡಿಲ್ಲ.

ಈ ವಾರ ನಡೆದಿರುವ ಈ ಪ್ರಕರಣಗಳು ಮೊದಲ ಬಾರಿಗೆ ನಡೆದಿರುವಂತಹದ್ದೇನಲ್ಲ. ಕಳೆದ ವರ್ಷ `ದಿನಸುಡರ್’ ಪತ್ರಿಕೆ ನಡೆಸಿದ ಸಮೀಕ್ಷೆಯೊಂದರಿಂದ ಉದ್ರೇಕಗೊಂಡ ಕರುಣಾನಿಧಿಯ ಬೆಂಬಲಿಗರು ಆ ಪತ್ರಿಕೆಯ ಕಚೇರಿಯ ಮೇಲೆ ದಾಳಿ ನಡೆಸಿ ಇಬ್ಬರ ಸಾವಿಗೆ ಕಾರಣರಾಗಿದ್ದರು. ಹಾಗೆಯೇ ಸರ್ವೋಚ್ಛ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ವೈ.ಕೆ. ಸಬರ್‍ವಾಲ್‍ರ ಬಗ್ಗೆ ತನಿಖಾ ವರದಿಗಳನ್ನು ಪ್ರಕಟಿಸಿದ್ದಕ್ಕೆ ದೆಹಲಿ ನ್ಯಾಯಾಲಯ ಮಿಡ್ ಡೆ ಪತ್ರಿಕೆಯ ಮೂವರು ಪತ್ರಕರ್ತರಿಗೆ ಜೈಲು ಶಿಕ್ಷೆಯನ್ನು ನೀಡಿತ್ತು.

ಪ್ರಜಾಪ್ರಭುತ್ವದ ನಾಲ್ಕನೆ ಸ್ತಂಭವಾಗಿರುವ ಪತ್ರಿಕೋದ್ಯಮದ ಮೇಲೆ ಹೀಗೆ ಒಂದೆಡೆಯಿಂದ ಕೋಮುವಾದಿಗಳಿಂದ ದಾಳಿ, ಇನ್ನೊಂದೆಡೆ ವ್ಯವಸ್ಥೆಯಿಂದ ದಾಳಿ ನಡೆದರೆ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವಾದರೂ ಉಳಿಯುವುದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...