Homeಮುಖಪುಟಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

ಪೇಜಾವರರ ಗಂಟಲಲ್ಲಿ ಹಿಂದೂತ್ವದ ಪುಂಡ!!

- Advertisement -
- Advertisement -

ವರದಿಗಾರ |

ಸಂಘಪರಿವಾರದ ಆಸ್ಥಾನ ಪುರೋಹಿತ ಪೇಜಾವರ ವಿಶ್ವೇಶತೀರ್ಥ ಸ್ವಾಮಿಯ ಅಸಲಿ ಅವತಾರ ಅನಾವರಣವಾಗಿದೆ. ಕಳೆದ ವಾರ ಮಂಗಳೂರಲ್ಲಿ ವಿಶ್ವಹಿಂದೂ ಪರಿಷತ್ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಬೇಗ ಆಗಬೇಕೆಂದು ಜನದ್ರೋಹ ಸಭೆಯೊಂದನ್ನು ನಡೆಸಿತ್ತಲ್ಲ, ಅಲ್ಲಿ ಪೇಜಾವರರ ದಿವ್ಯ ಸಾನಿಧ್ಯವಿತ್ತು. ರಾಮಮಂದಿರಕ್ಕಾಗಿ ಪೇಜಾವರ ಸ್ವಾಮಿ ಕ್ಯಾತೆ ತೆಗೆದು ಕೂಗಾಡಿದ ಪರಿ ಭಯೋತ್ಪಾದನೆಯ ಸ್ಯಾಂಪಲ್ಲಿನಂತಿತ್ತು. ನಳಿನ್‌ಕುಮಾರ್ ಕಟೀಲ್, ಅನಂತಕುಮಾರ್ ಹೆಗಡೆ, ಪ್ರತಾಪ್‌ಸಿಂಹ, ಪ್ರಮೋದ್ ಮುತಾಲಿಕ್ ಮುಂತಾದ ಮೂರನೇ ದರ್ಜೆ ಹಿಂದೂತ್ವದ ಹಿಕಮತ್ತುದಾರರ ಗಂಟಲಲ್ಲಿ ಪೇಜಾವರ ಮಾತನಾಡಿದ್ದು ಕೇಳಿದ ಜನ ಬೆಚ್ಚಿಬಿದ್ದಿದ್ದಾರೆ. ಅಲ್ಲಿಗೆ ಈ ಅದ್ವೈತ ಸನ್ಯಾಸಿಯ ದೋಖಾ ದ್ವಂದ್ವ ಸಿದ್ಧಾಂತ ಮತ್ತೊಮ್ಮೆ ಜಗಜ್ಜಾಹೀರಾಗಿ ಹೋಗಿದೆ!

ಪರಧರ್ಮ ಸಹಿಷ್ಣು ಸಂತನ ಗೆಟಪ್ಪಿನಲ್ಲಿ ಓಡಾಡುವ ಈ ಪೊಲಿಟಿಕಲ್ ಸ್ವಾಮಿಯ ನಡೆ-ನುಡಿಯಲ್ಲಿ ಯಾವಾಗಲೂ ವಿರೋಧಾಭಾಸ-ವಿಪರ‍್ಯಾಸಗಳೇ, ಬ್ರಾಹ್ಮಣ್ಯದಡಿಯ ಅಸಮಾನತೆ-ಅಸ್ಪೃಶ್ಯತೆಗಳ ಅರ್ಥ ಮಾಡಿಸುತ್ತವೆ. ಹರಿಜನರ ಕೇರಿಗಳಿಗೆ ಹೋಗಿ ಪಾದ ತೊಳೆಸಿಕೊಳ್ಳುವ ಪೇಜಾವರರು ಮರಳಿ ಉಡುಪಿ ಮಠಕ್ಕೆ ಬರುವಾಗಲೇ ಜನಿವಾರ ಬದಲಿಸಿ ಶುದ್ಧೀಕರಣಗೊಳ್ಳುತ್ತಾರೆ. ಧರ್ಮೋನ್ಮಾದಿ ಕರಸೇವಕರು ಬಾಬರಿ ಮಸೀದಿ ಗುಮ್ಮಟ ಉರುಳಿಸುವಾಗ ಕಣ್ಣಾರೆ ಕಂಡು ಧನ್ಯತಾಭಾವದಿಂದ ಮಂದಹಾಸ ಬೀರುವ ಈ ಸ್ವಾಮಿ ತನ್ನ ಮಠದ ಆವರಣದಲ್ಲೇ ಮುಸ್ಲಿಮರಿಗೆ ಇಫ್ತಾರ್ ಕೂಟ ಏರ್ಪಡಿಸುವ ನಾಟಕವಾಡಬಲ್ಲರು.

ಉಡುಪಿ ಮಾಧ್ವಮಠದಲ್ಲಿ ಪಂಕ್ತಿಭೇದವೇ ಇಲ್ಲವೆಂದು ಹಸಿ-ಹಸಿ ಸುಳ್ಳು ಹೇಳುವ ಪೇಜಾವರ ಸ್ವಾಮಿ ಕುಕ್ಕೆ ಸುಬ್ರಹ್ಮಣ್ಯದ ಮಡೆಸ್ನಾನಕ್ಕೆ ಪರ‍್ಯಾಯವಾಗಿ ಉಡೆಸ್ನಾನದ ಆವಿಷ್ಕಾರ ಮಾಡಿ ಅಮಾಯಕ ಅಬ್ರಾಹ್ಮಣರ ದಿಕ್ಕು ತಪ್ಪಿಸುತ್ತಾರೆ. ಇವತ್ತಿಗೂ ಪೇಜಾವರರು ಗೋ-ಗೂಂಡಾಗಳಿಗೆ, ಬಾಬರಿ ಮಸೀದಿ ಧ್ವಂಸಕರಿಗೆ ಸ್ಫೂರ್ತಿಯ ಚಿಲುಮೆ. ತನ್ನ ಧಾರ್ಮಿಕ ಕಾರ್ಯಾಚರಣೆಗೆ ಅನುಕೂಲ ಆಗುತ್ತದೆಂದಾಗ ಸಾಬರನ್ನು ಮಠಕ್ಕೆ ಕರೆದು ಇಫ್ತಾರ್ ಕೂಟ ಮಾಡುವ ಪೇಜಾವರರು ಶಾಸಕ ರಘುಪತಿ ಭಟ್ಟನಂಥವರು ಕಣ್ಣುಬಿಟ್ಟರೆ ಹೆದರಿ ಮರು ವರ್ಷ ಆ ಇಫ್ತಾರ್ ಪ್ರಹಸನ ಮಾಡುವುದೇ ಇಲ್ಲಾ! ಹಿಂದೂತ್ವದ ಸೈತಾನರು ಪಾಪದ ಸಾಬರ ಬೆತ್ತಲೆ ಮಾಡಿ ಬಡಿದು ಕೇಕೆ ಹಾಕಿದರೂ, ಕೊಂದು ಎಸೆದರೂ ಕಂಡೂ ಕಾಣದಂತಿರುತ್ತಾರೆ ಪೇಜಾವರ ಸ್ವಾಮಿ. ಹಾಗಂತ ಶಾಂತಿ, ಸಹಬಾಳ್ವೆ, ಸಹಿಷ್ಣುತೆ, ಸಂವಿಧಾನದ ಬಗ್ಗೆ ಉದ್ದುದ್ದ ವ್ಯಾಖ್ಯಾನ ಕೊಡಲು ಮಾತ್ರ ಮರೆಯುವುದಿಲ್ಲ……..

ಇಂಥ ಗುಣಧರ್ಮದ ಪೇಜಾವರ ಸ್ವಾಮೀಜಿ ಮೊನ್ನೆ ಮಂಗಳೂರಲ್ಲಿ ಕೇಸರಿ ಕೂಟದಲ್ಲಿ ಉದುರಿಸಿದ ಭೀಭತ್ಸ ಅಣಿ ಮುತ್ತುಗಳು ಅವರ ಜಾಯಮಾನಕ್ಕೆ ತಕ್ಕಂತೆಯೇ ಇದೆ. ಮಾತಿನುದ್ದಕ್ಕೂ ಪೇಜಾವರರ ಮೇಲೆ ಹಿಂದೂತ್ವದ ಭಯೋತ್ಪಾದಕನ ಆವಾಹನೆ ಆದಂತಿತ್ತು. ಹಿಂದೂತ್ವದ ಕಾಳಗದ ಕಾಲಾಳುಗಳಾದ ಅವಿಭಜಿತ ದಕ್ಷಿಣ ಕನ್ನಡದ ಅಬ್ರಾಹ್ಮಣರನ್ನು ಅನಾಹುತಕ್ಕೆ ಪ್ರಚೋದಿಸುವ ಓಘ ಪೇಜಾವರರ ಭಾಷಣಕ್ಕಿತ್ತು. ಎತ್ತಿಂದೆತ್ತ ಲೆಕ್ಕಹಾಕಿ ತಾಳೆ ನೋಡಿದರೂ 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಮಾಮನ ಗೆಲ್ಲಿಸುವ ಮಸಲತ್ತಿನ ಮಾತುಗಾರಿಕೆ ಇದಾಗಿತ್ತೆಂಬುದು ಎಂಥ ಗಾಂಪನಿಗೂ ಅರ್ಥವಾಗುತ್ತದೆ!! ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೃವೀಕರಣಗೊಂಡಿರುವ ಹಿಂದೂತ್ವದ ಓಟ್‌ಬ್ಯಾಂಕ್ ಇನ್ನಾರು ತಿಂಗಳಲ್ಲಿ ಬರಲಿರುವ ಪಾರ್ಲಿಮೆಂಟ್ ಇಲೆಕ್ಷನ್ ತನಕ ಕಾಪಿಟ್ಟುಕೊಳ್ಳುವ ತಂತ್ರಗಾರಿಕೆ ಪೇಜಾವರ ಟೇಮಿನದಾಗಿತ್ತು.

ನಾಲ್ಕುವರೆ ವರ್ಷದಿಂದ ಸಂಘಪರಿವಾರದ ಬ್ರಾಹ್ಮಣ ರಿಂಗ್‌ಮಾಸ್ಟರ್‌ಗಳ ಪಾದುಕಾ ಪೂಜಾರಿ ಮೋದಿ ಪ್ರಧಾನಿಯಾಗಿದ್ದರೂ ಆತನಿಂದ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲಿಕ್ಕೆ ಯಾಕಾಗಲಿಲ್ಲ ಎಂಬ ಮೂಲಭೂತ ಪ್ರಶ್ನೆ ಮರೆಮಾಚಿದ ಪೇಜಾವರರು ಏಕಾಏಕಿ ಕಾಂಗ್ರೆಸ್ ಮೇಲೆ ಮುಗಿಬಿದ್ದಿದ್ದಾರೆ. ಆ ಮೂಲಕ ಇಲೆಕ್ಷನ್ ಪ್ರಚಾರ ಶುರುಮಾಡಿದ್ದಾರೆ. ಹಿಂದೂತ್ವಕ್ಕಾಗಿ ತನ್ನನ್ನು ಸಂಸದನಾಗಿಸಿದ ಜಿಲ್ಲೆಗೇ ಬೆಂಕಿ ಹಾಕ್ತೇನೆಂದು ಯಾವ ಮುಲಾಜೂ, ಮನುಷ್ಯತ್ವವೂ ಇಲ್ಲದೆ ಆರ್ಭಟಿಸುವ ನಳಿನ್‌ಕುಮಾರ್ ಕಟೀಲ್‌ನಂಥವರನ್ನು ಬಗಲಲ್ಲಿಟ್ಟುಕೊಂಡು ಪೇಜಾವರರು ಮಾಡಿದ ಭಾಷಣದ ನೀತಿ-ರೀತಿಗೆ ಕೂಗುಮಾರಿ ಖ್ಯಾತಿಯ ಚೈತ್ರಾ ಕುಂದಾಪುರ, ಸೂಲಿಬೆಲೆ ಚಕ್ರವರ್ತಿಯಂಥವರೇ ನಾಚಿ ತಲೆ ತಗ್ಗಿಸುವಂತಿತ್ತು!

ಪ್ರತಿದಿನ ಸಾವಿರ ಸುಳ್ಳು ಸಬೂಬು ಹೇಳುವ ಮೋದಿ 2019ರ ಚುನಾವಣೆಯಲ್ಲಿ ಬಚಾವಾಗದ ಪ್ರಪಾತಕ್ಕೆ ಹೋಗಿಬಿದ್ದಿದ್ದಾರೆಂಬುದು ಪೇಜಾವರರಂಥ ಹಿಂದೂ ಸಂತ ಸಂತಾನಕ್ಕೆ ಪಕ್ಕಾ ಆಗಿಹೋಗಿದೆ. ಮೋದಿಯಂಥ ಹುಂಬ ಶೋ ಮ್ಯಾನ್ ದೇಶದ ಚುಕ್ಕಾಣಿ ಹಿಡಿಯುವುದು ಸಂಘಪರಿವಾರಕ್ಕೆ ಅನಿವಾರ್ಯ ಅಗತ್ಯ. ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಅಡ್ಡಬರುತ್ತಿದೆ ಎಂದು ಬಿಂಬಿಸಿದರೆ ಜನರ ಭಾವನೆ ಕೆರಳಿಸಬಹುದೆಂಬ ದೂ(ದು)ರಾಲೋಚನೆ ಕಾವಿ ಕೂಟದ್ದು. ಹಾಗಾಗಿಯೇ ಮಂಗಳೂರಲ್ಲಿ ಪೇಜಾವರರು ಮಾತುಮಾತಿಗೆ ಕಾಂಗ್ರೆಸ್ ರಾಮಮಂದಿರ ವಿರೋಧಿ ಎಂಬಂತೆ ಪ್ರವಚನ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣಕ್ಕೆ ವಿಶೇಷ ಕಾನೂನು ಮಾಡಬೇಕೆಂದು ಹೇಳುವ ಪೇಜಾವರ ಮಾತಿನ ಅರ್ಥ ಸುಗ್ರೀವಾಜ್ಞೆ ಮೂಲಕ ಅಯೋಧ್ಯೆಯಲ್ಲಿ ರಾಮನಿಗೆ ಗುಡಿಕಟ್ಟಬೇಕೆನ್ನುವುದೇ ಆಗಿದೆ.

ಅಯೋಧ್ಯೆಯಲ್ಲಿ ರಾಮಮಂದಿರ ಸ್ಥಾಪನೆಗೆ ಕಾಂಗ್ರೆಸ್ ಸಹಕರಿಸಬೇಕೆಂದು ಎಚ್ಚರಿಕೆಯೂ ಪೇಜಾವರ ಸ್ವಾಮಿ ಕೊಟ್ಟಿದ್ದಾರೆ. ಕಾಂಗ್ರೆಸೇನಾದರೂ ರಾಮಮಂದಿರಕ್ಕೆ ಅಡ್ಡಗಾಲು ಹಾಕಿದರೆ ಮುಂಬರುವ ಚುನಾವಣೆಯಲ್ಲಿ ಆ ಪಾರ್ಟಿ ಮಣ್ಣು ಮುಕ್ಕುತ್ತದೆಯೆಂದು ಮೋದಿಯನ್ನು ಮೀರಿಸುವ ಸ್ಟೈಲಲ್ಲಿ ಪೇಜಾವರರು ಭಾಷಣ ಬಿಗಿದಿದ್ದಾರೆ. ಅಷ್ಟೇ ಅಲ್ಲ, ಮುಸ್ಲಿಮರು ರಾಮ ಮಂದಿರಕ್ಕೆ ಬೆಂಬಲಿಸಿ ಹಿಂದೂಗಳೊಂದಿಗೆ ಬಾಂಧವ್ಯ ಹೆಚ್ಚಿಸಿಕೊಳ್ಳಬೇಕು ಎಂದಿದ್ದಾರೆ. ಏನಿದರ ಅರ್ಥ? ಸಾಬರು ಅಯೋಧ್ಯೆಯಲ್ಲಿ ರಾಮ ಮಂದಿರ ಆಗದಿದ್ದರೆ ಗಂಡಾಂತರಕ್ಕೆ ಸಿಲುಕಲಿದ್ದಾರೆಂದಾ? ಹಿಂದೂತ್ವದ ದಾದಾಗಿರಿಗೆ ಶರಣಾಗದಿದ್ದರೆ ಉಳಿಗಾಲವಿಲ್ಲವೆಂದಾ? ಸಾತ್ವಿಕ ಸಂತ ತಾನೆಂದೂ ತೋರಿಸಿಕೊಳ್ಳಲು ತಿಣಕಾಡುವ ಪೇಜಾವರರ ಮಾತುಗಾರಿಕೆ ಯಾವ ಹಿಂದೂ ಭಯೋತ್ಪಾಕ ಕಾವಿ ಅಥವಾ ಖಾದಿ ಪುಂಡರ ಭಾಷಣಕ್ಕೆ ಕಮ್ಮಿಯಿದೆ?!

ಜನಾಗ್ರಹ ಸಭೆ ಚುನಾವಣಾ ರಾಜಕೀಯ ಅಲ್ಲ ಅನ್ನುತ್ತಲೇ ಬಿಜೆಪಿ ಪರ ಪರೋಕ್ಷವಾಗಿ ಬಹಿರಂಗ ಪ್ರಚಾರ ಪೇಜಾವರ ಸ್ವಾಮಿ ಮಾಡಿದ್ದಾರೆ. ಬಿಜೆಪಿ ರಾಮ ಮಂದಿರಕ್ಕೆ ಸಂಪೂರ್ಣ ಬೆಂಬಲ ಕೊಡಬೇಕೆಂದು ಹೇಳಿರುವುದೇ ವಿಕಟ ವ್ಯಂಗ್ಯ! ಲೋಕಸಭೆ ಸ್ಥಾನ ತ್ಯಜಿಸಲು ರಾಮ ಮಂದಿರಕ್ಕಾಗಿ ಬಿಜೆಪಿ ಸಂಸದರು ರೆಡಿಯಾಗಬೇಕೆಂದು ಹೇಳಿದ್ದಾರೆ. ಬರೀ ಆರು ತಿಂಗಳು ಬಾಕಿಯಿರುವಾಗ ಚೆಡ್ಡಿ ಎಂಪಿಗಳಿಗೆ ರಾಜೀನಾಮೆ ಕೊಡಿಯೆಂದು ಪೇಜಾವರರು ಹೇಳೋದು ಬಿಜೆಪಿಯನ್ನು ತಾರೀಫು ಮಾಡುವ ತಂತ್ರಗಾರಿಕೆಯಿಂದಷ್ಟೇ. ರಾಮನ ಹೆಸರಲ್ಲಿ ಪ್ರಧಾನಿಯಾದ ಮೋದಿ ನಾಲ್ಕುವರೆ ವರ್ಷದಿಂದ ಏಕೆ ರಾಮನಿಗೊಂದು ನೆಲೆಕೊಡುವ ಕೃತಜ್ಞತಾ ಭಾವದಿಂದ ಪ್ರಾಮಾಣಿಕ ಕೆಲಸ ಮಾಡಲಿಲ್ಲ ಎಂದು ಕೇಳುವ ಗಟ್ಸ್ ಪೇಜಾವರರೇಕೆ ತೋರಿಸುತ್ತಿಲ್ಲ?

ಹಿಂದೂತ್ವದ ದಿವಾಳಿಕೋರತನಕ್ಕೆ ಪೇಜಾವರರು ಸಂಕೇತವಾಗುತ್ತಿರುವುದು ದುರಂತ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...