Homeಮುಖಪುಟಪೌರತ್ವ ಮಸೂದೆ: ಕೇಂದ್ರದ ಕಾಯ್ದೆಯನ್ನು ತಿರಸ್ಕರಿಸುವ ಸಾಂವಿಧಾನಿಕ ಹಕ್ಕು ರಾಜ್ಯಗಳಿಗೆ ಇದೆಯೇ?

ಪೌರತ್ವ ಮಸೂದೆ: ಕೇಂದ್ರದ ಕಾಯ್ದೆಯನ್ನು ತಿರಸ್ಕರಿಸುವ ಸಾಂವಿಧಾನಿಕ ಹಕ್ಕು ರಾಜ್ಯಗಳಿಗೆ ಇದೆಯೇ?

- Advertisement -
- Advertisement -

ರಾಷ್ಟ್ರಪತಿಗಳ ಅನುಮೋದನೆಯ ಮೂಲಕ ಗುರುವಾರ ರಾತ್ರಿಯಿಂದಲೇ ಕಾಯ್ದೆಯಾಗಿ ಜಾರಿಗೆ ಬಂದಿರುವ ಪೌರತ್ವ ತಿದ್ದುಪಡಿ ಮಸೂದೆಗೆ ವಿಪರೀತ ಪ್ರತಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ಪಶ್ಚಿಮ ಬಂಗಾಳ, ಪಂಜಾಬ್ ಮತ್ತು ಕೇರಳ ರಾಜ್ಯ ಸರ್ಕಾರಗಳು ಈ ಕಾಯ್ದೆಯನ್ನು ತಮ್ಮ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರಲು ಬಿಡುವುದಿಲ್ಲ ಎಂಬ ಹೇಳಿಕೆ ನೀಡಿವೆ. ಮಧ್ಯಪ್ರದೇಶದ ಕಮಲನಾಥ್ ಸರ್ಕಾರವು ಕೂಡಾ ಇದೇ ನಿಲುವಿನ ಸುಳಿವು ನೀಡಿದೆ. ಆದರೆ ಲೋಕಸಭೆ, ರಾಜ್ಯಸಭೆಗಳೆರಡರಲ್ಲು ಅನುಮೋದನೆ ಪಡೆದು ರಾಷ್ಟ್ರಪತಿಗಳಿಂದ ಅಂಕಿತವನ್ನೂ ಹಾಕಿಸಿದ, ಶಾಸನಬದ್ಧ ಪ್ರಕ್ರಿಯೆಗಳನ್ನೆಲ್ಲ ಪೂರೈಸಿದ ಕಾನೂನನ್ನು ತಿರಸ್ಕರಿಸುವ ಸಾಂವಿಧಾನಿಕ ಅವಕಾಶ ರಾಜ್ಯ ಸರ್ಕಾರಗಳಿಗೆ ಇದೆಯೇ? ಹಾಗೊಮ್ಮೆ ಅಸಹಕಾರ ತೋರಿದರೆ ಏನೆಲ್ಲ ಆಡಳಿತಾತ್ಮಕ ಬಿಕ್ಕಟ್ಟುಗಳು ಎದುರಾಗಬಹುದು? ಎಂಬ ಕುರಿತು ದಿ ಪ್ರಿಂಟ್ ಪತ್ರಿಕೆಯು ಖ್ಯಾತ ಕಾನೂನು ತಜ್ಞರನ್ನು ಮಾತಾಡಿಸಿ ಅವರ ಅಭಿಪ್ರಾಯಗಳನ್ನು ದಾಖಲಿಸಿದೆ. ಅದರ ಸಾರಾಂಶ ಇಲ್ಲಿದೆ.

ಸಂವಿಧಾನ ಏನು ಹೇಳುತ್ತೆ?
ಬಹುಪಾಲು ಕಾನೂನು ತಜ್ಞರ ಪ್ರಕಾರ ರಾಜ್ಯ ಸರ್ಕಾರಗಳಿಗೆ ಇಂತಹ ಸ್ವಾತಂತ್ರ್ಯ ಇಲ್ಲ! ಯಾಕೆಂದರೆ ಪೌರತ್ವ, ಪೌರತ್ವ ನೋಂದಣಿ ಮತ್ತು ವಿದೇಶಿ ವಲಸಿಗರ ಗುರುತಿಸುವಿಕೆಗಳು ಭಾರತ ಸಂವಿಧಾನದ ಕೇಂದ್ರ ಪಟ್ಟಿಯ ವ್ಯಾಪ್ತಿಗೆ ಒಳಪಡುತ್ತವೆ. ಅಂದರೆ ಈ ಕುರಿತು ಶಾಸನಗಳನ್ನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುತ್ತದೆ.
ಜೊತೆಗೆ, ೨೫೬ನೇ ವಿಧಿಯು ಕೇಂದ್ರದ ಕಾನೂನುಗಳ ಅನುಷ್ಠಾನವನ್ನು ಖಾತ್ರಿಪಡಿಸುವುದು ರಾಜ್ಯಗಳ ಕರ್ತವ್ಯ ಎಂದು ಉಲ್ಲೇಖಿಸುತ್ತದೆ. ಆ ವಿಧಿಯು, ಆ ರಾಜ್ಯಕ್ಕೆ ಅನ್ವಯವಾಗುವ ಈಗಾಗಲೇ ಅಸ್ತಿತ್ವದಲ್ಲಿರುವ ಕಾನೂನುಗಳು ಮತ್ತು ಸಂಸತ್ತಿನ ಮೂಲಕ ರೂಪಿಸಲ್ಪಟ್ಟ ಹೊಸ ಕಾಯ್ದೆಗಳನ್ನು ಅನುಷ್ಠಾನಕ್ಕೆ ತಂದು ಖಾತ್ರಿಪಡಿಸುವುದು ಪ್ರತಿ ರಾಜ್ಯದ ಕಾರ್ಯಾಂಗಾಧಿಕಾರದ ಹೊಣೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದೆ.

ಇದನ್ನೂ ಓದಿ: ಪೌರತ್ವ ಮಸೂದೆ ಜಾರಿಗೆ ತಂದ ಗೃಹಮಂತ್ರಿ ಅಮಿತ್ ಶಾಗೆ ಕಾದಿದೆಯಾ ಅಮೆರಿಕಾ ಬಹಿಷ್ಕಾರ?

ರಾಜ್ಯಗಳಿಗೆ ಬೇರೆ ದಾರಿಯೇ ಇಲ್ಲ
ಹಿರಿಯ ವಕೀಲರಾದ ಕೆ.ಟಿ.ಎಸ್.ತುಳಸಿಯವರು ಪ್ರಿಂಟ್ ಪತ್ರಿಕೆ ಜೊತೆ ಹಂಚಿಕೊಂಡಿರುವ ಅಭಿಪ್ರಾಯದ ಪ್ರಕಾರ ರಾಜ್ಯ ಸರ್ಕಾರಗಳಿಗೆ ಬೇರೆ ದಾರಿಯೇ ಇಲ್ಲ. ಕಾಯ್ದೆಯಾಗಿ ರೂಪಿಸಲ್ಪಟ್ಟ ಶಾಸನಗಳ ಪ್ರಕಾರವೇ ರಾಜ್ಯಗಳು ಕಾರ್ಯನಿರ್ವಹಿಸಬೇಕು. ರಾಜ್ಯದ ಶಾಸನಗಳಿಗಿಂತ ಕೇಂದ್ರದ ಶಾಸನಗಳು ನಮ್ಮ ಸಂವಿಧಾನದಲ್ಲಿ ಹೆಚ್ಚು ಮಾನ್ಯತೆ ಪಡೆದವು. ಹಾಗಾಗಿ ರಾಜ್ಯಗಳಿಗೆ ಬೇರೆ ದಾರಿಯಿಲ್ಲ. ರಾಜ್ಯಗಳು ನಿರ್ದಿಷ್ಟ ಕಾಯ್ದೆ ಬಗ್ಗೆ ತನಗೆ ಸಮ್ಮತಿ ಇಲ್ಲದಿರುವ ಬಗ್ಗೆ ಅಸಮಾಧಾನ ಹೊರಹಾಕಬಹುದು, ಆದರೆ ಅನುಷ್ಠಾನದ ವಿಚಾರಕ್ಕೆ ಬಂದಾಗ ಅವು ಮಾಡಲೇಬೇಕು. ಒಂದೊಮ್ಮೆ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರದಿದ್ದರೆ, ಆಯಾ ರಾಜ್ಯದ ಹೈಕೋರ್ಟ್‌ಗಳು ಅದನ್ನು ಜಾರಿಗೆ ತರುತ್ತವೆ ಎಂದಿದ್ದಾರೆ ಅವರು.

ಮಾಜಿ ಲೋಕಸಭಾ ಕಾರ್ಯದರ್ಶಿ ಮತ್ತು ಕಾನೂನು ತಜ್ಞರಾದ ಪಿ.ಡಿ.ಟಿ. ಆಚಾರಿ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಿಂದ ಶಾಸನವಾಗಿ ರೂಪಿಸಲ್ಪಟ್ಟ ಕಾನೂನುಗಳನ್ನು ಅನುಷ್ಠಾನಕ್ಕೆ ತರಲು ಬಿಡುವುದಿಲ್ಲ ಎಂದು ಹೇಳಲು ರಾಜ್ಯ ಸರ್ಕಾರಗಳಿಗೆ ಯಾವ ಸಾಂವಿಧಾನಿಕ ಅವಕಾಶಗಳೂ ಇಲ್ಲ. ಈ ವಿಚಾರದಲ್ಲಿ ಸಂವಿಧಾನ ಬಹಳ ಸ್ಪಷ್ಟವಾಗಿದೆ. ಹಾಗಾಗಿ ರಾಜ್ಯ ಸರ್ಕಾರಗಳಿಗೆ ಬೇರೆ ದಾರಿ ಇಲ್ಲ ಎಂದಿದ್ದಾರೆ. ಆದರೆ ಅನುಷ್ಠಾನಕ್ಕೆ ತರದಿದ್ದರೆ ಏನಾಗುತ್ತದೆ ಎಂಬ ಕುರಿತು ಅವರು ಬೇರೆಯದೇ ಸಾಧ್ಯತೆಯನ್ನು ಮುಂದಿಡುತ್ತಾರೆ, ಒಂದೊಮ್ಮೆ ರಾಜ್ಯ ಸರ್ಕಾರಗಳು ಒಪ್ಪದಿದ್ದರೆ, ಕೇಂದ್ರ ಸರ್ಕಾರ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತಂದು ಆಡಳಿತವನ್ನು ತನ್ನ ಕೈವಶ ಮಾಡಿಕೊಳ್ಳಬಹುದು ಎನ್ನುತ್ತಾರೆ ಅವರು.

ಇನ್ನು ಮತ್ತೊಬ್ಬ ಹಿರಿಯ ವಕೀಲ ಗೋಪಾಲ ಶಂಕರನಾರಾಯಣನ್ ಅವರು, ಒಂದು ಶಾಸನವನ್ನು ಅನುಷ್ಠಾನಕ್ಕೆ ತರಲು ಸಹಮತಿ ಸೂಚಿಸದೆ ಅಸಹಕಾರ ತೋರುವ ಅವಕಾಶ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಮುಂಬರುವ ಪರಿಣಾಮಗಳನ್ನು ಅದು ಎದುರಿಸಲು ಸಿದ್ದವಾಗಿರಬೇಕಾಗುತ್ತದೆ ಎನ್ನುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್‌ ಆಡಳಿತದ ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಘಡದಲ್ಲಿ ಸಿಎಬಿ ಜಾರಿ ಇಲ್ಲ…

ಇದು ಕೇಂದ್ರ ಸರ್ಕಾರದ ಕಾಯ್ದೆಯೇ ಇರಬಹುದು ಮತ್ತು ಪೌರತ್ವದ ವಿಚಾರದ ರಾಷ್ಟ್ರೀಯ ಒಕ್ಕೂಟಕ್ಕೆ ಸಂಬಂಧಿಸಿದ ವಿಷಯವೇ ಆಗಿರಬಹುದು, ಆದರೆ ಅನುಷ್ಠಾನದ ವಿಚಾರಕ್ಕೆ ಬಂದಾಗ ಕೇಂದ್ರವು ಸಹಾ ಪ್ರಾದೇಶಿಕ ಪ್ರಾಧಿಕಾರಗಳನ್ನು (ಕಾರ್ಯಾಂಗ ಮತ್ತು ನ್ಯಾಯಾಂಗ ಎರಡೂ) ಅವಲಂಬಿಸಲೇಬೇಕಾಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಆಯಾ ಸ್ಥಳೀಯ ಆಡಳಿತದ ಯಂತ್ರಾಂಗ ಮತ್ತು ಪೊಲೀಸ್ ವ್ಯವಸ್ಥೆಯ ಅಗತ್ಯವಿರುತ್ತದೆ. ಇವು ಆಯಾ ರಾಜ್ಯ ಸರ್ಕಾರಗಳ ಸುಪರ್ದಿಯಲ್ಲಿರುತ್ತವೆ. ರಾಜ್ಯ ಸರ್ಕಾರ ತನ್ನ ಆಡಳಿತ ಯಂತ್ರಾಂಗಕ್ಕೆ ಅನುಷ್ಠಾನದ ವಿಚಾರದಲ್ಲಿ ಅಸಹಕಾರ ತೋರುವಂತೆ ನಿರ್ದೇಶನ ನೀಡಿದರೆ ಕೇಂದ್ರದ ಕಾಯ್ದೆ ಅನುಷ್ಠಾನಕ್ಕೆ ಬರುವುದು ಅಸಾಧ್ಯವಾಗುತ್ತದೆ ಎನ್ನುವ ಅವರು, ಅದರ ನಂತರದ ಪರಿಣಾಮಗಳನ್ನು ಹೀಗೆ ಬಿಚ್ಚಿಡುತ್ತಾರೆ, ಆದರೆ ಕೇಂದ್ರದ ಕೆಂಗಣ್ಣಿಗೆ ಗುರಿಯಾಗುವ ರಾಜ್ಯವು ಮುಂದಿನ ಕೆಟ್ಟ ಪರಿಣಾಮಗಳಿಗೂ ಸಿದ್ದವಾಗಿರಬೇಕಾಗುತ್ತದೆ. ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರಾಂಗ ವೈಫಲ್ಯವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸುವ ಕೇಂದ್ರ, ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಒಟ್ಟಾರೆ ಈ ಎಲ್ಲಾ ಕಾನೂನುತಜ್ಞರ ಅಭಿಪ್ರಾಯಗಳ ಪ್ರಕಾರ ಕೇಂದ್ರ ಪಟ್ಟಿಗೆ ಸೇರುವ ಒಂದು ಕಾಯ್ದೆಗೆ ತನ್ನ ಅಸಮಾಧಾನವನ್ನು ಹೊರಹಾಕುವ ಅವಕಾಶ ರಾಜ್ಯ ಸರ್ಕಾರಕ್ಕೆ ಇರಬಹುದಾದರು, ಅನುಷ್ಠಾನ ಮಾಡದೆ ಇರಲು ಸಾಧ್ಯವಿಲ್ಲ. ಹಾಗೊಮ್ಮೆ ಅಸಹಕಾರ ಮುಂದುವರೆಸಿದರೆ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರಿ, ಕಾಯ್ದೆಯನ್ನು ಜಾರಿಗೆ ತರುವ ಸಾಂವಿಧಾನಿಕ ಅವಕಾಶ ಕೇಂದ್ರದ ಮುಂದಿರುತ್ತದೆ. ಆದಾಗ್ಯೂ ಕೇಂದ್ರ ಮತ್ತು ರಾಜ್ಯಗಳ ನಡುವೆ ತಿಕ್ಕಾಟ ಬರದಂತೆ ಹೊಂದಾಣಿಕೆಯ ಮೂಲಕ ಆಡಳಿತ ನಡೆಸುವುದು ನಮ್ಮ ಒಟ್ಟಾರೆ ಸಂವಿಧಾನದ ಆಶಯವಾಗಿದೆ, ಒಕ್ಕೂಟ ವ್ಯವಸ್ಥೆಯ ಶ್ರೇಯವಾಗಿದೆ ಎಂಬುದನ್ನು ಕೇಂದ್ರ ಸರ್ಕಾರವಾಗಲಿ, ರಾಜ್ಯ ಸರ್ಕಾರವಾಗಲಿ ಮರೆಯದಿರುವುದು ದೇಶದ ಹಿತದೃಷ್ಟಿಯಿಂದ ಒಳಿತು.

ಕೃಪೆ: ಪ್ರಿಂಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರಿ ಆದರೆ ಅನುಷ್ಠಾನಕ್ಕೆ ಬಂದಿರುವ ಕಾನೂನೆ ಸಂವಿಧಾನಕ್ಕೆ ವಿರುದ್ದವಾಗಿದ್ದರೆ?
    ಅನುಷ್ಠಾನ ಮಾಡುವವರು ಮೊದಲು ಸಂವಿಧಾನವನ್ನು ಓದಿದ್ದರೆ ತಿಳಿಯಬಹುದು.
    ಜನರು ಧಂಗೆ ಹೇಳಲು ಯಾರಪ್ಪನ ಅನುಮತಿಯೂ ಬೆಕಾಗಿಲ್ಲತಾನೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....