Homeಅಂಕಣಗಳುಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

ಕನ್ನಡ ಚಿತ್ರರಂಗ ಮತ್ತು ನನ್ನ ನಟ ಪ್ರಕಾಶ್ ರೈ

- Advertisement -
- Advertisement -

| ಗೌರಿ ಲಂಕೇಶ್ |
23 ಸೆಪ್ಟೆಂಬರ್, 2009 (ಸಂಪಾದಕೀಯದಿಂದ)

ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರತಿಭೆಯನ್ನು ಗುರುತಿಸುವುದಾಗಲಿ, ಅದನ್ನು ಪ್ರೋತ್ಸಾಹಿಸಿ ಬೆಳೆಸುವುದಾಗಲಿ ಗೊತ್ತಿಲ್ಲ ಎಂಬುದಕ್ಕೆ ಈ ಬಾರಿ ರಾಷ್ಟ್ರೀಯ ಅತ್ಯುತ್ತಮ ನಟ ಮತ್ತು ನಟಿ ಪ್ರಶಸ್ತಿಗಳನ್ನು ಪಡೆದಿರುವ ಪ್ರಕಾಶ್ ರೈ ಮತ್ತು ಉಮಾಶ್ರೀಯವರೇ ಉತ್ತಮ ಉದಾಹರಣೆಗಳು.

ಇಂಗ್ಲಿಷ್‍ನಲ್ಲಿ ‘Think out of the box’ ಎಂಬ ಜಾಣ್ಣುಡಿ ಇದೆ. ಇದರರ್ಥ ಸಾಂಪ್ರದಾಯಿಕವಾಗಿ ಯೋಚಿಸುವ ಬದಲಾಗಿ ಹೊಸ ರೀತಿಯಲ್ಲಿ, ಸೃಜನಾತ್ಮಕವಾಗಿ ಮತ್ತು ಬುದ್ಧಿವಂತಿಕೆಯಿಂದ ಚಿಂತಿಸಿ ಕ್ರಿಯಾಶೀಲರಾಗುವುದು. ಆದರೆ ಕನ್ನಡ ಚಿತ್ರರಂಗದವರಿಗೆ ಕ್ಲೀಷೆ, ಫಾರ್ಮುಲಾ, ರಿಮೇಕ್ ತರಹದ ಸಿದ್ಧ ತಂತ್ರಗಳ ಚೌಕಟ್ಟನ್ನು ಮೀರುವ ಕ್ರಿಯಾಶೀಲತೆಯೇ ಇಲ್ಲದಂತಾಗಿದೆ. ಆದ್ದರಿಂದಲೇ ಪಕ್ಕದ ಕೇರಳ, ತಮಿಳುನಾಡು ಮತ್ತು ಆಂಧ್ರಪ್ರದೇಶಗಳ ಚಿತ್ರರಂಗಗಳಲ್ಲಿ ಸಾಧ್ಯವಾಗುತ್ತಿರುವ ಹೊಸ ಬಗೆಯ ಕಥಾವಸ್ತುಗಳನ್ನು ಹೊಂದಿರುವ ಚಿತ್ರಗಳು ನಮ್ಮವರಿಂದ ಸಾಧ್ಯವಾಗುತ್ತಿಲ್ಲ.

ಇದಕ್ಕೊಂದು ಉದಾಹರಣೆ ಕೊಡಬಹುದು. ಕಳೆದ ವರ್ಷ ‘ಅಭಿಯುಂ ನಾನುಂ’ (ಅಭಿ ಮತ್ತು ನಾನು) ಎಂಬ ಚಿತ್ರವನ್ನು ತಮಿಳಿನಲ್ಲಿ ನಿರ್ಮಿಸಿ-ನಟಿಸಿದ್ದರು ಪ್ರಕಾಶ್ ರೈ. ತಂದೆ ಮತ್ತು ಮಗಳ ನಡುವಿನ ಸಂಬಂಧವನ್ನು ಕುರಿತ ಆ ಸಿನಿಮಾ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮನ್ನಣೆ ಪಡೆದಿತ್ತು. ಆ ಚಿತ್ರವನ್ನು ಕನ್ನಡದಲ್ಲಿ ರಿಮೇಕ್ ಮಾಡಬೇಕೆಂದು ಹಲವರು ಯೋಚಿಸಿದರಾದರೂ ಕನ್ನಡದವರೇ ಆದ ಪ್ರಕಾಶ್ ಬದಲಾಗಿ ತಂದೆಯ ಪಾತ್ರದಲ್ಲಿ ವಿಷ್ಣುವರ್ಧನ್ ಅವರನ್ನು ಹಾಕಿದರೆ ವಾಸಿ ಎಂದು ಭಾವಿಸಿದರು. ಅದಕ್ಕೆ ಅವರು ನೀಡಿದ ಕಾರಣ “ಪ್ರಕಾಶ್ ರೈಗೆ ಕನ್ನಡದಲ್ಲಿ ಮಾರ್ಕೆಟ್ ಇಲ್ಲ” ಎಂಬುದು.

ಅಂದಹಾಗೆ ‘ಮುಂಗಾರುಮಳೆ’ಯ ಮುನ್ನ ನಟ ಗಣೇಶನಿಗಾಗಲೀ, ‘ದುನಿಯಾ’ ಮುನ್ನ ವಿಜಯ್‍ಗಾಗಲಿ, ‘ನಂದಾ ಲವ್ಸ್ ನಂದಿತಾ’ ಮುನ್ನ ಯೋಗೇಶ್ ಅರ್ಥಾತ್ ಲೂಸ್ ಮಾದನಿಗಾಗಲಿ’ ಯಾವ ಮಾರುಕಟ್ಟೆ ಇತ್ತು? ಇಂತಹ ಪ್ರಶ್ನೆಗಳ ಬಗ್ಗೆ ಗಾಂಧಿನಗರ ಯೋಚಿಸುವುದೇ ಇಲ್ಲ. ಚಿತ್ರವೊಂದರ ಯಶಸ್ಸಿಗೆ ಮಾರುಕಟ್ಟೆ ಮುಖ್ಯ ಎಂಬುದನ್ನು ಒಪ್ಪಿಕೊಂಡರೂ ಅದರೊಂದಿಗೆ ಚಿತ್ರದ ಕಥೆ, ಅದರ ನಿರೂಪಣಾ ಶೈಲಿ ಮತ್ತು ಸದಭಿರುಚಿಯೂ ಅಷ್ಟೇ ಮುಖ್ಯ ಎಂಬುದನ್ನು ಪರಿಗಣಿಸಲೇಬೇಕು. ಈಗ ಆ ಚಿತ್ರವನ್ನು ಪ್ರಕಾಶ್ ರೈ ಸ್ವತಃ ನಿರ್ಮಿಸಿ, ನಿರ್ದೇಶಿಸಿ ನಟಿಸಲು ಹೊರಟಿದ್ದಾರೆ ಎನ್ನುವುದು ಬೇರೆ ಮಾತು.

ಪ್ರಕಾಶ್ ರೈಗೆ ರಾಷ್ಟ್ರಪ್ರಶಸ್ತಿ ಘೋಷಣೆಯಾದಾಗ ನಮ್ಮ ಮಾಧ್ಯಮಗಳು ಅದು ಕನ್ನಡಿಗರಿಗೆ ಮತ್ತು ಕನ್ನಡ ಚಿತ್ರರಂಗಕ್ಕೆ ಸಂದ ಗೌರವ ಎಂಬಂತೆ ಬಿಂಬಿಸಿದ್ದವು. ಆದರೆ ಎರಡು ದಶಕಗಳಿಂದ ಇವತ್ತಿನವರೆಗೂ ಕನ್ನಡ ಚಿತ್ರರಂಗ ಪ್ರಕಾಶ್ ರೈ ಎಂಬ ನಟನನ್ನು ತಿರಸ್ಕರಿಸುತ್ತಲೇ ಬಂದಿದೆ ಎಂಬುದು ವಾಸ್ತವ. 90ರ ದಶಕದ ಆರಂಭದಲ್ಲಿ ನಟನೆಯನ್ನೇ ತನ್ನ ಉಸಿರಾಗಿಸಿಕೊಂಡು ಅವಕಾಶಗಳಿಗಾಗಿ ಪರದಾಡುತ್ತಿದ್ದ ಪ್ರಕಾಶ್ ರೈ ಆಗಿನಿಂದಲೂ ನನಗೆ ಪರಿಚಯ.

ಒಂದು ಬಿಳಿ ಶರ್ಟ್ ಮತ್ತು ಜೀನ್ಸ್ ಪ್ಯಾಂಟ್ ಮಾತ್ರ ಹೊಂದಿದ್ದ ಪ್ರಕಾಶ್ ಮಿತ್ರರ ಬಟ್ಟೆ ಧರಿಸಿ ಮಿಂಚುತ್ತಿದ್ದುದ್ದು, ಗೆಳೆಯರೇ ನಾಟಕಗಳಲ್ಲಿ ಅವಕಾಶ ನೀಡದಿದ್ದಾಗ ಗಲಾಟೆ ಮಾಡಿದ್ದು, ಒಂದು ಹೊತ್ತಿನ ಊಟ ಸಿಗುತ್ತದೆಂದು ಚಿಕ್ಕಪುಟ್ಟ ಪಾತ್ರಗಳಿಗೆ ಡಬ್ ಮಾಡುತ್ತಿದ್ದದ್ದು, ಜೇಬಿನಲ್ಲಿ ಕಾಸಿಲ್ಲದೇ ‘ನಟರಾಜ್ ಎಕ್ಸ್‍ಪ್ರೆಸ್’ನಲ್ಲಿ ಓಡಾಡುತ್ತಿದ್ದುದು ಎಲ್ಲವೂ ನನಗೆ ನೆನಪಿದೆ. ಹಾಗಾಗಿ ಖ್ಯಾತ ನಿರ್ದೇಶಕ ಬಾಲಚಂದರ್ ಅವರು ಪ್ರಕಾಶನಿಗೆ ಅವಕಾಶ ಕೊಟ್ಟಾಗ ಅದರ ಬಗ್ಗೆ ಊರಿಗೆಲ್ಲಾ ಢಂಗೂರ ಸಾರಿ ಚೆನ್ನೈಗೆ ಹೋದ ಪ್ರಕಾಶ್ ಆನಂತರ ತೆಲುಗು ಸಿನಿಮಾಗಳಲ್ಲೂ ಖ್ಯಾತಿ ಪಡೆದಿದ್ದು, ಮಣಿರತ್ನಂ ಅವರ ‘ಇರುವರ್’ ಚಿತ್ರದಲ್ಲಿ ಕರುಣಾನಿಧಿಯ ಪಾತ್ರ ಮಾಡಿ ಜನಪ್ರಿಯತೆ ಪಡೆದದ್ದು, ಅದರೆಲ್ಲದರ ಮಧ್ಯೆಯೂ ಕನ್ನಡ ಚಿತ್ರರಂಗದೊಂದಿಗೆ ಸಂಪರ್ಕ ಇಟ್ಟುಕೊಂಡಿರಬೇಕೆಂದು ನಮ್ಮವರು ನೀಡಿದ ಪಾತ್ರಗಳಲ್ಲೂ ನಟಿಸಿದ್ದು, ಗಿರೀಶ್ ಕಾರ್ನಾಡ್ ಬರೆದಿರುವ ನಾಗಾಭರಣ ನಿರ್ದೇಶನದ ‘ನಾಗಮಂಡಲ’ದಲ್ಲಿ ಅದ್ಭುತವಾಗಿ ನಟಿಸಿದ್ದರೂ ರಾಜ್ಯ ಪ್ರಶಸ್ತಿಯಿಂದ ವಂಚಿತನಾಗಿ ಹಲುಬಿದ್ದು… ಎಲ್ಲವೂ ನೆನಪಿದೆ. ಅಪ್ಪಟ ಕನ್ನಡಿಗನಾದ ಪ್ರಕಾಶ್ ಇವತ್ತು ಇಲ್ಲಿ ಮಾರುಕಟ್ಟೆ ಹೊಂದಿರದೆ ತಮಿಳಿನ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆಂದರೆ ಅದು ಆತನ ಪ್ರತಿಭೆಗೆ ಸಂದ ಗೌರವ ಮಾತ್ರವಲ್ಲ, ಕನ್ನಡ ಚಿತ್ರರಂಗಕ್ಕಾದ ಮುಖಭಂಗವೂ ಹೌದು ಎಂದೇ ಭಾವಿಸಬಹುದು. ನಮ್ಮ ಚಿತ್ರರಂಗದಲ್ಲಿ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ಪರಂಪರೆ ವಿಸ್ತಾರಗೊಳ್ಳಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...