Homeಮುಖಪುಟಪ್ರಿಯಾಂಕಾ ವರ್ಸಸ್ ಮೋದಿ : ಸಿನೀಮಿಯ ಸಂಘರ್ಷ ಮತ್ತು ದೂರದೃಷ್ಟಿ

ಪ್ರಿಯಾಂಕಾ ವರ್ಸಸ್ ಮೋದಿ : ಸಿನೀಮಿಯ ಸಂಘರ್ಷ ಮತ್ತು ದೂರದೃಷ್ಟಿ

- Advertisement -
- Advertisement -

| ನೀಲಗಾರ |

ಅಲಹಾಬಾದ್‍ನಿಂದ ವಾರಣಾಸಿಗೆ ಗಂಗಾನದಿಯಲ್ಲಿ ದೋಣಿ ಪಯಣಿಸಿದ್ದು ಕೇವಲ 100 ಕಿ.ಮೀ.ಗಳಷ್ಟೇ ಆಗಿರಲಿಲ್ಲ. ಅದು ಭಾರತದ ರಾಜಕಾರಣದಲ್ಲಿ ಆದ ಬಹುಮುಖ್ಯ ಪ್ರಯಾಣವಾಗಿತ್ತು. ಅಲ್ಲಿನ ಫೋಟೋಗಳನ್ನು ನೋಡಿದರೆ ಅದು ಸುಲಭಕ್ಕೆ ಅರ್ಥವಾಗುತ್ತದೆ. ಆದರೆ, ಅದರ ಹಿಂದೆ ಇನ್ನೂ ಅನೇಕ ಮಹತ್ವದ ಸಂಗತಿಗಳಿವೆ.

  1. ಅಲಹಾಬಾದ್‍ನಿಂದ ಪ್ರಯಾಣ ಆರಂಭಿಸುವ ಮುನ್ನ ಆಕೆ ತಂಗಿದ್ದು, ಸ್ವರಾಜ್ ಭವನದಲ್ಲಿ. ಅದು ಜವಹರಲಾಲ್ ನೆಹರೂ ಅವರ ಮನೆ. ಅದೇ ಮನೆಯಲ್ಲಿ ಇಂದಿರಾಗಾಂಧಿ ಹುಟ್ಟಿದ್ದು. ಅಷ್ಟೇ ಅಲ್ಲದೇ, ಅದೇ ಸ್ವರಾಜ್ ಭವನದಲ್ಲಿ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಬಹುಮುಖ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತು. ಸ್ವತಂತ್ರ ಸಂಗ್ರಾಮದ ಪರಂಪರೆಯನ್ನು ನಮಗಿಂತ ಹೆಚ್ಚು ಯಾರು ತಮ್ಮದೆಂದುಕೊಳ್ಳಲು ಸಾಧ್ಯ ಎಂಬ ಸಂದೇಶ ರವಾನಿಸುವ ಉದ್ದೇಶ ಅವರಿಗಿತ್ತೋ ಇಲ್ಲವೋ ಗೊತ್ತಿಲ್ಲ. ಏಕೆಂದರೆ ಆ ದಿನ ಪ್ರಿಯಾಂಕಾ ಮಾಡಿದ ಟ್ವೀಟ್‍ನಲ್ಲಿ ಅಜ್ಜಿ ಇಂದಿರಾಗಾಂಧಿಯ ವಾರಸುದಾರಿಕೆಯನ್ನು ಹೊತ್ತುಕೊಳ್ಳುವ ಮಾತುಗಳಿದ್ದವು. ‘ಸ್ವರಾಜ್ ಭವನದ ಅಂಗಳದಲ್ಲಿ ಕುಳಿತರೆ ನನ್ನ ಅಜ್ಜಿ ಹುಟ್ಟಿದ ಕೊಠಡಿ ಕಾಣುತ್ತಿದೆ. ನನ್ನಜ್ಜಿ ಮಲಗುವ ಮುನ್ನ ನನಗೆ ಜೋನ್ ಆಫ್ ಆರ್ಕ್ ಕಥೆಗಳನ್ನು ಹೇಳಿ, ಭಯ ಬಿಟ್ಟು ಧೈರ್ಯಶಾಲಿಯಾಗು ಎಲ್ಲವೂ ಸರಿ ಹೋಗಿಬಿಡುತ್ತದೆ ಎಂದು ಹೇಳುತ್ತಿದ್ದಳು’ ಎಂಬ ಟ್ವೀಟ್ ಅದು.

  1. ತ್ರಿವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಿ ಹೊರಟ ಪ್ರಿಯಾಂಕಾ, ವಿದ್ಯಾರ್ಥಿಗಳೊಂದಿಗೆ ‘ಬೋಟ್ ಪೆ ಚರ್ಚಾ’ ಮಾಡಿದರು. ಇದರಲ್ಲಿ ಮೋದಿ ನಡೆಸಿದ ಈವೆಂಟ್‍ನ ಪುನರಾವರ್ತನೆ ಅಲ್ಲದೇ ಇನ್ನೇನೂ ಹೆಚ್ಚುಗಾರಿಕೆ ಇರಲಿಲ್ಲ.
  2. ಆದರೆ, ಬಡೇ ಹನುಮಾನ್ ದೇವಸ್ಥಾನದಿಂದ ಆರಂಭಿಸಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ನಡೆಸಿದ ಪೂಜೆಯವರೆಗೆ ಎಲ್ಲಾ ಕಡೆ ಕಾಂಗ್ರೆಸ್ ಪ್ರದರ್ಶಿಸಲಿಚ್ಛಿಸುತ್ತಿರುವ ‘ಧಾರ್ಮಿಕ ಒಲವಿನ’ ಪ್ರದರ್ಶನ ಇದ್ದೇ ಇತ್ತು. ಗಂಗಾ ಆರತಿಯೂ ಸೇರಿ ಇವೆಲ್ಲಾ ಆಚರಣೆಗಳು ಮೋದಿ ಅಥವಾ ರಾಹುಲ್ ಗಾಂಧಿಯ ಭಕ್ತಿ ಪ್ರದರ್ಶನಕ್ಕಿಂತ ಸಹಜವಾಗಿದ್ದವು. ರಾಹುಲ್ ಇದನ್ನು ತೋರಿಕೆಗೆ ಮಾಡುವಂತೆ, ಮೋದಿ ಅಹಂಕಾರದಿಂದ ಪ್ರದರ್ಶನಕ್ಕಾಗಿ ಮಾಡುವಂತೆ ಕಾಣುವ ಭಕ್ತಿ, ಆಚರಣೆಗಳು, ಪ್ರಿಯಾಂಕಾ ಮಾಡಿದಾಗ ಸಹಜ ಭಕ್ತಿಯಂತೆ ಕಾಣುತ್ತಿದ್ದವು. 3 ದಿನಗಳ ಪ್ರಯಾಣದಲ್ಲಿ ಮಧ್ಯೆ ಒಮ್ಮೆ ದರ್ಗಾಗೂ ಹೋಗಿದ್ದದ್ದು ಗಮನೀಯವಾದುದು.
  3. ಅಷ್ಟೇನೂ ದೊಡ್ಡದಲ್ಲದ, ಐಷಾರಾಮಿ ಸೌಲಭ್ಯಗಳಿಲ್ಲದ ಮತ್ತು ತ್ರಿವರ್ಣದ ಖಾದಿ ಬಟ್ಟೆಗಳಿಂದ ಸಿಂಗರಿಸಲ್ಪಟ್ಟಿದ್ದ ಬೋಟಿನಲ್ಲಿ ಪ್ರಿಯಾಂಕಾ ಪಯಣಿಸಿದರು. ನಿಧಾನಕ್ಕೆ ಜನರು ಇದನ್ನು ಮೋದಿ ಪಯಣಿಸಿದ ಸೀ ಪ್ಲೇನ್ ಜೊತೆ ಹೋಲಿಸಬಹುದು.
  4. ಈ ಅವಧಿಯಲ್ಲೇ ಬಂದ ಹೋಳಿ ಹಬ್ಬವನ್ನು ಪ್ರಿಯಾಂಕಾ ಅಲ್ಲಿನ ಸಾಮಾನ್ಯ ಜನರ ಜೊತೆ ಸೇರಿ ಆಚರಿಸಿದರು.
  5. ಅಂತಿಮವಾಗಿ ವಾರಣಾಸಿ ತಲುಪಿದ ನಂತರ ದೇವಸ್ಥಾನಗಳ ಭೇಟಿಯ ನಂತರ ನಡೆಸಿದ ಸಾರ್ವಜನಿಕ ಸಭೆಯಲ್ಲಿ ಪ್ರಿಯಾಂಕಾ ಮಾತಾಡಿದ್ದು ಮೋದಿಯವರು ತಮ್ಮ ಕ್ಷೇತ್ರಕ್ಕೆ ಕೊಟ್ಟಿದ್ದ ಭರವಸೆಗಳ ಕುರಿತು. ಅದರ ಪಟ್ಟಿಯನ್ನು ಇಟ್ಟುಕೊಂಡು ಅತ್ಯಂತ ಸರಳವಾಗಿ ಜನರ ಜೊತೆ ಸಂಭಾಷಣೆಯನ್ನು ಶುರು ಮಾಡಿದರು. ‘ಇದೇನು?’, ‘ಇದು ಮೋದಿಯವರು ಕೊಟ್ಟಿದ್ದ ಭರವಸೆಗಳು’, ‘ಇದು ಈಡೇರಿದೆಯಾ?’ “ಇಲ್ಲಾ”, ‘ಇದು?’ “ಇಲ್ಲಾ”, ‘ಇದು’ “ಅದೂ ಇಲ್ಲ”. ಮಾತಾಡುತ್ತಿರುವುದು ಎದುರಿಗಿರುವ ಕೆಲವು ಸಾವಿರ ಜನರಿಗಾದರೂ, ಅದು ಉತ್ತರ ಪ್ರದೇಶಕ್ಕೆ ಕೊಡಬೇಕಾದ ಸಂದೇಶ ಕೊಡುತ್ತದೆಂಬುದು ಆಕೆಗೆ ಗೊತ್ತಿತ್ತು.
  6. ಎಲ್ಲಕ್ಕಿಂತ ಮುಖ್ಯವಾಗಿ, ಮೇಲಿನ ಫೋಟೋದಲ್ಲಿರುವಂತೆ, ದೇವರ ತಿಲಕ ಮತ್ತು ವಿಭೂತಿಯನ್ನು ಹಚ್ಚಿಕೊಂಡು ಪ್ರಿಯಾಂಕಾ ವೇದಿಕೆಯ ಮೇಲೆ ಆಸೀನವಾಗಿದ್ದು. ಜೊತೆಗೆ ಕೊರಳಿಗೆ ರುದ್ರಾಕ್ಷಿ ಮಾಲೆಗಳು. ಅದೇ ವೇಷದಲ್ಲೇ ವೇದಿಕೆಯ ಭಾಷಣವನ್ನೂ ಮಾಡಿದ್ದು. ಇಂತಹ ವೇಷವನ್ನು ಮೊದಲು ಹಾಕಿದ್ದು ಮೋದಿ. ಆಗ, ದೇಶದ ಗಣನೀಯ ಸಂಖ್ಯೆಯ ಜನರ ಪುಣ್ಯಕ್ಷೇತ್ರದಿಂದ ಒಬ್ಬ ಹೊಸ ಸಮರ್ಥ ಸಾಧು ಮೇಲೆದ್ದು ಬಂದಂತೆ ಕಾಣಲು ಬೇಕಾದ ಕೊರಿಯೋಗ್ರಫಿ ನಡೆದಿತ್ತು. ಈಗ? ಈಗ ಸಿನೆಮಾಗಳಲ್ಲಿ ಕಾಣುವಂತಹ ಒಂದು ಸೀನ್ ಸೃಷ್ಟಿಸಲಾಗಿದೆ. ಧರ್ಮದ ಸೋಗಿನಲ್ಲಿ ವಂಚಿಸುವ ದುಷ್ಟನೊಬ್ಬನನ್ನು ಸಂಹರಿಸಲು ಎಳೆಯ ಬಾಲಕಿಯೊಬ್ಬಳು ದೈವ ಕೃಪೆಯನ್ನು ಪಡೆದುಕೊಂಡು ಎದುರು ನಿಂತರೆ ಹೇಗಿರುತ್ತೋ ಆ ರೀತಿಯ ಸೀನ್. ಪ್ರಿಯಾಂಕಾ ವೇದಿಕೆಯ ಮಧ್ಯಭಾಗದಲ್ಲಿ ಕೂತು ಆಶೀರ್ವದಿಸುವಂತೆ ಒಮ್ಮೆ ಕೈ ಮುಂದೆ ಮಾಡುತ್ತಾರೆ. ಅದು ಕಾಂಗ್ರೆಸ್ಸಿನ ಚಿಹ್ನೆಯೆಂಬುದೂ ಕಾರಣವಿರಬಹುದು. ಆದರೆ, ಆಕೆಯಲ್ಲಿ ದುರ್ಗೆ, ಕಾಳಿ ಇತ್ಯಾದಿಗಳನ್ನು ಸಾಮಾನ್ಯ ಜನರು ಕಾಣುವ ಸಾಧ್ಯತೆ ಇದೆ.
  7. ಭಾರತದ ರಾಜಕಾರಣದಲ್ಲಿ ಇಂತಹ ಇನ್ನೂ ಏನೇನನ್ನು ನಾವು ನೋಡಬೇಕಾಗುತ್ತೋ ಗೊತ್ತಿಲ್ಲ. ಆದರೆ, ಇಲ್ಲಿನ ಚುನಾವಣೆಗಳ ರಂಗನ್ನು ವಿಪರೀತವಾಗಿ ಏರಿಸಿದ ನರೇಂದ್ರ ಮೋದಿಗೆ ಅದೇ ರೀತಿಯಲ್ಲಿ ಹೋಳಿ ಎರಚುವ ಸಾಮಥ್ರ್ಯ ನಮಗೂ ಇದೆ ಎಂದು ವಿರೋಧ ಪಕ್ಷವು ತೋರಿಸುತ್ತಿದೆ. ಅಂತಹ ಮುಖಾಮುಖಿಯಲ್ಲಿ ರಾಹುಲ್‍ಗಿಂತ ಪ್ರಿಯಾಂಕಾಗೆ ಹೆಚ್ಚಿನ ಸಾಧ್ಯತೆಗಳಿವೆ ಎಂಬುದನ್ನು ಈ ‘ಗಂಗಾಪಯಣ’ ತೋರಿಸಿದೆ.
  8. ಹಾಗೆ ನೋಡಿದರೆ ರಾಹುಲ್‍ಗಾಂಧಿ ರೈತರ ಸಂಕಷ್ಟ, ನಿರುದ್ಯೋಗ, ರಾಫೇಲ್ ಭ್ರಷ್ಟಾಚಾರ ಇತ್ಯಾದಿ ಅಸಲಿ ಸಂಗತಿಗಳ ಕುರಿತು ಮಾತನಾಡುತ್ತಿರುವುದಕ್ಕೇ ಹೆಚ್ಚಿನ ಮಹತ್ವ ಇರಬೇಕಿತ್ತು. ಆದರೆ, ರಾಜಕಾರಣವು ಒಂದು ಜನರ ಮನಸ್ಸಿನ ಮೇಲೆ ಪರಿಣಾಮ ಬೀರುವ ವಿವಿಧ ಸಿನೀಮಿಯ ದೃಶ್ಯಗಳಿಂದ ಜನರನ್ನು ಮರುಳುಗೊಳಿಸುವ ಆಟವಾಡುತ್ತದೆ. ಇಂತಹ ಬಿಂಬಗಳು ಬಹುಬೇಗನೇ ಅಸಲಿ ಸಮಸ್ಯೆಗಳನ್ನು ಮಸುಕುಗೊಳಿಸುತ್ತವೆ. ಅದೇನೇ ಇರಲಿ, ಈ ಆಟದಲ್ಲಿ ಪ್ರಿಯಾಂಕಾ ಪ್ರವೇಶದಿಂದ ಮೋದಿ ಭಕ್ತ ಪಡೆಯು ಗಲಿಬಿಲಿಗೊಳ್ಳುವುದರಲ್ಲಿ ಸಂಶಯವಿಲ್ಲ.
  9. ಇಂದಿಗೆ 10 ವರ್ಷಗಳ ನಂತರ ಎಲ್ಲರೂ ಹೌದಲ್ಲಾ ಎಂದುಕೊಳ್ಳಬಹುದಾದ ಇನ್ನೊಂದು ಸಂಗತಿಯಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸೀಟು ಗಳಿಕೆ ಆಗಲಾರದು. ಪ್ರಿಯಾಂಕಾ ಗಾಂಧಿಯ ರಾಜಕೀಯ ಪ್ರವೇಶವು ಕಾಂಗ್ರೆಸ್ ಪಕ್ಷದ ದೀರ್ಘಕಾಲಿಕ ಹೂಡಿಕೆಯಾಗಿದೆ. 1990ಕ್ಕೆ ಮುಂಚೆ ಉತ್ತರ ಪ್ರದೇಶದ ಮೇಲೆ ಇಟ್ಟುಕೊಂಡಿದ್ದ ಹಿಡಿತವೇ ಆ ಪಕ್ಷಕ್ಕೆ ದೇಶವನ್ನಾಳುವ ಶಕ್ತಿ ತಂದುಕೊಡುತ್ತಿತ್ತು. ಉತ್ತರ ಪ್ರದೇಶದ ಮುಖ್ಯಮಂತ್ರಿ ವಿ.ಪಿ.ಸಿಂಗ್ ನಂತರ ರಾಜೀವ್‍ಗಾಂಧಿ ಸಂಪುಟದಿಂದ ಹೊರನಡೆದ ಮೇಲೆ ಅದು ಕುಸಿಯಿತು. ಅಲ್ಲಿಂದ ಇಲ್ಲಿಯವರೆಗೆ ಕಾಂಗ್ರೆಸ್ ಮತ್ತೆ ಅಲ್ಲಿ ಅಧಿಕಾರಕ್ಕೆ ಬಂದಿಲ್ಲ. ವಿ.ಪಿ.ಸಿಂಗರ ನಂತರ ಬಿಜೆಪಿ, ಎಸ್‍ಪಿ, ಬಿಎಸ್‍ಪಿಗಳ ನಡುವಿನ ಸಂಘರ್ಷದಲ್ಲಿ ಕಾಂಗ್ರೆಸ್ ಮಂಕಾಗುತ್ತಾ ಬಂದಿತ್ತು. ಮರಳಿ ಉತ್ತರ ಪ್ರದೇಶ ಪಡೆದುಕೊಳ್ಳಲು ಬೇಕಾದ ಬಲವಾದ ಅಸ್ತ್ರವಾಗಿ ಪ್ರಿಯಾಂಕಾರನ್ನು ರಂಗಕ್ಕಿಳಿಸಲಾಗಿದೆ. ಈ ಸದ್ಯ ರಂಗಪ್ರವೇಶವಂತೂ ಯಶಸ್ವಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...