Homeಸುಳ್ಳಪ್ಪೋ ಸುಳ್ಳುಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

ಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

- Advertisement -
- Advertisement -

ಚುನಾವಣೆ ಸಮರದಲ್ಲಿ ಸುಳ್ಳು ಸಹಜ. ಆದರೆ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಮಾಣ ಹೆಚ್ಚಾದಂತೆಲ್ಲ ಸುಳ್ಳುಗಳ ಮಹಾಪೂರವೇ ಹರಿದು ಬರುತ್ತಿದ್ದು ರಾಜಕೀಯ, ಏಧರ್ಮಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪರೀಕ್ಷಿಸದೇ ನಂಬುವಂತೆಯೇ ಇಲ್ಲ.
ಅದಿರಲಿ, ಸರ್ಕಾರವೇ ಇಂತಹ ಫೇಕ್ ಫ್ಯಾಕ್ಟರಿಗಳನ್ನು ಪೋಷಿಸತೊಡಗಿದರೆ, ದೇಶದ ಪ್ರಧಾನಿಯೇ ಇಂತಹ ಸುಳ್ ಕಾರ್ಖಾನೆಗಳನ್ನು ಪ್ರಮೋಟ್ ಮಾಡತೊಡಗಿದರೆ ಅದಕ್ಕಿಂತ ನಾಚಿಕೆಗೇಡು ಬೇರೆನಿದೆ?
ಕಳೆದ ತಿಂಗಳು ಸಮರ್ಥ ಬನ್ಸಾಲ್ ಎಂಬ ಪರ್ತಕರ್ತರು ಈ ಫೇಕ್ ಫ್ಯಾಕ್ಟರಿಗಳ ಕುರಿತು ಒಂದು ತನಿಖಾ ವರದಿ ಪ್ರಕಟಿಸಿದರು. ಹೆಚ್ಚುತ್ತಿರುವ ಫೇಕ್ ಸ್ಟೋರಿಗಳು ಮತ್ತು ಸರ್ಕಾರದ ನಡುವೆ ಲಿಂಕ್ ಇರುವುದನ್ನು ಅವರು ಎಳೆಎಳೆಯಾಗಿ ತೋರಿಸಿದ್ದರು. ಪ್ರಧಾನಿಯ ನಮೋ ಆ್ಯಪ್ ಮೂಲಕ ಸುಳ್ಳು ಸುದ್ದಿಗಳು, ಕುಚೋದ್ಯಗಳು ಹರಿದಾಡುವುದನ್ನು ಬನ್ಸಾಲ್ ತೋರಿಸಿದರು.
ನಮೋ ಆ್ಯಪ್‍ನ ‘ಮೈ ನೆಟ್‍ವರ್ಕ್’ ವಿಭಾಗದಲ್ಲಿ 15 ಪ್ರಮೋಟೆಡ್ ಅಕೌಂಟುಗಳಿವೆ, ಅದರಲ್ಲಿ ಫೇಕ್ ಫ್ಯಾಕಟ್ರಿ ಎಂದೇ ಕುಖ್ಯಾತಿ ಪಡೆದಿರುವ ‘ದಿ ಇಂಡಿಯನ್ ಐ’ ಕೂಡ ಇದೆ. ಬಳಕೆದಾರರು ಇದನ್ನು ಫಾಲೋ ಮಾಡದೇ ಇದ್ದಾಗಲೂ ಇದರ ಪೋಸ್ಟ್‍ಗಳು ಅವರ ‘ಮೈ ನೆಟ್‍ವರ್ಕ್’ ಫೀಡರ್‍ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ.

ಕೇಜ್ರಿವಾಲಾ ದೇಶದ್ರೋಹಿಯಂತೆ!
ಫೇಸ್‍ಬುಕ್ ಪೇಜ್, ಟ್ವಿಟರ್, ವೆಬ್‍ಸೈಟ್- ಹೀಗೆ ಸಾಮಾಜಿಕ ಜಾಲತಾಣದ ಎಲ್ಲ ಸ್ತರಗಳಲ್ಲೂ ಇರುವ ‘ದಿ ಇಂಡಿಯನ್ ಐ’ ಎಂತಹ ಕುಚೋದ್ಯ ಮಾಡುತ್ತದೆ ಎಂಬುದಕ್ಕೆ ಈ ಉದಾಹರಣೆ ನೋಡಿ. ವಿರೋಧ ಪಕ್ಷಗಳ ಮಹಾಘಟಬಂಧನ್ ಸಮಾವೇಶದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ಪಾಕಿಸ್ತಾನದ ಪರ ಮಾತಾಡಿದರು ಎಂದು ಈ ಇಂಡಿಯನ್ ಐ ಸುಳ್ ಸುದ್ದಿ ಹರಡಿತ್ತು. ‘ಮತ್ತೆ ಮೋದಿ ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ತೊಂದರೆ’ ಎಂಬರ್ಥದಲ್ಲಿ ಕೇಜ್ರಿವಾಲ ಮಾತಾಡಿದರು ಎಂದಿತ್ತು. ಅದಕ್ಕಾಗಿ ಅವರನ್ನು ದೇಶದ್ರೋಹಿ ಎಂದು ‘ಆರ್ಡರ್’ ಅನ್ನೂ ಪಾಸ್ ಮಾಡಿಬಿಟ್ಟಿತ್ತು.
ಆದರೆ ಆಗಲೇ ಅಲ್ಟ್‍ನ್ಯೂಸ್ ಇಂಡಿಯನ್ ಐ ಹಾಕಿರುವ ವಿಡಿಯೋ ತಿರುಚಿದ್ದು ಎಂದು ಸಾಬೀತು ಮಾಡಿತ್ತು. ‘ಮೋದಿ ಮತ್ತು ಶಾ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ಉಳಿಯಲಾರದು’ ಎಂಬ ಕೇಜ್ರಿವಾಲರ ಮಾತನ್ನು ತಿರುಚಲಾಗಿತ್ತು. ‘ದೇಶ’ ಎಂದಿರುವಲ್ಲಿ ‘ಪಾಕಿಸ್ತಾನ’ ಎಂದು ಸೇರಿಸಲಾಗಿತ್ತು! ಇಂತಹ ಅನಾಹುತ ಮಾಡುವ ಗುಂಪಿಗೆ ನರೇಂದ್ರ ಮೋದಿಯವರ ಆ್ಯಪ್ ಸಪೋರ್ಟು ಮಾಡುತ್ತಿದೆ.
ಗುಜರಾತ್ ಲಿಂಕ್
ಅಲ್ಟ್‍ನ್ಯೂಸ್ ಕಳೆದ ಸೆಪ್ಟೆಂಬರ್‍ನಲ್ಲಿ ಈ ಇಂಡಿಯನ್ ಐಗಿರುವ ಗುಜರಾತ್ ಲಿಂಕನ್ನು ಬಯಲು ಮಾಡಿತ್ತು. ಗುಜರಾತ್ ಮೂಲದ ಸಿಲ್ವರ್ ಟಚ್ ಟೆಕ್ನಾಲಜೀಸ್ ಕಂಪನಿಗೂ ಇದಕ್ಕೂ ಸಂಬಂಧವಿದೆ. ಈ ಸಿಲ್ವರ್ ಟಚ್ ಟೆಕ್ನಾಲಜಿ ಸಂಸ್ಥೆಯೇ ನಮೋ ಆ್ಯಪ್ ರೂಪಿಸಿದೆ! ಈ ಕಂಪನಿಯ ಸರ್ವರ್‍ಗಳ ಮೂಲಕವೇ ಇಂಡಿಯನ್ ಐ ಹಾಸ್ಟ್ ಮಾಡಲಾಗುತ್ತಿತ್ತು. ಅಲ್ಟ್‍ನ್ಯೂಸ್ ತನಿಖೆಯ ನಂತರ ಇಂಡಿಯನ್ ಐ ಐಪಿ ಅಡ್ರೆಸ್ ಬದಲು ಮಾಡಲಾಗಿತು.
ಇದೇ ಇಂಡಿಯನ್ ಐ ಕೊಲ್ಕೊತ್ತಾದ ಮಹಾಘಟಬಂಧನ್ ರ್ಯಾಲಿಯಲ್ಲಿ ಯಾರೊಬ್ಬರೂ ‘ಭಾರತ್ ಮಾತಾ ಕಿ ಜೈ’ ಅನ್ನಲಿಲ್ಲ ಎಂದು ಸುಳ್ಳು ಹರಡಿತ್ತು. ಇದನ್ನೇ ಅಮಿತ್ ಶಾ ತಮ್ಮ ಭಾಷಣಗಳಲ್ಲಿ ಹೇಳಿದ್ದರು. ಆದರೆ ರ್ಯಾಲಿಯ ಕೊನೆಯಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ವಂದೇ ಮಾತರಂ ಘೋಷಣೆಗಳನ್ನು ಹೇಳಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿದೆ.
ಹೀಗೆ ಬರೀ ಸುಳ್ಳು, ಕುಚೋದ್ಯವನ್ನೇ ಮಾಡುವ ಇಂತಹ ನೂರಾರು ಗುಂಪುಗಳಿವೆ. ಆದರೆ, ಪ್ರಧಾನಿಯವರ ನಮೋ ಆ್ಯಪ್ ಇಂಥವನ್ನು ಬೆಂಬಲಿಸುತ್ತದೆ ಎನ್ನುವ ವಿಷಯ ಅಸಹ್ಯಕರವಾದುದು.
ಪ್ರಧಾನಿಯೇ ಒಬ್ಬ ಮಹಾ ಸುಳ್ಳುಗಾರನಾಗಿರುವಾಗ, ಸುಳ್ಳುಗಲೇ ಅವರ ಬಂಡವಾಳವಾಗಿರುವಾಗ ಇಂಥದ್ದೆಲ್ಲ ನಡೆಯದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...