Homeಸುಳ್ಳಪ್ಪೋ ಸುಳ್ಳುಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

ಫೇಕ್ ನ್ಯೂಸ್ ಫ್ಯಾಕ್ಟರಿಗೆ ನಮೋ ಆ್ಯಪ್ ಶ್ರೀರಕ್ಷೆ!

- Advertisement -
- Advertisement -

ಚುನಾವಣೆ ಸಮರದಲ್ಲಿ ಸುಳ್ಳು ಸಹಜ. ಆದರೆ ಸಾಮಾಜಿಕ ಜಾಲತಾಣಗಳ ಬಳಕೆ ಪ್ರಮಾಣ ಹೆಚ್ಚಾದಂತೆಲ್ಲ ಸುಳ್ಳುಗಳ ಮಹಾಪೂರವೇ ಹರಿದು ಬರುತ್ತಿದ್ದು ರಾಜಕೀಯ, ಏಧರ್ಮಕ್ಕೆ ಸಂಬಂಧಿಸಿದ ಯಾವ ಸುದ್ದಿಯನ್ನೂ ಪರೀಕ್ಷಿಸದೇ ನಂಬುವಂತೆಯೇ ಇಲ್ಲ.
ಅದಿರಲಿ, ಸರ್ಕಾರವೇ ಇಂತಹ ಫೇಕ್ ಫ್ಯಾಕ್ಟರಿಗಳನ್ನು ಪೋಷಿಸತೊಡಗಿದರೆ, ದೇಶದ ಪ್ರಧಾನಿಯೇ ಇಂತಹ ಸುಳ್ ಕಾರ್ಖಾನೆಗಳನ್ನು ಪ್ರಮೋಟ್ ಮಾಡತೊಡಗಿದರೆ ಅದಕ್ಕಿಂತ ನಾಚಿಕೆಗೇಡು ಬೇರೆನಿದೆ?
ಕಳೆದ ತಿಂಗಳು ಸಮರ್ಥ ಬನ್ಸಾಲ್ ಎಂಬ ಪರ್ತಕರ್ತರು ಈ ಫೇಕ್ ಫ್ಯಾಕ್ಟರಿಗಳ ಕುರಿತು ಒಂದು ತನಿಖಾ ವರದಿ ಪ್ರಕಟಿಸಿದರು. ಹೆಚ್ಚುತ್ತಿರುವ ಫೇಕ್ ಸ್ಟೋರಿಗಳು ಮತ್ತು ಸರ್ಕಾರದ ನಡುವೆ ಲಿಂಕ್ ಇರುವುದನ್ನು ಅವರು ಎಳೆಎಳೆಯಾಗಿ ತೋರಿಸಿದ್ದರು. ಪ್ರಧಾನಿಯ ನಮೋ ಆ್ಯಪ್ ಮೂಲಕ ಸುಳ್ಳು ಸುದ್ದಿಗಳು, ಕುಚೋದ್ಯಗಳು ಹರಿದಾಡುವುದನ್ನು ಬನ್ಸಾಲ್ ತೋರಿಸಿದರು.
ನಮೋ ಆ್ಯಪ್‍ನ ‘ಮೈ ನೆಟ್‍ವರ್ಕ್’ ವಿಭಾಗದಲ್ಲಿ 15 ಪ್ರಮೋಟೆಡ್ ಅಕೌಂಟುಗಳಿವೆ, ಅದರಲ್ಲಿ ಫೇಕ್ ಫ್ಯಾಕಟ್ರಿ ಎಂದೇ ಕುಖ್ಯಾತಿ ಪಡೆದಿರುವ ‘ದಿ ಇಂಡಿಯನ್ ಐ’ ಕೂಡ ಇದೆ. ಬಳಕೆದಾರರು ಇದನ್ನು ಫಾಲೋ ಮಾಡದೇ ಇದ್ದಾಗಲೂ ಇದರ ಪೋಸ್ಟ್‍ಗಳು ಅವರ ‘ಮೈ ನೆಟ್‍ವರ್ಕ್’ ಫೀಡರ್‍ನಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತವೆ.

ಕೇಜ್ರಿವಾಲಾ ದೇಶದ್ರೋಹಿಯಂತೆ!
ಫೇಸ್‍ಬುಕ್ ಪೇಜ್, ಟ್ವಿಟರ್, ವೆಬ್‍ಸೈಟ್- ಹೀಗೆ ಸಾಮಾಜಿಕ ಜಾಲತಾಣದ ಎಲ್ಲ ಸ್ತರಗಳಲ್ಲೂ ಇರುವ ‘ದಿ ಇಂಡಿಯನ್ ಐ’ ಎಂತಹ ಕುಚೋದ್ಯ ಮಾಡುತ್ತದೆ ಎಂಬುದಕ್ಕೆ ಈ ಉದಾಹರಣೆ ನೋಡಿ. ವಿರೋಧ ಪಕ್ಷಗಳ ಮಹಾಘಟಬಂಧನ್ ಸಮಾವೇಶದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ಪಾಕಿಸ್ತಾನದ ಪರ ಮಾತಾಡಿದರು ಎಂದು ಈ ಇಂಡಿಯನ್ ಐ ಸುಳ್ ಸುದ್ದಿ ಹರಡಿತ್ತು. ‘ಮತ್ತೆ ಮೋದಿ ಅಧಿಕಾರಕ್ಕೆ ಬಂದರೆ ಪಾಕಿಸ್ತಾನಕ್ಕೆ ತೊಂದರೆ’ ಎಂಬರ್ಥದಲ್ಲಿ ಕೇಜ್ರಿವಾಲ ಮಾತಾಡಿದರು ಎಂದಿತ್ತು. ಅದಕ್ಕಾಗಿ ಅವರನ್ನು ದೇಶದ್ರೋಹಿ ಎಂದು ‘ಆರ್ಡರ್’ ಅನ್ನೂ ಪಾಸ್ ಮಾಡಿಬಿಟ್ಟಿತ್ತು.
ಆದರೆ ಆಗಲೇ ಅಲ್ಟ್‍ನ್ಯೂಸ್ ಇಂಡಿಯನ್ ಐ ಹಾಕಿರುವ ವಿಡಿಯೋ ತಿರುಚಿದ್ದು ಎಂದು ಸಾಬೀತು ಮಾಡಿತ್ತು. ‘ಮೋದಿ ಮತ್ತು ಶಾ ಮತ್ತೆ ಅಧಿಕಾರಕ್ಕೆ ಬಂದರೆ ದೇಶ ಉಳಿಯಲಾರದು’ ಎಂಬ ಕೇಜ್ರಿವಾಲರ ಮಾತನ್ನು ತಿರುಚಲಾಗಿತ್ತು. ‘ದೇಶ’ ಎಂದಿರುವಲ್ಲಿ ‘ಪಾಕಿಸ್ತಾನ’ ಎಂದು ಸೇರಿಸಲಾಗಿತ್ತು! ಇಂತಹ ಅನಾಹುತ ಮಾಡುವ ಗುಂಪಿಗೆ ನರೇಂದ್ರ ಮೋದಿಯವರ ಆ್ಯಪ್ ಸಪೋರ್ಟು ಮಾಡುತ್ತಿದೆ.
ಗುಜರಾತ್ ಲಿಂಕ್
ಅಲ್ಟ್‍ನ್ಯೂಸ್ ಕಳೆದ ಸೆಪ್ಟೆಂಬರ್‍ನಲ್ಲಿ ಈ ಇಂಡಿಯನ್ ಐಗಿರುವ ಗುಜರಾತ್ ಲಿಂಕನ್ನು ಬಯಲು ಮಾಡಿತ್ತು. ಗುಜರಾತ್ ಮೂಲದ ಸಿಲ್ವರ್ ಟಚ್ ಟೆಕ್ನಾಲಜೀಸ್ ಕಂಪನಿಗೂ ಇದಕ್ಕೂ ಸಂಬಂಧವಿದೆ. ಈ ಸಿಲ್ವರ್ ಟಚ್ ಟೆಕ್ನಾಲಜಿ ಸಂಸ್ಥೆಯೇ ನಮೋ ಆ್ಯಪ್ ರೂಪಿಸಿದೆ! ಈ ಕಂಪನಿಯ ಸರ್ವರ್‍ಗಳ ಮೂಲಕವೇ ಇಂಡಿಯನ್ ಐ ಹಾಸ್ಟ್ ಮಾಡಲಾಗುತ್ತಿತ್ತು. ಅಲ್ಟ್‍ನ್ಯೂಸ್ ತನಿಖೆಯ ನಂತರ ಇಂಡಿಯನ್ ಐ ಐಪಿ ಅಡ್ರೆಸ್ ಬದಲು ಮಾಡಲಾಗಿತು.
ಇದೇ ಇಂಡಿಯನ್ ಐ ಕೊಲ್ಕೊತ್ತಾದ ಮಹಾಘಟಬಂಧನ್ ರ್ಯಾಲಿಯಲ್ಲಿ ಯಾರೊಬ್ಬರೂ ‘ಭಾರತ್ ಮಾತಾ ಕಿ ಜೈ’ ಅನ್ನಲಿಲ್ಲ ಎಂದು ಸುಳ್ಳು ಹರಡಿತ್ತು. ಇದನ್ನೇ ಅಮಿತ್ ಶಾ ತಮ್ಮ ಭಾಷಣಗಳಲ್ಲಿ ಹೇಳಿದ್ದರು. ಆದರೆ ರ್ಯಾಲಿಯ ಕೊನೆಯಲ್ಲಿ ಭಾರತ್ ಮಾತಾ ಕಿ ಜೈ, ಜೈ ಹಿಂದ್, ವಂದೇ ಮಾತರಂ ಘೋಷಣೆಗಳನ್ನು ಹೇಳಿದ್ದು ವಿಡಿಯೋದಲ್ಲಿ ಸ್ಪಷ್ಟವಾಗಿದೆ.
ಹೀಗೆ ಬರೀ ಸುಳ್ಳು, ಕುಚೋದ್ಯವನ್ನೇ ಮಾಡುವ ಇಂತಹ ನೂರಾರು ಗುಂಪುಗಳಿವೆ. ಆದರೆ, ಪ್ರಧಾನಿಯವರ ನಮೋ ಆ್ಯಪ್ ಇಂಥವನ್ನು ಬೆಂಬಲಿಸುತ್ತದೆ ಎನ್ನುವ ವಿಷಯ ಅಸಹ್ಯಕರವಾದುದು.
ಪ್ರಧಾನಿಯೇ ಒಬ್ಬ ಮಹಾ ಸುಳ್ಳುಗಾರನಾಗಿರುವಾಗ, ಸುಳ್ಳುಗಲೇ ಅವರ ಬಂಡವಾಳವಾಗಿರುವಾಗ ಇಂಥದ್ದೆಲ್ಲ ನಡೆಯದೇ ಇರುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...