Homeಅಂತರಾಷ್ಟ್ರೀಯಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

ಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಕ್ಷೇತ್ರದಲ್ಲಿ ಅತಿ ದೊಡ್ಡ ಮಾಧ್ಯಮವಾಗಿರುವ ಪೇಸ್‍ಬುಕ್ ಕೋಟ್ಯಾಂತರ ಜನ ಖಾತೆದಾರರನ್ನು ಹೊಂದಿರುವ ಆಪ್ ಆಗಿದೆ. ಈ ಸಂಸ್ಥೆ ಶೀಘ್ರದಲ್ಲಿ 500ಕೋಟಿ ಡಾಲರ್ (ಅಂದಾಜು 35,000 ಕೋಟಿ) ಭಾರಿ ದಂಡವನ್ನು ಕಟ್ಟಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಇತಿಹಾಸದಲ್ಲಿಯೇ ಯಾವ ಟೆಕ್ನಾಲಜಿ ಕಂಪನಿಗೂ ಈ ಮಟ್ಟದ ಭಾರಿ ಮೊತ್ತದ ದಂಡವನ್ನು ವಿಧಿಸಿರಲಿಲ್ಲ. 2012ರಲ್ಲಿ ಸರ್ಚ್ ಇಂಜಿನ್ ದಿಗ್ಗಜ ಸಂಸ್ಥೆ ಗೂಗಲ್ 22 ಕೋಟಿ ಡಾಲರ್‍ಗಳಷ್ಟು ದಂಡ ಕಟ್ಟಿತ್ತು.

ಬಳಕೆದಾರರ ಮಾಹಿತಿ ರಕ್ಷಣೆ, ಗೌಪ್ಯತೆಯ ಕಾನೂನು ಉಲ್ಲಂಘನೆಯ ಆರೋಪಗಳ ಮೇಲಿನ ತನಿಖೆಗೆ ಸಂಬಂಧಿಸಿ ಅಮೆರಿಕಾ ನಿಯಂತ್ರಣ ಮಂಡಳಿ ‘ಫೆಡರಲ್ ಟ್ರೇಡ್ ಕಮಿಷನ್’ (ಎಫ್.ಟಿ.ಸಿ) ಜೊತೆ ಫೇಸ್ ಬುಕ್‍ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಮೇರೆಗೆ ಎಪ್.ಟಿ.ಸಿಯಲ್ಲಿ ನಡೆದ ದಂಡ ಹಾಕಬೇಕೆ ಬೇಡವೇ ಎಂಬ ಮತ ಪ್ರಕ್ರಿಯೆಯಲ್ಲಿ 3-2 ಮತಗಳ ಅಂತರದಲ್ಲಿ ಅನುಮೋದನೆ ಲಭಿಸಿದೆ ಎಂದು ವಾಲ್‍ಸ್ಟ್ರೀಟ್ ಜರ್ನಲ್ ಈ ಕುರಿತು ಒಂದು ಲೇಖನ ಪ್ರಕಟಿಸಿದೆ.

ಈ ನಿಯಂತ್ರಣ ಮಂಡಳಿಯಲ್ಲಿ ಡೆಮಾಕ್ರಾಟ್ ಸದಸ್ಯರು ಒಪ್ಪಂದದ ಪ್ರತಿಪಾದವನ್ನು ವಿರೋಧಿಸಿದರೆ, ರಿಪಬ್ಲಿಕನ್ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಇನ್ನು ಈ ಒಪ್ಪಂದಕ್ಕೆ ಜಸ್ಟೀಸ್ ಡಿಪಾರ್ಟ್‍ಮೆಂಟ್ ಸಿವಿಲ್ ಡಿವಿಜನ್ ಅನುಮೋದನೆ ಮಾಡಬೇಕಿದೆ. ಅಮೆರಿಕಾದ ಅಧ್ಯಕ್ಷ ಚುನಾವಣೆಯ ಪ್ರಚಾರದಲ್ಲಿ ಡೋನಾಲ್ಡ್ ಟ್ರಂಪ್‍ಗಾಗಿ ಕೆಲಸ ಮಾಡಿದ ಕೇಂಬ್ರಿಡ್ಜ್ ಅನಲಿಟಿಕಾ ಎನ್ನುವ ಕಂಪೆನಿ ಕೋಟ್ಯಾಂತರ ಜನ ಫೇಸ್ ಬುಕ್‍ ಬಳಕೆದಾರರ ವಯಕ್ತಿಕ ಡೇಟಾವನ್ನು ತೆಗೆದುಕೊಂಡಿದೆ. ಈ ವಿಷಯ ಹೊರ ಬಿದ್ದದ್ದರಿಂದ 2011ರಲ್ಲಿ ಫೇಸ್ ಬುಕ್‍ ಜೊತೆ ಮಾಡಿಕೊಂಡಿದ್ದ ಖಾಸಗಿ ಒಪ್ಪಂದದ ಕೇಸನ್ನು ಮತ್ತೆ ತೆರೆಯಲಾಗಿದೆ. ಹಳೆಯ ಕೇಸಿನಲ್ಲಿ ತನಿಖೆಯನ್ನು ಪನಃ ಪ್ರಾರಂಭಿಸಿರುವುದಾಗಿ ಕಳೆದ ವರ್ಷವೇ ಎಫ್.ಟಿ.ಸಿ ಪ್ರಕಟಿಸಿದೆ.

ಜಗತ್ತಿನಾದ್ಯಂತ 200 ಕೋಟಿಗಳಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್ ಬುಕ್‍, ಬಳಕೆದಾರರ ಮಾಹಿತಿಯ ಗೌಪ್ಯತೆಗೆ ಸಂಬಂಧಿಸಿ ಅಮೆರಿಕದ ಜೊತೆಗೆ ಜಗತ್ತಿನಾದ್ಯಂತ ಕೆಲವು ದೇಶಗಳ ನಿಯಂತ್ರಣ ಮಂಡಳಿಗಳಿಂದ ವಿಚಾರಣೆಯನ್ನು ಎದುರಿಸುತ್ತಿದೆ. ಈ ಕೇಸಿನಲ್ಲಿ ಕಂಪನಿಯ ಮೇಲೆ 300 ರಿಂದ 500 ಕೋಟಿ ಡಾಲರ್ ದಂಡ ಬೀಳಬಹುದೆಂದು ಮುಂಚೆಯೇ ಅಂದಾಜು ಮಾಡಿದೆ.

ಫೇಸ್ ಬುಕ್‍ ಕಳೆದ ವರ್ಷ 5,600 ಕೋಟಿ ಡಾಲರ್ ಲಾಭ ಗಳಿಸಿಕೊಂಡಿದೆ. ಈ ವರ್ಷದಲ್ಲಿ ಇದು 6,900 ಕೋಟಿ ಡಾಲರ್ ಬೆಳೆಯಬಹುದೆಂದು ಅಂದಾಜು. ಭಾರೀ ಲಾಭ ಗಳಿಸಿರುವ ಕಂಪನಿಗೆ ಈ ದಂಡ ದೊಡ್ಡ ಮೊತ್ತವೇನು ಅಲ್ಲ .., ಸಂಸ್ಥೆಯ ಜೊತೆ ಮತ್ತಷ್ಟು ಕಠಿಣವಾಗಿ ವ್ಯವಹರಿಸಬೇಕೆಂದು ಫೇಸ್ ಬುಕ್‍ ವಿಮರ್ಶಕರು ಹೇಳುತ್ತಿದ್ದಾರೆ. ಮುಖ್ಯವಾಗಿ ಬಳಕೆದಾರರ ವ್ಯಕ್ತಿಗತ ಮಾಹಿತಿಗೆ ಸಂಬಂಧಿಸಿದಂತೆ ಕಂಪನಿ ಮೇಲೆ ಕಠಿಣವಾದ ನಿರ್ಬಂಧಗಳನ್ನು ವಿಧಿಸಬೇಕೆಂದು ಹೇಳುತ್ತಿದ್ಧಾರೆ.

ಅನುವಾದ: ಅನಿಲ್ ಕುಮಾರ್ ಚಿಕ್ಕದಾಳವಟ್ಟ

ಕೃಪೆ -ಆಂದ್ರಜ್ಯೋತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...