Homeಅಂತರಾಷ್ಟ್ರೀಯಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

ಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಕ್ಷೇತ್ರದಲ್ಲಿ ಅತಿ ದೊಡ್ಡ ಮಾಧ್ಯಮವಾಗಿರುವ ಪೇಸ್‍ಬುಕ್ ಕೋಟ್ಯಾಂತರ ಜನ ಖಾತೆದಾರರನ್ನು ಹೊಂದಿರುವ ಆಪ್ ಆಗಿದೆ. ಈ ಸಂಸ್ಥೆ ಶೀಘ್ರದಲ್ಲಿ 500ಕೋಟಿ ಡಾಲರ್ (ಅಂದಾಜು 35,000 ಕೋಟಿ) ಭಾರಿ ದಂಡವನ್ನು ಕಟ್ಟಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಇತಿಹಾಸದಲ್ಲಿಯೇ ಯಾವ ಟೆಕ್ನಾಲಜಿ ಕಂಪನಿಗೂ ಈ ಮಟ್ಟದ ಭಾರಿ ಮೊತ್ತದ ದಂಡವನ್ನು ವಿಧಿಸಿರಲಿಲ್ಲ. 2012ರಲ್ಲಿ ಸರ್ಚ್ ಇಂಜಿನ್ ದಿಗ್ಗಜ ಸಂಸ್ಥೆ ಗೂಗಲ್ 22 ಕೋಟಿ ಡಾಲರ್‍ಗಳಷ್ಟು ದಂಡ ಕಟ್ಟಿತ್ತು.

ಬಳಕೆದಾರರ ಮಾಹಿತಿ ರಕ್ಷಣೆ, ಗೌಪ್ಯತೆಯ ಕಾನೂನು ಉಲ್ಲಂಘನೆಯ ಆರೋಪಗಳ ಮೇಲಿನ ತನಿಖೆಗೆ ಸಂಬಂಧಿಸಿ ಅಮೆರಿಕಾ ನಿಯಂತ್ರಣ ಮಂಡಳಿ ‘ಫೆಡರಲ್ ಟ್ರೇಡ್ ಕಮಿಷನ್’ (ಎಫ್.ಟಿ.ಸಿ) ಜೊತೆ ಫೇಸ್ ಬುಕ್‍ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಮೇರೆಗೆ ಎಪ್.ಟಿ.ಸಿಯಲ್ಲಿ ನಡೆದ ದಂಡ ಹಾಕಬೇಕೆ ಬೇಡವೇ ಎಂಬ ಮತ ಪ್ರಕ್ರಿಯೆಯಲ್ಲಿ 3-2 ಮತಗಳ ಅಂತರದಲ್ಲಿ ಅನುಮೋದನೆ ಲಭಿಸಿದೆ ಎಂದು ವಾಲ್‍ಸ್ಟ್ರೀಟ್ ಜರ್ನಲ್ ಈ ಕುರಿತು ಒಂದು ಲೇಖನ ಪ್ರಕಟಿಸಿದೆ.

ಈ ನಿಯಂತ್ರಣ ಮಂಡಳಿಯಲ್ಲಿ ಡೆಮಾಕ್ರಾಟ್ ಸದಸ್ಯರು ಒಪ್ಪಂದದ ಪ್ರತಿಪಾದವನ್ನು ವಿರೋಧಿಸಿದರೆ, ರಿಪಬ್ಲಿಕನ್ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಇನ್ನು ಈ ಒಪ್ಪಂದಕ್ಕೆ ಜಸ್ಟೀಸ್ ಡಿಪಾರ್ಟ್‍ಮೆಂಟ್ ಸಿವಿಲ್ ಡಿವಿಜನ್ ಅನುಮೋದನೆ ಮಾಡಬೇಕಿದೆ. ಅಮೆರಿಕಾದ ಅಧ್ಯಕ್ಷ ಚುನಾವಣೆಯ ಪ್ರಚಾರದಲ್ಲಿ ಡೋನಾಲ್ಡ್ ಟ್ರಂಪ್‍ಗಾಗಿ ಕೆಲಸ ಮಾಡಿದ ಕೇಂಬ್ರಿಡ್ಜ್ ಅನಲಿಟಿಕಾ ಎನ್ನುವ ಕಂಪೆನಿ ಕೋಟ್ಯಾಂತರ ಜನ ಫೇಸ್ ಬುಕ್‍ ಬಳಕೆದಾರರ ವಯಕ್ತಿಕ ಡೇಟಾವನ್ನು ತೆಗೆದುಕೊಂಡಿದೆ. ಈ ವಿಷಯ ಹೊರ ಬಿದ್ದದ್ದರಿಂದ 2011ರಲ್ಲಿ ಫೇಸ್ ಬುಕ್‍ ಜೊತೆ ಮಾಡಿಕೊಂಡಿದ್ದ ಖಾಸಗಿ ಒಪ್ಪಂದದ ಕೇಸನ್ನು ಮತ್ತೆ ತೆರೆಯಲಾಗಿದೆ. ಹಳೆಯ ಕೇಸಿನಲ್ಲಿ ತನಿಖೆಯನ್ನು ಪನಃ ಪ್ರಾರಂಭಿಸಿರುವುದಾಗಿ ಕಳೆದ ವರ್ಷವೇ ಎಫ್.ಟಿ.ಸಿ ಪ್ರಕಟಿಸಿದೆ.

ಜಗತ್ತಿನಾದ್ಯಂತ 200 ಕೋಟಿಗಳಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್ ಬುಕ್‍, ಬಳಕೆದಾರರ ಮಾಹಿತಿಯ ಗೌಪ್ಯತೆಗೆ ಸಂಬಂಧಿಸಿ ಅಮೆರಿಕದ ಜೊತೆಗೆ ಜಗತ್ತಿನಾದ್ಯಂತ ಕೆಲವು ದೇಶಗಳ ನಿಯಂತ್ರಣ ಮಂಡಳಿಗಳಿಂದ ವಿಚಾರಣೆಯನ್ನು ಎದುರಿಸುತ್ತಿದೆ. ಈ ಕೇಸಿನಲ್ಲಿ ಕಂಪನಿಯ ಮೇಲೆ 300 ರಿಂದ 500 ಕೋಟಿ ಡಾಲರ್ ದಂಡ ಬೀಳಬಹುದೆಂದು ಮುಂಚೆಯೇ ಅಂದಾಜು ಮಾಡಿದೆ.

ಫೇಸ್ ಬುಕ್‍ ಕಳೆದ ವರ್ಷ 5,600 ಕೋಟಿ ಡಾಲರ್ ಲಾಭ ಗಳಿಸಿಕೊಂಡಿದೆ. ಈ ವರ್ಷದಲ್ಲಿ ಇದು 6,900 ಕೋಟಿ ಡಾಲರ್ ಬೆಳೆಯಬಹುದೆಂದು ಅಂದಾಜು. ಭಾರೀ ಲಾಭ ಗಳಿಸಿರುವ ಕಂಪನಿಗೆ ಈ ದಂಡ ದೊಡ್ಡ ಮೊತ್ತವೇನು ಅಲ್ಲ .., ಸಂಸ್ಥೆಯ ಜೊತೆ ಮತ್ತಷ್ಟು ಕಠಿಣವಾಗಿ ವ್ಯವಹರಿಸಬೇಕೆಂದು ಫೇಸ್ ಬುಕ್‍ ವಿಮರ್ಶಕರು ಹೇಳುತ್ತಿದ್ದಾರೆ. ಮುಖ್ಯವಾಗಿ ಬಳಕೆದಾರರ ವ್ಯಕ್ತಿಗತ ಮಾಹಿತಿಗೆ ಸಂಬಂಧಿಸಿದಂತೆ ಕಂಪನಿ ಮೇಲೆ ಕಠಿಣವಾದ ನಿರ್ಬಂಧಗಳನ್ನು ವಿಧಿಸಬೇಕೆಂದು ಹೇಳುತ್ತಿದ್ಧಾರೆ.

ಅನುವಾದ: ಅನಿಲ್ ಕುಮಾರ್ ಚಿಕ್ಕದಾಳವಟ್ಟ

ಕೃಪೆ -ಆಂದ್ರಜ್ಯೋತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...