Homeಅಂತರಾಷ್ಟ್ರೀಯಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

ಫೇಸ್ ಬುಕ್‍ಗೆ ಬೀಳಲಿದೆ 35 ಸಾವಿರ ಕೋಟಿಯಷ್ಟು ದಂಡ. ಯಾಕೆ ಗೊತ್ತೆ?

- Advertisement -
- Advertisement -

ಸಾಮಾಜಿಕ ಜಾಲತಾಣಗಳ ಕ್ಷೇತ್ರದಲ್ಲಿ ಅತಿ ದೊಡ್ಡ ಮಾಧ್ಯಮವಾಗಿರುವ ಪೇಸ್‍ಬುಕ್ ಕೋಟ್ಯಾಂತರ ಜನ ಖಾತೆದಾರರನ್ನು ಹೊಂದಿರುವ ಆಪ್ ಆಗಿದೆ. ಈ ಸಂಸ್ಥೆ ಶೀಘ್ರದಲ್ಲಿ 500ಕೋಟಿ ಡಾಲರ್ (ಅಂದಾಜು 35,000 ಕೋಟಿ) ಭಾರಿ ದಂಡವನ್ನು ಕಟ್ಟಬೇಕಾದಂತಹ ಪರಿಸ್ಥಿತಿ ಬಂದೊದಗಿದೆ. ಇತಿಹಾಸದಲ್ಲಿಯೇ ಯಾವ ಟೆಕ್ನಾಲಜಿ ಕಂಪನಿಗೂ ಈ ಮಟ್ಟದ ಭಾರಿ ಮೊತ್ತದ ದಂಡವನ್ನು ವಿಧಿಸಿರಲಿಲ್ಲ. 2012ರಲ್ಲಿ ಸರ್ಚ್ ಇಂಜಿನ್ ದಿಗ್ಗಜ ಸಂಸ್ಥೆ ಗೂಗಲ್ 22 ಕೋಟಿ ಡಾಲರ್‍ಗಳಷ್ಟು ದಂಡ ಕಟ್ಟಿತ್ತು.

ಬಳಕೆದಾರರ ಮಾಹಿತಿ ರಕ್ಷಣೆ, ಗೌಪ್ಯತೆಯ ಕಾನೂನು ಉಲ್ಲಂಘನೆಯ ಆರೋಪಗಳ ಮೇಲಿನ ತನಿಖೆಗೆ ಸಂಬಂಧಿಸಿ ಅಮೆರಿಕಾ ನಿಯಂತ್ರಣ ಮಂಡಳಿ ‘ಫೆಡರಲ್ ಟ್ರೇಡ್ ಕಮಿಷನ್’ (ಎಫ್.ಟಿ.ಸಿ) ಜೊತೆ ಫೇಸ್ ಬುಕ್‍ ಒಪ್ಪಂದ ಮಾಡಿಕೊಂಡಿತ್ತು. ಈ ಒಪ್ಪಂದದ ಮೇರೆಗೆ ಎಪ್.ಟಿ.ಸಿಯಲ್ಲಿ ನಡೆದ ದಂಡ ಹಾಕಬೇಕೆ ಬೇಡವೇ ಎಂಬ ಮತ ಪ್ರಕ್ರಿಯೆಯಲ್ಲಿ 3-2 ಮತಗಳ ಅಂತರದಲ್ಲಿ ಅನುಮೋದನೆ ಲಭಿಸಿದೆ ಎಂದು ವಾಲ್‍ಸ್ಟ್ರೀಟ್ ಜರ್ನಲ್ ಈ ಕುರಿತು ಒಂದು ಲೇಖನ ಪ್ರಕಟಿಸಿದೆ.

ಈ ನಿಯಂತ್ರಣ ಮಂಡಳಿಯಲ್ಲಿ ಡೆಮಾಕ್ರಾಟ್ ಸದಸ್ಯರು ಒಪ್ಪಂದದ ಪ್ರತಿಪಾದವನ್ನು ವಿರೋಧಿಸಿದರೆ, ರಿಪಬ್ಲಿಕನ್ ಸದಸ್ಯರು ಬೆಂಬಲ ವ್ಯಕ್ತಪಡಿಸಿದರು. ಇನ್ನು ಈ ಒಪ್ಪಂದಕ್ಕೆ ಜಸ್ಟೀಸ್ ಡಿಪಾರ್ಟ್‍ಮೆಂಟ್ ಸಿವಿಲ್ ಡಿವಿಜನ್ ಅನುಮೋದನೆ ಮಾಡಬೇಕಿದೆ. ಅಮೆರಿಕಾದ ಅಧ್ಯಕ್ಷ ಚುನಾವಣೆಯ ಪ್ರಚಾರದಲ್ಲಿ ಡೋನಾಲ್ಡ್ ಟ್ರಂಪ್‍ಗಾಗಿ ಕೆಲಸ ಮಾಡಿದ ಕೇಂಬ್ರಿಡ್ಜ್ ಅನಲಿಟಿಕಾ ಎನ್ನುವ ಕಂಪೆನಿ ಕೋಟ್ಯಾಂತರ ಜನ ಫೇಸ್ ಬುಕ್‍ ಬಳಕೆದಾರರ ವಯಕ್ತಿಕ ಡೇಟಾವನ್ನು ತೆಗೆದುಕೊಂಡಿದೆ. ಈ ವಿಷಯ ಹೊರ ಬಿದ್ದದ್ದರಿಂದ 2011ರಲ್ಲಿ ಫೇಸ್ ಬುಕ್‍ ಜೊತೆ ಮಾಡಿಕೊಂಡಿದ್ದ ಖಾಸಗಿ ಒಪ್ಪಂದದ ಕೇಸನ್ನು ಮತ್ತೆ ತೆರೆಯಲಾಗಿದೆ. ಹಳೆಯ ಕೇಸಿನಲ್ಲಿ ತನಿಖೆಯನ್ನು ಪನಃ ಪ್ರಾರಂಭಿಸಿರುವುದಾಗಿ ಕಳೆದ ವರ್ಷವೇ ಎಫ್.ಟಿ.ಸಿ ಪ್ರಕಟಿಸಿದೆ.

ಜಗತ್ತಿನಾದ್ಯಂತ 200 ಕೋಟಿಗಳಿಗೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಫೇಸ್ ಬುಕ್‍, ಬಳಕೆದಾರರ ಮಾಹಿತಿಯ ಗೌಪ್ಯತೆಗೆ ಸಂಬಂಧಿಸಿ ಅಮೆರಿಕದ ಜೊತೆಗೆ ಜಗತ್ತಿನಾದ್ಯಂತ ಕೆಲವು ದೇಶಗಳ ನಿಯಂತ್ರಣ ಮಂಡಳಿಗಳಿಂದ ವಿಚಾರಣೆಯನ್ನು ಎದುರಿಸುತ್ತಿದೆ. ಈ ಕೇಸಿನಲ್ಲಿ ಕಂಪನಿಯ ಮೇಲೆ 300 ರಿಂದ 500 ಕೋಟಿ ಡಾಲರ್ ದಂಡ ಬೀಳಬಹುದೆಂದು ಮುಂಚೆಯೇ ಅಂದಾಜು ಮಾಡಿದೆ.

ಫೇಸ್ ಬುಕ್‍ ಕಳೆದ ವರ್ಷ 5,600 ಕೋಟಿ ಡಾಲರ್ ಲಾಭ ಗಳಿಸಿಕೊಂಡಿದೆ. ಈ ವರ್ಷದಲ್ಲಿ ಇದು 6,900 ಕೋಟಿ ಡಾಲರ್ ಬೆಳೆಯಬಹುದೆಂದು ಅಂದಾಜು. ಭಾರೀ ಲಾಭ ಗಳಿಸಿರುವ ಕಂಪನಿಗೆ ಈ ದಂಡ ದೊಡ್ಡ ಮೊತ್ತವೇನು ಅಲ್ಲ .., ಸಂಸ್ಥೆಯ ಜೊತೆ ಮತ್ತಷ್ಟು ಕಠಿಣವಾಗಿ ವ್ಯವಹರಿಸಬೇಕೆಂದು ಫೇಸ್ ಬುಕ್‍ ವಿಮರ್ಶಕರು ಹೇಳುತ್ತಿದ್ದಾರೆ. ಮುಖ್ಯವಾಗಿ ಬಳಕೆದಾರರ ವ್ಯಕ್ತಿಗತ ಮಾಹಿತಿಗೆ ಸಂಬಂಧಿಸಿದಂತೆ ಕಂಪನಿ ಮೇಲೆ ಕಠಿಣವಾದ ನಿರ್ಬಂಧಗಳನ್ನು ವಿಧಿಸಬೇಕೆಂದು ಹೇಳುತ್ತಿದ್ಧಾರೆ.

ಅನುವಾದ: ಅನಿಲ್ ಕುಮಾರ್ ಚಿಕ್ಕದಾಳವಟ್ಟ

ಕೃಪೆ -ಆಂದ್ರಜ್ಯೋತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...